Advertisement

Tag: ಪ್ರವಾಸ

ಅಮೆರಿಕಾದ ನಗರಗಳು: ಎಂ.ವಿ. ಶಶಿಭೂಷಣ ರಾಜು ಅಂಕಣ

ಕ್ಯಾಲಿಫೋರ್ನಿಯ ರಾಜ್ಯದಲ್ಲಿರುವ ಲಾಸ್ ಏಂಜಲೀಸ್, ಅಮೆರಿಕಾದ ಎರಡನೇ ಹೆಚ್ಚು ಜನಸಂಖ್ಯೆ ಇರುವ ನಗರ. ಇಲ್ಲಿ ಸುಮಾರು ಮೂವತ್ತೊಂಬತ್ತು ಲಕ್ಷ ಜನ ವಾಸಿಸುತ್ತಿದ್ದಾರೆ. ಲಾಸ್ ಏಂಜಲೀಸ್ ಸಿನೆಮಾ ಮತ್ತು ಟಿವಿ ಜಗತ್ತಿನ ಕೇಂದ್ರಬಿಂದು. ಇಲ್ಲಿನ ಸಿನಿಮಾ ಜಗತ್ತನ್ನು ಹಾಲಿವುಡ್ ಎಂದು ಕರೆಯಲಾಗುತ್ತದೆ.
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ

Read More

ಕಾರೂ… ಕಾರ್‌ ಬಾರೂ..: ಗುರುಪ್ರಸಾದ ಕುರ್ತಕೋಟಿ ಸರಣಿ

ಕಾರನ್ನ ಮನೆಗೆ ನಾನೇ ಓಡಿಸಿಕೊಂಡು ಬಂದೆ. ಜೊತೆಗೆ ಅಜ್ಜಂಪುರ ಸರ್ ಕೂಡ ಬಂದರು. ಅವರ ಧೈರ್ಯ ಮೆಚ್ಚಲೇಬೇಕು! ನನಗೆ ಅಮೆರಿಕೆಯಲ್ಲಿ ಮೊದಲೇ ಕಾರ್ ಓಡಿಸಿದ ಅನುಭವ ಇತ್ತು. ಹಿಂದೆ ಒಂದೆರಡು ಬಾರಿ ಕೆಲವು ತಿಂಗಳಿಗೆ ಅಂತ ಅಮೆರಿಕೆಯ ಯುಟಾ (Utah) ಗೆ ಹೋಗಿದ್ದಾಗ ಅಲ್ಲಿ ನನ್ನ ಮ್ಯಾನೇಜರ್ ನನಗೆ ಒತ್ತಾಯ ಮಾಡಿ ಕಾರ್ ಓಡಿಸಲು ರೂಡಿ ಮಾಡಿಸಿದ್ದು ಈಗ ಪ್ರಯೋಜನಕ್ಕೆ ಬಂದಿತ್ತು.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿಯ ಎಂಟನೆಯ ಬರಹ

Read More

ಅಂಜಲಿ ರಾಮಣ್ಣ ಪ್ರವಾಸ ಅಂಕಣ ‘ಕಂಡಷ್ಟೂ ಪ್ರಪಂಚ’ ಮತ್ತೆ ಶುರು…

ಮನೆಯಿಂದ ಹೊರಟಾಗ ಚಿರಾಪುಂಜಿ ಎಂದರೆ ಪ್ರೈಮರಿ ಶಾಲೆಯಲ್ಲಿ ಹೇಳಿಕೊಟ್ಟಿದ್ದಂತೆ ಭಾರತದಲ್ಲೇ ಅತೀ ಹೆಚ್ಚು ಮಳೆ ಬೀಳುವ ಪ್ರದೇಶ ಎನ್ನುವುದು ಮಾತ್ರ ತಲೆಯಲ್ಲಿ ಇತ್ತು. ಶಿಲ್ಲಾಂಗ್‌ನಿಂದ ಒಂದುವರೆ ಗಂಟೆಯ ಪ್ರಯಾಣ ಮಾತ್ರ ಎಂದಾಗ ಖುಷಿಯೋ ಖುಷಿ. ಹೋಗ್ತಾನೇ ಇದ್ದರೂ ಎಲ್ಲೂ ಚಿರಾಪುಂಜಿ ಅಂತ ಬೋರ್ಡ್ ಕಾಣದೆ ಚಾಲಕ ಬುರಿತ್ ಧೊತ್‍ದಾಂಗ್‍ನನ್ನು ಕೇಳಿದೆ. “ನೀವೀಗ ಚಿರಾಪುಂಜಿಯಲ್ಲಿಯೇ ಇದ್ದೀರ” ಎಂದ.
ಅಂಜಲಿ ರಾಮಣ್ಣ ಬರೆಯುವ ‘ಕಂಡಷ್ಟೂ ಪ್ರಪಂಚ’ ಪ್ರವಾಸ ಅಂಕಣದಲ್ಲಿ ಮೇಘಾಲಯದಲ್ಲಿ ಸುತ್ತಾಡಿದ ಅನುಭವಗಳ ಕುರಿತ ಬರಹ

Read More

ಇನ್ಸ್ಬ್ರುಕ್ ಎಂಬ ಮಾಯಾಲೋಕ

ನಾರ್ಡ್ ಕೆಟ್ಟೆಯಲ್ಲಿ ಪ್ರವಾಸಿಗರಿಗೋಸ್ಕರ “ಇಗ್ಲೂ” ಕೂಡ ಮಾಡಿ ಇಡಲಾಗಿತ್ತು. ಗಟ್ಟಿಯಾದ ಹಿಮದ ಇಟ್ಟಿಗೆಗಳಿಂದ ಕಟ್ಟಿದ ಪುಟ್ಟ ಮನೆಯೇ ಇಗ್ಲೂ. ತಾಪಮಾನ ಹೆಚ್ಚಿದ ಹಾಗೆ ಕರಗಿ ಹೋಗುವ ಈ ಮನೆ, ಬೇಸಿಗೆಯಲ್ಲಿ ಮಾಯವಾಗಿಬಿಡುತ್ತದೆ. ಮತ್ತೆ ಚಳಿಗಾಲದಲ್ಲಿ ಹೊಸದಾಳಿ ಹಿಮ ಬಿದ್ದು, ಗಟ್ಟಿಯಾದಮೇಲೆ ಪುನಃ ಕಟ್ಟಿಕೊಳ್ಳಬೇಕು. ಅಲ್ಲಿಗೆ ಹಿಂದಿನವರ ಕಾಲದಲ್ಲಿ ಪ್ರತಿವರ್ಷ ಹೊಸ ಮನೆ ಕಟ್ಟಿ, ಗೃಹಪ್ರವೇಶ ನಡೆಯುತ್ತಿತ್ತು ಅನ್ನಿಸುತ್ತದೆ!
“ದೂರದ ಹಸಿರು” ಸರಣಿಯಲ್ಲಿ ಇನ್ಸ್ಬ್ರುಕ್ ನಗರದಲ್ಲಿ ಓಡಾಡಿದ ಅನುಭವಗಳ ಬರೆದಿದ್ದಾರೆ ಗುರುದತ್ ಅಮೃತಾಪುರ

Read More

ಡಚ್ ಜನರ ಸೈಕಲ್ ಪ್ರೀತಿ!

ಗಿತೋರ್ನ್ ಪಟ್ಟಣದ ಐತಿಹಾಸಿಕ ಭಾಗಗಳಿಗೆ ರಸ್ತೆ ಮಾರ್ಗವಿಲ್ಲ. ದೋಣಿಯ ಸಹಾಯದಿಂದ ಮಾತ್ರ ತಲುಪಬಹುದು. ಇಲ್ಲಿನ ಬಹುತೇಕ ಮನೆಗಳು ಇಂದು “ಹೋಂ ಸ್ಟೇ” ಆಗಿ ಮಾರ್ಪಟ್ಟಿವೆ. ಪ್ರವಾಸಿಗರಿಗೆ ಇದೊಂದು ಅನನ್ಯ ಅನುಭವ. ನಮ್ಮಲ್ಲಿ ಪ್ರಯಾಣಿಕರ ಅನುಕೂಲಕ್ಕೆ ಬಸ್ ವ್ಯವಸ್ಥೆ ಇದ್ದಂತೆ, ಇಲ್ಲಿ ಬೋಟಿನ ವ್ಯವಸ್ಥೆ ಇದೆ. ಕಾಲುವೆಗಳ ಪಕ್ಕದಲ್ಲಿ ನಡೆದು ಹೋಗಲು ಪಾದಚಾರಿ ಮಾರ್ಗವಿದೆ. ಅಲ್ಲಲ್ಲಿ ಪಾದಚಾರಿಗಳಿಗೆ ಸಣ್ಣ ಸೇತುವೆಗಳಿವೆ.
ಗುರುದತ್ ಅಮೃತಾಪುರ ಬರೆಯುವ “ದೂರದ ಹಸಿರು” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ