Advertisement

Tag: ಪ್ರಯಾಣ

ಭಿನ್ನ ನೋಟದ ಪ್ರವಾಸ ಕಥನ: ಡಾ. ಪ್ರೇಮಲತ ಕೃತಿಗೆ ಎಸ್‌. ದಿವಾಕರ್‌ ಬರೆದ ಮುನ್ನುಡಿ

ನಮ್ಮ ಲೇಖಕರಲ್ಲಿ ವಿ.ಕೃ. ಗೋಕಾಕರು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ ಓದಿ ಫಸ್ಟ್ ರ್ಯಾಂಕ್ ಗಳಿಸಿದರಷ್ಟೆ. ಯು.ಆರ್. ಅನಂತಮೂರ್ತಿಯವರೂ ಕವಿ ರಾಮಚಂದ್ರ ಶರ್ಮರೂ ಕೆಲವು ವರ್ಷ ಇಂಗ್ಲೆಂಡಿನಲ್ಲಿ ವಿದ್ಯಾಭ್ಯಾಸ ಮಾಡಿದ್ದುಂಟು. ತರುಣ ಲೇಖಕರಲ್ಲಿ ಮುಖ್ಯವಾಗಿ ವಿವೇಕ ಶಾನಭಾಗರು ಉದ್ಯೋಗನಿಮಿತ್ತ ನಾಲ್ಕಾರು ವರ್ಷ ಲಂಡನ್ನಿನಲ್ಲಿದ್ದರು. ಇವರು ಯಾರೂ ಅಪ್ಪಿತಪ್ಪಿ ಕೂಡ ಯುನೈಟೆಡ್ ಕಿಂಗ್ಡಮ್ಮನ್ನು ಭಾರತದೊಡನೆ ತುಲನೆ ಮಾಡಲಿಲ್ಲವೆನ್ನುವುದು ಗಮನಾರ್ಹ. ಆದರೂ ಹಾಗೆ ತುಲನೆ ಮಾಡಿ ಬರೆಯುವುದರಿಂದ ಕೆಲವರು ಓದುಗರಾದರೂ ನಮ್ಮ ದೇಶದ ಹೀನಾಯ ಸ್ಥಿತಿಯ ಬಗ್ಗೆ ಸೂಕ್ಷ್ಮವಾಗಿ ಯೋಚಿಸಬಹುದು. ಅವರಲ್ಲಿ ಇದಕ್ಕೇನು ಪರಿಹಾರವಿದ್ದೀತು ಎಂಬೊಂದು ಜಿಜ್ಞಾಸೆಯೇ ಉಂಟಾಗಬಹುದು. ಒಟ್ಟಿನಲ್ಲಿ ಅದೊಂದು ಒಳ್ಳೆಯ ಆಶಯವೇ.
ಡಾ. ಪ್ರೇಮಲತ ಬಿ. ಬರೆದ “ವಿದೇಶ ಪ್ರಯಾಣ… ಕೈತುಂಬ ಕಾಂಚಾಣ” ಕೃತಿಗೆ ಎಸ್‌. ದಿವಾಕರ್‌ ಬರೆದ ಮುನ್ನುಡಿ

Read More

ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ ಪ್ರವಾಸ ಸರಣಿ “ಸಾಗುತ ದೂರ ದೂರ…” ಇಂದಿನಿಂದ

ನಡುನಡುವೆ ನಗುವಿನ ಅಲೆಗಳ ವಿನಿಮಯವಾಗಿದ್ದಷ್ಟೇ ನನಗೆ ಗೊತ್ತು. ಹತ್ತಾರು ಸಿಗಡಿಗಳು, ಸ್ವಲ್ಪ ಸ್ವಲ್ಪವೇ ಪುಡಿ ಮೀನುಗಳೊಂದಿಗೆ ಮರಳುವ ಧಾವಂತದಲ್ಲಿದ್ದರು. ಆದರೂ ನಾಲ್ಕಾರು ಮೀನುಗಳನ್ನೂ ನಮಗೂ ಕಟ್ಟಿಕೊಡಲು ಬಂದರು! ನಾವು ಬೇಡವೆಂದಿದ್ದಕ್ಕೆ ಬೇಸರಿಸಿಕೊಂಡರು. ನಾಲ್ಕಾರು ಸಿಗಡಿಗಳ ತೋರಿಸಿ ಕುಶಿ ಪಟ್ಟ. ಕಡಲ ಕಿನಾರೆಗೆ ಬಡಿದು ಬಡಿದೂ ಸವೆದ ಚಪ್ಪಲಿ ಹಾಕಿ ಹೊರಟಾಗ ಮನದ ಕರಳು ಚುರುಕ್‌ ಎಂದಿತು. ಭೈರವಿ ರಾಗದ ಆಲಾಪದಂತೆ ಭಾಸವಾದ ಅಲೆಗಳು ಅವಳ ಕಾಲಂದುಗೆಗೆ ಮತ್ತೆ ಮತ್ತೆ ಮುತ್ತಿಕ್ಕುತಾ ಖುಷಿಯಲ್ಲಿ ಮರಳುತ್ತಲಿದ್ದವು.
ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ ಪ್ರವಾಸ ಸರಣಿ “ಸಾಗುತ ದೂರ ದೂರ…”

Read More

ನೀರ ನೆಲದ ಮೇಲೆ ನೂರಾರು ಮನೆ – ಧೊದಿಯಾ: ಹೇಮಾ ನಾಯಕ ಬರಹ

ಹೀಗೆ ನೆಲದಿಂದ ಎತ್ತರಿಸಿ ಕಟ್ಟಿದ ಚಿಕ್ಕ ಚಿಕ್ಕ ಗೂಡುಗಳು ಅಲ್ಲಲ್ಲಿ ಚದುರಿಕೊಂಡಂತೆ ಇದ್ದು, ನೀರೇ ಬುಡಕ್ಕೆ ಕೈ ಹಾಕಿ ಎಬ್ಬಿಸಿ ಕೂರಿಸಿದಂತೆ ಕಾಣಿಸುತ್ತವೆ. ಹೆಚ್ಚುಕಮ್ಮಿ ಎಲ್ಲ ತೊಳೆದುಕೊಂಡು ಹೋಗುವಂತೆ ಕಾಣುತ್ತಿದ್ದ ಊರಿನಲ್ಲಿ, ಅಟ್ಟದ ಕೋಣೆಗಳಿಗೆ ಹೊಂದಿಕೊಂಡಂತೆ ಹೂವಿನ ಕುಂಡಗಳನ್ನು ಸುಂದರವಾಗಿ ಜೋಡಿಸಿದ್ದು ನೋಡಿ ಅಚ್ಚರಿಯ ಜೊತೆ ಖುಷಿಯೂ ಆಯಿತು. ಧೊದಿಯಾದಲ್ಲಿ ಒಂದೇ ಒಂದು ಕಿರಾಣಿ ಅಂಗಡಿಯಿದೆ. ಅದರ ಮಾಲೀಕ ನನ್ನನ್ನು ಕರೆದು ತನ್ನ ಮೊಟ್ಟಮೊದಲ ಅಂಗಡಿ ಅದೋ ಅಲ್ಲಿಯೇ ಇತ್ತೆಂದು ದಿಬ್ರು ನದಿಯ ನಡುವೆ ಕಾಣದ ಯಾವುದೋ ಬಿಂದುವಿನತ್ತ ಬೆರಳು ತೋರಿಸಿದ.
ಅಸ್ಸಾಮ್ ರಾಜ್ಯದ ಧೊದಿಯಾ ಹಳ್ಳಿಗೆ ನೀಡಿದ ಭೇಟಿಯ ಕುರಿತು ಹೇಮಾ ನಾಯಕ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ