Advertisement

Tag: ರಹಮತ್ ತರೀಕೆರೆ

“ಹಳೆಯ ಪುಟಗಳಿಂದ…” ಸರಣಿಯಲ್ಲಿ ರಹಮತ್‌ ತರೀಕೆರೆ ಬರಹ

ಆದರೆ ಆ ಕುಣಿತದಲ್ಲಿ ದಲಿತ ತರುಣರು ಭಾಗವಹಿಸಿರಲಿಲ್ಲ. ಕುಣಿಯುವಾಗ ಮೈಕೈ ತಾಗುತ್ತದೆಯೆಂದೇ? ಇಡೀ ಊರು ಒಟ್ಟಾಗಿ ಸಂಭ್ರಮದಿಂದ ಹಬ್ಬ ಆಚರಿಸುತ್ತದೆ ಎಂಬುದು ಅರೆಸತ್ಯವಲ್ಲವೆ? ಊರ ಹೋಟೆಲು, ಗುಡಿಗಳಲ್ಲಿ ಇರುವಂತೆ ಮೊಹರಂ ಮಸೂತಿಯಲ್ಲೂ ಅವರಿಗೆ ಒಳಗಿನತನಕ ಪ್ರವೇಶವಿರಲಿಲ್ಲ. ಒಂದು ಅಂತರದಲ್ಲಿ ನಿಂತು ಎಡೆ ಮಾಡಿಸಿಕೊಂಡು ಹೋಗುತಿದ್ದರು. ಹಿಂದೆ ದಲಿತರು ಹೋಟೆಲುಗಳಲ್ಲಿ ತಮಗೂ ಸರಿಸಮವಾಗಿ ಚಹ ತಿಂಡಿ ಕೊಡಬೇಕೆಂದು ಒತ್ತಾಯಿಸಿದ್ದರು. ಅದು ಸಾಧ್ಯವಾಗಿರಲಿಲ್ಲ. ನಮಗೆ ಸಮಾನತೆ ಇಲ್ಲದಿದ್ದರೆ, ನಾವು ತಮಟೆ ಬಾರಿಸುವುದಿಲ್ಲ ಎಂದು ಅವರು ನಿರಾಕರಿಸಿದ್ದರಿಂದ, ಬಳ್ಳಾರಿ ಜಿಲ್ಲೆಯ ಮೂವತ್ತಕ್ಕೂ ಹೆಚ್ಚಿನ ಊರುಗಳಲ್ಲಿ ಮೊಹರಂ ಸಂಭ್ರಮ ಕಡಿಮೆಯಾಗಿದೆ.
“ಹಳೆಯ ಪುಟಗಳಿಂದ…” ಸರಣಿಯಲ್ಲಿ ರಹಮತ್‌ ತರೀಕೆರೆ ಬರಹ

Read More

ಯಾರು ದೊಡ್ಡೋರು?: ರಹಮತ್ ತರೀಕೆರೆ ಕಥಾ ಸಂಕಲನದ ಒಂದು ಕತೆ

“ಹಿಂಗ್ ಬಂದು ಸಮುದ್ರದಾಗೆ ತೇಲ್ತಾ ಇರುವಾಗ ಒಂದು ಕುಲ್ಡುಗೊಕ್ಕರೆ ಮೇಲ್ಗಡೆ ಹರ‍್ತಾ ನೀರ್ ಮೇಲಿರೋ ಕುಂಬಳ್‌ಕಾಯೀನಾ ನೋಡ್ತು. ಯಲಾ ಯಲಾ! ಒಂದ್ ವಾರಕ್ಕೆ ಆಗೋವಷ್ಟು ತಿನ್ನಕೆ ಸಿಕ್ತು ಕಣಲೆ ಅಂದ್ಕೊಂಡು ಕೊಕ್ನಾಗೆ ಕಚ್ಕೊಂಡ್ ಬಂದು ಒಂದು ದೊಡ್ಡ ಆಲದಮರದ ಮ್ಯಾಲೆ ಬಂದು ಕುತ್ಕೊಂಡ್ತು. ಕುತ್ಕಂಡು ಎಲ್ಡ್ ಕಾಲಾಗೆ ಕಾಯಿನ ಅಮುಕ್ಕೊಂಡು ಚಂದರ್ಕಿಗೆ ಬಾಯಿಹಾಕಿ ಮುಚ್ಚಳ ತಗೀತು. ಆಗ ಒಳಗಿದ್ದೋರೆಲ್ಲ ಅಲೆಲೆಲೆ, ಏಳ್ರಲಾ ಬೆಳಕ್ ಹರೀತು.”
ರಹಮತ್‌ ತರೀಕೆರೆ ಕಥಾ ಸಂಕಲನ “ಗೇರಮರಡಿ ಕತೆಗಳು”ದಿಂದ ಒಂದು ಕತೆ ನಿಮ್ಮ ಓದಿಗೆ

Read More

ಮಿಲ್ಟ್ರಿ ಟ್ರಂಕೊಳಗಿನ ಕಥೆಗಳು….

ಇಲ್ಲಿ ಅಧಿಕಾರ ಕೇಂದ್ರವಿರುವ ದಕ್ಷಿಣದ ಕರ್ನಾಟಕದ ಎದುರು, ಉತ್ತರ ಕರ್ನಾಟಕ ವಿಶಿಷ್ಟವಾದ ಭಾಷೆಯನ್ನಾಗಲಿ ಅನುಭವವನ್ನಾಗಲಿ ವೈಭವೀಕರಿಸುವುದಿಲ್ಲ, ಇಲ್ಲವೇ ಕೀಳೀಕರಿಸುವುದಿಲ್ಲ. ತನ್ನ ಪಾಲಿಗೆ ಕನ್ನಡ ನಾಡಿನ ಬದುಕೆಲ್ಲ ಒಂದೇ ಎಂಬ ಸಮದರ್ಶಿಯಾದ ದೃಷ್ಟಿಕೋನವು ಇಲ್ಲಿ ಕೆಲಸಮಾಡುತ್ತದೆ. ಹೀಗಾಗಿ ಇಲ್ಲಿನ ಸ್ಮೃತಿಚಿತ್ರಗಳು ರೋಚಕವಾದ ಅನುಭವವನ್ನು ಮಂಡಿಸಿ ಓದುಗರನ್ನು ರಂಜಿಸುವುದಕ್ಕೆ ಉತ್ಸುಕವಾಗುವುದಿಲ್ಲ. ಎಲ್ಲ ಭಾಗದ ಜೀವನದಲ್ಲಿರುವ ವಿಷಾದಕರ ದುರಂತಗಳನ್ನು ದಾಖಲಿಸುತ್ತವೆ. ಜನರ ಹಸಿವು ಬಡತನ ದುಡಿಮೆ ಹೋರಾಟ ಜೀವಂತಿಕೆಗಳನ್ನು ತಾಳ್ಮೆಯಿಂದ ಘನತೆಯಿಂದ ಕಾಣಿಸುತ್ತವೆ.
ಡಾ. ಲಕ್ಷ್ಮಣ ವಿ.ಎ. ಬರಹಗಳ ಸಂಕಲನ “ಮಿಲ್ಟ್ರಿ ಟ್ರಂಕು”ಕ್ಕೆ ರಹಮತ್‌ ತರೀಕೆರೆ ಬರೆದ ಮುನ್ನುಡಿ

Read More

ಅಮೀರ್ ಬಾಯಿ ಕರ್ನಾಟಕಿ: ಸ್ಫೂರ್ತಿದಾಯಕ ಕೃತಿ

ಮಹಿಳೆಯರಿಗೆ ಬಹುತೇಕ ನಿರಾಕರಿಸಲ್ಪಟ್ಟಿರುವ ಕಲಾಕ್ಷೇತ್ರದ ವಲಯಕ್ಕೆ ಅಮೀರಬಾಯಿಯಂಥ ಅಭಿನಯ ತಾರೆ ಪ್ರವೇಶ ಪಡೆದದ್ದು ಒಂದು ಪವಾಡವೇ ಸರಿ.  ಸಂಪ್ರದಾಯದ ಗೆರೆ ದಾಟಿ, ಅಮೀರ್ ಬಾಯಿ, ಪ್ರತಿಭೆಯನ್ನು ಪೋಷಿಸಲು ಮುಂದಾದರು. ಮುಂಬೈಯ ಎಚ್.ಎಂ.ವಿ ಕಂಪನಿಯು ಅಮೀರಬಾಯಿಯ ಪ್ರತಿಭೆಯನ್ನು ಗುರುತಿಸಿ ಧ್ವನಿ ಮುದ್ರಣಕ್ಕೆ ಕರೆಸಿಕೊಂಡಿತು. ಹದಿನಾರು ವರ್ಷದ ಅಮೀರಬಾಯಿ ಅಲ್ಲಿ ಕವ್ವಾಲಿಯೊಂದನ್ನು ಹಾಡಿದ್ದರು. ನಂತರ ಅವಕಾಶಗಳು ಇವರನ್ನು ಹುಡುಕುತ್ತಾ ಬಂದವು. ಪ್ರೊ. ರಹಮತ್ ತರೀಕೆರೆ ಬರೆದ ಅಮೀರ್ ಬಾಯಿ ಕರ್ನಾಟಕಿ ಕೃತಿಯ ಕುರಿತು ಡಾ. ಸುಮಂಗಲಾ ಮೇಟಿ ತಮ್ಮ ಅನಿಸಿಕೆಗಳನ್ನು ಬರೆದಿದ್ದಾರೆ.

Read More

ರಹಮತ್‌ ತರೀಕೆರೆ ಬರೆದ ಹೊಸ ಪುಸ್ತಕ ‘ಕರ್ನಾಟಕ ಗುರುಪಂಥʼ…

“ವರ್ಗ ಅಸಮಾನತೆಯ ಸಮಾಜದಲ್ಲಿ ಹಂಚುತತ್ವದ ಈ ಆಧ್ಯಾತ್ಮಿಕ ಮಿತ್‌ ಗಳಿಗೆ ಮಾರ್ಮಿಕವಾದ ಅರ್ಥವಿದೆ. ಇಲ್ಲಿ ಆಹಾರವು ಸಹಾನುಭೂತಿ ತೋರುವ ಹಾಗೂ ಮನುಷ್ಯ ಸಂಬಂಧ ಬೆಸೆವ ಸಾಧನವಾಗುತ್ತದೆ. ಆಹಾರದ ವಿಷಯದಲ್ಲಿ ದಲಿತರ ಜತೆ ಸಹಭೋಜನದ ಏರ್ಪಾಟನ್ನು ಮುದ್ದಾಮಾಗಿ ಮಾಡಿದವರು ಇಂಚಗೇರಿಯವರು. `ದಲಿತರ ಕೇರಿಯಲ್ಲಿ ಉಣ್ಣದ ಹೊರತು ಮುಕ್ತಿಯಿಲ್ಲ’ ಎಂಬ ವಾಚ್ಯ-ಆಧ್ಯಾತ್ಮಿಕ ಎರಡೂ ಅರ್ಥದಲ್ಲಿ ಸಲ್ಲುವ…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ