Advertisement

Tag: ನನ್ನ ಅನಂತ ಅಸ್ಪೃಶ್ಯ ಆಕಾಶ

ಯಾರು ಹಚ್ಚಿದರು ಈ ಹಣತೆಯ..

ಹೀಗೆ ಯೋಚಿಸುತ್ತಿರುವ ಒಂದು ದಿನ ಒಂದು ಘನಘೋರ ವಿದ್ವತ್ ಸಭೆಯಲ್ಲಿ ಮೂಕನಾಗಿ ಕೂತಿದ್ದೆ. ಆ ವಿದ್ವಾಂಸರ ವೈಖರಿಗೆ ಮೈಕೇ ಕಿತ್ತುಹೋಗುತಿತ್ತು. ಯಾವ ಯಕ್ಷಗಾನದ ರುದ್ರ ರಾಕ್ಷಸ ಪಾತ್ರವೂ ಅವರ ಮುಂದೆ ನಾಚುವಂತಿತ್ತು. ಪೋಸ್ಟ್ ಮ್ಯಾನ್  ಅಲ್ಲಿಗೇ ಬಂದು ಹುಡುಕಿ ಪತ್ರ ಕೊಟ್ಟು ಸಹಿ ಪಡೆದು ಹೋದ. ತೆರೆದು ನೋಡಿದೆ. ನಿಜವೇ ಎನಿಸಿತು. ಇದು ಏಪ್ರಿಲ್ ತಿಂಗಳಲ್ಲ… ನನ್ನನ್ನು ಮೂರ್ಖನನ್ನಾಗಿಸಲು ಸಾಧ್ಯವಿಲ್ಲ ಎಂದು ಮತ್ತೆ ಓದಿದೆ. ಈ ಪತ್ರ ನಿಜವೇ ಎಂದು ಆ ಪತ್ರದಲ್ಲೇ ಇದ್ದ ನಂಬರಿಗೆ ಫೋನಾಯಿಸಿದೆ. ಕರೆ ಸ್ವೀಕರಿಸಿದವರು ‌ʻಕಂಗ್ರಾಜುಲೇಷನ್ʼ ಎಂದರು. ಮೊಗ‍ಳ್ಳಿ ಗಣೇಶ್‌ ಆತ್ಮಕತೆ  ಸರಣಿ

Read More

ನಡೆ ಎಲ್ಲೆಂದರಲ್ಲಿಗೆ ನಡೆ

ಹಳ್ಳಿಗೆ ಹೋಗಿ ಹೀಗಾಯಿತು ಎಂದು ಹೇಳಿದರೆ ನನ್ನ ಕನಸು ನನ್ನ ದುಃಖ ಅವರಿಗೆ ಅರ್ಥವಾಗುತ್ತಿರಲಿಲ್ಲ. ಯಾರಿಗೂ ಹೇಳಿಕೊಳ್ಳಲು ಆಗುತ್ತಿರಲಿಲ್ಲ. ಹೇಳಿಕೊಂಡರೆ ನಗುತ್ತಿದ್ದರು. ಜುಜುಬಿ ಫೋಕ್‌ಲೋರ್ ಓದ್ಬುಟ್ಟು ಇಷ್ಟೆಲ್ಲಾ ಬಿಲ್ಡಪ್ ಕೊಡ್ತಿಯಲ್ಲಾ. ನಿನ್ನ ರೇಂಜ್ ಏನಿದೆಯೊ ಅದ್ನೇ ಮೆಯಿಂಟೇನ್ ಮಾಡು ಎಂದಿದ್ದರು ಗೆಳೆಯರು. ನಿಜವಿತ್ತು. ನಾನೇನು ಮಹಾ ತಿಳಿದವನಾಗಿರಲಿಲ್ಲ. ಅವೆಲ್ಲ ಈ ವ್ಯವಸ್ಥೆಯ ಬಲೆಯಿಂದ ತಪ್ಪಿಸಿಕೊಂಡು ಕಣ್ಮರೆಯಾಗಿ ಎಲ್ಲೊ ಹೋಗಿ ಅನಾಥನೇ ಆಗಿ ಬದುಕಲು ಹೂಡುತ್ತಿದ್ದ ವಿಕಟ ವಿನೋದ ದುರಂತ ನಾಟಕ. ಕೆ.ಆರ್.ಮಾರ್ಕೆಟಲ್ಲಿ ಹೋಗಿ ಮೂಟೆ ಹೊತ್ತು ಸಂಸಾರ ನಡೆಸಲು ಇಲ್ಲಿ ತನಕ ಹೋರಾಡಿ ಬರಬೇಕಿತ್ತೇ…
ಮೊಗಳ್ಳಿ ಗಣೇಶ್‌ ಬರೆಯುವ “ನನ್ನ ಅನಂತ ಅಸ್ಪೃಶ್ಯ ಆಕಾಶ” ಆತ್ಮಕತೆ ಸರಣಿಯ 36ನೇ ಕಂತು

Read More

ನೆತ್ತರ ಒಗಟುಗಳ ಬಿಡಿಸುವುದು ಕಷ್ಟ

ಆ ಹಂದಿಗಳಿಗೆ ತಿಂಗಳಿಗಾಗುವಷ್ಟು ಆಹಾರವನ್ನು ಅಪ್ಪ ಹಿತ್ತಿಲ ಸೌದೆ ಮನೆಯಲ್ಲಿ ತರಿಸಿಇಟ್ಟಿರುತ್ತಿದ್ದ. ಅಷ್ಟೇ ಅವನ ಕೆಲಸ. ಆಗಾಗ ನಾನೇ ಅವುಗಳ ಎಲ್ಲ ಕೆಲಸ ಮಾಡುತ್ತಿದ್ದುದು. ಅಪ್ಪ ಬಂದು ನೋಡಿದ ಕೂಡಲೆ ಗಕ್ಕನೆ ಎದ್ದು ಮೂಲೆ ಸೇರಿ ಭಯದಿಂದ ನೋಡುತ್ತಿದ್ದವು. ಯಾಕೆ ಇವು ನನ್ನಂತೆಯೇ ಬೆದರಿ ನನ್ನ ಬಳಿ ಬಂದು ಗಾಬರಿಯಾಗುತ್ತವಲ್ಲಾ… ಹೇಗೆ ಗೊತ್ತಾಯಿತು ಈ ಹಂದಿಗಳಿಗೆ ಅಪ್ಪನ ಅವತಾರಗಳು ಎಂದು ಅಚ್ಚರಿಯಾಗುತ್ತಿತ್ತು. ಮೊಗಳ್ಳಿ ಗಣೇಶ್‍ ಬರೆಯುವ  ನನ್ನ ಅನಂತ ಅಸ್ಪೃಶ್ಯ ಆಕಾಶ ಸರಣಿಯ ಹೊಸ ಕಂತು ನಿಮ್ಮ ಓದಿಗಾಗಿ. 

Read More

ನನ್ನ ನಿರುಮ್ಮಳ ಇರುಳು ನನ್ನದು…

ಅಲ್ಲೊಂದು ಸಹಜ ಜಲ ಬಾವಿ ಇತ್ತು ಅನಾದಿಯಿಂದಲೂ. ಅದರ ಪವಿತ್ರ ಜಲದಿಂದಲೇ ಆ ಕಾಲದ ವೈದಿಕರು ಧರ್ಮ ಕಾರ್ಯ ಎಸಗುತ್ತಿದ್ದುದು… ಅದಕೆಂದೇ ಆ ಗೊಂಡಾರಣ್ಯ ಪ್ರಸಿದ್ಧವಾಗಿತ್ತು ಆ ಕಾಲಕ್ಕೆ. ಈಗದು ಒಂದು ಹೊಂಡವಾಗಿತ್ತು. ಬೇಸಿಗೆಯಲ್ಲಿ ದಾಹಕ್ಕಿಳಿದ ಪ್ರಾಣಿಗಳು ಆ ಸನಾತನ ಜಾರಿನ ಹೂಳಿನಲ್ಲಿ ಸಿಲುಕಿ ಎದ್ದು ಬರಲಾರದೆ ಅಲ್ಲೇ ಸಮಾಧಿ ಆಗಿದ್ದವು. ಬಾಯಾರಿ ಅಲ್ಲಿ ಸಿಲುಕಿದವರ ಪಾಡನ್ನು ಅರ್ಥಮಾಡಿಕೊಳ್ಳಿ! ಧರ್ಮ ಸೂಕ್ಷ್ಮವನ್ನು ನಾಳೆ ಅರ್ಥ ಮಾಡಿಕೊಳ್ಳಿ ಮಕ್ಕಳೇ; ಈಗಲೇ ಹೇಳಬಾರದು!

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ