Advertisement

Tag: ದರ್ಶನ್ ಜಯಣ್ಣ

“ಡೆಸರ್ಟ್ಸ್‌” ಮಾತ್ರ ಬೇಡಪ್ಪ….: ದರ್ಶನ್‌ ಜಯಣ್ಣ ಸರಣಿ

ಈ ಪ್ರಯಾಣದ ನಡುವೆಲ್ಲಾ ನನ್ನನ್ನು ಕಾಡಿದ ವಿಷಯ ಮಧ್ಯದಲ್ಲೆಲ್ಲೋ ಗಾಡಿ ಪಂಕ್ಚರ್ ಆದರೆ ಏನು ಮಾಡುವುದು? ಎಸಿ ಕೈಕೊಟ್ಟರೆ ಹೇಗೆ ಸಂಭಾಳಿಸುವುದು? ಮರಳ ಮಳೆ ಬಂದು ದಾರಿ ಕಾಣದಾದರೆ ಏನು ಗತಿ, ಇತ್ಯಾದಿ. ಹಾಗೇನೂ ಆಗದಿದ್ದರೂ ರಿಯಾದ್ ತಲುಪುವವರೆಗೂ ಮತ್ತು ಎರಡು ದಿನದ ನಂತರ ವಾಪಾಸು ಬರುವಾಗಲೂ ನನ್ನನ್ನು ಬಿಟ್ಟು ಬಿಡದೆ ಕಾಡಿದ ಪ್ರಶ್ನೆಗಳು ಇವು. ದಾರಿ ಅತ್ಯಂತ ಬ್ಯುಸಿಯಾಗಿದ್ದರೂ, ಅಲ್ಲಲ್ಲಿ ಹತ್ತಾರು ಕಿಲೋಮೀಟರ್‌ಗಳ ನಂತರವೇ ಪೆಟ್ರೋಲ್, ತಿಂಡಿ ತಿನಿಸು, ಪಂಕ್ಚರ್ ಅಂಗಡಿ ಮತ್ತು ಇನ್ನಿತರೆ ಅಂಗಡಿಗಳು ನಿಗದಿತ ಜಾಗದಲ್ಲಿ ಮಾತ್ರವೇ ಇರುವುದು ಪರಿಸ್ಥಿತಿಯನ್ನ ಇನ್ನಷ್ಟು ಬಿಗಡಾಯಿಸಿತ್ತು.
ದರ್ಶನ್‌ ಜಯಣ್ಣ ಬರೆಯುವ “ಸೌದಿ ಡೇಟ್ಸ್”‌ ಸರಣಿ

Read More

ಸೌದಿ ಡೇಟ್ಸ್ – 2: ದರ್ಶನ್‌ ಜಯಣ್ಣ ಸರಣಿ

ಸೌದಿ ಆಧುನಿಕತೆಯನ್ನ ಎಲ್ಲರಂತೆ ಅಪ್ಪಿಕೊಂಡರೂ ಅದನ್ನ ಒಪ್ಪಿಕೊಂಡಿರಲಿಲ್ಲ. ಸಂಪ್ರದಾಯ ಮತ್ತು ಆಧುನಿಕತೆ, ಇಸ್ಲಾಂ ಮತ್ತು ಇತರೆ ಧಾರ್ಮಿಕ ಪದ್ಧತಿಗಳು, ಹಣ ಗಳಿಕೆ ಮತ್ತು ಜಾಗತಿಕ ಪ್ರಭಾವ, ಶಿಕ್ಷಣ ಮತ್ತು ಧರ್ಮ, ಸಂಪನ್ಮೂಲಗಳು ಮತ್ತು ನುರಿತ ಕೆಲಸಗಾರರು, ಕಮಾಂಡ್ ಅಂಡ್ ಕಂಟ್ರೋಲ್ ಇವೇ ಮುಂತಾದ ವಿಷಯಗಳನ್ನ ಎರಡು ದೋಣಿಯ ಪಯಣ ಅಂತಲೇ ಬಹುಶ ಭಾವಿಸಿತ್ತು ಅನ್ನಿಸುತ್ತದೆ. ಇತರೇ ಅರಬ್ ರಾಷ್ಟ್ರಗಳು ಇಲ್ಲಿಗೆ ಬಂದು ನೆಲಸಿ ನೌಕರಿ ಮಾಡುವವರನ್ನು ಮುಕ್ತವಾಗಿ ನಮ್ಮ ದೇಶವನ್ನ ಕಟ್ಟಿದವರಲ್ಲಿ ಇವರ ಪಾಲೂ ಹೆಚ್ಚಿದೆ ಎಂದು ಹೇಳಿದರೆ ಸೌದಿ ಅಂತಾ ಯಾವ ಹೇಳಿಕೆಯನ್ನೂ ಕೊಡುವುದಿಲ್ಲ.
ದರ್ಶನ್‌ ಜಯಣ್ಣ ಬರೆಯುವ “ಸೌದಿ ಡೇಟ್ಸ್”‌ ಸರಣಿ

Read More

ದರ್ಶನ್‌ ಜಯಣ್ಣ ಹೊಸ ಸರಣಿ “ಸೌದಿ ಡೇಟ್ಸ್” ಇಂದಿನಿಂದ….

ನಾನಿಲ್ಲಿ ಇಲ್ಲಿಯತನಕ ಆರು ವರ್ಷ ನಾಲ್ಕು ತಿಂಗಳುಗಳನ್ನ ಕಳೆದಿದ್ದೇನೆ. ನನ್ನ ಕುಟುಂಬದ ಜೊತೆ, ಗೆಳೆಯರ ಜೊತೆ ಈ ದೇಶ ಸುತ್ತಾಡಿದ್ದೇನೆ. ಇಲ್ಲಿನ ಬೃಹತ್ ಕಾರ್ಖಾನೆಗಳನ್ನು ಸ್ವತಃ ನೋಡಿದ್ದೇನೆ. ಇಲ್ಲಿನ ರಣ ಬಿಸಿಲಿನ ಜೊತೆಗೆ ತಂಪಾದ ಹವೆಯನ್ನೂ ಅನುಭವಿಸಿದ್ದೇನೆ. ಮರಳ ಮಳೆ, ನಿಜದ ಮಳೆ ಎರಡಕ್ಕೂ ಸಾಕ್ಷಿಯಾಗಿದ್ದೇನೆ. ಅರಬ್ಬರ ಜೊತೆ ಕೆಲಸ ಮಾಡಿ, ಓಡಾಡಿ ಚರ್ಚಿಸಿದ್ದೇನೆ. ಅವರ ಕನಸು, ವಿಚಾರ, ಜೀವನ ಕ್ರಮ, ಸ್ನೇಹವನ್ನು ಅನುಭವಿಸಿದ್ದೇನೆ.
ಸೌದಿ ಅರೇಬಿಯಾದ ವಾಸಿಯಾದ ದರ್ಶನ್‌ ಜಯಣ್ಣ ಅಲ್ಲಿನ ವಾಸದ ಹಾಗೂ ಆ ದೇಶದ ಕುರಿತು ತಮ್ಮ ಅನುಭವಗಳನ್ನು “ಸೌದಿ ಡೇಟ್ಸ್”‌ ಹೆಸರಿನಲ್ಲಿ ಶನಿವಾರಗಳಂದು, ಹದಿನೈದು ದಿನಗಳಿಗೊಮ್ಮೆ ಬರೆಯಲಿದ್ದಾರೆ

Read More

ಕನ್ನಡವೆಂಬ ಮರೆಗುಳಿ ಮನಸು!: ದರ್ಶನ್‌ ಜಯಣ್ಣ ಬರಹ

ಮಧ್ಯ ಪ್ರದೇಶದಲ್ಲಿನ ಕೆಲವು ಬುಡಕಟ್ಟುಗಳು ಕನ್ನಡಕ್ಕೆ ಬಲು ಹತ್ತಿರದ ಭಾಷೆಗಳನ್ನು ಮಾತನಾಡುತ್ತಾರೆ. ಇತ್ತೀಚೆಗೆ ಅದರ ಮೂಲ ಕರ್ನಾಟಕ ಮತ್ತು ಅವರೆಲ್ಲಾ ಎಲ್ಲೆಡೆ ಹಬ್ಬಿದ್ದ ನಮ್ಮ ಸಾಮ್ರಾಜ್ಯಗಳ ಜೀವಂತ ಮನುಷ್ಯ ಉಳಿಕೆಗಳು ಎಂಬುದು ಕಂಡು ಬಂದಿದೆ. ಮಹಾರಾಷ್ಟ್ರದ ಮರಾಠಿಯ ಕೊಂಕಣಿಯ ಬೆಳವಣಿಗೆಯಲ್ಲಿ ಕನ್ನಡದ ಭಾಷೆಗಳ ಕೊಡುಗೆಯಿದೆ, ತೆಲುಗಿಗೆ ತಮಿಳಿಗೆ ಎಷ್ಟೋ ಕೊಡು-ಕೊಳ್ಳುವ ಪ್ರಕ್ರಿಯೆಗಳಾಗಿವೆ. ಅದು ನಾವು ಉಪಯೋಗಿಸುವ ಎಷ್ಟೋ ಪದಗಳಲ್ಲಿ, ಅಕ್ಷರಗಳಲ್ಲಿ ತೋರುತ್ತದೆ.
ಕನ್ನಡ ಭಾಷೆ ಮತ್ತು ಅದರ ಬಳಕೆಯ ಕುರಿತು ದರ್ಶನ್‌ ಜಯಣ್ಣ ಬರಹ

Read More

ಅಪ್ಪ ಇಲ್ಲವಾಗಿ…

ದಾರಿ ಸಾಗುತ್ತಾ ನಾವು ಪೊಲೀಸ್ ಸ್ಟೇಷನ್‌ ಬಳಿ ಬಂದಾಗ “ಅದೋ ಅಲ್ಲಿ ಮುಂದೆ ಬಲಕ್ಕೆ ತಿರುಗಿ ಅಲ್ಲೇ ಮನೆ” ಅಂದೆ. ಡ್ರೈವರ್ “ಒಹ್ ಸಾರ್ ಆ ಜ್ಯೂಸು ಮಾಡ್ತಾರಲ್ಲ ಅವರ ಮನೆಹತ್ರನಾ?” ಅಂತ ಕೇಳಿದ್ದನ್ನು ಕಂಡು ನಾನು ಅವಾಕ್ಕಾದೆ! “ಹೌದು ಅವರೇ ಇವರು, ನಮ್ಮಪ್ಪ!” ಅಂದೆ. ಅವನು ಕೊಂಚ ಸುಮ್ಮನಾದಂತೆ ಕಂಡು ನಂತರ “ಹೌದು ಸಾರ್, ಅದೇ ಅನ್ಕೊಂಡೆ ಈಗ ಒಂದು ೨-೩ ವರ್ಷಗಳಿಂದ ಅಂಗಡಿ ತಗಿತಾ ಇಲ್ವಲ್ಲ ಅಂತ, ಪಾಪ ಸಾರ್” ಅಂದ.
ದರ್ಶನ್‌ ಜಯಣ್ಣ ಬರೆದ ಪ್ರಬಂಧಗಳ ಸಂಕಲನ “ಅಪ್ಪನ ರ್ಯಾಲೀಸ್‌ ಸೈಕಲ್‌” ನಿಂದ ಒಂದು ಪ್ರಬಂಧ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ