Advertisement

Tag: ದೀಪಾ ಗೋನಾಳ

ಅರಳುವ ಭಾವಲೋಕ: ದೀಪಾ ಗೋನಾಳ ಕವನ ಸಂಕಲನಕ್ಕೆ ಓ.ಎಲ್. ನಾಗಭೂಷಣ ಸ್ವಾಮಿ ಮಾತುಗಳು

ಪ್ರೇಮವೇ ಗೆಲುವುದು ಅನ್ನುವ ಶೀರ್ಷಿಕೆಯನ್ನೇ ನೋಡಿ. ಪ್ರೇಮ ಗೆಲ್ಲುವುದು ʻನಾನುʼ ನೋತಾಗ ಅಲ್ಲವೇ!. ಪ್ರೇಮ ಗೆದ್ದಿತು ಅನ್ನುವುದು ಬರಿಯ ಒಬ್ಬರ, ಪುಣ್ಯವಿದ್ದರೆ ಪಾಲ್ಗೊಂಡ ಇಬ್ಬರ ಮೈಮನಸುಗಳಿಗೆ ಮಾತ್ರ ಗೊತ್ತಿರುವ ಸಂಗತಿಯಾಗಬಹುದು, ಭಾಷೆಯನ್ನು ಬಲ್ಲ ಎಲ್ಲರಿಗೂ ಇದನ್ನು ಮನದಟ್ಟು ಮಾಡಿಸುವುದು ಎಷ್ಟು ಕಷ್ಟ. ಪ್ರೀತಿ ಶೃಂಗಾರದ ಬಯಕೆ, ತವಕ, ನೆನಪು, ಅವನ್ನೆಲ್ಲ ನುಡಿಯಾಗಿ ಕಾಣುವ ಹಂಬಲ ಇವೆಲ್ಲವೂ ಓದುಗರಲ್ಲೂ ಇರಬೇಕು. ಅಂದರೆ ಪ್ರೇಮವನ್ನು ಬಯಸುವ ಓದುಗ ಮನಸೂ ಬೇಕು.
ದೀಪಾ ಗೋನಾಳ ಕವನ ಸಂಕಲನ “ನಿನ್ನ ನೆನಪ ಕುಡಿದವಳು” ಕುರಿತು ಓ.ಎಲ್.‌ ನಾಗಭೂಷಣ ಸ್ವಾಮಿ ಬರಹ

Read More

ಮನದಲ್ಲೇ ಉಳಿದುಹೋದ ಪತ್ರಗಳು: ದೀಪಾ ಗೋನಾಳ ಬರಹ

ಒಬ್ಬ ಸಂತನಂತವನನ್ನ ನಂಬಿ ಭಾರತಕ್ಕೆ ಬಂದು ಆತನ ಮಗಳಾಗಿ ಆತನ ಹೋರಾಟಗಳಿಗೆ ಹೆಗಲಾದ ಮೆಡಲಿನ್ ಸ್ಲೇಡ್‌ಗೆ ಬಾಪು ಯಕಃಶ್ಚಿತ್ ಒಂದು ಪಾನ್‌ ಬೀಡ ತಿಂದರೂ ಕ್ಲಾಸ್ ತೆಗೆದುಕೊಂಡ ಪತ್ರವಿದೆಯಲ್ಲ ಅದು ಒಬ್ಬ ಆದರ್ಶ ತಂದೆ ತನ್ನ ಮಗಳ ಕುರಿತ ಅಪರಿಮಿತ ಅಪ್ಯಾಯತೆ ಮತ್ತು ಕಾಳಜಿಯಿಂದ ಮಾಡಿದ ಕೆಲಸವೆಂದೇ ನನ್ನ ದೃಢಭಾವನೆ. ಈ ಪತ್ರಗಳು ಒಮ್ಮೊಮ್ಮೆ ಖಂಡಕಾವ್ಯದಂತೆಯೂ ಭಾಸವಾಗಿದ್ದು ನನಗೆ ಆಶ್ಚರ್ಯ ಹುಟ್ಟಿಸಿದೆ.
ಎಂಕೆ ಗಾಂಧಿ ರಚಿತ “ಪ್ರಿಯ ಮೀರಾ” ಬಾಪು ಮಗಳಿಗೆ ಬರೆದ ಪ್ರೇಮ ಪತ್ರಗಳನ್ನು ಮಂಜುನಾಥ್‌ ಚಾಂದ್‌ ಕನ್ನಡಕ್ಕೆ ತಂದಿದ್ದು ಈ ಕೃತಿಯ ಕುರಿತು ದೀಪಾ ಗೋನಾಳ ಬರಹ

Read More

ಐವತ್ತು ಪದ್ಯ, ಮೂವತ್ತಮೂರು ವರ್ಷ…: ದೀಪಾ ಗೋನಾಳ ಬರಹ

ಹೀಗೆ ತೇಲಿ ಹೋದ ಮತ್ತು ಕವಿತೆಯಾಗಿ ಉಳಿದು ಹೋದ ಜೀವ ಕೆತ್ತಿದ ಮೆತ್ತನೆ ಪದಗಳು ಬದುಕನ್ನ ಅವನು ಪಳಗಿಸ ಹೊರಟ ದಾರಿ ನಡುವೆ ನಿಂತು ನಕ್ಕ ದಾರಿಗಲ್ಲು. ಆ ಕಲ್ಲಿಗೂ ಕರುಳುಂಟು ಎನ್ನುವ ಅವನೊಳಗಿನ ಜೀವನಪ್ರೀತಿ. ಕವಿ ತಾನು ಇಲ್ಲದಾಗ ನಾವು ಅವನ ಮನೆಗೆ ಹೋದ್ರೆ ಏನು ಮಾಡಬೇಕು ಅಂತ ಹೇಳಿದ್ದಾನೆ, ಹೇಳಿ ಹೋಗಿದ್ದಾನೆ. ಅವನು ಇದನ್ನೆಲ್ಲ ಯಾಕೆ ಮೊದಲೇ ಇಷ್ಟು ನಿಖರವಾಗಿ ಹೇಳಿದ ಅನ್ನೊ ಪ್ರಶ್ನೆ ನನ್ನದು, ಆದರೆ ಅವನು ಹೇಳಿದ ಮಾತಿಗೆ ಬೆರಗೂ ಹಿಂಬಾಲಿಸೋದು ಕಂಡು ಆಶ್ಚರ್ಯವೂ..
ಎರಡು ವರ್ಷಗಳ ಹಿಂದೆ ತೀರಿಕೊಂಡ ಯುವಕವಿ ಅನಿಲ ಹುಲಮನಿ ಅವರ ಕವನ ಸಂಕಲನ “ಹೊಸ ಅಧ್ಯಾಯ”ವನ್ನು ಧಾರವಾಡದ ಕ್ರಾಂತಿ ಪ್ರಕಾಶನ ಪ್ರಕಟಿಸಿದ್ದು, ಈ ಸಂಕಲನದ ಕುರಿತು ದೀಪಾ ಗೋನಾಳ ಬರಹ

Read More

ಗಾಯಗೊಂಡ ಸಾಲುಗಳು… : ದೀಪಾ ಗೋನಾಳ ಬರಹ

ಕವಿಯಾದವನಿಗೆ ತನ್ನ ಪದಗಳ ಗೊಡವೆ ಬೇಡ, ಅದು ಯಾರದ್ದೊ ನೋವು, ಆರ್ತನಾದ ಮಾತ್ರ ನನ್ನದು ಎನ್ನುವ ದೈನ್ಯತೆ ಎಂದಿಗೂ ಬೇಕು. ಅದು ನನ್ನ ಮಿತ್ರನ ಕವಿತೆಗಳಲಿ ತುಂಬಿ ಹೋಗಿದೆ. ಹೀಗಾಗಿಯೇ ಈ ಸಂಕಲನ ‘ಗಾಯಗೊಂಡ ಸಾಲುಗಳು‌’ ಎಂಬ ಹಣೆಪಟ್ಟಿ ಹೊತ್ತು ಹೊರಬಂದಿವೆ. ಗಾಯಗೊಂಡ ಪದಗಳನೇ ಹೆಣೆದು ಬ್ಯಾಂಡೇಜು ಕಟ್ಟಿದ ಪದಗಳಿವು. ಯಾರೂ ಮೂಸದ ಸರ್ಕಾರಿ ಆಸ್ಪತ್ರೆಯ ಕಟ್ಟೆಯ ಮೇಲೆ ಕೂತ ಅನಾಥ ವೃದ್ಧನಂತೆ ಇಲ್ಲಿನ ಕವಿತೆಗಳು ಕಾಣಿಸತೊಡಗುತ್ತವೆ.
ಸದಾಶಿವ ಸೊರಟೂರು ಕವನ ಸಂಕಲನ “ಗಾಯಗೊಂಡ ಸಾಲುಗಳು” ಕುರಿತು ದೀಪಾ ಗೋನಾಳ ಬರಹ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ