Advertisement

Tag: ಬೆಂಗಳೂರು

ತಮ್ಮ ಬೆಂಗಳೂರಿಗೆ ಬಂದ..: ವಿನಾಯಕ ಅರಳಸುರಳಿ ಲಲಿತ ಪ್ರಬಂಧ

ಕೊಂಚ ಸ್ಥಿತಿವಂತರಾಗಿದ್ದ ಪಕ್ಕದ ಮನೆಯ ಅಣ್ಣನ ಮಗನ ಬರ್ತಡೇ ಪಾರ್ಟಿಯಲ್ಲಿ ತಿನ್ನಲು ಸಿಕ್ಕ ಚಿಕ್ಕ ಕೇಕ್‌ನ ತುಣುಕನ್ನೇ ಸ್ವರ್ಗ ಲೋಕದ ತಿನಿಸೆಂಬಂತೆ ಅದೊಂದು ದಿನ ತಿಂದಿದ್ದೆವು. ಇನ್ನೊಂದು ಪೀಸ್ ಬೇಕು ಎಂಬ ಆಸೆಯನ್ನು ಬಾಯಲ್ಲೇ ಇಟ್ಟುಕೊಂಡು ಕೈ ತೊಳೆದಿದ್ದೆವು. ಯಾರೋ ತುಂಡೊಂದನ್ನು ಬೇಡವೆಂದು ತಟ್ಟೆಯಲ್ಲೇ ಬಿಟ್ಟಾಗ ಅದು ನಮಗೆ ಸಿಗುವುದೇನೋ ಎಂದು ಆಸೆಯಿಂದ ಕಾದಿದ್ದೆವು. ಇಂತಿಪ್ಪ ಅಪೂರ್ಣ ಬಯಕೆಗಳ ಬಾಲ್ಯವನ್ನೇ ಕಳೆದ ತಮ್ಮನಿಗೆ ಈಗಲೂ ಈ ಪಟ್ಟಣದ ವಿಶೇಷ ತಿಂಡಿಗಳ ಬಗ್ಗೆ ಆಸೆಯಿದ್ದರೆ ಅದರಲ್ಲಿ ಯಾವ ತಪ್ಪಾಗಲೀ, ಅತಿಯಾಸೆಯಾಗಲೀ ನನಗೆ ಕಾಣಲಿಲ್ಲ.
ವಿನಾಯಕ ಅರಳಸುರಳಿ ಬರೆದ ಲಲಿತ ಪ್ರಬಂಧ ನಿಮ್ಮ ಓದಿಗೆ

Read More

ದುಡ್ಡು ಬರ್ಲಿ ಐಸಾ… ಇನ್ನೂ ಕೊಡಿ ಐಸಾ…!: ಎಚ್. ಗೋಪಾಲಕೃಷ್ಣ ಸರಣಿ

ಅದರ ಮಾರನೇ ದಿವಸ ಹೋಗಿ ಭರಮಪ್ಪನ ಎದುರು ನಿಂತೆ. ಒಂದು ಗಂಟೆ ಕಾದೆ. ನನ್ನ ಕಡೆ ತಿರುಗಿ ನೋಡಲು ಸಹ ಅವರಿಗೆ ಪುರುಸೊತ್ತು ಇಲ್ಲರ. ಐದನೇ ದಿವಸವೂ ಇದೇ ರಿಪೀಟ್ ಆಯ್ತು. ಆರನೇ ದಿವಸ ಭಾನುವಾರ. ತೆಪ್ಪಗೆ ಮನೇಲೆ ಇದ್ದು ನನ್ನ ಅದೃಷ್ಟಕ್ಕೆ ಗಂಟೆ ಗಂಟೆಗೂ ಕೋಲಿನಿಂದ ಬಾರಿಸುತ್ತಾ ಕಳೆದೆ. ಸೋಮವಾರ ಬೆಳಿಗ್ಗೆ ಮತ್ತೆ ಕೆಇಬಿ ಆಫೀಸಿಗೆ ದಂಡ ಯಾತ್ರೆ ಮಾಡಿದೆ. ಜಗನ್ನಾಥ, ಅದೇ ಲೈನ್ ಮ್ಯಾನ್ ದಾರೀಲಿ ಸಿಕ್ಕಿದ. ನನ್ನನ್ನು ನೋಡಿ ಅವನ ಲೂನಾ ನಿಲ್ಲಿಸಿದ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಅರವತ್ತೈದನೆಯ ಕಂತು

Read More

ಉಲ್ಟಾಪಲ್ಟಾ ಆದ ನನ್ನ ಪ್ಲಾನು! : ಎಚ್. ಗೋಪಾಲಕೃಷ್ಣ ಸರಣಿ

ಅವರು ಎಲೆಕ್ಟ್ರಿಕ್ ಕಾಂಟ್ರಾಕ್ಟ್ ಮಾಡ್ತಾ ಇದ್ದರು, ಪಾರ್ಟ್ ಟೈಮ್ ಆಗಿ. ನೀನೂ ಇದನ್ನೇ ಮಾಡು, ದುಡ್ಡು ಚೆನ್ನಾಗಿ ಸಿಗುತ್ತೆ, ಹೇಗಿದ್ದರೂ ನಿಮ್ಮದು ಹೊಸಾ ಏರಿಯ, ಬೇಕಾದಷ್ಟು ಜನ ಮನೆ ಕಟ್ಟುತ್ತಾರೆ, ನೀನೇ ಕಾಂಟ್ರಾಕ್ಟ್ ಮಾಡಬಹುದು ಅಂತ ಹುರಿದುಂಬಿಸಿ ಏಣಿ ಹತ್ತಿಸಿದ್ದ. ಪಾರ್ಟ್ ಟೈಮ್ ಕೆಲಸ, ಅದೂ ಚೆನ್ನಾಗಿ ದುಡ್ಡು ಮಾಡಬಹುದು ಅನ್ನುವ ಹಾಗಿದ್ದರೆ ಒಂದು ಕೈ ನೋಡೇ ಬಿಡೋಣ ಅನ್ನುವ ಉತ್ಸಾಹ ತುಂಬಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಟು ಡು ಲಿಸ್ಟ್‌ ಹಾಗೂ ರದ್ದಿ ಹಾಳೆಯ ಕತೆಗಳು….: ಎಚ್‌. ಗೋಪಾಲಕೃಷ್ಣ ಸರಣಿ

ನನ್ನ ಅನುಭವಗಳನ್ನು ಕೊಂಚ, ಕೊಂಚ ಏನೂ ತುಂಬಾ ಹೆಚ್ಚಾಗಿಯೇ ಉತ್ಪ್ರೇಕ್ಷಿಸಿ ಬುರುಡೆ ಅಂದರೆ ಸಖತ್ ಬುರುಡೆ ಬಿಡುತ್ತಿದ್ದೆ. ಈ ಬುರುಡೆಯಲ್ಲಿ ಬಹಳ ಮುಖ್ಯವಾಗಿ ಬ್ಯಾಂಕ್ ಡೈರೆಕ್ಟರ್ ಜತೆ ಇಂಟರ್ವ್ಯೂ ಮಾಡಿಸಿಕೊಂಡು ಸಾಲವನ್ನು ಮೂವತ್ತು ಸಾವಿರದಿಂದ ಮೂವತ್ತ ಮೂರು ಸಾವಿರ ಹೆಚ್ಚಿಸಿದ್ದು, ಬೇವಿನ ಮರದ ಹಳೇ ಬಾಗಿಲು ಕೊಂಡು ಟೋಪಿ ಬಿದ್ದದ್ದು, ಕುಬೇರಪ್ಪ ಹಳದಿ ಇಂಗಿನ ಬ್ಯಾಗ್‌ನಲ್ಲಿ ಕೇಜಿ ಅಷ್ಟು ಚಿನ್ನ ತುಂಬಿಕೊಂಡು ಯಶವಂತ ಪುರಕ್ಕೆ ನಡೆದುಕೊಂಡು ಹೋಗಿ ಚಿನ್ನ ಮಾರಿದ್ದೂ, ನನ್ನ ಹತ್ತಿರ ಊಹೂಂ ನನ್ನ ಹತ್ತಿರ ಅಲ್ಲ, ನನ್ನಾಕೆ ಹತ್ತಿರ ಮುಕ್ಕಾಲು ಗ್ರಾಮ್‌ನ ತಾಳಿ ಇರೋದು…. ಇವೆಲ್ಲಾ ಸೇರಿರುತ್ತಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಕುಸಿದ ನೆಲದ ಕೆಳಗಿದ್ದ ಅದೃಷ್ಟ: ಎಚ್. ಗೋಪಾಲಕೃಷ್ಣ ಸರಣಿ

ಇಂದಿನವರೆಗೆ ಸುತ್ತ ಪರಿಸರ ಹೀಗಿರಬೇಕಾದರೆ ಚಾವಣಿಯ ಮೇಲೆ ಜಗ್ಗದೆಯೇ ಕುಗ್ಗದೆಯೇ ಹಿಗ್ಗಿ ಹಿಗ್ಗಿ ನಡೆ ಮುಂದೆ ಮಾಡುತ್ತಿದ್ದ ನಾನು ಎಲ್ಲೋ ಕಾಲು ಇಟ್ಟಿದ್ದೆ ಅಂತ ಕಾಣುತ್ತದೆ. ಏಕ್ ದಂ ಡಿವಿಜಿ ಪ್ರತ್ಯಕ್ಷ ಆದರು. ಪದ ಕುಸಿಯೆ ನೆಲವಿಹುದು… ಅಂತ ಅವರು ತಾನೇ ಹೇಳಿದ್ದು? ಕಾಲು ಕುಸಿಯಿತು ಮತ್ತು ನೆಲ ಸಹ ಇತ್ತು. ಆದರೆ ಅದು ಕೆಳಗೆ ಇದ್ದದ್ದು. ನಾನು ಸುಮಾರು ಹತ್ತು ಹನ್ನೆರೆಡು ಅಡಿ ಮೇಲಿಂದ ನೆಲಕ್ಕೆ ಕುಸಿದೆ…
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಅರವತ್ತೊಂದನೆಯ ಕಂತು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ