Advertisement

Tag: ಫಾತಿಮಾ ರಲಿಯಾ

ಕನಸಾಗೇ ಉಳಿದ ಕನಸು: ಫಾತಿಮಾ ರಲಿಯಾ ಅನುಭವ ಕಥನದ ಕೆಲವು ಪುಟಗಳು

ನನ್ನ ಮಾತಲ್ಲಿ ಆತ್ಮವಿಶ್ವಾಸ, ಸತ್ಯ ಇಲ್ಲ ಅನ್ನುವುದು ತುಂಬಾ ಸ್ಪಷ್ಟವಾಗಿ ನನಗೇ ಗೊತ್ತಾಗುತ್ತಿತ್ತು, ಬಹುಶಃ ಅಮ್ಮನಿಗೂ ಗೊತ್ತಾಗಿದೆ. ನಾನು ಮಾತು ಮುಂದುವರೆಸಲಿಲ್ಲ, ಅಮ್ಮನೂ ಮುಂದುವರೆಸಲಿಲ್ಲ. ಇಬ್ಬರ ಮನದೊಳಗೂ ದುಃಖವೊಂದು ಹೊಯ್ದಾಡುತ್ತಿತ್ತು.‌ ಅಲ್ಲಿ ನೆಲೆ ನಿಂತಿದ್ದ ಮೌನ ನಮ್ಮಬ್ಬರಲ್ಲೂ ಉಸಿರುಗಟ್ಟಿಸುವ ಭಾವ ಹುಟ್ಟಿಸುತ್ತಿತ್ತು. ಅಮ್ಮನ ಕಣ್ಣು ತುಂಬಿಕೊಳ್ಳುತ್ತಿತ್ತು. ನಾನು ತೀರಾ ನಿರ್ಭಾವುಕಳಂತೆ ಅಲ್ಲಿಂದ ಎದ್ದು ಹೋದೆ, ನನಗೆ ಹಾಗೆ ಹೋಗದೆ ಬೇರೆ ದಾರಿಯೇ ಇರಲಿಲ್ಲ. ಯಾಕೆಂದರೆ ಇನ್ನೆರಡೇ ಎರಡು ನಿಮಿಷ ನಾನಲ್ಲಿ ನಿಂತಿದ್ದರೂ ಅಳು ಭೋರ್ಗರೆಯುತ್ತಿತ್ತು.
ಫಾತಿಮಾ ರಲಿಯಾ ಅನುಭವ ಕಥನ “ಕೀಮೋ” ಕೃತಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಫಾತಿಮಾ ರಲಿಯಾ ಬರೆದ ಈ ಭಾನುವಾರದ ಕತೆ

ರೂಡಿ ಯಾರು, ಏನು, ಎತ್ತ ಎಂಬುವುದು ಗೊತ್ತೇ ಇರದಿದ್ದರೂ ಯಾವುದೋ ಅಸಹಾಯಕತೆಯೊಂದು ಅವನನ್ನು ಇನ್ನಿಲ್ಲದಂತೆ ಕಾಡುತ್ತಿದೆ ಎಂದು ಅವಳಿಗೆ ಆಗಾಗ ಅನ್ನಿಸುತ್ತಿತ್ತು. ಪ್ರತಿ ಬೆಳಗೂ ‘ಈವತ್ತು ಹೇಗಾದರೂ ಸರಿ, ಅವನನ್ನು ಕೇಳಲೇಬೇಕು’ ಎಂಬ ಪ್ರತಿಜ್ಞೆಯೊಂದಿಗೆ ಹಾಸಿಗೆಯಿಂದ ಏಳುತ್ತಿದ್ದಳು. ಆದರೆ ಹಾಗೆ ಕೇಳಬೇಕೆಂದು ಹೊರಟಾಗೆಲ್ಲಾ ಗಂಟಲಲ್ಲಿ ಒಂದು ಮುಳ್ಳು ಸಿಕ್ಕಿಹಾಕಿಕೊಂಡಂತಾಗಿ ಕೇಳಲಾಗದೆ ಇದ್ದುಬಿಡುತ್ತಿದ್ದಳು. ಹೋಗಲಿ, ತಾನು‌ ನಲವತ್ತರ ಹೊಸ್ತಿಲು ದಾಟಿದವಳು…
ಫಾತಿಮಾ ರಲಿಯಾ ಬರೆದ ಕತೆ “ರೂಡಿ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಛಂದ ಪ್ರಶಸ್ತಿ ಪಡೆದ ಫಾತಿಮಾ ರಲಿಯಾ….

ಕೆಂಡಸಂಪಿಗೆಯ ಮೂಲಕ ಬರಹಲೋಕಕ್ಕೆ ಕಾಲಿಟ್ಟ ಫಾತಿಮಾ ರಲಿಯಾ ಕವಿತೆಗಳನ್ನು ಬರೆಯಲಾರಂಭಿಸಿ ಪ್ರಬಂಧಗಳನ್ನು ತುಂಬಾ ಪ್ರೀತಿಸಿದರು. ಕರಾವಳಿಯ ಸಾಮಾಜಿಕತೆಯನ್ನು ವಿಭಿನ್ನ ದೃಷ್ಟಿಕೋನದಿಂದ ನೋಡುವ  ಭರವಸೆಯ ಲೇಖಕಿ. ಅವರ ಕಥಾ ಸಂಕಲನದ ಹಸ್ತಪ್ರತಿಗೆ ಛಂದಪುಸ್ತಕ ಬಹುಮಾನ ಬಂದಿದೆ. ಕವಿತೆಯ ಮೂಲಕ ಸಾಹಿತ್ಯ ಲೋಕ ಪ್ರವೇಶಿಸಿದ ತಾನು ಪ್ರಬಂಧಗಳ ಲೋಕದಲ್ಲಿ ವಿಹರಿಸಿ ಈ ಕಥಾಲೋಕವನ್ನು ಪ್ರವೇಶಿಸಿದ್ದೇನೆ ಎನ್ನುವ ಫಾತಿಮಾ ರಲಿಯಾ ಅವರು ತಮ್ಮಖುಷಿಯನ್ನು ಕೆಂಡಸಂಪಿಗೆಯ ಜೊತೆಗೆ ಹಂಚಿಕೊಂಡರು.  ಅವರೊಡನೆ ನಡೆಸಿದ ಮಾತುಕತೆಯ ಒಂದಿಷ್ಟು ವಿಚಾರಗಳು ಇಲ್ಲಿವೆ.

Read More

ಬಿಡದೆ ಸುರಿವ ಮಳೆ ಮತ್ತು ಐಸ್ ಕ್ಯಾಂಡಿ ತಿಮ್ಮಪ್ಪಣ್ಣ: ಫಾತಿಮಾ ರಲಿಯಾ

“ಬೀದಿ ಬದಿಯ ಕನಸುಗಳನ್ನೂ ಹೆಕ್ಕಲು ಕಲಿಯುತ್ತಿದ್ದ ನಾವು ನಿಜಕ್ಕೂ ಮುಗಿ ಬೀಳುತ್ತಿದ್ದುದು ಅವನು ಮಾರುತ್ತಿದ್ದ ಕ್ಯಾಂಡಿಗೋ ಅಥವಾ ಅವನ ಕಥೆಗಳಿಗೋ ಅನ್ನುವುದೂ ಇವತ್ತಿಗೂ ಅರ್ಥವಾಗುವುದಿಲ್ಲ. ಮಂಗಳೂರಿನ ‘ಐಡಿಯಲ್’ನಲ್ಲಿ ಬೆಲ್ಲ ಕ್ಯಾಂಡಿ ಸಿಗುತ್ತೆ ಅಂತ ಸುದ್ದಿ ಆದಾಗ ತುಂಬ ಆಸೆ ಪಟ್ಟುಕೊಂಡಿದ್ದೆವು. ಎಳೆಯ ಮಗುವೊಂದು ಇದ್ದುದರಲ್ಲಿ ದೊಡ್ಡದನ್ನು ಆರಿಸಿ ತಿನ್ನುವಂತೆ ಅಲ್ಲಿದ್ದ ಅಷ್ಟೂ ಕ್ಯಾಂಡಿಗಳನ್ನು ಪರಿಶೀಲಿಸಿ, ಕೊಂಡು ಬಾಯಿಗಿಡುತ್ತಿದ್ದಂತೆ ಮುಖ ಹುಳ್ಳಹುಳ್ಳಗೆ.”

Read More

ಬೆಳಕ ಸೃಜಿಸುವ ಶಾಪಗ್ರಸ್ಥ ದೇವಕನ್ಯೆ: ಫಾತಿಮಾ ರಲಿಯಾ

“ಸಂತೆ ಮುಗಿದ ಮೇಲೆ ಉಳಿದು ಬಿಡುವ ನೀರವ ರಸ್ತೆಯಂತೆ ಮದುವೆ ಸಂಭ್ರಮ ಮುಗಿದ ಮೇಲೆ ಮದುವೆ ಮನೆ ಬಣಗುಟ್ಟುತ್ತಿರಬೇಕಾದರೆ ಆಕೆ ಹಾಡಿಕೊಳ್ಳುತ್ತಾ, ಆಗಾಗ ಎಲೆ ಅಡಿಕೆಯನ್ನು ಪಿಚಕ್ಕಂತ ಉಗುಳುತ್ತಾ, ಕೆಲವೊಮ್ಮೆ ಕಣ್ಣು ಕೆಂಪಗೆ ಮಾಡಿಕೊಂಡು ಯಾರ್ಯಾರಿಗೋ ಬಯ್ಯುತ್ತಾ…”

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ