Advertisement

Tag: ರಂಜಾನ್ ದರ್ಗಾ

ಪ್ರಾಣಿಲೋಕದ ಪ್ರೀತಿಸುಧೆಯ ನೆನಪುಗಳು

ನನ್ನ ತಂದೆ ಹಾವು ಹೊಡೆಯುವುದನ್ನು ಕೂಡ ಸಹಿಸಿಕೊಳ್ಳುತ್ತಿರಲಿಲ್ಲ. ಆದರೆ ಕಂದೂರಿ ಒಂದು ಶ್ರದ್ಧೆಯಾಗಿದ್ದರಿಂದ ಮನೆತನದಲ್ಲಿ ತಲೆತಲಾಂತರದಿಂದ ಬಂದ, ಅವರದೇ ನಂಬಿಕೆಯಿಂದ ಕೂಡಿದ ಧಾರ್ಮಿಕ ಕರ್ತವ್ಯ ನಿರ್ವಹಣೆಯನ್ನು ನಿಷ್ಠೆಯಿಂದ ಮಾಡುತ್ತಿದ್ದರು. ನನ್ನ ದಲಿತ ಮಿತ್ರ ತುಕಾರಾಮ ನನಗಿಂತ ಆರುವರ್ಷ ದೊಡ್ಡವರಿದ್ದರು. ನಾನು ನಾಲ್ಕನೆಯ ಇಯತ್ತೆ ಓದುವಾಗ ಅವರು ಮ್ಯಾಟ್ರಿಕ್ ಇದ್ದರು. ನಮ್ಮ ಮನೆಯ ಹತ್ತಿರದ ಹರಿಜನ ಬೋರ್ಡಿಂಗ್‌ನಲ್ಲಿ ಇದ್ದು ಓದುತ್ತಿದ್ದರು.

Read More

‘ಭಕ್ತರಿಗೆ ಭಾಗ್ಯ ಕೊಡು. ಮಕ್ಕಳಿಗೆ ಬಡತನ ಕೊಡು’

ಒಬ್ಬ ವ್ಯಕ್ತಿ ಹೀಗೆ ದೇವನಾಗಲು ಹೇಗೆ ಸಾಧ್ಯ ಎಂದು ವಿಚಾರವಾದಿಗಳಿಗೆ ಅನಿಸದೆ ಇರದು. ಜನಸಮುದಾಯಗಳ ಬಗ್ಗೆ ಅತೀವ ಕಾಳಜಿಯುಳ್ಳ ಸಾಮಾಜಿಕ ಮನುಷ್ಯ ಜನಪದರ ಕಣ್ಣಲ್ಲಿ ದೇವರಾಗಿ ಕಾಣುತ್ತಾನೆ. ತಮ್ಮ ಮೇಲೆ ನಿಷ್ಕಾಮ ಪ್ರೀತಿಯ ಮಳೆಗೆರೆಯುವವನನ್ನು ಜನಸಾಮಾನ್ಯರು ಹೀಗೆ ದೇವರಾಗಿಸುತ್ತಾರೆ. ಅಮೋಘಸಿದ್ಧನಂಥ ಅಖಂಡ ಪ್ರೀತಿಯೇ ದೈವೀ ಗುಣ. ಅಂಥ ಗುಣವುಳ್ಳವರೇ ದೇವರು. ಅದ್ದರಿಂದ ಇಂಥ ಸಿದ್ಧರ ಕುರಿತ ಡೊಳ್ಳಿನ ಪದಗಳೆಲ್ಲ “ನಮ್ಮಯ ದೇವರು ಬಂದಾರ ಬನ್ನಿರೇ” ಎಂದೇ ಪ್ರಾರಂಭವಾಗುತ್ತವೆ.
ರಂಜಾನ್ ದರ್ಗಾ ಬರೆಯುವ ‘ನೆನಪಾದಾಗಲೆಲ್ಲ’ ಸರಣಿ

Read More

ಅಪ್ಪನ ಕೌಟುಂಬಿಕ ಅರ್ಥಶಾಸ್ತ್ರ

ನಮಗೆ ಒಂದು ಗೇಣು ಭೂಮಿಯೂ ಇರಲಿಲ್ಲ. ಆದರೆ ತಂದೆಗೆ ಕೃಷಿಕನಾಗುವ ಹುಚ್ಚು ಬಹಳವಿತ್ತು. ಬೆಳದಿಂಗಳ ರಾತ್ರಿಯಲ್ಲಿ ಕೂಡ ಅವರು ಆ ಭೂಮಿಯಲ್ಲಿ ದುಡಿಯುತ್ತಿದ್ದರು. ಅವರಿಗೆ ದುಡಿತದ ಆನಂದವೇ ಆನಂದ. ದುಡಿದು ದುಡಿದು ಕಲ್ಲುಗಳಿಂದ ತುಂಬಿದ ಆ ಹಾಳು ಭೂಮಿಯನ್ನು ಸಮೃದ್ಧಗೊಳಿಸಿದರು. ಬಾಳೆಯ ಸಸಿ ನೆಟ್ಟರು. ಹಳೆಯ ಡೀಸಲ್ ಎಂಜಿನ್ ಕೊಂಡು ನೀರು ಉಣಿಸುತ್ತ ಚಿಕ್ಕ ಬಾಳೆಯ ಬನವನ್ನೇ ಸೃಷ್ಟಿಸಿದರು.
ರಂಜಾನ್ ದರ್ಗಾ ಬರೆಯುವ ನೆನಪಾದಾಗಲೆಲ್ಲ ಸರಣಿಯ ಹದಿನೈದನೇ ಕಂತು ಇಲ್ಲಿದೆ.

Read More

ಬಾಲ್ಯದ ಆಟ..ಆ ಹುಡುಗಾಟ ಇನ್ನೂ ಮರೆತಿಲ್ಲಾ..

“ಆಮೇಲೆ ನಾನು ಆ ಕೋಣೆಯ ಕಿಟಕಿಯ ಮುಂದೆ ಕುಳಿತು ಪಾಠ ಕೇಳುತ್ತಿದ್ದೆ. ಒಂದು ಸಲ ಕಪ್ಪು ಹಲಗೆಯ ಮೇಲೆ ಗಣಿತ ಸಮಸ್ಯೆಯೊಂದನ್ನು ಬರೆದು ಉತ್ತರ ಬರೆಯಲು ತಿಳಿಸಿದರು. ನಾನು ಮನದಲ್ಲೇ ಕೂಡಿಸಿ ಕಳೆದು ಭಾಗಿಸಿ ಥಟ್ಟನೆ ಉತ್ತರ ಹೇಳಿದೆ. ಹೀಗೆ ಹೇಳಲು ಕಾರಣವೂ ಇತ್ತು. ನನ್ನ ಬಳಿ ಕಚ್ಚಾ ನೋಟಬುಕ್ ಕೂಡ ಇರಲಿಲ್ಲ. ಹೀಗಾಗಿ ಮನದಲ್ಲೇ ಲೆಕ್ಕಾಚಾರ ಮಾಡುವುದು ಅನಿವಾರ್ಯವಾಗಿತ್ತು. ನನ್ನ ಉತ್ತರದಿಂದ ಮಾಸ್ತರರಿಗೆ ಖುಷಿಯಾಯಿತು. ನನಗೆ ಒಳಗೆ ಕರೆದರು.”
ರಂಜಾನ್ ದರ್ಗಾ ಬರೆಯುವ ನೆನಪಾದಾಗಲೆಲ್ಲ ಸರಣಿಯ ಹದಿನಾಲ್ಕನೇ ಕಂತು ಇಲ್ಲಿದೆ.

Read More

ಹೃದಯ ತುಂಬುವಂತೆ ಮಾಡುವ ಮಾನವೀಯ ಸಂಬಂಧಗಳು

ಧಾರ್ಮಿಕ ಸಮಾಜಗಳಲ್ಲಿ ಮೂಲಭೂತವಾದಿಗಳು, ಕೋಮುವಾದಿಗಳು ಮತ್ತು ಏನೂ ಗೊತ್ತಿಲ್ಲದ ಕರ್ಮಠರದೇ ಕಾರುಬಾರು ಜಾಸ್ತಿ ಇರುತ್ತದೆ. ಜನರನ್ನು ಹಿಂದೂ ಮುಸ್ಲಿಂ ಮಾಡುವುದರಲ್ಲೇ ಅವರು ತಲ್ಲೀನರಾಗಿರುತ್ತಾರೆ.  ರಂಜಾನ್ ಮತ್ತು ಬಕ್ರೀದಗಳಲ್ಲಿ ನನ್ನ ತಂದೆ ದೊಡ್ಡ ಹಂಡೆಯಲ್ಲಿ ಶುರಕುಂಬಾ ತಯಾರಿಸಲು ಎಲ್ಲ ವ್ಯವಸ್ಥೆ ಮಾಡುತ್ತಿದ್ದರು. ನಾವಿಗಲ್ಲಿಯ ಜನರೆಲ್ಲ ಶುರಕುಂಬಾ ಕುಡಿಯಬೇಕೆಂಬುದು ಅವರ ಆಶಯವಾಗಿತ್ತು.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ