‘ಕಾಲ ನದಿಯಲಿ ನಮ್ಮ ಬಾಳ ದೋಣಿ’: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರಹ
ಈ ಮೇಲು ಕೀಳುಗಳ ಕೀಲುಗೊಂಬೆ ಆಟದಲಿ ಜೊತೆಗಿದ್ದು ಬದುಕನ್ನು ಸಹ್ಯ ಮಾಡಿದ್ದಕ್ಕೆ ದಾರಿಯ ಪ್ರಯಾಣದ ಸಂಭ್ರಮವನ್ನು ಹೆಚ್ಚಿಸಿದ್ದಕ್ಕೆ ಯಾರಿಗೋ ಧನ್ಯವಾದ ಹೇಳಬೇಕು. ನನ್ನ ಅಹಂಗಳಲ್ಲಿ ಕುಳಿತು ಯಾರಿಗೋ ಚುಚ್ಚಿ ಮಾತಾಡಿದ್ದ ನೆನಪಾಗಿ ಸಾರಿ ಕೇಳಬೇಕು. ಸುಮ್ಮನೆ ಇಲ್ಲದ ಅವಸರವನ್ನು ಆರೋಪಿಸಿಕೊಂಡು ಬೇರುಗಳನ್ನು ಮರೆತಿದ್ದೇನೆ. ಹತ್ತಿರ ಕೂತು ಆ ಜೀವದ ಹೃದಯದ ಮಾತುಗಳನ್ನು ಕೇಳಿಸಿಕೊಳ್ಳುವುದಿತ್ತು. ಸಂಜೆಗಣ್ಣಿನ ನಿರೀಕ್ಷೆಯ ನೋಟದ ಅಪ್ಪ ಅಮ್ಮ ಇನ್ನೂ ಊರಿನ ಮನೆಯಲ್ಲಿದ್ದಾರೆ. ಹೇಗಾದರೂ ಮಾಡಿ ಈ ಸಲವಾದರೂ ಜೊತೆಗೆ ಕರೆದುಕೊಂಡು ಬರಬೇಕಿತ್ತು…
ಹೊಸ ವರ್ಷದ ಆಚರಣೆಯ ಈ ಹೊತ್ತಿಗೆ ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರಹ ನಿಮ್ಮ ಓದಿಗೆ
