Advertisement

Tag: ಯೋಗೀಂದ್ರ ಮರವಂತೆ

ಯುದ್ಧಕಾಲದ ಸಿಗಾರುಪ್ರಿಯ ನಾಯಕ

1932ರಲ್ಲಿ ಚರ್ಚಿಲ್ ತನ್ನ ಪೂರ್ವಜರ ಇತಿಹಾಸ ಹುಡುಕಿ ಬರೆಯಲು ಯುರೋಪ್ ತಿರುಗಾಟದಲ್ಲಿದ್ದಾಗ ಜರ್ಮನಿಯಲ್ಲಿ ಹಿಟ್ಲರ್‌ನನ್ನು ಭೇಟಿಯಾಗಲು ಬಯಸಿದ್ದರು. ಹಿಟ್ಲರ್ ಭೇಟಿಗೆ ಪೂರ್ವದಲ್ಲಿ ತಾನು ಕೇಳಬೇಕೆಂದುಕೊಂಡ ಪ್ರಶ್ನೆಗಳನ್ನು ಬರೆದೂ ತಪುಪಿಸಿದ್ದರು. ಅವುಗಳಲ್ಲೊಂದು ಯಹೂದಿ ದ್ವೇಷದ ಕುರಿತಾದ “ಯಾವುದೇ ಮನುಷ್ಯ ತಾನು ಎಲ್ಲಿ ಹುಟ್ಟುವೆ ಎಂದು ಹೇಗೆ ನಿರ್ಧರಿಸಲು ಸಾಧ್ಯ?” ಎಂಬುದಾಗಿತ್ತು. ಇಂತಹ ಪ್ರಶ್ನೆಗಳೇ ಅಂದು ಇಬ್ಬರು ನಾಯಕರ ಭೇಟಿ ರದ್ದಾಗಲು ಕಾರಣ ಆಗಿರಬೇಕು.
ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಯೋಗೀಂದ್ರ ಮರವಂತೆ ಬರಹ

Read More

ಮುಸಾಫಿರ್ – ಇ – ಲಂಡನ್

ಸರ್ ಸಯ್ಯದ್ ಅಹ್ಮದ್‌ರ ಬ್ರಿಟಿಷ್ ಒಲವಿನ ಹೊರತಾಗಿ ಭಾರತೀಯ ಮುಸ್ಲಿಂರನ್ನು ಆಧುನೀಕರಣದ ಕಡೆಗೆ ಒಯ್ಯುವ ಅವರ ನಿರಂತರ ಯತ್ನದ ಕಾರಣಕ್ಕೆ “ಆಧುನೀಕರಣದ ಪ್ರವರ್ತಕ” ಎಂದೂ ಅವರನ್ನು ಕರೆದಿದ್ದಾರೆ. ಶ್ರದ್ಧಾವಂತ ಮುಸ್ಲಿಂ ಆಗಿದ್ದರೂ ಧಾರ್ಮಿಕ ಸಾಂಪ್ರದಾಯಿಕತೆ ಸಿದ್ಧಾಂತಗಳ ವಿಮರ್ಶಕರು ವಿರೋಧಿಯೂ ಆಗಿದ್ದರು. ಯೂರೋಪಿನ ವಿಜ್ಞಾನವನ್ನು ಆಧರಿಸಿದ ತಮ್ಮದೇ ಧರ್ಮಶಾಸ್ತ್ರವನ್ನು ರೂಪಿಸಿದ್ದರು. 1870ರಲ್ಲಿ ಆರಂಭಿಸಿದ್ದ “ಮಹಮದೀಯ ಸಮಾಜ ಸುಧಾರಕ” ಎನ್ನುವ ನಿಯತಕಾಲಿಕ ಅವರ ತಿಳಿವು ನೋಟಗಳನ್ನು ತಿಳಿಸುತ್ತದೆ.
ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಯೋಗೀಂದ್ರ ಮರವಂತೆ ಬರಹ

Read More

ಕೊನೆಯ ಸಿಖ್ ದೊರೆಯ ಹತಾಶ ಚರಿತೆ

ತಾಯಿಯಿಂದ ದೂರವಾಗಿ ಕೆಲವು ವರ್ಷಗಳ ನಂತರ, ನೇಪಾಳದಲ್ಲಿ ಆಕೆ ತಲೆಮರೆಸಿಕೊಂಡಿರುವುದು ಗೊತ್ತಾಗಿತ್ತು. ದುಲೀಪ್ ಸಿಂಗ್ ಅಮ್ಮನಿಗೆ ಹಲವು ಪತ್ರಗಳನ್ನು ಬರೆದಿದ್ದ. ನಿರಂತರ ಕೋರಿಕೆಯ ನಂತರ ಕೊಲ್ಕತ್ತಾದಲ್ಲಿ ತಾಯಿ-ಮಗನ ಭೇಟಿಗೆ ವ್ಯವಸ್ಥೆ ಮಾಡಲಾಯಿತು. 13 ವರ್ಷಗಳ ನಂತರ ಕಾಣಸಿಕ್ಕ ಮಗ ನಯವಾಗಿ ಮುಖ ಕ್ಷೌರ ಮಾಡಿಕೊಂಡು “ಜಂಟಲ್ಲ್ಮ್ಯಾನ್” ಆಗಿದ್ದನ್ನು ನೋಡಿ, ಸಿಖ್ ಸಾಮ್ರಾಜ್ಯ ಕಳೆದುಕೊಂಡದ್ದಕ್ಕಿಂತ ಹೆಚ್ಚಿನ ದುಃಖ ಪಂಜಾಬಿ ಅಸ್ಮಿತೆಯನ್ನು ಅಳಿಸಿಕೊಂಡ ಮಗನಿಂದ ಆಯಿತು ಎಂದಿದ್ದಳಂತೆ ಜಿಂದಾ ಕೌರ್.
ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಕೊನೆಯ ಸಿಖ್ ದೊರೆ ದುಲೀಪ್ ಸಿಂಗ್ ಜೀವನದ ಕುರಿತು ಬರೆದಿದ್ದಾರೆ ಯೋಗೀಂದ್ರ ಮರವಂತೆ

Read More

ಉಗಿಬಂಡಿ ಯುಗದ ಫಾರ್ಸಿ ಇಂಜಿನಿಯರ್

ಲಂಡನ್‌ನಲ್ಲಿ ಮೊದಲ ಬಾರಿ ಕಳೆದದ್ದು ಒಂದು ವರ್ಷವಾದರೂ, ಉತ್ಸಾಹ ಪ್ರತಿಭೆ ಕೌಶಲಗಳಿಂದ ಬ್ರಿಟಿಷ್‌ ತಂತ್ರಜ್ಞರ ಗಮನ ಸೆಳೆದು, ಇಂಜಿನೀಯರುಗಳ ಸಮುದಾಯದಲ್ಲಿ ಅರ್ದೆಶೀರ್ ಪರಿಚಯ ಹೆಚ್ಚಿತು. ರಾಣಿ ವಿಕ್ಟೋರಿಯಾಳನ್ನು ಭೇಟಿ ಆಗುವ ಅವಕಾಶ ಒದಗಿಸಿತು. ಪ್ರಭಾವಿ ಪರಿಚಯಗಳೇ ಇನ್ಸ್ಟಿಟ್ಯೂಷನ್ ಆಫ್ ಸಿವಿಲ್ ಇಂಜಿನಿಯರಿಂಗ್‌ನಲ್ಲಿ ಅಸೋಸಿಯೇಟ್ ಹುದ್ದೆಗೆ ಆಯ್ಕೆಯಾಗಲೂ ಕಾರಣ ಆಯಿತು.
ಯೋಗೀಂದ್ರ ಮರವಂತೆ ಬರೆಯುವ ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿ

Read More

ಕನ್ನಡ ಪ್ರಬಂಧಲೋಕದ ಹೊಸ ಕಿಟಕಿ

ಪ್ರಬಂಧಕಾರರಾಗಿ ಯೋಗಿಂದ್ರರ ಅಲೆದಾಟಕ್ಕೆ ವೈಚಾರಿಕತೆಯ ನೆಲೆಗಟ್ಟು ಇರುವಂತೆ ಭಾವುಕತೆಯ ಸ್ಪರ್ಶವೂ ಇದೆ. ‘ಬೆಳಕಿನ ಹಬ್ಬಕ್ಕೆ ಊರಿಗೆ ಹೋದದ್ದು’ ಪ್ರಬಂಧ, ಏಕಕಾಲಕ್ಕೆ ಬ್ರಿಟನ್ನು ಮತ್ತು ಮರವಂತೆಯ ನಡುವೆ ಮನೋವ್ಯಾಪಾರ ಸಾಧ್ಯವಾಗಿರುವ ವಿಶಿಷ್ಟ ರಚನೆಯಿದು. ಲೇಖಕ ಊರಿನಲ್ಲಿ ಹೆಜ್ಜೆಯಿಟ್ಟಾಗ ಮುತ್ತಿಕೊಳ್ಳುವ ದೀಪಾವಳಿಯ ಸಹಸ್ರ ಸಹಸ್ರ ದೀಪಗಳಂಥ ನೆನಪುಗಳು ಪ್ರಬಂಧದಲ್ಲಿ ಬೆಳಗಿವೆ. ‘ನಮ್ಮೂರು ಕಟ್ಟುತ್ತಿರುವ ಬೆಳಕಿನ ಮನೆಯೊಳಗೆ ನಾನೂ ಅಲೆದಾಡುತ್ತಿದ್ದೇನೆ’ ಎನ್ನುವ ಪ್ರಬಂಧಕಾರರ ಅನಿಸಿಕೆ ಓದುಗನದೂ ಆಗುತ್ತದೆ.
ಯೋಗೀಂದ್ರ ಮರವಂತೆ ಪ್ರಬಂಧಗಳ ಸಂಕಲನ “ನನ್ನ ಕಿಟಕಿ”ಗೆ ರಘುನಾಥ ಚ.ಹ. ಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ