Advertisement

Tag: ಮಹಾಲಕ್ಷ್ಮೀ. ಕೆ. ಎನ್.

ಹಿಡಿಯಷ್ಟು ಪ್ರೀತಿ ಕಡಲಿನಷ್ಟಾಯ್ತು: ಮಹಾಲಕ್ಷ್ಮೀ. ಕೆ. ಎನ್. ಬರಹ

ಮೋಡ ಕಪ್ಪಾದಾಗ ಮಳೆ ಬಂದೇಬರುತ್ತೆ ಅನ್ನೋ ಮುನ್ಸೂಚನೆ ಇರುತ್ತೆ, ಕಾಲೇಜಿನಲ್ಲಿ ಸ್ವಲ್ಪ ಮೈ ಬೆಚ್ಚಗಾದಾಗ ಮನೆಗೆ ಹೋಗುವಷ್ಟರಲ್ಲಿ ಇವತ್ತು ಜ್ವರ ಬಂದೇ ಬರುತ್ತೆ ಅಂತ ಗೊತ್ತಾಗುತ್ತೆ, ಇವತ್ತು ರೆಕಾರ್ಡ್ ಬುಕ್ ಮರೆತುಬಂದಿದ್ದೀನಿ ಲೆಕ್ಚರರ್ ಹತ್ತಿರ ಬೈಗುಳಗಳು ಕಾದಿದೆ ಅಂತ ಗೊತ್ತಾಗುತ್ತೆ, ಆದರೆ ಪ್ರೀತಿ ಹುಟ್ಟುವ ಘಳಿಗೆ ಯಾರಿಗೆ ತಾನೇ ತಿಳಿದೀತು? ಕೆಲವೊಮ್ಮೆ ಮೆಚ್ಚುಗೆಯಲ್ಲಿ ಮುಗುಳ್ನಕ್ಕು ಪ್ರಾರಂಭವೇ ಇಲ್ಲದೆಯೇ ಅಲ್ಲಿಗೇ ಮುಕ್ತಾಯವಾಗಬಹುದು.
ಪ್ರೇಮಿಗಳ ದಿನಕ್ಕೆ ಮಹಾಲಕ್ಷ್ಮೀ ಕೆ. ಎನ್. ಬರಹ ನಿಮ್ಮ ಓದಿಗೆ

Read More

“ನಾವುಗಳಿಲ್ಲಿ ಪರಸ್ಪರರು”: ಮಹಾಲಕ್ಷ್ಮೀ ಕೆ. ಎನ್. ಬರಹ

ಇಳೆಗೆ ತಂಪು ಬೇಕು ವರುಣನಿಗೆ ಕಾಯ್ತಾಳೆ. ಅವನಿಗೆ ನೆಲೆಬೇಕು ಇವಳನ್ನೇ ಅರಸುತ್ತಾನೆ. “ಇವರಿಬ್ಬರದ್ದೂ ಇಲ್ಲಿ ಪರಸ್ಪರತೆ”. ಇದ್ದಕ್ಕಿದ್ದಂತೆ ಮೋಡ ಹೆಪ್ಪುಗಟ್ಟುತ್ತೆ, ಕಪ್ಪುಗಾಗುತ್ತೆ, ಕತ್ತಲಿನಂತಾಗುತ್ತೆ, ಎಲ್ಲವೂ ನಿಶ್ಶಬ್ಧವಾಗುತ್ತೆ, ಹಕ್ಕಿ ಹಿಂಡು ಗೂಡನ್ನರಸಿ ಚಿಲಿಪಿಲಿಗುಟ್ಟುತ್ತಾ ಬರುತ್ವೆ, ಜೋರುಗಾಳಿ ನಿಲ್ಲುತ್ತೆ, ಎಲ್ಲರೂ- ಎಲ್ಲವೂ ಬಾನಿಗೆ ಮುಖಮಾಡಿ ನೋಡುವಷ್ಟರಲ್ಲಿ ಧೋ…. ಅಂತ ಜಡಿ ಮಳೆ ಬಂದೇಬಿಡುತ್ತೆ.
ಮಹಾಲಕ್ಷ್ಮೀ ಕೆ. ಎನ್. ಬರಹ ನಿಮ್ಮ ಓದಿಗೆ

Read More

ಹೇಗೆ ಮಾತಾಡಲಿ ನಿನ್ನೊಂದಿಗೆ?: ಮಹಾಲಕ್ಷ್ಮೀ ಕೆ. ಎನ್. ಬರಹ

ಮತ್ತೊಂದು ದಿನ ಕಾಲೇಜಿನ ಎದುರಿಗಿರುವ ಜೆರಾಕ್ಸ್ ಅಂಗಡಿ ಮುಂದೆ ಹೋಗ್ತಿದ್ದ. ಅರೇ,… ಅವನೇ ಅಲ್ವಾ… ಹೀಗೆ ಒಂದೆರಡು ಸಲ ಕಾಲೇಜಿನಲ್ಲಿ ನೋಡಿದ್ದೆ. ಒಂದು ಶನಿವಾರ ಕಾಲೇಜಿನಲ್ಲಿ ರೆಫರೆನ್ಸ್ ರೂಂ ಗೆ ಹೋಗಿ ಕೂತೆ. ನಾನು ಯಾರನ್ನೂ ಗಮನಿಸಿರಲಿಲ್ಲ, ಅಲ್ಲಿ ಯಾರೂ ಇರಲಿಲ್ಲ ಕೂಡ, ಸುಮ್ಮನೆ ಪಕ್ಕಕ್ಕೆ ತಿರುಗಿದೆ. ಅರೇ… ಮತ್ತೆ ಅವನೇ ಅಲ್ವಾ… ಇದ್ದವರಿಬ್ಬರಲ್ಲಿ ನಾನು ಮತ್ತೆ ಆ ಕಡೆ ತುದಿಯಲ್ಲಿ ಅವನು. ನ್ಯೂಸ್ ಪೇಪರ್, ವಿದ್ಯಾರ್ಥಿ ಮಿತ್ರ ಓದ್ತಿದ್ದಿರಬಹುದು. ಅವನನ್ನ ಮಾತನಾಡಿಸುವ ಮನಸ್ಸಿದೆ. ಆದರೆ ಹೇಗೆ ಮಾತು ಪ್ರಾರಂಭಿಸಲಿ? ಗೊತ್ತಾಗ್ತಿಲ್ಲ.
ಮಹಾಲಕ್ಷ್ಮೀ ಕೆ. ಎನ್. ಬರಹ ನಿಮ್ಮ ಓದಿಗೆ

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ