Advertisement

Tag: ರಂಗಭೂಮಿ

ಅಂದುಕೊಂಡಿದ್ದು ಆಗೇಹೋಯಿತು!: ಜುಲೇಖಾ ಬೇಗಂ ಜೀವನ ವೃತ್ತಾಂತ

ಜುಬೇದಾಬಾಯಿ ಅವರನ್ನು ಮಾಕನೂರು ಭರಮಣ್ಣ ಅವರು ಅಪಹರಿಸಲು ಸಾಧ್ಯವಿರಲಿಲ್ಲ. ಅವರು ಪಾತ್ರಕ್ಕಾಗಿ ಹುಡುಕಾಡುತ್ತಿದ್ದರು; ನಾನೂ ಕಾಯುತ್ತಿದ್ದೆ. ರೋಗಿ ಬಯಸುವುದಕ್ಕೂ ವೈದ್ಯ ಹೇಳುವುದಕ್ಕೂ ಸರಿ ಹೋದರೆ ಇನ್ನೇನು? ಖುಷಿಯಿಂದ ಕುಪ್ಪಳಿಸಿದೆ. ಎರಡು ನಿಮಿಷ ಭೂಮಿಕೆಯಲ್ಲಿ ಇರುತ್ತಿದ್ದೆನೊ ಇಲ್ಲವೊ, ಆದರೆ ಆನಂದಿಸಿದೆ. ಮಾತಿಲ್ಲದ ಮುಖ್ಯ ಪಾತ್ರ ನನಗೆ ಸಿಕ್ಕಿತಲ್ಲಾ ಎಂಬ ಸಂಭ್ರಮ. ಉಳಿದವರೆಲ್ಲ, ‘ನಿಂಗೆ ಕೊಂಬು ಬರಬಾರದವ್ವಾ’ ಎಂದು ಛೇಡಿಸುತ್ತಾ, ನಗಿಸುತ್ತಿದ್ದರು.
ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ” ಹನ್ನೆರಡನೆಯ ಕಂತು

Read More

ರಂಗ ಕಲಾವಿದೆಯರ ಬದುಕು…: ಚಿತ್ರಾ ವೆಂಕಟರಾಜು ಸರಣಿ

ಹಾಗೆ ನೋಡಿದರೆ, ನಾಟಕಗಳಲ್ಲಿ ಅಭಿನಯಿಸುವ ಹೆಣ್ಣುಮಕ್ಕಳು ಸಮಾಜದ ಉಳಿದ ಹೆಣ್ಣುಮಕ್ಕಳಿಗಿಂತ ದಿಟ್ಟರಾಗಿರುತ್ತಾರೆ. ಹಾಗೆ ಮುಕ್ತವಾಗಿಲ್ಲದಿದ್ದರೆ ರಂಗಭೂಮಿಯಲ್ಲಿ ಕೆಲಸ ಮಾಡಲು ಸಾಧ್ಯವೇ ಆಗುವುದಿಲ್ಲ. ನಾಟಕಾಭ್ಯಾಸದಲ್ಲಿ ಮೊದಲು ಹೇಳಿಕೊಡುವ ಪಾಠವೇ ಮುಜುಗರವನ್ನು ಬಿಟ್ಟು ಧೈರ್ಯವಾಗಿ ಅನಿಸಿದ್ದನ್ನು ಮಾಡುವುದು. ಹಾಗಾಗಿಯೇ ನಾಟಕದಲ್ಲಿ ಅಭಿನಯಿಸುವ ನಟಿಯರ ವ್ಯಕ್ತಿತ್ವ ಗುಂಪಿನಲ್ಲಿ ಎದ್ದುಕಾಣುವಂತಿರುತ್ತದೆ. ಹೊಸದಾಗಿ ನಾಟಕಕ್ಕೆ ಬಂದಾಗ ಗುಬ್ಬಿಯಂತಿರುವ ನಟಿಯರು ದಿನ ಕಳೆದಂತೆ ರಂಗದ ಆಕಾಶದಲ್ಲಿ ಗರಿಬಿಚ್ಚಿ ಹಾರುತ್ತಾರೆ, ಬೀಳುತ್ತಾರೆ‌, ಸಾವರಿಸಿಕೊಂಡು ಮತ್ತೆ ಏಳುತ್ತಾರೆ.
ಚಿತ್ರಾ ವೆಂಕಟರಾಜು ಬರೆಯುವ “ಚಿತ್ತು-ಕಾಟು” ಸರಣಿ

Read More

ಆಪ್ತವಾಗಿದ್ದ ಆಪ್ತರಂಗ ಪ್ರಯೋಗಗಳು: ಚಿತ್ರಾ ವೆಂಕಟರಾಜು ಸರಣಿ

ಮೂರನೇ ಬೆಲ್‌ ಆದ ತಕ್ಷಣ ನಟ ನಿಧಾನವಾಗಿ ಪ್ರೇಕ್ಷಕರ ಕೈಹಿಡಿದು ಬೇರೆಯದೇ ಲೋಕಕ್ಕೆ ಕರೆದುಕೊಂಡು ಹೋಗುತ್ತಾನೆ. ನಟ ಪಾತ್ರದಲ್ಲಿ ಇಳಿಯುತ್ತಿದ್ದಂತೆ ಪ್ರೇಕ್ಷಕನೂ ತನ್ನನ್ನು ಮರೆಯುತ್ತಾನೆ. ನಟರೊಂದಿಗೆ – ನಿರ್ದೇಶಕರು ತಮ್ಮ ತಮ್ಮ ಕಲ್ಪನೆಯಲ್ಲಿ ಇಷ್ಟು ತಿಂಗಳೂ ಕಟ್ಟಿದ ನಾಟಕ ಪ್ರೇಕ್ಷಕರೊಂದಿಗೆ ಸಂವಾದಕ್ಕಿಳಿಯುತ್ತದೆ. ನೋಡಿದ ನಾಟಕಗಳಲ್ಲಿ ಕೆಲವೇ ಕೆಲವು ಪ್ರಯೋಗಗಳು ನಾಟಕ ಮುಗಿದ ಎಷ್ಟೋ ವರ್ಷಗಳ ನಂತರವೂ ನೆನಪಿನ ಭಾಗವಾಗಿ ಭದ್ರವಾಗಿರುತ್ತದೆ ಎಂದರೆ ಆ ಮಾಧ್ಯಮಕ್ಕಿರುವ ಶಕ್ತಿ ಅಂಥದ್ದು! ಆ ಪ್ರಯೋಗಗಳು ಹೇಗಿತ್ತು ಎಂದರೆ ಹೇಳಲು ಬರುವುದಿಲ್ಲ…
ಚಿತ್ರಾ ವೆಂಕಟರಾಜು ಬರೆಯುವ “ಚಿತ್ತು-ಕಾಟು” ಸರಣಿ

Read More

ರಂಗದ ನಂಟು ಅಂಟಿದ ಬಗೆ: ಚಿತ್ರಾ ವೆಂಕಟರಾಜು ಸರಣಿ

ನಾಟಕೋತ್ಸವ ಮುಗಿದು ಅವರೆಲ್ಲ ಹೊರಟುಹೋದ ಮೇಲೆ ಮತ್ತೆ ನಮ್ಮ ದಿನಚರಿಗೆ ಹೊಂದಿಕೊಳ್ಳುವುದಕ್ಕೆ ಬಹಳ ಸಂಕಟವಾಗುತ್ತಿತ್ತು. ಕಿಂದರಿಜೋಗಿಯ ಕುಂಟನಂತೆ ‘ಅಯ್ಯೋ ಹೋಯಿತೆ ಆ ನಾಕ, ಅಯ್ಯೋ ಬಂದಿತೆ ಈ ಲೋಕʼ ಎನ್ನುವ ಭಾವನೆ ಬರುತ್ತಿತ್ತು. ಈಗಿನಷ್ಟು ನಾಟಕ ಪ್ರಯೋಗಗಳು ನೋಡಲು ಸಿಗುತ್ತಿರಲಿಲ್ಲವಾದ್ದರಿಂದ ನೀನಾಸಮ್‌ ತಿರುಗಾಟವನ್ನು ನಾವು ಕರೆಸಿದಷ್ಟು ವರ್ಷಗಳೂ ನಾಟಕ ಮಾಡಬೇಕು ಅನ್ನೋ ಆಸೆ ಹೆಚ್ಚಾಗುತ್ತಿತ್ತು.
ಚಿತ್ರಾ ವೆಂಕಟರಾಜು ಬರೆಯುವ “ಚಿತ್ತು-ಕಾಟು” ಸರಣಿ

Read More

ಅಜ್ಜನೂ, ಗಿಳಿಯೂ ಇಬ್ಬರೂ ವಾಪಸ್ಸು ಬರಲಿಲ್ಲ…: ಜುಲೇಖಾ ಬೇಗಂ ಜೀವನ ವೃತ್ತಾಂತ

ಅಂತೂ ಕಡಿದಾದ ಮಾರ್ಗದಲ್ಲಿ ಸಾಗಿ, ಜಾತ್ರೆಯಲ್ಲಿ ಸುತ್ತಾಡಿದೆವು. ತೇರಿನ್ನೂ ಎಳೆದಿರಲಿಲ್ಲ, ಕಾಯುವಷ್ಟು ವ್ಯವಧಾನವಿಲ್ಲದೆ ಸುಸ್ತಾಗುತ್ತಿದೆಯೆಂದು ಮತ್ತೆ ಅವರನ್ನು ಕರೆತಂದೆ. ಅರವತ್ತರ ವಯಸ್ಸಿನ ಡಾಕ್ಟರಜ್ಜನನ್ನು ಈ ರೀತಿಯಾಗಿ ನಡೆಸಿಕೊಂಡಿದ್ದಕ್ಕೆ ಮನೆ ಜನರಿಗೆಲ್ಲ ಸಿಟ್ಟು. ಅಷ್ಟು ದೂರದವರೆಗೆ ನಡೆಸಿ, ರಥೋತ್ಸವವನ್ನೂ ತೋರಿಸದೆ ಗಡಿಬಿಡಿಯಲ್ಲಿ ಕರೆದುಕೊಂಡು ಬಂದದ್ದಕ್ಕೆ ಎಲ್ಲರೂ ಬೈಯುವವರೇ. ಅಂದು ಸಮಯವಾಗುತ್ತಿದೆಯೆಂದು ಡಾಕ್ಟರಜ್ಜ ದದೇಗಲ್ಲಿಗೆ ಹೊರಟರು.
ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ” ಎರಡನೆಯ ಕಂತು

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ