Advertisement

Tag: ಪುಸ್ತಕ

 ಕಾಯಗುಡ್ಡ ಬರೀ ಕಥೆಯಲ್ಲ; ಇದೊಂದು ಚಲನಶೀಲ ಬದುಕಿನ ಪ್ರತಿಬಿಂಬ: ನಾಗಣ್ಣ ಕಿಲಾರಿ ಕಾದಂಬರಿಗೆ ಕಪಿಲ ಪಿ. ಹುಮನಾಬಾದೆ ಮುನ್ನುಡಿ

ಕಾಯಗುಡ್ಡ ಎಂದರೆ ಕಾಯುವ ಗುಡ್ಡ. ಕುರಿ ಮತ್ತು ಆಡು ಕಾಯುವ ಗುಡ್ಡ ಅಷ್ಟೇ ಅಲ್ಲ. ಬದುಕನ್ನು ನಳನಳಿಸುವ, ಹೊಸತನದ ಗಾಳಿ ಬೀಸುವ, ಆಕಾಶದಲ್ಲಿ ಸ್ವಚ್ಛಂದವಾಗಿ ಹಾರುವ ಹಕ್ಕಿಯಂತಹ ಎಲ್ಲ ಬಂಧಗಳಿಂದ ಬಿಡುಗಡೆಗೊಳಿಸುವ, ಸಹಜತನ ಮತ್ತು ಕೂತೂಹಲ ಹೃದಯಲ್ಲಿ ಸೃಷ್ಟಿಸುವ ಗುಡ್ಡವೆ ಕಾಯಗುಡ್ಡ. ಬಯಲಿನಂತಹ ಊರಿಂದ ಶುರುವಾಗುವ ಕಥೆ ಕುರಿ-ಆಡುಗಳೊಟ್ಟಿಗೆ ಗುಡ್ಡ ಹತ್ತಿಳಿಸಿ, ಅಲ್ಲಲ್ಲಿ ನಗಿಸಿ, ಬಾವಿಗಳ ಆಳದಿಂದ ಏನನ್ನೋ ಹೊಮ್ಮಿಸಿ, ದವಾಖಾನಿಗಳ ನೋವಿನಲ್ಲೂ ಬಿಸ್ಕತ್‌ ನೆನಪಿಸಿ, ಕತ್ತಲು ಮತ್ತು ಹಲವು ಹಾದಿಗಳ ಮಾತುಗಳು ಕೇಳಿಸಿ, ಓದುಗರಿಗೆ ಒಂದು ದಿಕ್ಕಿನಿಂದ ಮತ್ತೊಂದು ದಿಕ್ಕಿಗೆ ಕರೆದುಕೊಂಡು ಹೋಗುತ್ತದೆ ಕಾಯಗುಡ್ಡ.
ನಾಗಣ್ಣ ಕಿಲಾರಿ ಕಾದಂಬರಿ “ಕಾಯಗುಡ್ಡ” ಕೃತಿಗೆ ಕಪಿಲ ಪಿ. ಹುಮನಾಬಾದೆ ಬರೆದ ಮುನ್ನುಡಿ

Read More

ಜೀವಂತಿಕೆ ಒಸರುವ ಕವಿತೆಗಳು: ಸ್ಮಿತಾ ಅಮೃತರಾಜ್ ಬರಹ

ನಾವು ಬದುಕುವ ರೀತಿ ನೀತಿ‌ ನಮ್ಮ ಪ್ರತಿಷ್ಟೆ ಪರಾಕಾಷ್ಟೆಗಳು ಅದೆಷ್ಟಿದ್ದರೂ ನಾವೆಲ್ಲರೂ ಮನುಷ್ಯರು. ಆಳದಲ್ಲಿ ನಾವೆಲ್ಲರೂ ಅನುಭವಿಸುವ ಭಾವಗಳು ಒಂದೇ. ನಾನಾ ಸ್ತರಗಳಲ್ಲಿ‌ ಪ್ರಕಟಗೊಳ್ಳುವ ನಮ್ಮ ನೋವು ನಲಿವು ಗೆಲುವು ಸೋಲು ಅಪಮಾನ ಎಲ್ಲವೂ ಇಲ್ಲಿ ಕವಿತೆಯಾಗಿ ನಿಸೂರಾಗುತ್ತವೆ. ನಾಗರೇಖಾ ತನ್ನದೇ ರೀತಿಯಲ್ಲಿ ಕವಿತೆ ಕಟ್ಟುವ ಕೌಶಲ್ಯವನ್ನು‌‌ ಸಿದ್ಧಿಸಿಕೊಂಡಿದ್ದಾರೆ. ತಾನು ಬದುಕಿದ, ತಾನು ಕಾಣುವ ಸುತ್ತ ಮುತ್ತಲಿನ ಸಹಜ ಸಂಗತಿಗಳನ್ನು ಕವಿತೆಯ ಮೂಲಕ‌ ತರುತ್ತಾ ಅದನ್ನು ಮತ್ಯಾವುದೋ‌ ಸಂದರ್ಭಕ್ಕೆ, ಸಂಗತಿಗಳಿಗೆ ಕೊಂಡಿ ಕೂಡಿಸುತ್ತಾರೆ. ಒಂದು ವಸ್ತುವನ್ನು ತೆರೆದಿಡುತ್ತಾ ಮತ್ಯಾವುದೋ ಹೊಳಹನ್ನು ಕಾಣಿಸುವುದು ನಾಗರೇಖರ ಕವಿತೆ ವೈಶಿಷ್ಟ್ಯತೆ.
ನಾಗರೇಖಾ ಗಾಂವಕರ ಕವನ ಸಂಕಲನ “ಪಾದಕ್ಕೊಂದು ಕಣ್ಣು” ಕುರಿತು ಸ್ಮಿತಾ ಅಮೃತರಾಜ್‌ ಬರಹ

Read More

ನವೀನ ತಂತ್ರಜ್ಞಾನದ ಕುರಿತ ನವೀನ ಮಾದರಿ ಕತೆಗಳು: ಗುರುರಾಜ ಕುಲಕರ್ಣಿ ಕೃತಿಯ ಕುರಿತು ವಸುಮತಿ ಉಡುಪ ಮಾತುಗಳು

ಈ ಕಥಾಸಂಕಲನದ ಕತೆಗಳು ಸಿದ್ಧ ಮಾದರಿಯ ಕತೆಗಳಿಗಿಂತ ವಿಭಿನ್ನವಾಗಿ ಚಿತ್ರಿತಗೊಂಡಿವೆ. ನವೀನ ತಂತ್ರಜ್ಞಾನದ ಕುರಿತು ಹೆಚ್ಚಿನ ಅರಿವಿಲ್ಲದವರಿಗೂ ತಿಳಿಯುವಂತೆ ಸರಳ ಭಾಷೆಯಲ್ಲಿ, ಸರಾಗವಾಗಿ ಕತೆ ಹೇಳಿದ್ದಾರೆ ಕುಲಕರ್ಣಿ, ಕತೆಗಳ ವೈವಿಧ್ಯ, ಭಾಷೆಯನ್ನು ಸಮರ್ಥವಾಗಿ, ಸುಲಲಿತವಾಗಿ ಬಳಸಿಕೊಂಡ ರೀತಿ, ಕತೆ ಹೇಳುವಲ್ಲಿನ ಲವಲವಿಕೆಯ ಗುಣದಿಂದಾಗಿ ಈ ಸಂಕಲನ ಛಂದ ಪುಸ್ತಕ ಬಹುಮಾನಕ್ಕೆ ಆಯ್ಕೆಯಾಗಿದೆ. ಕನ್ನಡ ಸಾಹಿತ್ಯದ ಮಟ್ಟಿಗೆ ಅಪರೂಪ ಎನಿಸುವಂತಹ ಹಲವು ಕತೆಗಳು ಸಂಕಲನದಲ್ಲಿ ಗಮನ ಸೆಳೆಯುವಂತಿವೆ.
ಗುರುರಾಜ ಕುಲಕರ್ಣಿ ಕಥಾಸಂಕಲನ “ಹ್ಯಾಷ್‌ ಟ್ಯಾಗ್”ಗೆ ಛಂದ ಪುಸ್ತಕದ ಬಹುಮಾನ ಲಭಿಸಿದ್ದು, ಈ ಕೃತಿಯ ಕುರಿತು‌ ವಸುಮತಿ ಉಡುಪ ಮಾತುಗಳು ನಿಮ್ಮ ಓದಿಗೆ

Read More

‘ಗೌರ್ಮೆಂಟ್ ಬ್ರಾಹ್ಮಣ’ನೆಂಬ ಪುಸ್ತಕವೂ ಮತ್ತು ನಾನು ರೂಪುಗೊಂಡ ಬಗೆಯೂ’: ಪ್ರಶಾಂತ್‌ ಬೆಳತೂರು ಬರಹ

ಚೇಳಿನಿಂದಲೇ ಹುಟ್ಟಿದ ಚೇಳಿನಿಂದಲೇ ಸತ್ತ ಎನ್ನುವ ತನ್ನಜ್ಜಿಯ ಮಾತುಗಳೊಂದಿಗೆ ತನ್ನ ತಂದೆಯನ್ನು ನೆನಪಿಸಿಕೊಳ್ಳುವ, ಪಂದ್ರಾ ಆಗಸ್ಟ್‌ನ ಸ್ವಾತಂತ್ರ್ಯ ನಿಜಕ್ಕೂ ಎಂತಹ ಸ್ವಾತಂತ್ರ್ಯ? ಯಾವ ಬಗೆಯ ಸ್ವಾತಂತ್ರ್ಯ? ಒಂದೇ ಒಂದು ಕೊಡದ ನೀರನ್ನು ಬಾವಿಯಲ್ಲಿ ಮೊಗೆಯಲಾರದೆ ಹೋದ ಕೆಳಗೇರಿಯ ಜನ ಅಂದು ಮೊಗೆಮೊಗೆದು ಸೇದಿದರು, ಮತ್ತೆ ಬಾವಿಗೆ ಸುರವಿದರು, ಮರುದಿನ ಆ ಬಾವಿಗಳಲ್ಲಿ ಇನ್ನಾರು ನೀರು ಮೊಗೆಯಬಾರದಂತೆ ಊರ ಜನರೇ ಶಾಶ್ವತವಾಗಿ ಮುಚ್ಚಿದ್ದರು ಎನ್ನುವಾಗ ಕರುಳು ಹಿಂಡಿದಂತಾಗುತ್ತದೆ.
ಪ್ರೊ. ಅರವಿಂದ ಮಾಲಗತ್ತಿ ಆತ್ಮಕತೆ “ಗೌರ್ಮೆಂಟ್ ಬ್ರಾಹ್ಮಣ”, ಹೇಗೆ ತಮ್ಮ ಬದುಕು ಬದಲಾಯಿಸಿತು ಎನ್ನುವುದರ ಕುರಿತು ಪ್ರಶಾಂತ್‌ ಬೆಳತೂರು ಬರಹ ಇಲ್ಲಿದೆ

Read More

ಮಾತು ಹೆಪ್ಪುಗಟ್ಟಿ ಕಾವ್ಯವಾದ ಬಗೆ: ಡಾ.ಎ.ರಘುರಾಂ ಬರಹ

ಮಂಜುನಾಥ್ ಪಾಳ್ಯ ಅವರ ಎಲ್ಲ ಕವಿತೆಗಳನ್ನು ಓದಿದಾಗ ಅಲ್ಲಿನ ಭಾಷೆ, ವಸ್ತು, ನಿರ್ವಹಣೆಯ ಬಗ್ಗೆ ನೋಡಬೇಕು. ವಸ್ತು ಸಾಮಾಜಿಕವೇ ಆದರೂ ಕೂಡ ನಿರ್ವಹಣೆಯ ಸಂದರ್ಭದಲ್ಲಿ ಅದು ಭಿನ್ನ ಪಾತಳಿಗಳನ್ನು ಕಾಣುತ್ತದೆ. ಕವಿ ಪ್ರತಿಭಟಿಸುವಲ್ಲಿ ಕಾವ್ಯ ಬಂಡಾಯದ ಚಾಟಿ ಬೀಸುತ್ತದೆ. ಮೌನವಾಗಿ ಪ್ರೇಮಕ್ಕೆ ಮರುಳಾದಾಗ ಅಲ್ಲಿನ ಭಾಷೆ ತೀರ ಕೋಮಲವಾಗಿಬಿಡುತ್ತದೆ. ಭ್ರಷ್ಠತೆ, ಅತ್ಯಾಚಾರ, ಶೋಷಣೆ ವಿಚಾರಗಳು ಬಂದರೆ ಭಾಷೆ ಸ್ವಲ್ಪ ಒರಟಾಗಿಬಿಡುತ್ತದೆ. ಕಾವ್ಯ ಹೀಗೆ ಭಿನ್ನ ಪಾತಳಿಗೆ ಒಳಗಾಗುವುದು ಕವಿಯ ಸಂವೇದನಾಶೀಲ ಗುಣವನ್ನು ತೋರುತ್ತದೆ.
ಡಾ. ಮಂಜುನಾಥ ಪಾಳ್ಯ ಬರೆದ ‘ಹೆಪ್ಪುಗಟ್ಟಿದ ಮಾತುಗಳು’ ಕವನ ಸಂಕಲನದ ಕುರಿತು ಡಾ. ಎ. ರಘುರಾಂ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ