Advertisement

Tag: ಪುಸ್ತಕ

ನವೀನ ತಂತ್ರಜ್ಞಾನದ ಕುರಿತ ನವೀನ ಮಾದರಿ ಕತೆಗಳು: ಗುರುರಾಜ ಕುಲಕರ್ಣಿ ಕೃತಿಯ ಕುರಿತು ವಸುಮತಿ ಉಡುಪ ಮಾತುಗಳು

ಈ ಕಥಾಸಂಕಲನದ ಕತೆಗಳು ಸಿದ್ಧ ಮಾದರಿಯ ಕತೆಗಳಿಗಿಂತ ವಿಭಿನ್ನವಾಗಿ ಚಿತ್ರಿತಗೊಂಡಿವೆ. ನವೀನ ತಂತ್ರಜ್ಞಾನದ ಕುರಿತು ಹೆಚ್ಚಿನ ಅರಿವಿಲ್ಲದವರಿಗೂ ತಿಳಿಯುವಂತೆ ಸರಳ ಭಾಷೆಯಲ್ಲಿ, ಸರಾಗವಾಗಿ ಕತೆ ಹೇಳಿದ್ದಾರೆ ಕುಲಕರ್ಣಿ, ಕತೆಗಳ ವೈವಿಧ್ಯ, ಭಾಷೆಯನ್ನು ಸಮರ್ಥವಾಗಿ, ಸುಲಲಿತವಾಗಿ ಬಳಸಿಕೊಂಡ ರೀತಿ, ಕತೆ ಹೇಳುವಲ್ಲಿನ ಲವಲವಿಕೆಯ ಗುಣದಿಂದಾಗಿ ಈ ಸಂಕಲನ ಛಂದ ಪುಸ್ತಕ ಬಹುಮಾನಕ್ಕೆ ಆಯ್ಕೆಯಾಗಿದೆ. ಕನ್ನಡ ಸಾಹಿತ್ಯದ ಮಟ್ಟಿಗೆ ಅಪರೂಪ ಎನಿಸುವಂತಹ ಹಲವು ಕತೆಗಳು ಸಂಕಲನದಲ್ಲಿ ಗಮನ ಸೆಳೆಯುವಂತಿವೆ.
ಗುರುರಾಜ ಕುಲಕರ್ಣಿ ಕಥಾಸಂಕಲನ “ಹ್ಯಾಷ್‌ ಟ್ಯಾಗ್”ಗೆ ಛಂದ ಪುಸ್ತಕದ ಬಹುಮಾನ ಲಭಿಸಿದ್ದು, ಈ ಕೃತಿಯ ಕುರಿತು‌ ವಸುಮತಿ ಉಡುಪ ಮಾತುಗಳು ನಿಮ್ಮ ಓದಿಗೆ

Read More

‘ಗೌರ್ಮೆಂಟ್ ಬ್ರಾಹ್ಮಣ’ನೆಂಬ ಪುಸ್ತಕವೂ ಮತ್ತು ನಾನು ರೂಪುಗೊಂಡ ಬಗೆಯೂ’: ಪ್ರಶಾಂತ್‌ ಬೆಳತೂರು ಬರಹ

ಚೇಳಿನಿಂದಲೇ ಹುಟ್ಟಿದ ಚೇಳಿನಿಂದಲೇ ಸತ್ತ ಎನ್ನುವ ತನ್ನಜ್ಜಿಯ ಮಾತುಗಳೊಂದಿಗೆ ತನ್ನ ತಂದೆಯನ್ನು ನೆನಪಿಸಿಕೊಳ್ಳುವ, ಪಂದ್ರಾ ಆಗಸ್ಟ್‌ನ ಸ್ವಾತಂತ್ರ್ಯ ನಿಜಕ್ಕೂ ಎಂತಹ ಸ್ವಾತಂತ್ರ್ಯ? ಯಾವ ಬಗೆಯ ಸ್ವಾತಂತ್ರ್ಯ? ಒಂದೇ ಒಂದು ಕೊಡದ ನೀರನ್ನು ಬಾವಿಯಲ್ಲಿ ಮೊಗೆಯಲಾರದೆ ಹೋದ ಕೆಳಗೇರಿಯ ಜನ ಅಂದು ಮೊಗೆಮೊಗೆದು ಸೇದಿದರು, ಮತ್ತೆ ಬಾವಿಗೆ ಸುರವಿದರು, ಮರುದಿನ ಆ ಬಾವಿಗಳಲ್ಲಿ ಇನ್ನಾರು ನೀರು ಮೊಗೆಯಬಾರದಂತೆ ಊರ ಜನರೇ ಶಾಶ್ವತವಾಗಿ ಮುಚ್ಚಿದ್ದರು ಎನ್ನುವಾಗ ಕರುಳು ಹಿಂಡಿದಂತಾಗುತ್ತದೆ.
ಪ್ರೊ. ಅರವಿಂದ ಮಾಲಗತ್ತಿ ಆತ್ಮಕತೆ “ಗೌರ್ಮೆಂಟ್ ಬ್ರಾಹ್ಮಣ”, ಹೇಗೆ ತಮ್ಮ ಬದುಕು ಬದಲಾಯಿಸಿತು ಎನ್ನುವುದರ ಕುರಿತು ಪ್ರಶಾಂತ್‌ ಬೆಳತೂರು ಬರಹ ಇಲ್ಲಿದೆ

Read More

ಮಾತು ಹೆಪ್ಪುಗಟ್ಟಿ ಕಾವ್ಯವಾದ ಬಗೆ: ಡಾ.ಎ.ರಘುರಾಂ ಬರಹ

ಮಂಜುನಾಥ್ ಪಾಳ್ಯ ಅವರ ಎಲ್ಲ ಕವಿತೆಗಳನ್ನು ಓದಿದಾಗ ಅಲ್ಲಿನ ಭಾಷೆ, ವಸ್ತು, ನಿರ್ವಹಣೆಯ ಬಗ್ಗೆ ನೋಡಬೇಕು. ವಸ್ತು ಸಾಮಾಜಿಕವೇ ಆದರೂ ಕೂಡ ನಿರ್ವಹಣೆಯ ಸಂದರ್ಭದಲ್ಲಿ ಅದು ಭಿನ್ನ ಪಾತಳಿಗಳನ್ನು ಕಾಣುತ್ತದೆ. ಕವಿ ಪ್ರತಿಭಟಿಸುವಲ್ಲಿ ಕಾವ್ಯ ಬಂಡಾಯದ ಚಾಟಿ ಬೀಸುತ್ತದೆ. ಮೌನವಾಗಿ ಪ್ರೇಮಕ್ಕೆ ಮರುಳಾದಾಗ ಅಲ್ಲಿನ ಭಾಷೆ ತೀರ ಕೋಮಲವಾಗಿಬಿಡುತ್ತದೆ. ಭ್ರಷ್ಠತೆ, ಅತ್ಯಾಚಾರ, ಶೋಷಣೆ ವಿಚಾರಗಳು ಬಂದರೆ ಭಾಷೆ ಸ್ವಲ್ಪ ಒರಟಾಗಿಬಿಡುತ್ತದೆ. ಕಾವ್ಯ ಹೀಗೆ ಭಿನ್ನ ಪಾತಳಿಗೆ ಒಳಗಾಗುವುದು ಕವಿಯ ಸಂವೇದನಾಶೀಲ ಗುಣವನ್ನು ತೋರುತ್ತದೆ.
ಡಾ. ಮಂಜುನಾಥ ಪಾಳ್ಯ ಬರೆದ ‘ಹೆಪ್ಪುಗಟ್ಟಿದ ಮಾತುಗಳು’ ಕವನ ಸಂಕಲನದ ಕುರಿತು ಡಾ. ಎ. ರಘುರಾಂ ಬರಹ

Read More

ತಾರಿದಂಡೆ – ಕಳೆದು ಹೋದ ಬದುಕಿನ ಸುಂದರ ಯಾನ: ಶ್ವೇತಾ ಹೊಸಬಾಳೆ ಬರಹ

ಈ ಮುತ್ತಿನಂಥಾ ಮಾತುಗಳ ಸರಣಿ ಮುಂದಿನ ಬರಹದಲ್ಲೂ ಮಾಲೆಯಾಗಿ ನಾಲ್ಕು ಸಾಲು ಗೀಚಿಯೋ, ಫೇಸ್ಬುಕ್, ವಾಟ್ಸ್ ಅಪ್‌ಗಳ ಸ್ಟೇಟಸ್‌ಗಳಲ್ಲಿ ಬರುವ ಕವನಗಳನ್ನೋದಿಕೊಂಡು ಬೀಗುವವರ ಕಿವಿಹಿಂಡಿದೆ. “ಕವಿತೆ ಒಂದು ಜೀವನ ದೃಷ್ಟಿ, ಎಷ್ಟೆಲ್ಲಾ ಸಂವೇದನಾಶೀಲರ ಪ್ರಜ್ಞಾ ಪ್ರವಾಹದ ಮನೋಸಂಗಮದಿಂದ ಅರಳುವ ಜೀವನ ಕಲೆ” ಎನ್ನುತ್ತಾ ಪರಂಪರೆಯನ್ನು ಅರಿತಿರುವುದರ ಜೊತೆಗೆ ಕವಿತಾರಚನೆಗೆ ಆಳವಾದ ಧ್ಯಾನ ಅಧ್ಯಯನದ ಅಗತ್ಯವಿದೆ ಎನ್ನುವದನ್ನು ಹೇಳುತ್ತದೆ. ಅವರ ಪುಟ್ಟ ಪುಟ್ಟ ವಾಕ್ಯಗಳನ್ನು ಓದುವುದೇ ಖುಷಿ.
ಜಯಂತ ಕಾಯ್ಕಿಣಿಯವರ “ತಾರಿದಂಡೆ” ಕೃತಿಯ ಕುರಿತು ಶ್ವೇತಾ ಹೊಸಬಾಳೆ ಬರಹ

Read More

ಪೆಣ್ಣೆತ್ತ ಖುಷಿಯನು ಲೋಕಕೆ ಹಂಚಿ…: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಆಕಾಶದ ನೀಲಿಯಲ್ಲಿ ಚಂದ್ರ ತಾರೆ ತೊಟ್ಟಿಲಲ್ಲಿ ಬೆಳಕನಿಟ್ಟು ತೂಗಿದಾಕೆ ನಿನಗೆ ಬೇರೆ ಹೆಸರು ಬೇಕೆ ಸ್ತ್ರೀ ಎಂದರೆ ಅಷ್ಟೇ ಸಾಕೆ ಎನ್ನುವಂತೆ ಇಂತಹ ಎಷ್ಟು ಸಾಹಿತ್ಯ ರಚನೆಯಾದರೂ ಹೆಣ್ಣಿನ ಕುರಿತಾದ ಸಮಾಜದ ಮನಸ್ಥಿತಿ ಬದಲಾಯಿಸಲು ಆಗುತ್ತಿಲ್ಲ. ಎಷ್ಟೋ ಹೆಣ್ಣೆತ್ತ ತಂದೆ – ತಾಯಿಯರಿಗೆ ಹೆಣ್ಣನ್ನು ಹೆತ್ತಿದ್ದೇವೆ ಎನ್ನುವ ನೋವಿಗಿಂತಲೂ ಹೆಣ್ಣೆತ್ತವರನ್ನು ಸಮಾಧಾನ ಮಾಡುವ ಸೋಗಿನಲ್ಲಿ ಆಡುವ ಮಾತುಗಳ ನೋವೇ ಹೆಚ್ಚೆಂಬುದನ್ನು ದೇಸಾಯಿಯವರು ಬಹಳ ವಿಶೇಷವಾಗಿ ಹಾಸ್ಯ ಮಿಶ್ರಿತಗೊಳಿಸಿ ಹೇಳಿದ್ದಾರೆ.
ಗುಂಡುರಾವ್ ದೇಸಾಯಿ ಲಲಿತ ಪ್ರಬಂಧಗಳ ಕೃತಿ “ಪೆಣ್ಣೆತ್ತ ಖುಷಿಗೆ.. ಕುರಿತು ಡಾ. ತಿಮ್ಮಯ್ಯ ಶೆಟ್ಟಿ ಇಲ್ಲೂರು ಬರಹ

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ