Advertisement

Tag: ಬಸವನಗೌಡ ಹೆಬ್ಬಳಗೆರೆ

ಸಂದರ್ಶನಕ್ಕೆಂದು ಚೆನ್ನೈ ತಲುಪಿದ ಕುತೂಹಲಕಾರಿ ಅನುಭವ…: ಬಸವನಗೌಡ ಹೆಬ್ಬಳಗೆರೆ ಸರಣಿ

ಹಣ ಅಡ್ಜಸ್ಟ್ ಆದರೆ ಮಾತ್ರ ಹೋದರಾಯ್ತು ಎಂದುಕೊಂಡು ಮಾಡೋ ಪ್ರಯತ್ನವನ್ನೆಲ್ಲ ಮಾಡಿ ಸುಮ್ಮನಾದೆ. ಇನ್ನೇನು ಇವತ್ತು ರಾತ್ರಿ ಚೆನ್ನೈಗೆ ಹೋಗಬೇಕು ಎಂದು ಅವರು ಕೊಟ್ಟಿದ್ದ ಸಂದರ್ಶನದ ದಿನ ನಾಳೆಯೇ ಆಗಿತ್ತು ಎಂಬ ದಿನದವರೆಗೂ ಪ್ರಯತ್ನ ಮಾಡಿ ಸುಮ್ಮನಾಗಿದ್ದೆ. ಕಡೇ ದಿನ ಎಂದೂ ಕೇಳದ ನಮ್ಮ ಮನೆ ಓನರ್ ಅಂಕಲ್ ಬಳಿ ಕೇಳಿದೆ. ಅದಕ್ಕವರು ಒಂದೂ ಮಾತಾಡದೇ ತುಂಬಾ ಖುಷಿಯಿಂದಲೇ ಹಣ ಕೊಟ್ಟರಲ್ಲದೇ ಸಂದರ್ಶನಕ್ಕೆ ಹಾಜರಾಗುವ ಟಿಪ್ಸ್‌ಗಳನ್ನೂ ತಿಳಿಸಿದರು, ತುಂಬಾ ಖುಷಿಯಾಗಿ ನಾನು ಬೆಂಗಳೂರಿನ ರೈಲನ್ನು ಆ ದಿನ ಬೆಳಗ್ಗೆಯೇ ಹತ್ತಿ ಬೆಂಗಳೂರಿಗೆ ಸಂಜೆಯಷ್ಟರಲ್ಲಿ ಹೋಗಿ ತಲುಪಿದೆ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಐವತ್ತೇಳನೆಯ ಕಂತು ನಿಮ್ಮ ಓದಿಗೆ

Read More

ಬಯಸುವುದು ಒಂದು ಸಿಗುವುದು ಮತ್ತೊಂದು!!: ಬಸವನಗೌಡ ಹೆಬ್ಬಳಗೆರೆ ಸರಣಿ

ನಿಲ್ದಾಣಕ್ಕೆ ನಡೆಯುವಾಗ ಆಗಾಗ್ಗೆ ಎದ್ದು ಬರುತ್ತಿದ್ದ ಶೂಗಳು ನನ್ನ ನಡಿಗೆಯ ವೇಗವನ್ನು ಕುಂಠಿತಗೊಳಿಸಿದ್ದವು. ನಾನು ತಡವಾಗುತ್ತದೆಯೆಂದು ಭಾವಿಸಿ ಶೂಗಳನ್ನು ಕೈಯಲ್ಲಿ ಹಿಡಿದು ರೈಲ್ವೇ ನಿಲ್ದಾಣ ಸಿಗುವವರೆಗೆ ಓಡಿದೆ. ನನ್ನ ಅದೃಷ್ಟಕ್ಕೆ ರೈಲು ಇನ್ನೂ ಹೋಗಿರಲಿಲ್ಲ. ಟಿಕೇಟ್ ತೆಗೆದುಕೊಂಡು ರೈಲನ್ನು ಹತ್ತಿ ಕುಳಿತೆ. ಇದೇ ಮೊದಲ ಬಾರಿಗೆ ನಾನು ಧಾರವಾಡಕ್ಕೆ ಹೋಗುತ್ತಿದ್ದೆ. ನನ್ನ ಎದುರಿಗೆ ಕುಳಿತಿದ್ದವರ ಬಳಿ ಹೇಗೆ ಹೋಗಬೇಕೆಂದು ಕೇಳಿದಾಗ ಅವರು ಮಾಹಿತಿ ತಿಳಿಸಿದರಲ್ಲದೇ ನನ್ನ ಬಗ್ಗೆ ಕನಿಕರ ತೋರಿ “ನಿಮಗೆ ಕೆಲಸ ಸಿಗದಿದ್ದರೆ ನನಗೆ ಕರೆ ಮಾಡಿ ನಾನು ನಿಮಗೆ ಬೇರೊಂದು ಕೆಲಸ ಕೊಡಿಸುತ್ತೇನೆ” ಎಂದು ಅವರ ನಂಬರ್ ಕೊಟ್ಟು ಹೋದರು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಸೇಫರ್ ಜೋನ್ ನಿಂದ ಹೊರಬರುವುದನ್ನು ಕಲೀಬೇಕು…: ಬಸವನಗೌಡ ಹೆಬ್ಬಳಗೆರೆ ಸರಣಿ

ಎಷ್ಟೋ ಜನಕ್ಕೆ ತಾವು ಈಗಿರುವ ಕೆಲಸ, ಸ್ಥಿತಿ ಸರಿಯಿಲ್ಲವೆಂದೆನಿಸಿರುತ್ತದೆ. ಯಾರನ್ನೇ ಕೇಳಲಿ ಈ ಕೆಲಸ ಸರಿಯಿಲ್ಲ ಅದು ಸರಿಯಿಲ್ಲ ಇದು ಸರಿಯಿಲ್ಲ ಎಂದು ದೂಷಣೆ ಮಾಡುತ್ತಿರುತ್ತಾರೆ. ಆದರೆ ತಮಾಷೆ ಅಂದ್ರೆ ಕಡೇವರೆಗೂ ಬೇರೆ ಕೆಲಸಕ್ಕೆ ಪ್ರಯತ್ನಿಸದೇ ಅದೇ ಕೆಲಸದಲ್ಲಿ ಮುಂದುವರೆಯುತ್ತಿರುತ್ತಾರೆ!! ಕೆಲವರಂತೂ ಅದೇ ಕೆಲಸದಲ್ಲಿದ್ದುಕೊಂಡು ಬೇರೆ ಕೆಲಸಕ್ಕೆ ಪ್ರಯತ್ನಿಸಿ ಯಶಸ್ವಿಯೂ ಆಗುತ್ತಾರೆ. ಇಲ್ಲಿ ಹೇಳೋಕೆ ಹೊರಟಿರೋದು ಏನಪ್ಪಾ ಅಂದ್ರೆ ನಾವು ಇದ್ದ ಸ್ಥಿತಿಯಲ್ಲಿ ಖುಷಿಯಾಗಿದ್ದುಕೊಂಡು ಬೇರೆಯದ್ದಕ್ಕೆ ಪ್ರಯತ್ನಿಸುತ್ತಾ ಇರಬೇಕು. ಸಿಕ್ಕರೆ ಒಳ್ಳೆಯದು, ಒಂದೊಮ್ಮೆ ಸಿಗದಿದ್ದರೆ ಈಗಿರುವ ಕೆಲಸವನ್ನು ಪ್ರೀತಿಸಬೇಕು. ಅದನ್ನು ಬಿಟ್ಟು ಬೇರೆಯದ್ದಕ್ಕೂ ಪ್ರಯತ್ನಿಸದೇ ಇರೋ ಕೆಲಸವನ್ನು ಗೊಣಗಿಕೊಂಡು ಮಾಡಿದರೆ ಅದು ನಮ್ಮ ನೆಮ್ಮದಿಗೆ ಲಾಸ್ ಅಷ್ಟೇ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಐವತ್ತೈದನೆಯ ಕಂತು ನಿಮ್ಮ ಓದಿಗೆ

Read More

ಹರ್ಷದ ಕೂಳನ್ನು ನೆಚ್ಚಿಕೊಂಡು ವರ್ಷದ ಕೂಳನ್ನು  ಕಳೆದುಕೊಳ್ಳಬಾರದಂತೆ!!: ಬಸವನಗೌಡ ಹೆಬ್ಬಳಗೆರೆ ಸರಣಿ

ನನಗೆ ತೊಂದರೆ ಆಗುತ್ತಿದ್ದುದು ನನ್ನ ಸಂಬಂಧಿಕರ ಮನೆಯಿಂದ ಬರುತ್ತಿದ್ದ 3 ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಕರೆದುಕೊಂಡು ಹೋಗಲು ತುಂಬಾ ತಡವಾಗಿ ಬರುತ್ತಿದ್ದರು. ಇದರಿಂದ ನನಗೆ ಅವರು ಹೋಗುವವರೆಗೂ ಅಡುಗೆ ಮಾಡಿಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ. ನಾನು ಮಾಡಿದ್ದ ರೂಮಿನಲ್ಲಿ ಒಂದೇ ಹಾಲ್ ಇದ್ದುದ್ದರಿಂದ ಮಕ್ಕಳ ಎದುರಿಗೆ ಹೋಗಿ ಅಡುಗೆ ಮಾಡಿಕೊಳ್ಳಲು ಸಾಧ್ಯವಿಲ್ಲದಂತಾಗಿ ಅವರು ಹೋಗುವವರೆಗೂ ಕಾಯಬೇಕಾಗಿತ್ತು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಐವತ್ನಾಲ್ಕನೆಯ ಕಂತು ನಿಮ್ಮ ಓದಿಗೆ

Read More

ಕ್ವಾಲಿಫಿಕೇಷನ್ ಇದ್ದ ಮಾತ್ರಕ್ಕೆ ವ್ಯಕ್ತಿ ಶ್ರೇಷ್ಠವೆಂದು ಅಲ್ಲ!!: ಬಸವನಗೌಡ ಹೆಬ್ಬಳಗೆರೆ ಸರಣಿ

ಹೆಚ್ಚೆಚ್ಚು ಓದಿದಂತೆ ಶಿಕ್ಷಣವು ನಮ್ಮಲ್ಲಿ ಉದಾರತೆಯನ್ನು ಬೆಳೆಸಬೇಕಿತ್ತು. ಹೃದಯ ವೈಶಾಲ್ಯತೆಯನ್ನು ಬೆಳೆಸಬೇಕಿತ್ತು. ಎಲ್ಲರೊಡನೆ ಹೊಂದಿಕೊಂಡು ಹೋಗುವ ಗುಣವನ್ನು ಬೆಳೆಸಬೇಕಿತ್ತು. ಆದರೆ ಕ್ವಾಲಿಫಿಕೇಶನ್ ಅನ್ನುವುದು ನಮ್ಮಲ್ಲಿ ಅಹಂಕಾರವನ್ನು ಬೆಳೆಸುತ್ತಿದೆ. ನಮ್ಮಲ್ಲಿ ಸಂಕುಚಿತತೆಯನ್ನು ಮೂಡಿಸುತ್ತಿದೆ. ಹೊಂದಾಣಿಕೆಯ ಕೊರತೆಯನ್ನು ಮೂಡಿಸುತ್ತಿದೆ. ಕೆಲವರು ಈ ಮನೋಭಾವ ತೋರುವುದಿಲ್ಲವಾದರೂ ಬಹುತೇಕರು ಇದೇ ರೀತಿಯ ಮನೋಭಾವ ತೋರುತ್ತಾರೆಂಬುದು ನನ್ನ ಅನುಭವಕ್ಕೆ ಬಂದಿದೆ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಐವತ್ಮೂರನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ