Advertisement

Tag: ಪ್ರೇಮ

ಬದುಕಿನ ಬಣ್ಣಗಳು: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ

ಆದರೆ ಈ ಸಮುದ್ರವನ್ನು ಬೊಗಸೆಯಲ್ಲಿ ತುಂಬಿಕೊಳ್ಳಲು ಸಾಧ್ಯವಿಲ್ಲ ಅನ್ನುವ ಅರಿವು ನನಗೆ ಯಾವತ್ತೋ ಆಗಬೇಕಿತ್ತು. ಸುಮ್ಮನೆ ದಡದಲ್ಲಿ ಕಾಯುತ್ತಾ ಕುಳಿತೆ. ಅವಳಿಗೆ ಕನಸಿತ್ತು ಸ್ಪಷ್ಟವಾದ ಗುರಿಯಿತ್ತು. ತನ್ನ ಸುತ್ತ ಇರುವ ಮಿತಿಗಳನ್ನು ಮೀರುವ ತುಡಿತವಿತ್ತು. ಅವಳ ಪಾತ್ರ ವಿಶಾಲವಿತ್ತು. ನಾನು ಒಡ್ಡಿದ ಬೊಗಸೆಗೆ ಹೆಚ್ಚು ಹೊತ್ತು ನಿಲ್ಲಲಾರಲು ಅನ್ನುವುದು ಗೊತ್ತಾಗಬೇಕಿತ್ತು.
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ “ಇನ್ನೊಂದು ಬದಿ”ಯ ಎಂಟನೆಯ ಬರಹ

Read More

ಕನ್ನಡ ಮನಸ್ಸು ಪ್ರೀತಿಯನ್ನು ಪರಿಭಾವಿಸುವ ರೀತಿ: ಎಲ್.ಜಿ.ಮೀರಾ ಅಂಕಣ

ಆಧುನಿಕ ಕನ್ನಡ ಸಾಹಿತ್ಯದ ಬಹಳ ಮುಖ್ಯ ಘಟ್ಟವಾದ ನವೋದಯದಲ್ಲಿ ಪ್ರೇಮವನ್ನು ದಾಂಪತ್ಯದೊಳಗಿದ್ದಾಗ ಸಂಭ್ರಮಿಸುವ ಹಾಗೂ ಒಂದು ವೇಳೆ ಅದು ದಾಂಪತ್ಯದ ಹೊರಗಿದ್ದಾಗ ಅದನ್ನು ತ್ಯಾಗ ಮಾಡುವ ಮನೋಧರ್ಮ ಕಾಣುತ್ತಿತ್ತು. ಭಾರತದ ಸ್ವಾತಂತ್ರ್ಯ ಸಂಗ್ರಾಮದ ಹಿನ್ನೆಲೆಯಲ್ಲಿದ್ದ ನವ ಭಾರತ ನಿರ್ಮಾಣದ ಆಶಯ, ಸುಧಾರಣಾವಾದ, ಬ್ರಿಟಿಷರ ಕಣ್ಣಲ್ಲಿ ಭಾರತದ `ಸಭ್ಯ ಸಂಸ್ಕೃತಿ’ಯನ್ನು ಎತ್ತಿ ಹಿಡಿಯುವ ನೈತಿಕ ತವಕ ಇವು ಕುವೆಂಪು, ಬೇಂದ್ರೆ, ಪುತಿನ ಮುಂದೆ ಕೆ.ಎಸ್.ನರಸಿಂಹಸ್ವಾಮಿ ಇವರೆಲ್ಲರ ಪ್ರೀತಿಯ ಚಿತ್ರಣವನ್ನು ಪ್ರಭಾವಿಸಿದವು.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ತಿಜೋರಿಯಿಂದ ತಪ್ಪಿಸಿಕೊಂಡ ಘಳಿಗೆಗಳೆಷ್ಟೋ…: ಆಶಾ ಜಗದೀಶ್ ಅಂಕಣ

ಸುಮ್ಮನೇ ತಟ್ಟೆಯ ಮುಂದೆ ಕುಳಿತು ಸಮಯ ಉರುಳದಂತೆ, ಈ ತುತ್ತು ಮತ್ತಾರದೋ ಚೀಲ ಸೇರಲಿ ಎಂದಷ್ಟೇ ಪ್ರಾರ್ಥಿಸುತ್ತಾ… ಇಷ್ಟೇ ಅಲ್ಲವಾ ಈ ಬದುಕು ಎನ್ನುವ ಅಂತಿಮ ಸತ್ಯದ ದರ್ಶನವಾದಾಗ ಯಾವುದೆಲ್ಲವನ್ನು ಬೇಕು ಎಂದುಕೊಳ್ಳುತ್ತಿದ್ದೇವೋ ಅದಾವುದೂ ನಮ್ಮ ಆತ್ಯಂತಿಕ ಜರೂರತ್ತಿನ ಪಟ್ಟಿಯಲ್ಲಿ ಇರಲೇ ಇಲ್ಲ ಎನ್ನುವುದನ್ನು ಪ್ರಯಾಸದಿಂದ ಮನಗಾಣುತ್ತಾ… ಯಾವುದೂ ಪೂರ್ಣವಲ್ಲ ಇಲ್ಲಿ… ಈ ರೈಲು ಬಂಡಿ, ನಾವು ಹತ್ತುವ ಮುಂಚೆಯೇ ಪಯಣ ಆರಂಭಿಸಿತ್ತು ಮತ್ತು ನಾವು ಇಳಿದ ನಂತರವೂ ಪಯಣಿಸುತ್ತಲೇ ಇರುತ್ತದೆ..
ಆಶಾ ಜಗದೀಶ್ ಅಂಕಣ “ಆಶಾ ಲಹರಿ”

Read More

ನೆನಪಾಗಿ ಉಳಿದ ಟ್ರೂತನ್

ರಸ್ತೆಯುದ್ದಕ್ಕೂ ಮೊದಲು ಸಿಗುವ ಸುಧಾಳನ್ನು ಮನೆಗೆ ಸೇರಿಸಿ, ನಂತರ ಚಿತ್ರ, ಎಲ್ಲರನ್ನೂ ಬಿಟ್ಟು ನಾನು ಮತ್ತು ರೇವಿ ಕಾಲೆಳೆದುಕೊಂಡು ಇ. ಎಸ್. ಐ ಹತ್ತಿರವಿದ್ದ ಮನೆ ಸೇರುವುದರಲ್ಲಿ 6 ಕಳೆದಿರುತ್ತಿತ್ತು. ಅಷ್ಟು ಹೊತ್ತಿಗೆ ಅಮ್ಮನನ್ನೇ ತಿನ್ನುವ ಘರ್ಜಿಸುವ ಹೆಣ್ಣು ಹುಲಿಯಾಗಿರುತ್ತಿದ್ದೆ! ನಾನು ರಸ್ತೆಯ ಮೂಲೆಯಲ್ಲಿ ತಿರುಗಿದೊಡನೆ ಎಲ್ಲರೂ ಸಿನೆಮಾದಲ್ಲಿ ರೌಡಿ ಬಂದಾಗ ಗುಸುಗುಸು ಮಾತನಾಡುತ್ತ ಮೌನವಾಗುತ್ತಾರಲ್ಲ… ಹಾಗೆ ಸೈಲೆಂಟು! ಮತ್ತೆ ಜಗತ್ತಿನ ಮಕ್ಕಳೆಲ್ಲ ಶಾಲೆ ಮುಗಿಸಿದ ಎರಡು ಗಂಟೆಗಳ ನಂತರ ಮನೆ ಸೇರುತ್ತಿದ್ದ ಘೋರ ಅನ್ಯಾಯ ಅನುಭವಿಸುತ್ತಿರುವಾಗ ಅವರೆಲ್ಲ ಖುಷಿಯಾಗಿ ನಗುತ್ತ ಇರುವುದು ಏನು ಕಡಿಮೆ ಅಪರಾಧವಾ?!
ಭಾರತಿ ಬಿ.ವಿ.ಯವರ “ಈ ಪ್ರೀತಿ ಒಂಥರಾ” ಕೃತಿಯ ಒಂದು ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ