ಅಲ್ಲೀಬಾದಿಯ ಋಣ ತೀರಿತು
ಹಳ್ಳಿಯ ಹೆಣ್ಣುಮಕ್ಕಳು ಗಂಡಸರಿಗಿಂತ ಹೆಚ್ಚಿಗೆ ದುಡಿಯುತ್ತಿದ್ದರು. ಅವರು ಹೊಲದ ಕೆಲಸದ ಜೊತೆ ಮನೆಯ ಕೆಲಸವನ್ನೂ ಮಾಡಬೇಕಾಗಿತ್ತು. ತುರಿಸಿಕೊಳ್ಳಲೂ ಸಮಯವಿಲ್ಲದ ಬದುಕು ಅವರದು. ರಾತ್ರಿಯಲ್ಲಿ ಅವರು ಬೇರೆ ಹೆಂಗಸರ ಜೊತೆಗೂಡಿ ಬಯಲುಕಡೆಗೆ ಹೊರಟಾಗ ಮಾತ್ರ ಊರ ಸುದ್ದಿ ಮಾಡನಾಡಲು ಅವಕಾಶ ಸಿಗುತ್ತಿತ್ತು! ಜೊತೆಗೂಡಿ ಗುಡಿಗೆ ಇಲ್ಲವೆ ದರ್ಗಾಕ್ಕೆ ಹೋಗುವುದು ಅವರ ಖಾಸಗಿತನಕ್ಕೆ ಪೂರಕವಾಗಿತ್ತು. ಮನೆಗೆ‘ಅರಿಷಿಣ ಕುಂಕುಮ’ ಕೊಡಲು ಹೋಗುವ ಸಂದರ್ಭದಲಿ ಅವರು ತಮ್ಮ ಓರಿಗೆಯ ಹೆಣ್ಣುಮಕ್ಕಳನ್ನು ಭೇಟಿಯಾಗುತ್ತಿದ್ದರು.
ರಂಜಾನ್ ದರ್ಗಾ ಬರೆಯುವ ಸರಣಿಯ ಎಂಟನೆಯ ಕಂತು.