Advertisement

Tag: ದಾದಾಪೀರ್ ಜೈಮನ್

ಬದುಕಿನ ಪ್ರಶ್ನೆಗಳು..ಪರೀಕ್ಷೆಗಳು

ಅವನಿಗೆ ಮೊದಲಿನಿಂದಾನು ಮನೆಕಡೆಯಿಂದ ಸಮಸ್ಯೆ ಇತ್ತು. ಅಮ್ಮ, ಅಪ್ಪ, ವಿಕಲ ಚೇತನ ಅಣ್ಣ, ಮನೆಯಲ್ಲಿ ಸದಾ ಇರುವ ಜಗಳಗಳು ನೆನಪಾದವು. ನನಗೆ ನನ್ನ ಮನೆಯಲ್ಲಿರುವ ಬಡತನ, ರಿಸರ್ವಶನ್ ಕೊಟ್ಟರೂ ಇವಕ್ಕೆ ಮುಂದೆ ಬರೋದಕ್ಕೆ ಗೊತ್ತಿಲ್ಲ ಎಂಬ ಕುಹಕಗಳು ಕುದಿಯುತ್ತಿದ್ದವು. ಎರಡು ಮಗ್ಗಿನಲ್ಲಿ ಚಾ ಬಗ್ಗಿಸಿಕೊಂಡು ಕೋಣೆಗೆ ಬಂದರೆ ಅವನು ಹಾಸಿಗೆಯಿಂದೆದ್ದು ಗೋಡೆಗಾತು ಯಾವುದೋ ಮ್ಯಾಗಜಿನ್ ಹಿಡಿದು ಕೂತಿದ್ದ. ಮೊಬೈಲು, ಬ್ಯಾಟರಿ ದಿಕ್ಕಿಗೊಂದೊಂದು ಬಿದ್ದಿದ್ದವು.
ದಾದಾಪೀರ್‌ ಜೈಮನ್ ಬರೆಯುವ “ಜಂಕ್ಷನ್‌ ಪಾಯಿಂಟ್‌” ಅಂಕಣ

Read More

ಟಿಶ್ಯೂಮಾರುವ ಹುಡುಗ ಸುಳ್ಳು ಹೇಳಲಿ ಬಿಡಿ

ಕೊನೆಗೂ ಉಷಾ ಇದ್ದ ಅಪಾರ್ಟ್ಮೆಂಟ್ ಬಂತು. ಲಿಫ್ಟ್ ಕಾರ್ನರ್ ಪ್ರವೇಶ ಮಾಡುವ ಮೊದಲೇ ಒಂದು ಮಂಟಪದಂತಹ ಜಾಗದಲ್ಲಿ ನಿಂತು ಅದರ ನಾಲ್ಕೂ ಮೂಲೆಗೂ ಹಬ್ಬಿದ್ದ ಮಲ್ಲಿಗೆ ಬಳ್ಳಿಯನ್ನು ನೋಡುತ್ತಾ ಅದರ ಸುಗಂಧವನ್ನು ಅಘ್ರಾಣಿಸಲು ನಿಂತರು. ಇಹದಲ್ಲಿ ನಿಂತು ಪರಲೋಕಕ್ಕೆ ಕೈಚಾಚಿ ನಿಂತ ಘಳಿಗೆಯಾಗಿ ನನಗದು ಕಂಡಿತು. ಆ ಕ್ಷಣದಲ್ಲಿ ನನಗವರ ಮೇಲೆ ಕ್ಯಾಬಲ್ಲಿ ಉಕ್ಕಿದ್ದ ಕೋಪವೆಲ್ಲಾ ಮಾಯವಾಯಿತು. ಉಷಾಳ ಗಂಡ ಅನಿಕೇತ್ ನೋಡುವುದಕ್ಕೆ ನಿಜಕ್ಕೂ ಚೆನ್ನಾಗಿದ್ದ.
ದಾದಾಪೀರ್‌ ಜೈಮನ್‌ ಬರೆಯುವ ಅಂಕಣ

Read More

ಕಳೆದುಕೊಂಡವರ ನೆನಪಿನಲ್ಲಿ…

ಕರ್ಫ್ಯೂ ಆಗಿ ಅಂಚೆ ವ್ಯವಸ್ಥೆ ನಿಂತು ಹೋಗಿತ್ತು. ಒಂದು ಮುಖ್ಯವಾದ ಪಾರ್ಸೆಲ್ ಅಂಚೆ ಇಲಾಖೆಯಲ್ಲಿ ಸಿಕ್ಕಿಹಾಕಿಕೊಂಡಿತ್ತು. ಊರಿನಲ್ಲಿರುವ ಹೈಸ್ಕೂಲ್ ಗೆಳೆಯ ಆನಂದನಿಗೆ ಫೋನ್ ಮಾಡಿದ್ದೆ. ಅವರ ತಂದೆ ಊರಿನಲ್ಲಿ ಪೋಸ್ಟ್ ಮಾಸ್ಟರ್ ಆಗಿದ್ದರು. ‘ಏನಾದರೂ ಮಾಡಕ್ಕಾಗತ್ತಾ?’ ಕೇಳಿದ್ದೆ. ಆಗ ಚೆನ್ನಾಗೆ ಮಾತಾಡಿದ್ದ. ಅದಾಗಿ ಒಂದು ವಾರಕ್ಕೆ ಫೇಸಬುಕ್ಕಲ್ಲಿ ‘ರೆಸ್ಟ್ ಇನ್ ಪೀಸ್ ಆನಂದ್’ ಎಂದು ಸುದ್ದಿ ಬಂತು. ಕೋವಿಡ್ ಇಷ್ಟು ಹತ್ತಿರಕ್ಕೆ ಬಂತು. ಒಂದು ಸಾಂಕ್ರಾಮಿಕ ರೋಗ ಎಲ್ಲವನ್ನೂ ಹೀಗೆ ಕಸವನ್ನು ಬುಟ್ಟಿಯಲ್ಲಿ ಹಾಕಿ ಹೊತ್ತೊಯ್ಯುವಂತೆ ಮನುಷ್ಯರನ್ನು ಹೊತ್ತೊಯ್ಯಲು ಆರಂಭಿಸಿತ್ತು. ವ್ಯಾಪಾರವೇ ಇಲ್ಲದೆ ಜನ ಊಟಕ್ಕಾಗಿ ಪರದಾಡಿದ್ದರು.
ದಾದಾಪೀರ್‌ ಜೈಮನ್‌ ಬರೆಯುವ “ಜಂಕ್ಷನ್‌ ಪಾಯಿಂಟ್‌” ಅಂಕಣ

Read More

ರುಚಿಯ ದಾರಿ ಹಿಡಿದವರ ಕಥೆ

ಕೋವಿಡ್ ಮೊದಲನೇ ಅಲೆಯ ಕಾರಣದಿಂದ ಹಲವರು ಕೆಲಸ ಕಳೆದುಕೊಳ್ಳುತ್ತಿದ್ದರು. ಮತ್ತೊಂದಿಷ್ಟು ಕಡೆ ಪರ್ಸಂಟೇಜ್ ಸ್ಯಾಲರಿಗೆ ಬಂದು ನಿಂತಿತ್ತು. ಸಂಯೋಜಕರಾಗಿ ಕೆಲಸ ಮಾಡುತ್ತಿದ್ದ ಮಿಸಸ್ ಪ್ರೆಸಿಲ್ಲಾ ಅವರನ್ನು ಹೆಚ್ಚುವರಿ ಹುದ್ದೆಗಳನ್ನು ವಜಾ ಮಾಡುವ ನೆಪ ಹೇಳಿ ಕೆಲಸದಿಂದ ತೆಗೆದು ಹಾಕಿದ್ದರು. ಅವರೇ ರೆಫರ್ ಮಾಡಿದ್ದ, ನಾನು ಕೆಲಸ ಮಾಡುತ್ತಿದ್ದ ಸಂಸ್ಥೆಗೆ ಇಂಗ್ಲಿಷ್ ಭಾಷಾ ಅಧ್ಯಾಪಕರಾಗಿ ಸೇರಿಕೊಂಡರು. ನಾವೀಗ ಸಹೋದ್ಯೋಗಿಗಳಾಗಿದ್ದೆವು. ಜಂಕ್ಷನ್ ಪಾಯಿಂಟ್ ಅಂಕಣದಲ್ಲಿ ದಾದಾಪೀರ್ ಜೈಮನ್ ಬರಹ

Read More

ಕ್ಷಮೆ ಎಂಬ ಕನ್ನಡಿ…

‘ಡು ಐ ಹೇಟ್ ಮೈಸೆಲ್ಫ್?’ ಎಂದೆಲ್ಲಾ ಅನ್ನಿಸಲು ಶುರುವಾದರೂ ಬಲವಂತವಾಗಿ ಇಂತಹ ಯೋಚನೆಗಳನ್ನು ಅದುಮಿಟ್ಟೆ. ಇದೆಲ್ಲದರಿಂದ ಹೊರಬರಲು ಸಿನಿಮಾ ನೋಡುವುದೇ ಸೂಕ್ತ ಎಂದುಕೊಂಡು ಅವಳಲ್ಲಿ ಪ್ರಸ್ತಾಪಿಸಿದರೆ ಅವಳು ಒಲ್ಲದ ಮನಸ್ಸಿನಿಂದಲೇ ಸಮ್ಮತಿಸಿದಳು. ಸಿನಿಮಾದಲ್ಲಿ ಪ್ರತಿ ಪಾತ್ರಕ್ಕೆ ಅವಳು ತನ್ನನ್ನು, ರಘು ಮತ್ತು ಪೀಟರನಿಗೆ ಹೋಲಿಸಿಕೊಂಡು ಅದು ತನ್ನದೇ ಕಥೆಯಂತೆ ಭಾವಿಸಿ ಒಂದು ಭ್ರಮಾತ್ಮಕ ಸ್ಥಿತಿಗೆ ತಲುಪಿದಂತೆ ಕಾಣುತ್ತಿದ್ದಳು. ಯಾಕೋ ನನಗೆ ಹಿಂಸೆಯಾಗತೊಡಗಿತು. ನನ್ನ ಮಾನಸಿಕ ಸ್ಥಿಮಿತವನ್ನೇ ತಾನು ಕಳೆದುಕೊಳ್ಳುತ್ತಿದ್ದೇನೆ ಎನ್ನಿಸಲು ಶುರುವಾಯಿತು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ