Advertisement

Tag: ಯೋಗೀಂದ್ರ ಮರವಂತೆ

ಮುಸಾಫಿರ್ – ಇ – ಲಂಡನ್

ಸರ್ ಸಯ್ಯದ್ ಅಹ್ಮದ್‌ರ ಬ್ರಿಟಿಷ್ ಒಲವಿನ ಹೊರತಾಗಿ ಭಾರತೀಯ ಮುಸ್ಲಿಂರನ್ನು ಆಧುನೀಕರಣದ ಕಡೆಗೆ ಒಯ್ಯುವ ಅವರ ನಿರಂತರ ಯತ್ನದ ಕಾರಣಕ್ಕೆ “ಆಧುನೀಕರಣದ ಪ್ರವರ್ತಕ” ಎಂದೂ ಅವರನ್ನು ಕರೆದಿದ್ದಾರೆ. ಶ್ರದ್ಧಾವಂತ ಮುಸ್ಲಿಂ ಆಗಿದ್ದರೂ ಧಾರ್ಮಿಕ ಸಾಂಪ್ರದಾಯಿಕತೆ ಸಿದ್ಧಾಂತಗಳ ವಿಮರ್ಶಕರು ವಿರೋಧಿಯೂ ಆಗಿದ್ದರು. ಯೂರೋಪಿನ ವಿಜ್ಞಾನವನ್ನು ಆಧರಿಸಿದ ತಮ್ಮದೇ ಧರ್ಮಶಾಸ್ತ್ರವನ್ನು ರೂಪಿಸಿದ್ದರು. 1870ರಲ್ಲಿ ಆರಂಭಿಸಿದ್ದ “ಮಹಮದೀಯ ಸಮಾಜ ಸುಧಾರಕ” ಎನ್ನುವ ನಿಯತಕಾಲಿಕ ಅವರ ತಿಳಿವು ನೋಟಗಳನ್ನು ತಿಳಿಸುತ್ತದೆ.
ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಯೋಗೀಂದ್ರ ಮರವಂತೆ ಬರಹ

Read More

ಕೊನೆಯ ಸಿಖ್ ದೊರೆಯ ಹತಾಶ ಚರಿತೆ

ತಾಯಿಯಿಂದ ದೂರವಾಗಿ ಕೆಲವು ವರ್ಷಗಳ ನಂತರ, ನೇಪಾಳದಲ್ಲಿ ಆಕೆ ತಲೆಮರೆಸಿಕೊಂಡಿರುವುದು ಗೊತ್ತಾಗಿತ್ತು. ದುಲೀಪ್ ಸಿಂಗ್ ಅಮ್ಮನಿಗೆ ಹಲವು ಪತ್ರಗಳನ್ನು ಬರೆದಿದ್ದ. ನಿರಂತರ ಕೋರಿಕೆಯ ನಂತರ ಕೊಲ್ಕತ್ತಾದಲ್ಲಿ ತಾಯಿ-ಮಗನ ಭೇಟಿಗೆ ವ್ಯವಸ್ಥೆ ಮಾಡಲಾಯಿತು. 13 ವರ್ಷಗಳ ನಂತರ ಕಾಣಸಿಕ್ಕ ಮಗ ನಯವಾಗಿ ಮುಖ ಕ್ಷೌರ ಮಾಡಿಕೊಂಡು “ಜಂಟಲ್ಲ್ಮ್ಯಾನ್” ಆಗಿದ್ದನ್ನು ನೋಡಿ, ಸಿಖ್ ಸಾಮ್ರಾಜ್ಯ ಕಳೆದುಕೊಂಡದ್ದಕ್ಕಿಂತ ಹೆಚ್ಚಿನ ದುಃಖ ಪಂಜಾಬಿ ಅಸ್ಮಿತೆಯನ್ನು ಅಳಿಸಿಕೊಂಡ ಮಗನಿಂದ ಆಯಿತು ಎಂದಿದ್ದಳಂತೆ ಜಿಂದಾ ಕೌರ್.
ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಕೊನೆಯ ಸಿಖ್ ದೊರೆ ದುಲೀಪ್ ಸಿಂಗ್ ಜೀವನದ ಕುರಿತು ಬರೆದಿದ್ದಾರೆ ಯೋಗೀಂದ್ರ ಮರವಂತೆ

Read More

ಉಗಿಬಂಡಿ ಯುಗದ ಫಾರ್ಸಿ ಇಂಜಿನಿಯರ್

ಲಂಡನ್‌ನಲ್ಲಿ ಮೊದಲ ಬಾರಿ ಕಳೆದದ್ದು ಒಂದು ವರ್ಷವಾದರೂ, ಉತ್ಸಾಹ ಪ್ರತಿಭೆ ಕೌಶಲಗಳಿಂದ ಬ್ರಿಟಿಷ್‌ ತಂತ್ರಜ್ಞರ ಗಮನ ಸೆಳೆದು, ಇಂಜಿನೀಯರುಗಳ ಸಮುದಾಯದಲ್ಲಿ ಅರ್ದೆಶೀರ್ ಪರಿಚಯ ಹೆಚ್ಚಿತು. ರಾಣಿ ವಿಕ್ಟೋರಿಯಾಳನ್ನು ಭೇಟಿ ಆಗುವ ಅವಕಾಶ ಒದಗಿಸಿತು. ಪ್ರಭಾವಿ ಪರಿಚಯಗಳೇ ಇನ್ಸ್ಟಿಟ್ಯೂಷನ್ ಆಫ್ ಸಿವಿಲ್ ಇಂಜಿನಿಯರಿಂಗ್‌ನಲ್ಲಿ ಅಸೋಸಿಯೇಟ್ ಹುದ್ದೆಗೆ ಆಯ್ಕೆಯಾಗಲೂ ಕಾರಣ ಆಯಿತು.
ಯೋಗೀಂದ್ರ ಮರವಂತೆ ಬರೆಯುವ ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿ

Read More

ಕನ್ನಡ ಪ್ರಬಂಧಲೋಕದ ಹೊಸ ಕಿಟಕಿ

ಪ್ರಬಂಧಕಾರರಾಗಿ ಯೋಗಿಂದ್ರರ ಅಲೆದಾಟಕ್ಕೆ ವೈಚಾರಿಕತೆಯ ನೆಲೆಗಟ್ಟು ಇರುವಂತೆ ಭಾವುಕತೆಯ ಸ್ಪರ್ಶವೂ ಇದೆ. ‘ಬೆಳಕಿನ ಹಬ್ಬಕ್ಕೆ ಊರಿಗೆ ಹೋದದ್ದು’ ಪ್ರಬಂಧ, ಏಕಕಾಲಕ್ಕೆ ಬ್ರಿಟನ್ನು ಮತ್ತು ಮರವಂತೆಯ ನಡುವೆ ಮನೋವ್ಯಾಪಾರ ಸಾಧ್ಯವಾಗಿರುವ ವಿಶಿಷ್ಟ ರಚನೆಯಿದು. ಲೇಖಕ ಊರಿನಲ್ಲಿ ಹೆಜ್ಜೆಯಿಟ್ಟಾಗ ಮುತ್ತಿಕೊಳ್ಳುವ ದೀಪಾವಳಿಯ ಸಹಸ್ರ ಸಹಸ್ರ ದೀಪಗಳಂಥ ನೆನಪುಗಳು ಪ್ರಬಂಧದಲ್ಲಿ ಬೆಳಗಿವೆ. ‘ನಮ್ಮೂರು ಕಟ್ಟುತ್ತಿರುವ ಬೆಳಕಿನ ಮನೆಯೊಳಗೆ ನಾನೂ ಅಲೆದಾಡುತ್ತಿದ್ದೇನೆ’ ಎನ್ನುವ ಪ್ರಬಂಧಕಾರರ ಅನಿಸಿಕೆ ಓದುಗನದೂ ಆಗುತ್ತದೆ.
ಯೋಗೀಂದ್ರ ಮರವಂತೆ ಪ್ರಬಂಧಗಳ ಸಂಕಲನ “ನನ್ನ ಕಿಟಕಿ”ಗೆ ರಘುನಾಥ ಚ.ಹ. ಬರೆದ ಮುನ್ನುಡಿ

Read More

ಶಿಕ್ಷಕಿ, ಸುಧಾರಕಿ ಸಹೋದರಿ ನಿವೇದಿತಾ…

ನಿವೇದಿತಾ ಮನೆ ಮನೆಯ ಬಾಗಿಲು ತಟ್ಟಿ ಮಹಿಳೆಯರನ್ನು ಶಿಕ್ಷಣ ಪಡೆಯುವಂತೆ ಪುಸಲಾಯಿಸಿದವರು. ಸಮಾಜದ ಮಹತ್ವಪೂರ್ಣ ಭಾಗವಾಗಿರುವ ಮಹಿಳೆಯರು ಕೂಡ ವಿದ್ಯಾಭ್ಯಾಸ ಪಡೆದಾಗ ಮಾತ್ರ ಇಡೀ ಸಮಾಜ ಮುನ್ನಡೆಯಲು ಸಾಧ್ಯ ಎಂದು ನಂಬಿದ್ದವರು. ಅಂದಿನ ಸಾಂಪ್ರದಾಯಿಕ ಸಮಾಜದ ಪ್ರತಿರೋಧ ಸಹಜವಾಗಿಯೇ ಇತ್ತು. ಸ್ನೇಹಿತರಾಗಿದ್ದ ಸುಪ್ರಸಿದ್ಧ ವಿಜ್ಞಾನಿ ಜಗದೀಶ್ ಚಂದ್ರ ಬೋಸ್ ಹಾಗು ಪತ್ನಿ ಅಬಲ ಬೋಸ್ ಜೊತೆ ತಮ್ಮ ಚಿಂತನೆಗಳನ್ನು ಹಂಚಿಕೊಳ್ಳುತ್ತಿದ್ದರು, ಅವರ ಸಂಶೋಧನೆಗಳಿಗೆ ಸ್ಫೂರ್ತಿ ನೀಡುತ್ತಿದ್ದರು. ಯೋಗೀಂದ್ರ ಮರವಂತೆ ಬರಹ

Read More

ಜನಮತ

ಈ ಮಳೆಗಾಲದಲ್ಲಿ.....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಸಂರಚನೆಯಲ್ಲಿ ಹೊಸತನ ಹುಡುಕುವ ಕಥೆಗಳು: ಎನ್.ಎಸ್.ಶ್ರೀಧರ ಮೂರ್ತಿ ಬರಹ

‘ಅಂತರ್ಗತ’ ದಲ್ಲಿ ಕಥೆಯಲ್ಲಿದ್ದಾತ ಎದುರಿಗೂ ಬರುತ್ತಾನೆ, ಚಿತ್ತಾಲರ ಕಥೆಯಂತೆ ಸೃಜನಶೀಲತೆಯ ನೆಲೆಗಳನ್ನು ಪರಿವೀಕ್ಷಿಸುವ ಇದು ಆ ಮೂಲಕ ಬದುಕಿನ ಮೂಲ ಆತಂಕಗಳನ್ನೂ ಗುರುತಿಸುತ್ತದೆ. ‘ತಾರೆ’ಕತೆಯಲ್ಲಿ ಕೂಡ ಇಂತಹ…

Read More

ಬರಹ ಭಂಡಾರ