Advertisement

Tag: ರಂಜಾನ್ ದರ್ಗಾ

ಸೋವಿಯತ್ ದೇಶದಲ್ಲಿ ಮಿಂಚಿದ ನಮ್ಮ ಧ್ವಜ

ತಾಷ್ಕೆಂಟ್ ವಿಮಾನ ನಿಲ್ದಾಣದಿಂದ ಹೊರಗೆ ಬಂದ ಕೂಡಲೇ ನನಗೆ ಆಶ್ಚರ್ಯ ಕಾದಿತ್ತು. ಎಲ್ಲೆಂದರಲ್ಲಿ ಭಾರತದ ತ್ರಿವರ್ಣ ಧ್ವಜಗಳು ರಾರಾಜಿಸುತ್ತಿದ್ದವು. ಬೀದಿಗಳು ನಮ್ಮ ಧ್ವಜದಿಂದ ಕೂಡಿದ ಪರಪರಿಗಳಿಂದ ಅಲಂಕೃತವಾಗಿದ್ದವು. ಎಲ್ಲೆಂದರಲ್ಲಿ ನಮ್ಮ ರವಿಶಂಕರ್ ಸಿತಾರ್ ಮತ್ತು ಬಿಸ್ಮಿಲ್ಲಾ ಖಾನ್ ಶಹನಾಯಿ ನಾದಮಾಧುರ್ಯಕ್ಕೆ ಕಿವಿಗಳು ತೆರೆದುಕೊಳ್ಳತೊಡಗಿದವು. ನಮ್ಮ ಗೈಡ್ ನಮ್ಮನ್ನು ಪಂಚತಾರಾ “ಹೋಟೆಲ್ ತಾಷ್ಕೆಂಟ್”ಗೆ ಒಯ್ದರು. ಅಲ್ಲಿಯೆ ರಿಷಪ್ಷನಿಸ್ಟ್ “ಇಂಜಿಷ್ಕಿ ದ್ರುಜಿಯೆ” (ಇಂಡಿಯನ್ ಫ್ರೆಂಡ್ಸ್) ಎಂದು ಖುಷಿಯಿಂದ ಬರಮಾಡಿಕೊಂಡರು. ಭಾರತದ ಬಗ್ಗೆ ಸೋವಿಯತ್ ದೇಶದವರಿಗೆ ಇದ್ದ ಅಭಿಮಾನ, ಪ್ರೀತಿ, ಗೌರವ ಕಂಡು ಆಶ್ಚರ್ಯಚಕಿತನಾದೆ.
ರಂಜಾನ್‌ ದರ್ಗಾ ಬರೆಯುವ ನೆನಪಾದಾಗಲೆಲ್ಲ ಸರಣಿಯ 43ನೇ ಕಂತು ಇಲ್ಲಿದೆ.

Read More

ಓ ದೇವರೆ ಈ ಪುಣ್ಯ ಅವನಿಗೆ ಲಭಿಸಲಿ

ನನ್ನ ತಂದೆಗೆ ಆ ತೂತಿನ ದುಡ್ಡು ಕೇಳಿದೆ. ಅವರು ಕೊಡಲಿಲ್ಲ. ಆ ದುಡ್ಡು ನನ್ನದಲ್ಲ ಎಂದರು. ನನಗೆ ಅರ್ಥವಾಗಲಿಲ್ಲ. ಆ ತೂತಿನ ದುಡ್ಡಿಗಾಗಿ ಕೊಂಯಾ ಕೊಂಯಾ ಮಾಡುತ್ತಿದ್ದೆ. ಸೇಂಗಾ ಬೆಲ್ಲ ಕೊಳ್ಳುವವರೆಗೂ ಆ ತೂತಿನ ದುಡ್ಡಿನಲ್ಲಿ ಕಿರುಬೆರಳು ಸೇರಿಸಿ ಆಡುವ ಖುಷಿಯೂ ಇತ್ತು. ಹೀಗೆ ಆ ದುಡ್ಡು ಡಬಲ್ ಧಮಾಕಾ ಇಫೆಕ್ಟ್ ಕೊಡುತ್ತಿತ್ತು. ಅಂದು ಇದೊಂದು ದೊಡ್ಡ ಚಿಂತೆಯಾಯಿತು. ನನ್ನ ತಂದೆ ಇಷ್ಟೇಕೇ ಕಠೋರ ಆಗಿದ್ದಾರೆ ಎಂಬುದು ತಿಳಿಯಲಿಲ್ಲ. ಅಂತೂ ಶನಿದೇವರ ಗುಡಿಯ ಮುಂದೆ ಹೋದೆವು. ತಂದೆ ಆ ಎರಡು ರೂಪಾಯಿ ಚಿಲ್ಲರೆ ದುಡ್ಡನ್ನು ಕುಂಬಳ ಚಾಟಿಯ ಕಿಸೆಯಲ್ಲಿ ಇಟ್ಟುಕೊಂಡಿದ್ದರು. ರಂಜಾನ್‌ ದರ್ಗಾ ಬರೆಯುವ ನೆನಪಾದಾಗಲೆಲ್ಲ ಸರಣಿಯ 42ನೇ ಕಂತು ಇಲ್ಲಿದೆ.

Read More

ನನ್ನ ತಂದೆ ಶರಣರಂತೆ, ಸಂತರಂತೆ

ಅವರು ಜೀವನದಲ್ಲಿ ಸಾಲವನ್ನೇ ಮಾಡಲಿಲ್ಲ. ದುಡಿಮೆಯೆ ಅವರ ಬ್ಯಾಂಕು.  ವಾಪಸ್ ಮಾಡುವ ಶಕ್ತಿಇಲ್ಲವೆಂದ ಮೇಲೆ ಸಾಲ ಮಾಡಬಾರದು ಎಂಬುದು ಅವರ ನೀತಿಯಾಗಿತ್ತು. ಸಮಾಜ ಜಾತಿ ಉಪಜಾತಿಗಳ ಬಂಧನದಲ್ಲಿ ಸಿಕ್ಕಿ ಹಾಕಿಕೊಂಡಿದ್ದರೂ ಅಸ್ಪೃಶ್ಯತೆ ಆಚರಿಸುತ್ತಿದ್ದರೂ  ಆ ಬಗ್ಗೆ ತಲೆಕೆಡಿಸಿಕೊಳ್ಳಲಿಲ್ಲ. ‘ನೀವು ಹಾಗಿರಬೇಕು, ಹೀಗಿರಬೇಕು’ ಎಂದು ಯಾರಿಗೂ ಉಪದೇಶ ಮಾಡಲಿಲ್ಲ. ಆದರೆ ಸ್ವಂತಕ್ಕೆ ಜಾತಿ, ಧರ್ಮ ಮತ್ತು ಅಸ್ಪೃಶ್ಯತೆ ಮುಂತಾದವುಗಳನ್ನು ಮೀರಿ ಬದುಕಿದವರು. ನಾನು ಶನಿವಾರ ಜನಿಸಿದ್ದರಿಂದ ಪ್ರತಿ ಶನಿವಾರ ನನ್ನನ್ನು ಕರೆದುಕೊಂಡು ಶನಿದೇವರ ಗುಡಿಗೆ ಹೋಗುತ್ತಿದ್ದರು. ರಂಜಾನ್‌ ದರ್ಗಾ ಬರೆಯುವ  ನೆನಪಾದಾಗಲೆಲ್ಲ ಸರಣಿ

Read More

ಅರುವತ್ತು ವರ್ಷಗಳ ರಾಜಕೀಯ ಅರಿವು

ನನಗೆ ಬಾಲ್ಯದಲ್ಲೇ ರಾಜಕೀಯ ಪ್ರಜ್ಞೆ ಮೂಡತೊಡಗಿತು. ಆಗ ಎಲ್ಲ ರಾಜಕೀಯ ಪಕ್ಷದವರು ತಮ್ಮ ಚುನಾವಣಾ ಚಿಹ್ನೆಗಳುಳ್ಳ ಬಿಲ್ಲೆಗಳನ್ನು ಚುನಾವಣಾ ಭಾಷಣದ ಸಂದರ್ಭದಲ್ಲಿ ಹಂಚುತ್ತಿದ್ದರು. ಕಾಂಗ್ರೆಸ್ ಚಿಹ್ನೆ ನೊಗಹೊತ್ತ ಜೋಡೆತ್ತು ಇದ್ದರೆ, ಜನಸಂಘದ್ದು ಅಲ್ಲಾವುದ್ದೀನ ಚಿರಾಗದಂಥ ದೀಪದ ಚಿಹ್ನೆಯಾಗಿತ್ತು. ಸ್ವತಂತ್ರ ಪಕ್ಷದ್ದು ನಕ್ಷತ್ರ ಆಗಿತ್ತು. ಈ ಪ್ಲ್ಯಾಸ್ಟಿಕ್ ಅಥವಾ ತಗಡಿನ ಬಿಲ್ಲೆಗಳನ್ನು ಸಂಗ್ರಹಿಸುವುದಕ್ಕಾಗಿ ನಾವು ಹುಡುಗರು ಎಲ್ಲ ಪಕ್ಷಗಳ ಚುನಾವಣಾ ಸಭೆಗಳಿಗೆ ಹೋಗುತ್ತಿದ್ದೆವು. ಅವರ ಭಾಷಣಗಳನ್ನು ನಾನಂತೂ ತದೇಕಚಿತ್ತದಿಂದ ಕೇಳುತ್ತಿದ್ದೆ.
ರಂಜಾನ್ ದರ್ಗಾ ಬರೆಯುವ ಆತ್ಮಕತೆ ನೆನಪಾದಾಗಲೆಲ್ಲ ಸರಣಿಯ 40ನೆಯ ಕಂತು.

Read More

ರಾವಸಾಹೇಬ್ ಆದ ಪೊಲೀಸ್ ಅಧಿಕಾರಿ ಸಿದ್ರಾಮಪ್ಪ ಲಕ್ಷ್ಮೇಶ್ವರ

ಅಪರಾಧಿ ಬುಡಕಟ್ಟು ಎಂದು ಅಪಮಾನಕ್ಕೀಡಾದ ಯುವಕರಿಗೆ ಸಂಸ್ಕಾರ ನೀಡಿ ಸಭ್ಯ ಗೃಹಸ್ಥರನ್ನಾಗಿ ಮಾಡುವುದು ಬಹಳ ಕಷ್ಟದ ಕೆಲಸ. ಅದಕ್ಕಾಗಿ ಅಪರಿಮಿತವಾದ ತಾಳ್ಮೆ ಬೇಕು. ‘ಅವರಲ್ಲೂ ಮನುಷ್ಯತ್ವ ಇದೆ’ ಎಂಬ ಅಚಲವಾದ ನಂಬಿಕೆ ಬೇಕು. ದೈನಂದಿನ ಬದುಕಿನ ಎಲ್ಲ ಹಂತಗಳಲ್ಲಿ ಅವರನ್ನು ನಿರೀಕ್ಷಿಸುವ ಮೂಲಕ ಅವರನ್ನು ತಿದ್ದುವುದು. ಅವರಲ್ಲಿ ಹೊಸ ಕನಸುಗಳ ಸೃಷ್ಟಿ ಮಾಡುವುದು. ತಮಗೂ ಬೇರೆಯರಿಗೂ ಯಾವುದೇ ವ್ಯತ್ಯಾಸವಿಲ್ಲ ಎಂಬ ಆತ್ಮವಿಶ್ವಾಸ ಮೂಡಿಸುವುದು.
ರಂಜಾನ್ ದರ್ಗಾ ಬರೆಯುವ ಆತ್ಮಕತೆ ಸರಣಿಯ 39ನೆಯ ಕಂತು .

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ