Advertisement

Tag: ನೆನಪಾದಾಗಲೆಲ್ಲ

ಧೀಮಂತ ಪತ್ರಕರ್ತ ಐ.ಕೆ. ಜಾಗೀರದಾರ್: ರಂಜಾನ್ ದರ್ಗಾ ಸರಣಿ

ಅವರೆಲ್ಲ ಕುಳಿತ ಕುರ್ಚಿ, ಪ್ಲೇಟು ಮತ್ತು ಆಹಾರದಲ್ಲಿ ಯಾವುದೇ ವ್ಯತ್ಯಾಸ ಇರಲಿಲ್ಲ. ಅದು ನಾಲ್ಕು ಮಾಸ್ಟರ್ ಬೆಡ್ ರೂಂ ಮನೆಯಾಗಿತ್ತು. ಎಲ್ಲ ಕೋಣೆಗಳನ್ನು ತೋರಿಸಿದರು. ಅವೆಲ್ಲ ಒಂದೇ ಸೈಜಿನ ಕೋಣೆಗಳು. ಪಲ್ಲಂಗ, ಬೆಡ್, ಹೊದಿಕೆ ಹೀಗೆ ಯಾವುದರಲ್ಲೂ ವ್ಯತ್ಯಾಸ ಇರಲಿಲ್ಲ. ಒಂದು ಇಬ್ಬರು ಮಕ್ಕಳ ಕೋಣೆ, ಇನ್ನೊಂದು ಅವರ ಕೋಣೆ, ಮತ್ತೊಂದು ಮನೆಗೆಲಸದ ಹೆಣ್ಣುಮಗಳ ಕೋಣೆ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 96ನೇ ಕಂತು ನಿಮ್ಮ ಓದಿಗೆ

Read More

ಭಕ್ತವತ್ಸಲ ಸಿದ್ಧಗಂಗಾ ಶ್ರೀಗಳು: ರಂಜಾನ್ ದರ್ಗಾ ಸರಣಿ

ಎಲ್ಲ ಜಾತಿ ಜನಾಂಗಗಳ ಮಕ್ಕಳ ಶೈಕ್ಷಣಿಕ ಏಳ್ಗೆಯೆ ಅವರ ಬಹುದೊಡ್ಡ ಗುರಿಯಾಗಿತ್ತು. ಪ್ರತಿ ವರ್ಷ ಹತ್ತುಸಾವಿರ ಮಕ್ಕಳನ್ನು ಸಾಕುತ್ತ, ಅವರಿಗೆ ಯಾವುದೇ ರೀತಿಯ ಕೊರತೆಯಾಗದಂತೆ ನೋಡಿಕೊಳ್ಳುತ್ತ, ಶೈಕ್ಷಣಿಕವಾಗಿ ಅವರನ್ನು ಉನ್ನತ ಸ್ಥಾನಕ್ಕೇರಿಸುವುದು ಸಾಮಾನ್ಯ ಮಾತಲ್ಲ. ಅವರ ಮಠದ ಎಲ್ಲ ವಿಭಾಗಗಳಲ್ಲಿ ನಿಷ್ಠೆಯಿಂದ ಎಲೆ ಮರೆಯ ಕಾಯಿಯಂತೆ ಕಾರ್ಯನಿರ್ವಹಿಸುವ ಪ್ರತಿಯೊಬ್ಬರೂ ಗೌರವಕ್ಕೆ ಅರ್ಹರಾಗಿದ್ದಾರೆ. ಅವರ ಮಠದ ಆವರಣವು ಪುಟ್ಟ ಭಾರತವೇ ಆಗಿದೆ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಹೀಗಿದ್ದರು ನಮ್ಮ ಕೆ.ಎಚ್. ರಂಗನಾಥ: ರಂಜಾನ್ ದರ್ಗಾ ಸರಣಿ

ಅವರಿಗೆ ಸ್ವಂತ ಕಾರು ಇರಲಿಲ್ಲ. ಅವರ ಮಕ್ಕಳು ಸರ್ಕಾರಿ ಕಾರಿನಲ್ಲಿ ಎಂದೂ ಶಾಲೆಗೆ ಹೋಗಲಿಲ್ಲ. ನಾನು ಸೇರಿದ ಒಂದು ವರ್ಷದಲ್ಲಿ ಅವರು ಒಂದು ಸೆಕೆಂಡ್ ಹ್ಯಾಂಡ್ ಅಂಬಾಸಿಡರ್ ಕಾರು ಕೊಂಡರು. ಆಗ ಅವರ ಮನೆಮಂದಿಯೆಲ್ಲ ಸಂಭ್ರಮಪಟ್ಟಿದ್ದು ಇಂದಿಗೂ ನೆನಪಿದೆ. ಅನೇಕ ವರ್ಷಗಳಿಂದ ಕ್ಯಾಬಿನೆಟ್ ದರ್ಜೆಯ ಸಚಿವರಾಗಿದ್ದ ಅವರು ಮೊದಲ ಬಾರಿಗೆ ಕೊಂಡದ್ದು ಒಂದು ಹಳೆಯ ಕಾರನ್ನು!
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ನನ್ನ ತವನಿಧಿ…: ರಂಜಾನ್ ದರ್ಗಾ ಬರೆಯುವ ಸರಣಿ

ಜನಸಾಮಾನ್ಯರ ಶಕ್ತಿಯಲ್ಲಿ ಮತ್ತು ಜ್ಞಾನ ಶಕ್ತಿಯಲ್ಲಿ ಅವರಿಗೆ ಅಪಾರವಾದ ನಂಬಿಕೆ ಇದೆ. ಒಬ್ಬ ವಕೀಲನಿಗೆ ತನ್ನ ಕ್ಷೇತ್ರದಲ್ಲಿನ ಎಷ್ಟು ಶಬ್ದಗಳು ಗೊತ್ತಿವೆಯೋ ಅದಕ್ಕಿಂತ ಹೆಚ್ಚಿನ ಶಬ್ದಗಳು ಮೀನುಗಾರನಿಗೆ ಅವನ ಸಮುದ್ರ ಸಂಬಂಧದಿಂದ ಗೊತ್ತಾಗುತ್ತವೆ ಎಂದು ಅವರು ಹೇಳಿದ್ದರು. ಆತನಿಗೆ ವಿವಿಧ ಜಾತಿಯ ಜಲಚರಗಳು, ಗಾಳಿ, ಮೋಡಗಳು, ತೆರೆಗಳು, ಕಾಲ ಮತ್ತು ದಿನಮಾನಗಳ ಪರಿಚಯವಿರುತ್ತದೆ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 68ನೇ ಕಂತು ನಿಮ್ಮ ಓದಿಗೆ

Read More

ಕತ್ತಲಲಿ ಕಂಡ ಮಿನುಗುವ ಕಣ್ಣುಗಳು….

ಆ ಹಾಳು ಗುಡಿಯ ಮುಂದೆ ಹೋದೆವು. ಒಬ್ಬರೂ ಕಾಣಲಿಲ್ಲ. ಅಷ್ಟೊತ್ತಿಗೆ ಒಳಗಿನಿಂದ ಒಬ್ಬ ಯುವಕ ಬಂದ. ದೇವಾಲಯದೊಳಗೆ ಸಂಪೂರ್ಣ ಕತ್ತಲು ಕವಿದಿತ್ತು. ಇದೇನು ಹೀಗೆ ಎಂದಾಗ, ಆತ ‘ಇರುವುದೊಂದೇ ಮೋಂಬತ್ತಿ ನಿಮ್ಮ ಬರುವಿಗೆ ಕಾಯುತ್ತಿದ್ದೆವು’ ಎಂದ. ಒಳಗೆ ಕಾಲಿಟ್ಟಕೂಡಲೆ ಆತ ಮೋಂಬತ್ತಿ ಹಚ್ಚಿದ. ಅಲ್ಲಿ ಕುರ್ಚಿ ಟೇಬಲ್ ಏನೂ ಇರಲಿಲ್ಲ. ಆ ಮೋಂಬತ್ತಿಯ ಬೆಳಕಲ್ಲಿ ನೂರಾರು ಯುವಕರು ಕುಳಿತಿದ್ದು ಮಸುಕು ಮಸುಕಾಗಿ ಕಾಣುತ್ತಿತ್ತು. ಅವರ ಕಣ್ಣುಗಳು ಮಾತ್ರ ನಕ್ಷತ್ರಗಳ ಹಾಗೆ ಹೊಳೆಯುತ್ತಿದ್ದವು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 64ನೇ ಕಂತು ನಿಮ್ಮ ಓದಿಗೆ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ