Advertisement

Tag: ರಾಮ್ ಪ್ರಕಾಶ್ ರೈ ಕೆ

ಮೈನಾ- ಇದು ದೇಹವಲ್ಲ, ಭಾವಗಳ ಸಂಕಲನ: ರಾಮ್ ಪ್ರಕಾಶ್ ರೈ ಕೆ. ಸರಣಿ

ಮೈನಾ ಸತ್ಯನಿಗೆ ಚಪ್ಪಲಿಯನ್ನು ಉಡುಗೊರೆಯಾಗಿ ನೀಡುತ್ತಾಳೆ. ಅದನ್ನು ಕಂಡು ಬೇಸರದಿಂದ ಇದೆಂಥಾ ಉಡುಗೊರೆ ಎಂದು ಸತ್ಯ ಎಸೆಯುತ್ತಾನೆ. ಅನಂತರ ಕಾಲಿಲ್ಲದೇ ನೆಲಕ್ಕೆ ಕೈಯ್ಯಿಟ್ಟು ನಡೆಯುವಾಗ ನೋವನುಭವಿಸಬಾರದು ಎಂದು ಇದನ್ನು ನೀಡಿದ್ದಾಳೆ ಎಂದು ತಿಳಿದು ಖೇದಗೊಳ್ಳುತ್ತಾನೆ ಆತ. ಇಲ್ಲಿ ಗಮನಿಸಬೇಕಾದ ಅಂಶವೆಂದರೆ ಕಥೆಯು ಸೆರೆ ಹಿಡಿದ ಸೂಕ್ಷ್ಮತೆ. ಈ ದೃಶ್ಯವೇನೂ ಕಥೆಯ ಮುಖ್ಯ ಭಾಗವಲ್ಲದಿದ್ದರೂ, ಅದೆಷ್ಟು ಅಧ್ಯಯನದ ದೃಷ್ಟಿಕೋನ ಈ ದೃಶ್ಯದಲ್ಲಿ ಅಡಗಿದೆ ಎಂಬುದು ಅಚ್ಚರಿಯ ಸಂಗತಿ.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿ

Read More

ಮಧ್ಯಮ ವರ್ಗ ಮತ್ತು ಬೆಲೆಬಾಳುವ ಕಾಗದದ ಚೂರುಗಳು: ರಾಮ್ ಪ್ರಕಾಶ್ ರೈ ಕೆ. ಸರಣಿ

‘ಪ್ರತಿಯೊಬ್ಬ ಮನುಷ್ಯನಲ್ಲಿಯೂ ಒಬ್ಬ ಕಳ್ಳನಿದ್ದಾನೆ’ ಎಂಬ ವಾಕ್ಯ, ‘ಪ್ರತಿಯೊಬ್ಬ ಮನುಷ್ಯನಲ್ಲಿಯೂ ಒಂದು ಮಗುವಿದೆ’ ಎಂದು ಕೋಟಿಯ ಕೈಗಳಲ್ಲಿ ಬದಲಾಗುವುದೇ ಆತನ ವ್ಯಕ್ತಿತ್ವದ ಹೆಚ್ಚುಗಾರಿಕೆಯ ಸಂಕೇತ. ಚಿತ್ರದ ತುಂಬೆಲ್ಲಾ ರೂಪಕಗಳ ಬಳಕೆ ಹೇರಳವಾಗಿದೆ. ಕೋಟಿಯೆಂಬ ಹೆಸರು ಅದರಲ್ಲೊಂದು. ಇಲ್ಲಿ ಎಲ್ಲರೂ ಸಾಗುತ್ತಲೇ ಇರುತ್ತಾರೆ. ಥೇಟು ಪಟ್ಟಣದ ಯಾಂತ್ರಿಕ ಬದುಕಿನಂತೆ. ಆದರೆ ಆ ಪಯಣಕ್ಕೊಂದು ವೇಗ ನಿಯಂತ್ರಕ ಎದುರಾದಾಗ, ಹೇಗೆ ಉತ್ತರಿಸುತ್ತೇವೆ ಎನ್ನುವುದರ ಮೇಲೆ ಬದುಕು ನಿರ್ಧರಿತವಾಗುತ್ತದೆ ಎಂಬುದನ್ನು ನಿರೂಪಿಸಲಾಗಿದೆ.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿ

Read More

ಅಪ್ಪನೆಂಬ ಆಗಸ, ಮಗಳೆಂಬ ಚಂದಿರ:‌ ರಾಮ್‌ಪ್ರಕಾಶ್‌ ರೈ ಸರಣಿ

ಕಥೆಯು ಅವನೆಣಿಸಿದಂತೆ ಸಾಗುವುದಿಲ್ಲ. ಅರ್ಥಾತ್, ಕಸದ ಬುಟ್ಟಿಯೆಂಬುದು ಒಂದು ರೂಪಕ. ಇಲ್ಲಿ ಲೂಟಿಯಾಗಿರುವುದು ಅಮಾಯಕ ಆತ್ಮದ ಬದುಕು. ಅದು ಸುಟ್ಟಿರುವುದು ಸುಂದರ ಕನಸುಗಳನ್ನು. ಮುಗಿದ ಕಥೆಗೆ ಇನ್ನೆಲ್ಲಿ ಶುರುವೆಂದೆನಿಸುವ ಸನ್ನಿವೇಶದಲ್ಲಿ, ಮಗಳಿಗಾದ ಘೋರ ಅನ್ಯಾಯದ ವಿರುದ್ಧ, ಅಪ್ಪ ಹೋರಾಡುವುದು ಯುಕ್ತಿಯಿಂದ.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿ

Read More

ನೀ ದೇಹದೊಳಗೋ, ದೇಹ ನಿನ್ನೊಳಗೋ: ರಾಮ್ ಪ್ರಕಾಶ್ ರೈ ಕೆ ಸರಣಿ

ಇನ್ನೇನು ಶ್ರದ್ಧಾಂಜಲಿಗೆ ಒಳಗಾದ ಎಂದು ಭಾವಿಸುವಾಗಲೇ, ವೈದ್ಯಕೀಯ ವಿಜ್ಞಾನದ ಎಲ್ಲಾ ಊಹೆಗಳ ಪೊರೆಯ ಸರಿಸಿ ಮತ್ತೆ ಎದ್ದು ಬರುತ್ತಾನೆ. ಆದರೆ ಆತ ತನ್ನ ಪೂರ್ವ ನೆನಪುಗಳೆಲ್ಲವನ್ನೂ ಕಳೆದುಕೊಂಡಿರುತ್ತಾನೆ. ತನ್ನ ಮಾತಾ ಪಿತರ ಸಹಿತವಾಗಿ. ವೈದ್ಯಕೀಯ ವಿಜ್ಞಾನವೇ ನಂಬಲಾರದಂತೆ ಆತ ಬದಲಾಗಿರುತ್ತಾನೆ.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿ

Read More

ಮಿಲನ-ಸುಂದರ ಅನುಬಂಧದ ಕವನ: ರಾಮ್ ಪ್ರಕಾಶ್ ರೈ ಕೆ ಸರಣಿ

ಆಕಾಶ್ ಮತ್ತು ಅಂಜಲಿಯೇ ಕಥೆಯ ಬಹು ಭಾಗದ ಕೇಂದ್ರ ಬಿಂದುವಾಗಿರುವುದರಿಂದ ಸಂಬಂಧದ ಪರಿಕಲ್ಪನೆ, ಶೂನ್ಯ ಪುರುಷ ಮೇಲರಿಮೆ, ಅವಳ ಖುಷಿಯಲ್ಲಿ ಅವನು ಕಾಣುವ ನೆಮ್ಮದಿ ಎಲ್ಲವೂ ಬದುಕಿಗೊಂದು ಮಾದರಿ. ಬಂಧಗಳು ಬಿಗಿಯಾಗುವುದೇ ತಾನು, ತನ್ನದೆಂಬ ಭಾವ ಶೂನ್ಯವಾಗಿ, ನಿನ್ನ ಸಂತಸವೇ ನನ್ನದು ಎಂಬ ಯೋಚನೆ ಮುನ್ನೆಲೆಗೆ ಬಂದಾಗ ಎಂದು ಸಾರುವ ಕಥೆಯ ತೆರೆಯ ಮೇಲಿನ ಚಿತ್ರಣವೇ ಮನ ಮಿಡಿಯುವಂಥದ್ದು.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ