Advertisement

Tag: ಪ್ರಬಂಧ

ಝಂಡಾ ಊಂಚಾ ಬಿಟ್ಟು.. ಘಮಘಮಿಸುವ ಊಟದ ಹಿಂದೆ ಹೊರಟೂ…

ಮೌಂಟ್ ಅಬುನಲ್ಲಿನ ಆಶ್ರಮಕ್ಕೆ ಹೋಗಿದ್ದೆ. ಅಲ್ಲಿ ಇಪ್ಪತ್ತು ನಾಲ್ಕು ಗಂಟೆ ಊಟದ ಮನೆ ಸೇವೆ ಇರುತ್ತೆ ಅಂತ ಯಾರೋ ಹೇಳಿದ್ದರು. ಇಪ್ಪತ್ತು ನಾಲ್ಕು ಗಂಟೆ ಊಟದ ಮನೆ ಸೇವೆ ಇದ್ದರೆ ದೇವರನ್ನ ಯಾವಾಗ ನೋಡೋದು ಅನ್ನುವ ಸಂಶಯ ಹುಟ್ಟಿತ್ತು. ನನ್ನಾಕೆ ಒಂದು ಮೊಟಕು ಕೊಟ್ಟು ಇಪ್ಪತ್ನಾಲ್ಕು ಗಂಟೇನೂ ತಿಂತಲೇ ಕೂಡು ಹಾಗಿಲ್ಲ ಅಂತ ಭೋಜನ ಶಾಲೆಯಿಂದ ಆಚೆಗೆ ದರ ದರ ಎಳೆದುಕೊಂಡು ಹೋಗಿದ್ದಳು. ಊಟಕ್ಕೆ ಅಲ್ಲೂ ಚಪಾತಿ, ಅದಕ್ಕೆ ನೆಂಚಿಕೊಳ್ಳೂಕ್ಕೆ ಅದೇನೋ ಒಂದು.
ಎಚ್. ಗೋಪಾಲಕೃಷ್ಣ ಬರೆದ ಹಾಸ್ಯ ಪ್ರಬಂಧ ನಿಮ್ಮ ಓದಿಗೆ

Read More

ನಂಜುಂಡಿ ಕಲ್ಯಾಣವೂ ಮತ್ತು ‘ಮಿಲ್ಟ್ರೀ’ ಗ್ಯಾಂಗೂ

ಅಂತೂ ನಮ್ಮೂರಿಗೆ ನಂಜುಂಡಿ ಕಲ್ಯಾಣದ ಭಾಗ್ಯ. ಬರೋಬ್ಬರಿ ಒಂದು ವರ್ಷದ ನಂತರ. ಆದರೂ ನಮ್ಮ ಜನಕ್ಕೆ ಅದು ರಿಲೀಜ್ ಪಿಕ್ಚರ್. ಜಟಕಾ ಲೌಡ್ ಸ್ಪೀಕರ್ ಕಟ್ಟಿಕೊಂಡು ಸುತ್ತ ಹತ್ತೂರುಗಳಿಗೆ ಹೋಗಿ… “ಪ್ರೀಯ ಕಲಾಭಿಮಾನಿಗಳೆ.. ಕಲಾ ರಸಿಕರೆ.. ಒಮ್ಮೆ ನೋಡಿದರೆ ಮತ್ತೊಮ್ಮೆ ಮಗದೊಮ್ಮೆ.. ಮತ್ತೆ ಮತ್ತೆ ನೋಡಲೇಬೇಕಾದ ಸಿನೇಮಾ..” ಎನ್ನುತ್ತ.. “ಮರೆಯದಿರಿ.. ಮರೆತು ನಿರಾಶರಾಗದಿರಿ..…” ಎನ್ನುವ ನೊಟೀಸ್ ನೀಡಿ ಮರಳಿತು. ಸೈಕಲ್ ರಂಗ ಬಸ್ ಸ್ಟಾಪು ಸಲೂನು ಕೂಟು ಸರ್ಕಲ್‌ಗಳಲ್ಲಿ ಪೋಸ್ಟರ್ ಅಂಟಿಸಿದ.
ಲಿಂಗರಾಜ ಸೊಟ್ಟಪ್ಪನವರ ಬರೆದ ಪ್ರಬಂಧ

Read More

ಕಣ್ಣೊರಿಸಿಕೊಂಡ ಪುಟ್ಟ ದೇವರು…

ತರಗತಿಯಿಂದ ತರಗತಿಗೆ ಹಾರಿ ಅದೇ ಶಾಲೆಯಲ್ಲಿ ಕೂತವರಿಗೆ ಒಂದು ರೂಮಿನ ಬದಲಾವಣೆ ಅಷ್ಟೇ.. ತರಗತಿಯಿಂದ ಉಸಿರು ಬಿಗಿ ಹಿಡಿದು ಹಾರಿ ಜಿಗಿದು ಮತ್ತೆಲ್ಲೊ ಮತ್ಯಾವ ಶಾಲೆ, ಕಾಲೇಜಿನ ರೂಮಿನಲ್ಲೊ ಇಲ್ಲಿ ಕಿತ್ತುಕೊಂಡು ಬಂದ ಓದಿನ ಗಿಡವನ್ನು ಅಲ್ಲಿ ನೆಟ್ಟು ಪೋಷಿಸಬೇಕು. ಕಿತ್ತು ನಡೆಯುವ ಹೊತ್ತಲ್ಲಿ ಗಂಟಲಿಗೆ ಬಂದು ಆತು ಕೂತುಕೊಳ್ಳುತ್ತಲ್ಲಾ ಆ ದುಃಖ ಮತ್ತು ಅದನ್ನು ನುಂಗಿ ಸಾಯಿಸಿ ಸಾಯಿಸಿ ನಗಬೇಕಲ್ಲ ಆ ಸಂಕಟ, ಮತ್ತು ಪಿಳಿಪಿಳಿ ಕಣ್ಣುಗಳಿಂದ ಬಂದೇ ಬಿಡುತ್ತಲ್ಲ ಆ ಪವಿತ್ರ ಕಣ್ಣೀರು.. ಓ ಎಂತ ಪಾಪಿಷ್ಟ ಗಳಿಗೆ ಅದು.
ಸದಾಶಿವ ಸೊರಟೂರು ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಮುದ್ದೆಯಾದ ಕಾಗದ!

ಮರುದಿನ ಅಜ್ಜಿಯ ಆರೋಗ್ಯ ಮತ್ತಷ್ಟು ಹದೆಗೆಟ್ಟಿತು. ಅವಳಿಗೆ ಎದ್ದು ತಿರುಗಾಡಲು ಆಗಲಿಲ್ಲ. ಮಲಗಿದ್ದಲ್ಲೇ ಮಲಗಿ ಒಂದೇ ಸವನೆ ನರಳತೊಡಗಿದಳು. ಆಗಲೂ ಅಮ್ಮನ ಮನಸ್ಸು ಕರಗಲಿಲ್ಲ. ಊಟ ತಿಂಡಿಯೂ ಹಾಕಲಿಲ್ಲ. ಇವಳಿಗೆ ಮನೆಯಲ್ಲಿಟ್ಟುಕೊಂಡರೆ ನಮಗೂ ರೋಗ ಬರಬಹುದು ಅಂತ ಯೋಚಿಸಿ ಮನೆಯ ಅಂಗಳದಲ್ಲಿ ಮಲಗಲು ಖಡಕ್ಕಾಗಿ ಸೂಚಿಸಿ ಅವಳ ಹಾಸಿಗೆ ಹೊಚ್ಚಿಗೆ ತಾಟು ತಂಬಿಗೆ ಎಲ್ಲವೂ ಬೇರ್ಪಡಿಸಿ ಕೈ ತೊಳೆದುಕೊಂಡಳು. ಈ ಎಲ್ಲ ದೃಶ್ಯಾವಳಿ ನೋಡಿ ರಾಜೂನ ದುಃಖ ಉಕ್ಕಿ ಬಂದಿತು. ಮಲ್ಲಿಕಾಳ ಕರುಳು ಹಿಂಡಿದಂತಾಯಿತು.
ಶರಣಗೌಡ ಬಿ ಪಾಟೀಲ ತಿಳಗೂಳ ಪ್ರಬಂಧ

Read More

ಕನ್ನಡಿಗರೆಂಬ ಸಂಪನ್ನರೂ ಸಜ್ಜನರೂ..

ಇಡೀ ಭಾರತ ದೇಶದಲ್ಲಿ ಸಂಪನ್ನರೆಂದರೆ ಯಾರು? ಎಂದು ಯಾರಾದರೂ ಕೇಳಿದರೆ ನಾನಂತೂ ಕನ್ನಡಿಗರೇ ಎಂದು ಕೇಕೆ ಹಾಕಿ ಹೇಳಬಲ್ಲೆ. ಏಕೆಂದರೆ ಕನ್ನಡಿಗರಷ್ಟು ಸಂಪನ್ನರು ಮತ್ತು ಸಹೃದಯಿಗಳು ಭಾರತದ ಇತರೆ ರಾಜ್ಯಗಳಲ್ಲಿ ಇಲ್ಲ. ಇಂದು ಯಾವುದೇ ರಾಜ್ಯದ, ಯಾವುದೇ ಭಾಷೆಯ ಮಂದಿ ಕರ್ನಾಟಕದಲ್ಲಿ ಬಂದು ನೆಲೆಸಬಹುದು. ಕರ್ನಾಟಕದಲ್ಲಿ ಉದ್ಯೋಗ, ವ್ಯಾಪಾರ ಮಾಡಿಕೊಂಡು ನೆಮ್ಮದಿಯಿಂದ ಜೀವಿಸಬಹುದು. ಎರಡ್ಮೂರು ತಲೆಮಾರುಗಳಿಂದ ಕರ್ನಾಟಕದಲ್ಲಿ ನೆಲೆಸಿದ್ದರೂ ಕನ್ನಡ ಭಾಷೆ ಕಲಿಯದೆ ಸುಖವಾಗಿ ಜೀವನ ನಡೆಸಬಹುದು.  ಕನ್ನಡಿಗರು ಎಷ್ಟು ಸಂಪನ್ನ ಮಂದಿಯೆಂದರೆ ಅನ್ಯಭಾಷಿಕರಿಗೆ ಕನ್ನಡ ಕಲಿಸುವ ಬದಲು ತಾವೇ ಅವರ ಭಾಷೆ ಕಲಿತು, ಅವರೊಂದಿಗೆ ಅದೇ ಭಾಷೆಯಲ್ಲಿ ವ್ಯವಹರಿಸುತ್ತಾರೆ. ವಿಕಾಸ ಹೊಸಮನಿ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ