Advertisement

Tag: ಮೊಗಳ್ಳಿ ಗಣೇಶ್

ಒಡಲ ಕುಡಿಯ ಕಿತ್ತುಕೊಂಡವರಿಗೆ ಎಷ್ಟು ಸುಖವೋ

ನಾನಾಗ ಎಷ್ಟು ಪರಿಚಿತ ಆಗಿದ್ದೆ ಎಂದರೆ… ಯಾವತ್ತೂ ಅತ್ತು ಅತ್ತೂ; ಕಣ್ಣೀರ ಬರೆ ಇಳಿದು ಉಳಿದು ಉಳಿದು ಮಚ್ಚೆಯಂತೆ ಕೆನ್ನೆ ಮೇಲೆ ಬರೆಯ ಗುರುತು ಇರುತ್ತಿತ್ತು. ನಾವಾಗ ಮುಖ ತೊಳೆವುದೆಲ್ಲಿತ್ತು. ಕಣ್ಣೀರೇ ಅಂಟಿರುತ್ತಿದ್ದವು. ನನ್ನ ತಾಯ ಸಂಗಡವೇ ನನಗೆ ಸಿಗುತ್ತಿರಲಿಲ್ಲ. ಸದಾ ಯಾವತ್ತೂ ಕಸಮುಸುರೆಯ ಕೆಲಸದ ಜೀತದವಳಂತಿದ್ದಳು. ನನ್ನ್ ತಮ್ಮನ ಅವರು ದತ್ತು ತೆಗೆದುಕೊಂಡು ಹೋದ ನಂತರ ಮತ್ತೂ ಮೆತ್ತಗಾಗಿ ಬಿಟ್ಟಿದ್ದಳು.
ಮೊಗಳ್ಳಿ ಗಣೇಶ್ ಬರೆಯುವ ‘ನನ್ನ ಅನಂತ ಅಸ್ಪೃಶ್ಯ ಆಕಾಶʼ ಸರಣಿಯ ಹತ್ತನೇಯ ಕಂತು.

Read More

ಒಡಲ ಕುಡಿಯ ಕಿತ್ತುಕೊಳ್ಳಲು ತಾಯ ಹಂಗೇ

ಆ ಮಂಗಾಡಳ್ಳಿಯವನ ನಿಮ್ಮಪ್ಪ ಹಿಡಿಸಿ ಕಡಿಸಿಬಿಟ್ಟನಂತಲ್ಲಾ… ಪ್ರಾಣ ಮಿತ್ರಾ ಅಂತಿದ್ದ. ಪ್ರಾಣ ಮಿತ್ರನೇ ಪ್ರಾಣ ತಿಂದು ಬಿಟ್ಟನಲ್ಲಾ… ತಂದೆ ತಾಯಿ ಮಾಡಿದ ಪಾಪ ಮಕ್ಕಳಿಗೆ ಶಾಪವಾಗಿ ಬಡಿಯುತ್ತದಂತೇ… ಯಾರ ತಪ್ಪಿಗೆ ಯಾರ ಶಿಕ್ಷೆಯೋ ನಿನ್ನ ನೋಡಿದರೆ ಅಯ್ಯೋ ಅನಿಸುತ್ತದೆ. ನಿಮ್ಮಪ್ಪನ ಮೇಲಿನ ಸಿಟ್ಟಿಗೆ ನಿಮ್ಮಜ್ಜಿಯೆ ಕತ್ತು ಮುರಿಯಲು ಮುಂದಾಗಿದ್ದಳಂತಲ್ಲಾ… ನಿಮ್ಮಜ್ಜಿಯೇ ನನ್ನ ಜೊತೆ ಹೇಳಿಕೊಂಡು ಕಣ್ಣೀರು ಹಾಕಿದ್ದಳು. ಸಂತೆಗೆ ಹೋದರೆ ನಿಮ್ಮಜ್ಜಿಯ ಮಾತಾಡಿಸೂ.
ಮೊಗಳ್ಳಿ ಗಣೇಶ್ ಬರೆಯುವ ‘ನನ್ನ ಅನಂತ ಅಸ್ಪೃಶ್ಯ ಆಕಾಶʼ ಸರಣಿಯ ಒಂಭತ್ತನೇ ಕಂತು. 

Read More

ದಂಡ ಮೊಂಡರಿಂದ ದೇವರಿಗೆ ದಂಡವೆ

ತಾತ ಎಂದೆ, ಭಂಗವಾದಂತೆ ಎದ್ದುನಿಂತ. ಅವನ ಪರಮಾಪ್ತ ಪ್ರಿಯ ತಿನಿಸು ಎಂದರೆ ಎಲೆ ಅಡಿಕೆ ಹೊಗೆಸೊಪ್ಪು. ಊರವರು ತಾವಾಗಿಯೆ ಅವನಿಗೆ ನೀಡುತ್ತಿದ್ದರು. ಯಾರನ್ನೂ ಕೇಳುತ್ತಿರಲಿಲ್ಲ. ಹಾಗೆ ಕೊಡುವುದು ಗೌರವ ಸೂಚಕವಾಗಿತ್ತು. ಅವನ ಬಳಿ ಬಿಡಿಗಾಸು ಕೂಡ ಇರಲಿಲ್ಲ. ಬರಿಗಾಲ ನಡಿಗೆಯವನು ಅವನು. ಒಮ್ಮೆಯೂ ವಾಹನ ಏರಿ ಕೂತಿದ್ದವನಲ್ಲ. ಹಣದ ಬಗ್ಗೆ ಅಸಹ್ಯ. ಅದನ್ನು ಮುಟ್ಟುತ್ತಿರಲಿಲ್ಲ. ದೊಡ್ಡ ತಾತ ದುಡ್ಡು ಕೊಡಲು ಮುಂದಾದಾಗಲೆಲ್ಲ ವಿಷಾದ ಪಡುತ್ತಿದ್ದ. ನಿರಾಕರಿಸಿದ್ದ.
‘ನನ್ನ ಅನಂತ ಅಸ್ಪೃಶ್ಯ ಆಕಾಶ’ ಸರಣಿಯಲ್ಲಿ ಮೊಗಳ್ಳಿ ಗಣೇಶ್‍ ಬರಹ.

Read More

ಎಂಡದ ಗಡಿಗೆ ಹೊತ್ತ ಸರಸಿಯರು

ಪೆಂಟೆಯ ಸರಸಿಯರು ನನ್ನ ತಾಯಿಯ ಬಗ್ಗೆ ವಿಪರೀತ ಕುತೂಹಲ ತೋರುತ್ತಿದ್ದರು. ‘ಒಮ್ಮೆ ಕರೆದುಕೊಂಡು ಬಾ’ ಎನ್ನುತ್ತಿದ್ದರು.  ಆಕೆ ಹೊಸಿಲು ದಾಟಿ ಬರುವಂತಿರಲಿಲ್ಲ. ತಾಯಿಗೆ ಮನೆಯೇ ಸೆರೆಯಾಗಿತ್ತು. ಹಾಗೆ ಹೊರಗೆ ತಾಯಿ ಹೋಗುವಂತಿದ್ದರೆ ಅಪ್ಪ ತಲೆಕಡಿಯುತ್ತಿದ್ದನೇನೊ. ನನಗೆ ಆ ಹೆಂಗಸರ ಬಗ್ಗೆ ಕೆಡುಕಿರಲಿಲ್ಲ. ಹೊಳೆಯಲ್ಲಿ ಅವರು ಈಜಾಡುತ್ತಿದ್ದರು. ಈಜು ಕಲಿಸಲು ನೀರಿಗಿಳಿಸಿ ಕೈಕಾಲು ಬಡಿಸುತ್ತಿದ್ದರು. ಗತಕಾಲದ ನನ್ನ ಹಳೆಯ ಚಡ್ಡಿ ನಿಲ್ಲುತ್ತಿರಲಿಲ್ಲ. ಅದನ್ನತ್ತ ಬಿಚ್ಚಿ ದಂಡೆಗೆ ಎಸೆಯುತ್ತಿದ್ದರು. ಮೊಗಳ್ಳಿ ಗಣೇಶ್ ಬರೆಯುವ ಆತ್ಮಕತೆ, ‘ನನ್ನ ಅನಂತ ನೀಲಿ ಆಕಾಶ’ ಸರಣಿಯ ಹೊಸ ಬರಹ 

Read More

ಪಾತಕಿಯ ಆರ್ತ ಕರೆಯಲ್ಲಿ ಕರುಣೆಯೇ

ಅಪ್ಪನ ನಡವಳಿಕೆ ನಿಗೂಢವಾಗಿತ್ತು. ಎಲ್ಲೂ ಹೋಗ ಕೂಡದು ಎಂದು ಅವ ಕಟ್ಟಪ್ಪಣೆ ವಿಧಿಸಿದ್ದ. ದುಷ್ಟನ ಸಹವಾಸ ಬೇಡ ಎಂದು ಅಪ್ಪ ನಿರ್ಧರಿಸಿರಬಹುದೇ ಎಂದು ಯೋಚಿಸಿದೆ. ಅನುಮಾನವಾಯಿತು. ಅಪ್ಪ ನನ್ನನ್ನು ಕತ್ತಲೆ ಮನೆಯೊಳಗೆ ಕೂಡಿ ಹಾಕಿದ್ದ. ಪಾತಕಿಯ ಬಗ್ಗೆ ಹತ್ತಾರು ಪ್ರಶ್ನೆ ಕೇಳಿದ್ದ. ಅಪ್ಪ ಕೇಳುತ್ತಿದ್ದ ದಾಟಿಗೆ ಹೆದರಿ ಏನೇನೊ ಹೇಳಿದ್ದೆ. ತಾತನ ಹೋಟೆಲಲ್ಲಿ ಜನ ಗಿಜಿಗುಟ್ಟುತ್ತಿದ್ದ ಸದ್ದು ಕೇಳಿಸುತ್ತಿತ್ತು. ತಾತನಿಗೆ ಮೊದಲು ಈ ಸುದ್ದಿ ತಿಳಿಸಬೇಕಿತ್ತು ಎಂದುಕೊಂಡೆ. ಕೈ ಮೀರಿತ್ತು. ಕತೆಗಾರ ಮೊಗಳ್ಳಿ ಗಣೇಶ್ ಬರೆಯುವ ‘ನನ್ನ ಅನಂತ ಅಸ್ಪೃಶ್ಯ ಆಕಾಶ’ ಸರಣಿಯ ಬರಹ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ