Advertisement

Tag: ನಾ. ಮೊಗಸಾಲೆ

ʼನೀರಿನೊಳಗಿನ ಮಂಜುʼ ಕಾದಂಬರಿಯ ಕೆಲವು ಪುಟಗಳು

ಮದುವೆಯಾಗುವಾಗ ಜಯಂತಿ ಕುಲಕರ್ಣಿ ರಾಂಪುರದ ಒಂದು ಹೈಸ್ಕೂಲಿನಲ್ಲಿ ಕನ್ನಡ ಟೀಚರಾಗಿದ್ದಳು. ಅದು ಖಾಸಗಿ ಹೈಸ್ಕೂಲಾಗಿದ್ದುದರಿಂದ ಸಂಬಳವೆನ್ನುವುದು ‘ನಾಮ್ಕಾವಸ್ಥೆ’ಯದಾಗಿತ್ತು. ಎಂ.ಎ ಓದಿ ಮನೆಯಲ್ಲಿ ಸುಮ್ಮನೇ ಕುಳಿತುಕೊಳ್ಳುವುದಕ್ಕಿಂತ ಹವ್ಯಾಸದ ಥರ ಪಾಠವನ್ನಾದರೂ ಮಾಡಿ ‘ಟೈಂಪಾಸ್’ ಮಾಡಬಹುದು ಎಂಬಂತೆ ಆಕೆ ಹೈಸ್ಕೂಲಲ್ಲಿ ದುಡಿಯುತ್ತಿದ್ದಳು. ಬಸವೇಶ್ವರ ಕಾಲೇಜಿನಲ್ಲಿರುವ ಸತೀಶ್ ಕುಲಕರ್ಣಿ ಇಂಗ್ಲೀಷ್ ಲೆಕ್ಚರರ್ ಆಗಿದ್ದಾರೆ ಎಂಬುದರಿಂದ ಮದುವೆಯ ಪೂರ್ವದಲ್ಲೇ ಆಕೆ ತಾನೂ ಆ ಕಾಲೇಜಿನಲ್ಲಿ ಸೇರಬೇಕೆಂಬ ಕನಸು ಕಂಡಿದ್ದಳು.
ಡಾ. ನಾ. ಮೊಗಸಾಲೆಯವರ “ನೀರಿನೊಳಗಿನ ಮಂಜು” ಹೊಸ ಕಾದಂಬರಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಧರ್ಮಯುದ್ಧ ಕಾದಂಬರಿಯ ಕೆಲವು ಪುಟಗಳು

ಸುಕ್ಕ ಯಾನೆ ಸುಕುಮಾರನಿಗೆ ಶೇಂದಿ ಶರಾಬು ಕುಡಿಯುವ ಅಭ್ಯಾಸ ಆ ದಿನಗಳಲ್ಲಿ ಇರಲಿಲ್ಲ. ಆದರೆ ಒಮ್ಮೆಲೇ ಕುಳಿತು ಎರಡು ಬಾಟ್ಲಿ ಬಿಯರ್ ಕುಡಿಯುವ ತಾಕತ್ತು ಅವನಲ್ಲಿತ್ತು. ಅವನಂಥವನನ್ನು ಜನ ‘ಕುಡುಕ’ ಎನ್ನುತ್ತಿರಲಿಲ್ಲ. ‘ದೊಡ್ಡವರು ಕುಡಿಯುವುದಿಲ್ಲವೇ ಆರೋಗ್ಯಕ್ಕೆ’ ಎನ್ನುತ್ತಿದ್ದರು. ಸುಕ್ಕನಿಗೆ ಇದು ಗೊತ್ತಿತ್ತು. ಕಂಟ್ರಿ ಜನಗಳ ಹಾಗೆ ಕುಡಿದರೆ ತಾನೂ ಅವರಲ್ಲೊಬ್ಬನಾಗುತ್ತೇನೆ. ತಾನು ಅವರ ಹಾಗೆ ಆಗಬಾರದು, ಜನರನ್ನೆಲ್ಲ ನಿಯಂತ್ರಿಸುವ ಜನಪ್ರತಿನಿಧಿಯಾಗಬೇಕು ಎಂದು ಆತ ಬಹಳ ದಿನಗಳಿಂದ ಯೋಚಿಸುತ್ತಿದ್ದ. ಆ ಯೋಚನೆ ಕಳೆದ ಬಾರಿಯ ಪಂಚಾಯತ್ ಚುನಾವಣೆಯಲ್ಲಿ ಕಾರ್ಯಗತವಾಗಿತ್ತು.
ನಾ. ಮೊಗಸಾಲೆಯವರ ಹೊಸ ಕಾದಂಬರಿ ‘ಧರ್ಮಯುದ್ಧ’ದಿಂದ ಕೆಲವು ಪುಟಗಳು ನಿಮ್ಮ ಓದಿಗೆ

Read More

ಮೊಗಸಾಲೆಯವರ ‘ಧಾತು’ವಿನ ಕುರಿತು ವಿಜಯರಾಘವನ್

“ಕಾಮವೆಂಬ ಪುರುಷಾರ್ಥವನ್ನು ನಿರ್ವಚಿಸುವಲ್ಲಿ ಒಂದು ಸುಸಂಗತ ನೆಲೆಯನ್ನು ಕತೆ ಮತ್ತು ಕಥನಕ್ಕೆ ಒದಗಿಸುವುದು ಕಷ್ಟದ ಕೆಲಸ. ಸುಧೀರ್ ಕಕ್ಕರ್ ಅವರು ತಮ್ಮ ಮನೋವಿಶ್ಲೇಷಕ ಕೃತಿಗಳಲ್ಲಿ ನಿರ್ವಚಿಸಿದಂತೆ ಮೊಗಸಾಲೆಯವರು ಮಾಡಲು ಬರುವುದಿಲ್ಲ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ