Advertisement

Tag: ಪ್ರಬಂಧ

ಮಸಲ್‌ ಮೆಮೊರಿ ಮತ್ತು ನಾವು….

ಬರೇ ಜ್ಞಾನ, ವಿಪರೀತ ಮಾಹಿತಿಯಿಂದ ಏನೂ ಪ್ರಯೋಜನವಿಲ್ಲ. ಮನುಷ್ಯನ ನೋವನ್ನು ಗೌರವಿಸುವ, ಅರ್ಥಮಾಡಿಕೊಳ್ಳುವ ಭಾಗವಾಗಿ ಜ್ಞಾನ, ಪುಸ್ತಕಗಳು ಮೂಡಿ ಬರಬೇಕು. ಇಲ್ಲದಿದ್ದರೆ ಜ್ಞಾನ, ಮಾಹಿತಿಯೆಲ್ಲ ಮನುಷ್ಯನಿಂದ, ಬದುಕಿನಿಂದ ವಿಮುಖವಾಗುತ್ತದೆ, ಇದ್ದೂ ಇಲ್ಲದಂತೆ. ಏನೂ ಪ್ರಯೋಜನವಾಗುವುದಿಲ್ಲ. ಇಂತಹ ಜ್ಞಾನ, ಮಾಹಿತಿಯ ಆಧಾರದ ಮೇಲೆ ಬದುಕು, ನಾಗರಿಕತೆ ಯಾಂತ್ರಿಕವಾಗಿರುತ್ತದೆ, Muscle memoryಯನ್ನು ಪ್ರೋತ್ಸಾಹಿಸುತ್ತದೆ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿ

Read More

ನಮಗೇ ಯಾಕೆ ಹೀಗಾಗುತ್ತೆ?

ನಮಗೆ ಯಾಕೆ ಹೀಗಾಗುತ್ತೆ ಅನ್ನುವ ಪ್ರಶ್ನೆಯೇ ಒಂದು ತಾತ್ವಿಕ ಪ್ರಮೇಯವಾಗಿಯೂ, ಮನಸ್ಸು ಕೆಲಸ ಮಾಡುವ ರೀತಿಯ ತಿಳುವಳಿಕೆಯಾಗಿಯೂ ಸರಿಯಲ್ಲವೆಂದು ಕಾಣುತ್ತದೆ. ನಾವು ಜೀವನವನ್ನು, ಮನಷ್ಯರನ್ನು, ಬಂದ ಹಾಗೆ, ಅವರು ಇರುವ ಹಾಗೆ ಒಪ್ಪಿಕೊಳ್ಳುವ ನಮ್ರತೆಯನ್ನು ತೋರಿಸುವುದಿಲ್ಲ. ಎಲ್ಲ ಘಟನೆಗಳ ಮೇಲೂ ನಮ್ಮ ನಿಯಂತ್ರಣವಿರಬೇಕು, ಇರುತ್ತದೆ. ನಾವು ಇಷ್ಟಪಟ್ಟ ಹಾಗೆಯೇ ಜಗತ್ತು ನಡೆಯಬೇಕು.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಎಂಟನೆಯ ಪ್ರಬಂಧ ನಿಮ್ಮ ಓದಿಗೆ

Read More

ನಾನೇಕೆ ಜಾತಿವಾದಿಯಲ್ಲ?

ನಾವೆಲ್ಲರೂ ಮನುಷ್ಯರೇ ತಾನೆ? ಈವತ್ತು ಸಮತೋಲಿತ ಮನಸ್ಸಿನಿಂದ ಕೂಡಿರುವವನು ಮುಂದೆ ಜಾತಿವಾದಿಯಾಗಬಹುದು. ಅಂತಹ ಪ್ರಲೋಭನೆ, ಒತ್ತಡಗಳು ಬರಬಹುದು. ಅಥವಾ ನಾವೇ ಅದನ್ನೆಲ್ಲ ಸೃಷ್ಟಿಸಿಕೊಂಡು ಈಗ ನಾನೇನು ಮಾಡಲಿ ಎಂದು ಅಸಹಾಯಕತೆ ನಟಿಸಿ ಜಾತಿವಾದಿಯಾಗಬಹುದು. ನಮ್ಮ ಆಪ್ತರೇ ಬಹಿರಂಗದಲ್ಲಿ ಸಮಾನಭಾವದವರಾಗಿದ್ದು, ಒಳಗಡೆ ತಮ್ಮ ಜಾತಿಯ ಬಗ್ಗೆ ಅನುಕೂಲವಾಗಿ ಭಾವಿಸುತ್ತಿರಬಹುದು, ನಡೆದುಕೊಳ್ಳುತ್ತಿರಬಹುದು.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಏಳನೆಯ ಪ್ರಬಂಧ ನಿಮ್ಮ ಓದಿಗೆ

Read More

ಅಜ್ಜಿ ಮತ್ತು ಹರಿದ ಹೋಳಿಗೆಯ ತುಂಡುಗಳು…

ಅಜ್ಜಿ ಹೋಳಿಗೆಯ ಮೇಲಿನ ಆಸೆ ಎಂದೂ ಬಿಟ್ಟಿರಲೆ ಇಲ್ಲ. ಯುಗಾದಿ ಹಬ್ಬದ ದಿನಗಳಲ್ಲಿ ಹೋಳಿಗೆ ಸಿಹಿ ಮಾಡುವುದು ವಾಡಿಕೆ. ಬಹುಃಶ ನಾವೆಲ್ಲಾ ಬಾಲ್ಯದ ದಿನಗಳಲ್ಲಿ ಸಿಹಿಯೂಟ ಸವಿಯುತ್ತಿದ್ದುದೆ ವರ್ಷಕ್ಕೊಮ್ಮೆ. ಮನೆಯಲ್ಲಿ ಸಿಹಿ ಮಾಡುವಷ್ಟು ಆರ್ಥಿಕ ಅನುಕೂಲತೆಯ ಕೊರತೆಯಿಂದಾಗಿ ಪಾಯಸವನ್ನಷ್ಟೇ ಮಾಡುತ್ತಿದ್ದರು. ಅಜ್ಜಿ ಎಂಬತ್ತರ ಆಸು ಪಾಸಿನಲ್ಲಿದ್ದರೂ ಇನ್ನೂ ಗಟ್ಟಿಯಾಗಿದ್ದರು ನಡಿಗೆಯಲ್ಲಿ ಸ್ವಲ್ಪ ನಿಧಾನವಿತ್ತು ಅಷ್ಟೇ.
ಮಾರುತಿ ಗೋಪಿಕುಂಟೆ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ನನ್ನ ಉಂಡೆ ಪಂಚಮಿ ಕತೆ!

ಪಾಕ ಹದಕ್ಕೆ ಬಂದಂತೆನಿಸಿತು. ಅಷ್ಟೂ ಸಾಮಾಗ್ರಿ ಸುರುವಿ ಗೊಟ.. ಗೊಟ.. ಗೊಟಾಯಿಸಿ ಪರಾತಕ್ಕೆ ಸುರುವಿದೆ. ಈಗಲೆ ಕಟ್ಟುವದೋ.. ಆರಿದ ನಂತರವೋ..? ಮತ್ತೆ ಓವರ್ ಟು ಅವ್ವಾ.. ತಲೆ ಇದ್ದಲ್ಲಿಂದಲೆ ಓಡಿತು. ಆರಿದ ಮೇಲೆ ಉಂಡೆಯಾಗುವದಿಲ್ಲವೋ ಮಂಕೆ. ಉಂಡೆ ಬಂಡೆಯಾಗುತ್ತದೆ.. ಅವ್ವ ತಿಳಿ ಹೇಳಿದಂತಾಯಿತು. ಅಂಗೈಗೆ ಎಣ್ಣೆ ನೀರು ಸವರಿಕೊಂಡು ಸುಡು ಸುಡುವದನ್ನೆ ಎಳೆದುಕೊಂಡೆ. ಬರೆ ಕೊಟ್ಟಂತಾಯಿತು. ಹಾ.. ಎಂದಿತು ಜೀವ. ಅದು ನೋವೋ ಸುಖವೋ ಅಂತೂ ಉಂಡೆಗಳೆಂಬ ಗುಂಡುಗಳು ತಯಾರಾದವು.
ಲಿಂಗರಾಜ ಸೊಟ್ಟಪ್ಪನವರ್ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ