Advertisement

Tag: ಬಸವನಗೌಡ ಹೆಬ್ಬಳಗೆರೆ

ಅನ್ನ, ನೀರಿಗೇಕೆ ಅನಾದರ ತೋರುವಿರಿ?: ಬಸವನಗೌಡ ಹೆಬ್ಬಳಗೆರೆ ಸರಣಿ

ದಿನಪತ್ರಿಕೆಯಲ್ಲಿ ಪ್ರಕಟವಾದ ಮಾಹಿತಿಯೊಂದರ ಪ್ರಕಾರ 2019 ರಲ್ಲಿ ಜಗತ್ತಿನಾದ್ಯಂತ 93.1 ಕೋಟಿ ಟನ್‌ನಷ್ಟು ಆಹಾರ ಪೋಲಾಗಿದೆ! ಇದೇ ವರ್ಷ 69 ಕೋಟಿ ಜನರು ಆಹಾರದ ಕೊರತೆ ಎದುರಿಸಿದ್ದಾರೆ!! ಇದರಲ್ಲಿ ಮನೆಗಳಲ್ಲಿ ಪೋಲಾಗುವ ಆಹಾರದ ಪ್ರಮಾಣವೇ ಹೆಚ್ಚು ಎಂಬ ವರದಿಯಿದೆ. ಭಾರತದಲ್ಲಿ ಮನೆಗಳಲ್ಲಿ ಪೋಲಾಗುವ ಆಹಾರದ ಪ್ರಮಾಣ ವಾರ್ಷಿಕ ತಲಾವಾರು 50 ಕೆಜಿಯಷ್ಟು ಎಂದು ಅಂದಾಜಿಸಲಾಗಿದೆಯಂತೆ!!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಅತಿ ವಿನಯಂ ಧೂರ್ತ ಲಕ್ಷಣಂ!!: ಬಸವನಗೌಡ ಹೆಬ್ಬಳಗೆರೆ ಸರಣಿ

ನೇರವಾದಿಯಾಗಿದ್ದರಿಂದ ನನಗೆ ಟಿಸಿಹೆಚ್ ನಲ್ಲಿ ನಮ್ಮಂತಹ ಕೆಲವರನ್ನು ಹತ್ತಿಕ್ಕುವ ಪ್ರಯತ್ನವು ನಡೆಯುತ್ತಿತ್ತೇ ವಿನಃ ಯಾರೂ ನಮಗೆ ಸಪೋರ್ಟ್ ಮಾಡಲಿಲ್ಲ. ಈ ರೀತಿಯ ಸ್ಥಿತಿ ಇದ್ದುದರಿಂದ ನಾವು ಯಾವುದೇ ಅಸೈನ್ ಮೆಂಟ್ ಅನ್ನು ಕಾಲಕಾಲಕ್ಕೆ ಬರೆದು ಕೊಡುತ್ತಿದ್ದೆವು. ಇನ್ನು ಪ್ರಾಕ್ಟೀಸ್ ಟೀಚಿಂಗ್‌ನಲ್ಲಿ ಒಂದು ಸಣ್ಣ ತಪ್ಪಿಗೂ ಅವಕಾಶ ಮಾಡಿಕೊಡ್ತಾ ಇರಲಿಲ್ಲ. ಆಗ ನಾವು ಪ್ರಾಕ್ಟಿಕಲ್ ಕ್ಲಾಸ್ ಕೊಡಬೇಕಾಗಿತ್ತು. ಅದಕ್ಕೆ ಒಂದು ಅವಧಿಯ ಪಾಠಕ್ಕೆ 50 ಅಂಕಗಳು ಇದ್ದವು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ನಲವತ್ತೆರಡನೆಯ ಕಂತು ನಿಮ್ಮ ಓದಿಗೆ

Read More

ಆರಿಸಬಹುದು ಕಿಚ್ಚು; ಆರಿಸುವುದ್ಹೇಗೆ ಇದ್ದರೆ ಹೊಟ್ಟೆಕಿಚ್ಚು?!: ಬಸವನಗೌಡ ಹೆಬ್ಬಳಗೆರೆ ಸರಣಿ

ರೈತ ‘ನಾನು ಬಿತ್ತುವ ಬೀಜಗಳನ್ನೇ ನನ್ನ ನೆರೆಹೊರೆಯ ಹೊಲದ ರೈತರಿಗೂ ನೀಡುತ್ತೇನೆ’ ಎಂದು ಹೇಳಿದನಂತೆ! ಆಗ ಅವರಿಗೆ ಇನ್ನೂ ಅಚ್ಚರಿಯಾಗಿ ‘ನೀವು ನಿಮ್ಮ ಸ್ಪರ್ಧಾಳುಗಳಿಗೆ ಕೊಟ್ಟರೆ ನೀವೇ ನಿಮ್ಮ ಸ್ಪರ್ಧಿಯನ್ನು ಬೆಳೆಸಿದಂತಾಗುವುದಿಲ್ಲವೇ?’ ಎಂದಾಗ ಆ ರೈತ ‘ನಾನು ಬಿತ್ತುವ ಬೀಜಗಳನ್ನೇ ಅಕ್ಕಪಕ್ಕದವರಿಗೂ ಕೊಟ್ಟರೆ ಫಲ ಬಿಡುವ ಸಮಯದಲ್ಲಿ ಪರಾಗಸ್ಪರ್ಶದಿಂದಾಗಿ ನನ್ನ ಹೊಲದ ಫಲವು ಉತ್ತಮವಾಗುತ್ತದೆ. ಒಂದೊಮ್ಮೆ ಅಕ್ಕಪಕ್ಕದ ಹೊಲದವರು ಕಮ್ಮಿ ಗುಣಮಟ್ಟವಿರುವ ಬೀಜಗಳನ್ನು ಬಿತ್ತಿದರೆ ಫಲ ಬಿಡುವ ಸಮಯದಲ್ಲಿ ಆ ಹೊಲದ ಪರಾಗರೇಣುಗಳಿಂದ ನನ್ನ ಹೊಲದ ಫಲವೂ ಕಮ್ಮಿಯಾಗುತ್ತದೆ!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಗೌರವ ಹೆಚ್ಚಿಸುವ ಬಟ್ಟೆ; ಚೆನ್ನಾಗಿಲ್ಲದಿರೆ ಆಗಬಹುದು ಬದುಕು ಮೂರಾಬಟ್ಟೆ!!: ಬಸವನಗೌಡ ಹೆಬ್ಬಳಗೆರೆ ಸರಣಿ

ನಮ್ಮ ವ್ಯಕ್ತಿತ್ವ, ಗುಣ ಮುಖ್ಯವೇ ಹೊರತು, ಹೊರಗೆ ಧರಿಸಿರುವ ದಿರಿಸಲ್ಲ ಎಂದು ಹೇಳುವ ಮಾತು ಕೇವಲ ಹೇಳಲಿಕ್ಕೆ ಮಾತ್ರ ಚೆಂದ ಅಷ್ಟೇ. ಇಂದಿನ ಯುಗದಲ್ಲಿ ಬಾಹ್ಯ ಆಕರ್ಷಣೆಯೇ ಮುಖ್ಯ!! ಆಸ್ತಿಯಾಗಿ ಕಚ್ಚೆ ಹರಿವೆಯಷ್ಟು ಹೊಲ ಇಲ್ದಿದ್ರೂ ಒಳ್ಳೇ ಮನೆ, ಕಾರು ಇದ್ದರೆ ಸಂಬಂಧ ಮಾಡೋಕೆ ಜನರು ಬರ್ತಾರೆ!! ಇಲ್ದಿದ್ರೆ ಅವರ ಕಥೆ ಅಷ್ಟೇ!! ಆದರೂ ಬ್ರಿಟಿಷರಿಂದ ‘ಅರೆ ಬೆತ್ತಲೆ ಫಕೀರ’ ಎಂದು ಕರೆಸಿಕೊಂಡು ಸ್ವಾತಂತ್ರ್ಯ ಚಳುವಳಿಯಲ್ಲಿ ಭಾಗವಹಿಸಿ ಇಂದಿಗೂ ಜನಮಾನಸದಲ್ಲಿ ಉಳಿದಿರುವ ಮಹಾತ್ಮ ಗಾಂಧೀಜಿಯವರು ಧರಿಸುತ್ತಿದ್ದುದು ಸಾಮಾನ್ಯ ಅರೆಬರೆ ಉಡುಪನ್ನೇ!!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಅಲಾರಾಂ ಹಾಗೂ ಓದುವ ವೇಳೆಯ ಕುರಿತು ಒಂದಷ್ಟು ಮಾತು… ಬಸವನಗೌಡ ಹೆಬ್ಬಳಗೆರೆ ಸರಣಿ

ನಮ್ಮಜ್ಜನ ಮನೆಯಲ್ಲಿ ಇದ್ದಾಗ, ನಮ್ಮಜ್ಜ ನನ್ನನ್ನು ಬೆಳಗ್ಗೆ ಏಳಿಸುವ ಅಲಾರಾಂನಂತೆ ಕೆಲಸ ಮಾಡುತ್ತಿದ್ದರು. ಆದರೆ ಯಾವಾಗ ಹಾಸ್ಟೆಲ್ ಸೇರಿದೆನೋ ಅಲ್ಲಿ ಹಾಸ್ಟೆಲ್ ವಾರ್ಡನ್ ಪೀಪಿಯನ್ನು ಊದಿ ಏಳಿಸುತ್ತಿದ್ದರು. ಆಗ ನಮ್ಮ ಮಲ್ಲಾಡಿಹಳ್ಳಿಯ ಹಾಸ್ಟೆಲ್ಲಿನಲ್ಲಿ ತುಂಬಾ ಶಿಸ್ತು ಇತ್ತು. ನಾವು ಕಡ್ಡಾಯವಾಗಿ ಬೆಳಗ್ಗೆ 5 ಕ್ಕೆ ಏಳಲೇಬೇಕಾಗಿತ್ತು. ಏಳದಿದ್ದರೆ ಕೋಲು ಹಿಡಿದುಕೊಂಡು ಬರುತ್ತಿದ್ದರು. ಒಂದೊಮ್ಮೆ ಮಲಗಿರುವುದನ್ನು ಕಂಡರೆ ಕುಂಡೆಯ ಮೇಲೆ ಬಾರಿಸುತ್ತಾ ಹೋಗುತ್ತಿದ್ದರು, ಬೆಳಗ್ಗೆ ಎದ್ದು ಕೆಲವರು ಓದುತ್ತಾ ಕುಳಿತರೆ ಕೆಲವರು ಬ್ರಷ್ ಮಾಡಲು ಹೋಗುತ್ತಿದ್ದರು. ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ