Advertisement

Tag: ಪ್ರವಾಸ

ಕ್ಯಾತನಮಕ್ಕಿಯ ಕಾಲಮೇಲೆ ಕೂತು ಗಾಳಿಗುಡ್ಡವ ನೆನೆದು

ಕಿಲೋಮೀಟರ್ ದೂರದಲ್ಲಿ ಬೈಕು ನಿಲ್ಲಿಸಿ ನಮ್ಮ ಟ್ರೆಕಿಂಗ್ ಆರಂಭಿಸಿದಾಗ ಇದ್ದ ಉತ್ಸಾಹ, ಕ್ಯಾತನಮಕ್ಕಿಯನ್ನು ಅರ್ಧ ಹತ್ತಿದಾಗಲೇ ಬತ್ತುವುದರಲ್ಲಿತ್ತು. ಒಂಚೂರು ಕುಳಿತು ನೀರು ಕುಡಿದು ಕಚ್ಚಾ ರಸ್ತೆಯಲ್ಲಿ ಬೆವರಿಳಿಸಿ, ತುದಿ ತಲುಪುವಾಗ ಜೀಪಿನಲ್ಲಿ ಬಂದವರ ದರ್ಬಾರಿಗೆ ಮನವೊಮ್ಮೆ ಪಿಚ್ಚೆಂದಿತ್ತು. ಆದರೂ ನಡೆದು ಗಮ್ಯ ತಲುಪುವ ಸಾರ್ಥಕ ಭಾವ ಆರಾಮಾಗಿ ತೇಲಿ ಬಂದವರಿಗೆಲ್ಲಿ ಬರಬೇಕು ಎಂದು ನಮಗೆ ನಾವೇ ಬೆನ್ತಟ್ಟಿಕೊಂಡು ಮುನ್ನಡೆದೆವು.
ಚಿಕ್ಕಮಗಳೂರಿನ ‘ಕ್ಯಾತನಮಕ್ಕಿʼ ಪ್ರವಾಸಿ ತಾಣಕ್ಕೆ ಭೇಟಿ ನೀಡಿದ ಅನುಭವಗಳನ್ನು ಇಲ್ಲಿ ಹಂಚಿಕೊಂಡಿದ್ದಾರೆ ಶುಭಶ್ರೀ ಭಟ್ಟ

Read More

ಎಲ್ಲಿ ಹೋದರೇನು… ಮನ ಮರೆಯುವುದಿಲ್ಲ ನಿನ್ನನು

ಚಾಲಕ ಖಾನ್ ಅಲ್ಲಿಂದ ಒಂದು ಗಂಟೆ ಐದು ನಿಮಿಷಗಳ ಪ್ರಯಾಣದಲ್ಲಿ ತಲುಪಿಸಿದ್ದು ನೀರ್ದೇವನ ಪಾದಕ್ಕೆ. ಒಂದು ಬದಿ ಪ್ರಪಾತ ಮತ್ತೊಂದು ಬದಿ ಸಮುದ್ರ… ನಡುವೆ ಈ ನೀರ್ಮಕ್ಕಳ ಕಾಯ್ವ ದೇವನ ಪಳಿಯುಳಿಕೆ. ಸೂರ್ಯ ಮುಳುಗುತ್ತಿದ್ದ, ಬಂದಿದ್ದವರು ವಿಧವಿಧ ಭಂಗಿಯಲ್ಲಿ ಫೋಟೊ ತೆಗೆಸಿಕೊಳ್ಳುತ್ತಿದ್ದರು. ಜೋರು ಗಾಳಿ, ತಂಪು ಸಮಯ ಸಮುದ್ರ ನೋಡುತ್ತಾ ಕೂರಲು ಒಂಟಿ ನಿಂತ ಸಣ್ಣ ಬಂಡೆ. ಅದೆಷ್ಟು ಚಂದಿತ್ತು ಅಲ್ಲಿ ಕೂತು ಇಹಪರವನ್ನು ಮರೆತಿದ್ದು. ಸಾಯಂಕಾಲ 6 ಗಂಟೆಯ ನಂತರ ಅಲ್ಲಿ ಇರಲು ಬಿಡುವುದಿಲ್ಲ.
ಕಂಡಷ್ಟೂ ಪ್ರಪಂಚ ಪ್ರವಾಸ ಅಂಕಣದಲ್ಲಿ ಗ್ರೀಸ್‌ ಪ್ರವಾಸದ ಅನುಭವಗಳನ್ನು ಹಂಚಿಕೊಂಡಿದ್ದಾರೆ ಅಂಜಲಿ ರಾಮಣ್ಣ ಬರಹ

Read More

ಮನದೊಳಗೆ ಅಚ್ಚಾಗಿದೆ ಸ್ಲೊವೇನಿಯಾ ಫೋಟೊಫ್ರೇಮ್

ಜಸ್ನಾ ಸರೋವರದ ಪ್ರವಾಸಿಗರಿಗೆ ಒಂದು ಅನಿರೀಕ್ಷಿತ ಉಡುಗೊರೆ ಕಾದಿರುತ್ತದೆ. ಅದು ಇಲ್ಲಿನ ಪ್ರಮುಖ ಆಕರ್ಷಣೆ – ಫೋಟೋ ಫ್ರೇಮ್! ಇಲ್ಲಿ ಬರುವ ಪ್ರವಾಸಿಗಳಿಗೆ ಫೋಟೊಗೋಸ್ಕರವಾಗಿ ಮರದಲ್ಲಿ ಮಾಡಿದ ಒಂದು ಸುಂದರವಾದ ಫೋಟೋ ಫ್ರೇಮ್ ಇದೆ. ಅದರ ಕೊನೆಯಲ್ಲಿ ಸ್ಲೋವೇನಿಯಾದ ಅಜ್ಜ ಪ್ರತಿಯೊಬ್ಬರ ಜೊತೆಗೂ ನೆನಪಾಗಿ ಅವರವರ ಮನೆಗಳಿಗೆ ತೆರಳುತ್ತಾನೆ. ನಾವೆಲ್ಲರೂ ಕೂತು ತೆಗೆಸಿಕೊಂಡಿರುವ ಫೋಟೋ ನೋಡಿದರೆ ನಿಮಗೊಂದು ಕ್ಷಣಕ್ಕೆ ಅಚ್ಚರಿಯಾಗುವುದು ಖಚಿತ. ಆ ಅಜ್ಜ ನಮ್ಮಲ್ಲಿಯ ಯಾರೋ ಒಬ್ಬರು ಎಂಬಂತೆ ಕಾಣುವಷ್ಟು ಚೆನ್ನಾಗಿ ಮೂಡಿ ಬಂದಿರುವ ಕೆತ್ತನೆಯ ಕಲಾವಿದನಿಗೆ ಹಾಗೂ ಈ ಕಲ್ಪನೆಯನ್ನು ಸಾಕಾರಗೊಳಿಸಿದ ಇಲ್ಲಿಯ ಪ್ರವಾಸೋದ್ಯಮ ಇಲಾಖೆಗೆ ನನ್ನ ಧನ್ಯವಾದಗಳು.

Read More

ದಿವಾನಿಯಾದ ಮಸ್ತಾನಿಯ ಕತೆ

ಹೌದಲ್ಲ. ಇವಳು ಎಲ್ಲಿಂದ ಬಂದಳು ಎಲ್ಲಿಗೆ ಹೋದಳು? ಸಂಜಯ್ ಲೀಲಾ ಬನ್ಸಾಲಿಯ ವೈಭವಪರದೆಯಲ್ಲಿ ದೀಪಿಕಾಳ ಮೂಲಕ ಅನಾವರಣಗೊಂಡವಳು.. ಕೊಟ್ಟಿಗೆಯಂತಾಗಿದ್ದ ಮನದ ನಡುವಿನಲ್ಲಿ ನೊರೆ ಹಾಲ್ಗರೆದುಕೊಟ್ಟ, ಬಾಜಿರಾಯನ ‘ಮಸ್ತಾನಿ’ಯನ್ನು ಹುಡುಕಿ ನಾನು ಹೊರಟೆ. ಹಾಡುತ್ತಿದ್ದೆ ನಾನೂ “ಕಹತೆ ಹೆ ಯೇ ದಿವಾನಿ ಮಸ್ತಾನೀ ಹೋಗಯೀ…” ಅವಳು ಇರಲೇ ಇಲ್ಲ, ಅವಳು ಮುಸ್ಲಿಂ ಆಗಿರಲಿಲ್ಲ, ಅವಳು ಬಾಜಿರಾಯನಿಗಿಂತ ಮೊದಲೇ ಸತ್ತಳು, ಆತ್ಮಹತ್ಯೆ ಮಾಡಿಕೊಂಡಳು ವಗೈರೆ ವಗೈರೆ ಎಂದು ಮಾಧ್ಯಮಗಳು ಟಿಆರ್‌ಪಿ ಸಂಕಷ್ಟದಲ್ಲಿ ಹೊರಳಿ ಧುಮ್ಮಿಕ್ಕುತ್ತಿರುವಾಗ ನಾನು ಹಾಡುತ್ತಿದ್ದೆ “ಜ಼್ಅಖಮ್ ಐಸ ತೂನೇ ಲಗಾಯಾ… ಮರ್ಹಮ್ ಐಸ ತೂನೇ ಲಗಾಯಾ… ಮೇ ದಿವಾನಿ ಹೋಗಯೀ… ಹಾಂ ದಿವಾನೀ ಹೋಗಯೀ” ಅಂಜಲಿ ರಾಮಣ್ಣ ಬರೆಯುವ `ಕಂಡಷ್ಟೂ ಪ್ರಪಂಚ’ ಅಂಕಣದಲ್ಲಿ ಹೊಸ ಬರಹ

Read More

`ಜಗದ ಜಗಲಿಯಲಿ ನಿಂತು’: ವೈಶಾಲಿ ಪ್ರವಾಸ ಲೇಖನ ಮಾಲೆ ಆರಂಭ

ಮಾಯಾ ಜನರ ಈ ಖಗೋಳಶಾಸ್ತ್ರದ ನಂಬಿಕೆ ಮತ್ತು ಅವಲಂಬನೆ ಎಷ್ಟರ ಮಟ್ಟಿಗಿತ್ತೆಂದರೆ ಅದು ಅವರ ಜೀವನದ ಪ್ರತಿ ನಡೆಯಲ್ಲೂ ಹಾಸುಹೊಕ್ಕಾಗಿತ್ತು. ಜಗತ್ಪ್ರಸಿದ್ದ ಮಾಯನ್ ಪಿರಾಮಿಡ್ “ಚಿಚೆನ್ ಇಟ್-ಸಾ” ಇದಕ್ಕೊಂದು ನಿದರ್ಶನ. ಇದು ಅವರ ಸರ್ಪದೇವತೆ ಕುಕುಲ್ಕಾನ್ ಮಂದಿರ. ಇಂದಿಗೂ ಇಕ್ವಿನಾಕ್ಸ್ ದಿನ ನಡುಮಧ್ಯಾಹ್ನ, ಸೂರ್ಯನ ನೆರಳು ಪಿರಮಿಡ್ಡಿನ ಮೇಲೆ ಹೇಗೆ ಬೀಳುತ್ತದೆಂದರೆ, ಸರ್ಪವೊಂದು ಮೇಲಿಂದ ಕೆಳಗೆ ಹರಿದಂತೆ ಕಾಣುತ್ತದೆ. ಆ ದೃಶ್ಯ ನೋಡಲು ಪ್ರತಿವರ್ಷ ಸಾವಿರಾರು ಜನ ಸೇರುತ್ತಾರೆ. ವೈಶಾಲಿ ಹೆಗಡೆ ಬರೆಯುವ ʻಜಗದ ಜಗಲಿಯಲಿ ನಿಂತುʼ ಅಂಕಣದ ಮೊದಲ ಬರಹ ಇಲ್ಲಿದೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ