ನಾಯಿಕುರ್ಕನ ನೆರಳಿನಲ್ಲಿ: ವಿಜಯಶ್ರೀ ಹಾಲಾಡಿ ಕೃತಿಯ ಒಂದು ಪ್ರಬಂಧ
ಎಲ್ಲರೂ ಒಟ್ಟಾಗಿ ಅನ್ನ, ತಿಂಡಿ ತಿನ್ನುವಾಗ ಕರಿಯನ ಗಲಾಟೆಯೇ ಗಲಾಟೆ. ಯಾರಿಗೂ ತಿನ್ನಲು ಬಿಡದೆ ತಾನೇ ಎಲ್ಲವನ್ನೂ ಮುಕ್ಕಬೇಕೆನ್ನುವುದು ಅವಳ ಆಸೆ. ಎಂಥಾ ಬೊಬ್ಬೆ! ನನಗೆ ಏನು ಮಾಡಬೇಕೆಂಬುದೇ ತಿಳಿಯುತ್ತಿರಲಿಲ್ಲ. ಒಬ್ಬೊಬ್ಬರಿಗೆ ಒಂದೊಂದು ಕಡೆ ಊಟ ಹಾಕುವ ವ್ಯವಸ್ಥೆ ಮಾಡಿಕೊಂಡೆ. ಆದರೆ ಎಲ್ಲ ಕಡೆಯೂ ಹೋಗಿ ತಾನೇ ಬಾಯಿಹಾಕಿ ಯಾರಿಗೂ ಸರಿಯಾಗಿ ತಿನ್ನಲು ಬಿಡದೆ, ಕರಿಯ ಅವಸ್ಥೆ ಕೊಡುತ್ತಿದ್ದಳು. ಕೊನೆಕೊನೆಗೆ ಕೋಲು ಹಿಡಿದು ಊಟ ಹಾಕುವ ಪರಿಸ್ಥಿತಿ ಬಂದಿತು. ಈ ನಡುವೆ ಪಾಪದ್ದು ದಾಸುಮರಿ ತುಂಬಾ ಕಷ್ಟ ಅನುಭವಿಸಿತು. ಅದಕ್ಕೆ ಬೇಗ ಬೇಗ ತಿನ್ನಲು ಆಗುತ್ತಿರಲಿಲ್ಲ. ಎಲ್ಲವನ್ನೂ ಕರಿಯನೇ ತಿಂದುಹಾಕುತ್ತಿತ್ತು. ಇಷ್ಟೇ ಆಗಿದ್ದರೆ ಹೋಗಲಿ ಅನ್ನಬಹುದಿತ್ತು.
ವಿಜಯಶ್ರೀ ಹಾಲಾಡಿ ಪ್ರಬಂಧಗಳ ಸಂಕಲನ “ಕಾಡಿನ ಸಂಗೀತ” ಕೃತಿಯ ಒಂದು ಪ್ರಬಂಧ ನಿಮ್ಮ ಓದಿಗೆ
