Advertisement

Tag: ಪೂರ್ಣಚಂದ್ರ ತೇಜಸ್ವಿ

ಕೆಟಿಎಸ್ ಜೊತೆ ನನ್ನ ಒಡನಾಟ

ಅವರು ಅಷ್ಟು ದೊಡ್ಡ ಸಾಹಿತಿ ಆಗಿದ್ದರೂ ಒಂದಷ್ಟು ಹಮ್ಮು ಬಿಮ್ಮಿಲ್ಲದೆ, ಫೋಟೋಕ್ಕೆ ನಿಂತುಕೊಂಡರು. ಹಾಗೆ ಪೇಯಿಂಟಿಂಗ್ ಬಗ್ಗೆ ಅವರು ಕೇಳಿದ ಪ್ರಶ್ನೆಗಳು ಅವರು ಆ ವಯಸ್ಸಿನಲ್ಲೂ ತಿಳಿದುಕೊಳ್ಳುವ ಹಂಬಲ ಮತ್ತು ಗೊತ್ತಿಲ್ಲದನ್ನು ಕೇಳಿ ತಿಳಿದುಕೊಳ್ಳುವ ಅವರ ಪ್ರಾಮಾಣಿಕತೆ ಬಗ್ಗೆ ನನಗೆ ದಿಗ್ಭ್ರಮೆ ಹುಟ್ಟಿಸಿತ್ತು. ಹೀಗೆ ತೇಜಸ್ವಿಗೆ ಯಾರೋ ಹೇಳಿದ್ದರಂತೆ ಟೀ ವಿಥ್ ಬ್ರಾಂಡಿ ಚೆನ್ನಾಗಿರುತ್ತದೆ ಎಂದು. ತೇಜಸ್ವಿಗೆ ಅದೇನೋ ಕುತೂಹಲ. ಒಂದು ದಿನ ನನ್ನ ಕರೆದು ‘ಟೀ ವಿಥ್ ಬ್ರಾಂಡಿ ಚೆನ್ನಾಗಿರುತ್ತದಂತಲ್ಲಾ..? ಕುಡಿಯೋಣ್ವಾ’ ಎಂದರು. ನನಗೋ ನಗು.
ಕೆ.ಟಿ. ಶಿವಪ್ರಸಾದ್ ಹಾಗೂ ಪೂರ್ಣಚಂದ್ರ ತೇಜಸ್ವಿಯವರ ಒಡನಾಟದ ಕುರಿತ ನಾಗರಾಜ್‌ ಹೆತ್ತೂರು ಕೃತಿ “ಶಿವ ಮೇಡ್‌ ಬೈ ತೇಜಸ್ವಿ”ಯ ಆಯ್ದ ಭಾಗ

Read More

ಕರ್ವಾಲೋ ಮರು ಓದು, ಒಂದು ಧ್ಯಾನ: ದೇವಿಕಾ ನಾಗೇಶ್‌ ಬರಹ

ಇರುವೆಯಿಂದ ರಕ್ಷಿಸಿಕೊಳ್ಳಲು ಆ ಪ್ರಾಣಿ ಇದ್ದಕ್ಕಿದ್ದಂತೆ ಪಕ್ಕದ ದೊಡ್ಡ ಮರಕ್ಕೆ ಹಾರಿ ಮರ ಕೂತು ತನ್ನ ದೇಹಕ್ಕೆ ಅಂಟಿಕೊಂಡಿದ್ದ ಕೆಂಪಿರುವೆಗಳನ್ನು ತಿನ್ನತೊಡಗಿತು. ಇದು ಕಂಡು ಆಶ್ಚರ್ಯ ಚಕಿತರಾದ ಲೇಖಕರು ಹಾರೋ ಓತಿಕ್ಯಾತ ಇದು ಎಂದು ಖಾತ್ರಿಯಾದ ಖುಷಿಯಲ್ಲಿ ತನ್ನ ತಂಡದವರನ್ನು ಕೂಗಿ ಕರೆದರು. ಆದರೆ ಹಾರುವ ಓತಿಕ್ಯಾತ ಇದ್ದಲ್ಲಿ ನಿಲ್ಲುತ್ತದೆಯೇ? ಲೇಖಕರು ಅದನ್ನೇ ತದೇಕ ಚಿತ್ತರಾಗಿ ಕಣ್ಣಲ್ಲೇ ಹಿಂಬಾಲಿಸುತ್ತ ತಾವು ಕಂಡ ಈ ಅದ್ಭುತ ಸರೀಸೃಪವನ್ನು ತನ್ನ ತಂಡದವರಿಗೆ ಪರಿಚಯಿಸುವ ಆತುರದಲ್ಲಿದ್ದರು…
ಪೂರ್ಣಚಂದ್ರ ತೇಜಸ್ವಿಯವರ ಪ್ರಮುಖ ಕಾದಂಬರಿ “ಕರ್ವಾಲೋ”ದ ಮರು ಓದು, ದೇವಿಕಾ ನಾಗೇಶ್ ಬರಹ

Read More

ಚಕ್ರವ್ಯೂಹದೊಳಗಿನ ಮಾಯಾಲೋಕ…: ಗೊರೂರು ಶಿವೇಶ್‌ ಬರಹ

ಕಾದಂಬರಿಯ ಕೊನೆಯಲ್ಲಿ ಆ ಕಡತ ಮುಸುಕುಧಾರಿಗಳ ಕೈಗೆಸಿಕ್ಕು ಅದರ ಮಹತ್ವ ತಿಳಿಯದ ಅವರು ನದಿನೀರಿಗೆ ಎಸೆದು ಅದು ಬಿಡಿಬಿಡಿಯಾಗಿ ಬಿದ್ದು ನೀರುಪಾಲಾಗುತ್ತದೆ. ಇದ್ದ ಒಂದು ಪ್ರತಿಯೂ ಮಾಯವಾದರೂ ಎಲ್ಲಿಯಾದರೂ ಮತ್ತೊಂದು ಪ್ರತಿಯನ್ನು ಹುಡುಕಿಯೆ ತೀರುತ್ತೇನೆ ಮತ್ತು ಅದರ ಸಹಾಯದಿಂದ ರತ್ನಮಾಲಾ ವಜ್ರವನ್ನು ಪಡೆದೆ ತೀರಬೇಕೆಂದು, ಮುಂದೆ ಅದನ್ನು ಹಂಚಿಕೊಳ್ಳಬಹುದೆಂದು ರಾಜಪ್ಪ ತಿಳಿಸಿ, ಅದಕ್ಕೆ ಮೂವರು ಒಪ್ಪಿ ಜುಗಾರಿಕ್ರಾಸ್‍ನ ಬಸ್ ಹತ್ತುವುದರೊಂದಿಗೆ ಕಾದಂಬರಿ ಮುಕ್ತಾಯವಾಗುತ್ತದೆ.
ನೆನ್ನೆ ಪೂರ್ಣಚಂದ್ರ ತೇಜಸ್ವಿಯವರ ಜನ್ಮದಿನ, ಅದರ ನಿಮಿತ್ತ ತೇಜಸ್ವಿಯವರ “ಜುಗಾರಿ ಕ್ರಾಸ್” ಕೃತಿಯ ಕುರಿತು ಗೊರೂರು ಶಿವೇಶ್‌ ಬರಹ

Read More

ನೆನಪುಗಳ ಮೆರವಣಿಗೆಯಲ್ಲಿ ಸೂಕ್ಷ್ಮಮತಿ ತೇಜಸ್ವಿಯವರ ಕುತೂಹಲಗಳು

ನಾನು ಮೂಡಿಗೆರೆ ಸಂತೆಗೆ ಯಾವಾಗಲೋ ಒಂದೆರಡು ಸಲ ಹೋಗಿರುವೆನು. ಅದೂ ಈಶಾನ್ಯೆ ಸ್ಕೂಲಿಗೆ ಹತ್ತಿರವಿದೆಯೆಂದು. ‘ಫ್ರೆಶ್’ ತರಕಾರಿ ಸಿಕ್ಕುತ್ತೆಂದು. ಒಟ್ಟಿನಲ್ಲಿ ಒಂದು ತಿರುಗಾಟ ಅಂತ ಅಷ್ಟೆ. ಇವರಿಗೆ ಸಂತೆಗೆ ಹೋಗೋದು ಏನೇನೂ ಇಷ್ಟವಿರುತ್ತಿರಲಿಲ್ಲ. ಆದರೆ ಇದ್ದಕ್ಕಿದ್ದಂತೆ ಸಂತೆಗೆ ಹೋಗಿ ಬರ್‍ತೀನಿ ಅಂತ ಒಂದು ಬ್ಯಾಗ್ ಹಿಡಿಕೊಂಡು ಹೋಗೋರು. ಅಲ್ಲಿ ಅದೆಂತೆಂಥ ಮೀನುಗಳು ಇರ್‍ತವೆ ಅಂತ! ನೋಡ್ತನೇ ಇರಬೇಕು! ಅನ್ನಿಸುತ್ತೆ ಅಂತಿದ್ರು. ಕಳೆದ ರಜೆಯಲ್ಲಿ ಮೊಮ್ಮಗಳು ಪುಟಾಣಿ ವಿಹಾ ಯಾರದೋ ಜೊತೆಯಲ್ಲಿ ಸಂತೆಗೆ ಹೋದವಳು ಅವಳೂ ಹಾಗೆ ‘ತ್ರಿಲ್’ ಆಗಿದ್ದಳಂತೆ. ಇಂದು ಪೂರ್ಣಚಂದ್ರ ತೇಜಸ್ವಿಯವರ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ರಾಜೇಶ್ವರಿ ತೇಜಸ್ವಿಯವರು ಹಂಚಿಕೊಂಡ ಕೆಲವು ನೆನಪುಗಳು ನಿಮ್ಮ ಓದಿಗೆ

Read More

ನನಗೆ ಜಗತ್ತನ್ನು ಪರಿಚಯಿಸಿದ ಮಿಲೇನಿಯಂ ಸರಣಿ

ಆ ಸಮಯದಲ್ಲಿ ನನ್ನ ತರ್ಕ ಬಹಳ ಸರಳವಾಗಿತ್ತು. ಯಾರ್ಯಾರು ಮಕ್ಕಳ ಕಥೆ ಬರೆಯುತ್ತಾರೋ, ನನಗೆ ಅರ್ಥವಾಗುವಂತಹ ಪರಿಸರ, ವಿಜ್ಞಾನ ಇತ್ಯಾದಿ ವಿಷಯಗಳ ಬಗ್ಗೆ ಸರಳವಾಗಿ ಬರೆಯುತ್ತಾರೋ ಅವರೆಲ್ಲಾ ಚಿಕ್ಕ ಲೇಖಕರು. ಯಾರ ಬರಹಗಳು ಅರ್ಥವಾಗುವುದಿಲ್ಲವೋ, ಒಂದು ಪ್ಯಾರಾಕ್ಕಿಂತಲೂ ಜಾಸ್ತಿ ಓದಿಸಿಕೊಂಡು ಹೋಗುವುದಿಲ್ಲವೋ ಅವರೆಲ್ಲಾ ದೊಡ್ಡ ಲೇಖಕರು ಅನ್ನೋ ನಂಬಿಕೆಯಲ್ಲಿದ್ದೆ. ಆದರೆ ತೇಜಸ್ವಿಯವರ ಬರಹಗಳು ಈ ನಂಬಿಕೆಯನ್ನು ಸಡಿಲಗೊಳಿಸಿದವು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ