ನೆಲದ ಕಾವು ಮುಗಿಲ ತಾಕಿ: ರಾಜಕುಮಾರ ಮಡಿವಾಳರ ಕವನ ಸಂಕಲನಕ್ಕೆ ಸತೀಶ ಕುಲಕರ್ಣಿ ಮುನ್ನುಡಿ
ಈ ಕವಿತೆಗಳನ್ನು ಓದಿದಾಗ ಕೆ.ಎಸ್.ಎನ್ ರ ದಾಂಪತ್ಯ ಪ್ರೀತಿ, ಬೇಂದ್ರೆ ಅವರ ಭಾಷಾ ಗತ್ತು, ಕಂಬಾರರ ಜನಪದಿಯ ಕಥಾನಕಗಳು ನೆನಪಾಗದೇ ಇರುವುದಿಲ್ಲ. ಆದರೆ ಇವರನ್ನೆಲ್ಲ ಅದುಮಿ, ತಮ್ಮತನದ ಈಜುಗಾರಿಕೆಯನ್ನು ಮಡಿವಾಳರ ಕಲಿತಿದ್ದಾರೆ. ಕಾವ್ಯ ಪರಂಪರೆ ಪ್ರತಿ ಕವಿಯನ್ನು ಬೆನ್ನಟ್ಟುತ್ತದೆ. ದತ್ತಿ ದೇಣಿಗೆಯನ್ನು ನೀಡುತ್ತಲೇ ಇರುತ್ತದೆ. ಕೊನೆಗೂ ನಮ್ಮ ಹೆಜ್ಜೆ ಗುರುತುಗಳು ಬೇರೆಯವೇ ಆಗಿರಬೇಕು. ಈ ಮಾತಿನಂತೆ ರಾಜಕುಮಾರ ಗೆದ್ದಿದ್ದಾರೆ. ತುಸು ತೆಳು ಛಾಯೆ ಬಿಟ್ಟರೆ ಯಾರ ಹಂಗಿನ ನೆರಳಲ್ಲಿಲ್ಲ. ಬಾನ ಸ್ವತಂತ್ರ ಹಕ್ಕಿಯಂತೆ ಈ ನೆಲದ ಗಾಳಿ ಬೆಳಕು ಸಂವೇದನೆಗಳಲ್ಲಿ ಈಜು ಹೊಡೆದಿದ್ದಾರೆ.
ರಾಜಕುಮಾರ ಮಡಿವಾಳರ “ನೆಲದ ಕಾವು ಮುಗಿಲ ತಾಕಿ” ಕವನ ಸಂಕಲನಕ್ಕೆ ಸತೀಶ ಕುಲಕರ್ಣಿ ಬರೆದ ಮುನ್ನುಡಿ

