Advertisement

Tag: ಮಾರುತಿ ಗೋಪಿಕುಂಟೆ

“ಆ ಸಾವು ಮತ್ತು ಹಸಿವು”: ಮಾರುತಿ ಗೋಪಿಕುಂಟೆ ಸರಣಿ

ಅಂದು ಮಧ್ಯಾಹ್ನದ ಉಪ್ಪಿಟ್ಟು ತರುವವನು ಮಧ್ಯಾಹ್ನ ಒಂದುಗಂಟೆಯಾದರೂ ಬಂದಿರಲಿಲ್ಲ. ಈಗಿನಂತೆ ಅವಾಗ ಯಾವ ಫೋನು ಸಹ ಇರಲಿಲ್ಲ. ಹಾಗಾಗಿ ಅವನು ಯಾಕೆ ಬರಲಿಲ್ಲ ಎಂದು ತಿಳಿದುಕೊಳ್ಳುವುದು ಹೇಗೆ ಎಂದು, ಹಿರಿಯ ವಿದ್ಯಾರ್ಥಿಯೊಬ್ಬನನ್ನು ಸೈಕಲ್ಲಿನಲ್ಲಿ ಆತ ಬರುವ ಹಾದಿಗೆ ಹೋಗಿ ನೋಡಿಕೊಂಡು ಬರುವಂತೆ ಕಳುಹಿಸಲಾಯ್ತು. ಆದರೆ ರಸ್ತೆಯಲ್ಲಿ ಆತನ ಸುಳಿವಿರಲಿಲ್ಲ. ಆದರಲ್ಲಿ ಮಕ್ಕಳು ಮಧ್ಯಾಹ್ನದ ಫಲಹಾರಕ್ಕಾಗಿ ಕಾದಿದ್ದರು. ಕೆಲವರ ಮುಖಗಳು ಬಾಡಿಹೋಗಿದ್ದವು. ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಎಂಟನೆಯ ಕಂತು ನಿಮ್ಮ ಓದಿಗೆ

Read More

ಮಾವಿನ ತೋಪಿನ ಎರಡು ಕತೆಗಳು: ಮಾರುತಿ ಗೋಪಿಕುಂಟೆ ಸರಣಿ

ಅವನು ಓಡುವುದರಲ್ಲಿ ಯಾವಾಗಲೂ ಪ್ರಥಮ.. ಹಾಗಾಗಿ ಅವನೇನೊ ತಪ್ಪಿಸಿಕೊಂಡ. ಮರವನ್ನು ಹತ್ತುವುದರಲ್ಲಿ ಅಂತಹ ಅನುಭವವೇನು ಇಲ್ಲದ ನಾನು ನಿಧಾನವಾಗಿ ಮರ ಇಳಿಯುವುದರಲ್ಲಿ ಸಿಕ್ತಿಮ್ಮಜ್ಜ ಹತ್ತಿರವಾಗಿದ್ದ. ಅವನು ಹತ್ತಿರ ಬರುವುದು ಕಂಡದ್ದೇ ಎದೆಬಡಿತ ಜೋರಾಗಿತ್ತು. ಕೈ ಕಾಲುಗಳು ನಡುಗಲು ಪ್ರಾರಂಭಿಸಿದ್ದವು. ನನಗೆ ಬೇರೆ ದಾರಿ ಇರಲಿಲ್ಲ. ನಾನು ಮರದಿಂದ ಇಳಿಯಲಿಲ್ಲ, ಬದಲು ಅದರ ಮಧ್ಯದಲ್ಲಿ ಅವಿತುಕೊಂಡೆ.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಏಳನೆಯ ಕಂತು ನಿಮ್ಮ ಓದಿಗೆ

Read More

ಅಪ್ಪನ ಅಲ್ಸರ್ ಖಾಯಿಲೆ ಮತ್ತು ಅಂಕಗಳ ವ್ಯಾಮೋಹ

ಈಗಿನಂತೆ ಮೊಬೈಲ್ ಕಾಲವೂ ಅಲ್ಲ. ಊರಿಗೆ ಲ್ಯಾಂಡ್ ಫೋನ್‌ ಸಹ ಇರಲಿಲ್ಲ. ಅಪ್ಪನ ಜೊತೆಯಲ್ಲಿ ಹೋಗಿದ್ದ ಕೆಲವರು ಬೆಳಿಗ್ಗೆ ಬಂದು ಹೇಳಿದಾಗಲೆ ನಮಗೆ ತಿಳಿದಿದ್ದು. ಅಪ್ಪನಿಗೆ ‘ಅಲ್ಸರ್’ ಆಗಿದೆ ವಿಪರೀತ ಹಾಲ್ಕೋಹಾಲ್ ಸೇವನೆಯಿಂದ ಹೀಗಾಗಿದೆ ಎಂದು. ಬೆಳಗ್ಗೆಯಷ್ಟರಲ್ಲಿ ಶಸ್ತ್ರಚಿಕಿತ್ಸೆ ಮುಗಿದು, ಯಶಸ್ವಿಯಾಗಿತ್ತು. ಜೀವಕ್ಕೆ ಅಪಾಯವಿರಲಿಲ್ಲ. ಆದರೆ ಮೂರು ತಿಂಗಳು ಆಸ್ಪತ್ರೆಯಲ್ಲಿಯೇ ಇರಬೇಕು ಎಂಬ ವಿಷಯವನ್ನು ತಿಳಿಸಿದ್ದರು. ರಾತ್ರಿ ಇಡೀ ನಿದ್ದೆಯಿಲ್ಲದೆ ಆತಂಕದಿಂದಲೇ ಕಳೆದಿದ್ದ ನಾವೆಲ್ಲ ನಿಟ್ಟುಸಿರು ಬಿಟ್ಟಿದ್ದೆವು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಆರನೆಯ ಕಂತು ನಿಮ್ಮ ಓದಿಗೆ

Read More

ಮಾಡಿದ ತಪ್ಪುಗಳು ಮತ್ತು ಅಪ್ಪನ ಶಿಕ್ಷೆ…

ಇಬ್ಬರ ನಾಗಾಲೋಟದ ಓಟ ರೇಸಿಗೆ ಬಿದ್ದಂತೆ ಸಾಗುತ್ತಿದೆ. ನಾನು ಮುಂದೆ ಅಪ್ಪ ಹಿಂದೆ. ಓಡಿದೆ ಓಡಿದೆ….. ಅಪ್ಪನೂ ನಿಲ್ಲಿಸಲಿಲ್ಲ… ಊರ ಹೊರಭಾಗದ ರಸ್ತೆಯನ್ನು ಒಂದು ಸುತ್ತು ಸುತ್ತಿಸಿದೆ. ಅಪ್ಪ ಸುಸ್ತಾದ ಅಂತ ಕಾಣುತ್ತದೆ. ಊರಿಗೆ ಹತ್ತಿರವಾಗಿ ನಮ್ಮ ಮನೆಗೆ ಹೋಗುವ ದಾರಿಯಲ್ಲಿ ಜೋಳದ ಹೊಲ ಇತ್ತು ಅದು ಗುಂಪು ಗುಂಪಾಗಿತ್ತು. “ನಿಲ್ಲು ಓಡ್ಬೇಡ… ಓಡ್ಬೇಡ…” ಅಪ್ಪ ಕೂಗುತ್ತಲೆ ಇದ್ದ. ಅದಕ್ಕಾಗಿ ನಾನು ಓಡುವುದನ್ನು ನಿಲ್ಲಿಸಲಿಲ್ಲ.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಐದನೆಯ ಕಂತು ನಿಮ್ಮ ಓದಿಗೆ

Read More

ಗಂಟಲೊಳಗಿನ ನಾಣ್ಯ ಮತ್ತು ಆಸೆಯ ಕಣ್ಣು

ಹಟ್ಟಿಯ ಅಂಗಳಕ್ಕೆ ಬಂದವನೆ ಸಡನ್ನಾಗಿ ನಿಂತುಕೊಂಡೆ. ಅಪ್ಪ ಎದುರಿಗೆ ನಿಂತಿದ್ದಾನೆ. ಭೀಮನ ಗದೆಯಂತ ಕೋಲು ಹಿಡಿದು ತೇಪೆಯ ಅಂಗಿಯ ತೊಟ್ಟು.. ಸಿಟ್ಟಿಗೆ ಮುಖ ನಡುಗುತ್ತಿದೆ… ಕೈಯಲ್ಲಿನ ಕೋಲು ಕುಣಿಯುತ್ತಿದೆ. ನನಗೆ ಎಲ್ಲವೂ ಅರ್ಥವಾಗಿತ್ತು. ಅಪ್ಪನಿಗೆ ನಾನು ಹಣ ತೆಗೆದುಕೊಂಡಿದ್ದು ಗೊತ್ತಾಗಿದೆ. ಪಕ್ಕದಲ್ಲಿ ಅಕ್ಕ ನಿಂತಿದ್ದಳು. ಅವಳ ಮುಖದಲ್ಲಿ ನಗು ನೋಡಿ ಅರ್ಥವಾಯಿತು. ಓ.. ನಾನು ಬೆಳಿಗ್ಗೆ ತೆಗೆದುಕೊಳ್ಳುವಾಗ ಇವಳು ನೋಡಿರಬೇಕು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ನಾಲ್ಕನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ