Advertisement

Tag: ವಿಜಯಶ್ರೀ ಹಾಲಾಡಿ

ಸೀರೆ ಎಂಬ ಮಾಯಾವಿನಿ

ಸೀರೆ ಎಂಬ ಈ ವಿಚಿತ್ರ. ವಿಶಿಷ್ಟ ಉಡುಪು ಯಾಕೆ ಮತ್ತು ಹೇಗೆ ರೂಪು ತಳೆದಿರಬಹುದು ಎಂದು ಯೋಚಿಸುತ್ತ ಹೋದ ಹಾಗೂ ಇದು ಪುರುಷ ಪ್ರಧಾನ ವ್ಯವಸ್ಥೆಯ ರಾಜಕಾರಣದ ಒಂದು ಭಾಗವಾಗಿ ಬೆಳೆದಿದೆ ಅನ್ನಿಸಿದೆ. ಸಂಸ್ಕೃತಿ, ಸಂಪ್ರದಾಯಗಳ ಹೆಸರಿನಲ್ಲಿ ನಮ್ಮ ದೇಶದ ಕೆಲಭಾಗಗಳ ಮಹಿಳೆಗೆ ಸೀರೆ ಉಡುವುದನ್ನು ಕಡ್ಡಾಯ ಮಾಡಲಾಗಿದೆ! ಕೆಲವು ಪ್ರದೇಶಗಳಲ್ಲಿ ಸೀರೆಯ ಸೆರಗನ್ನು ತಲೆಗೆ ಹೊದೆಯುವುದೂ ಕಡ್ಡಾಯ. ವಿಜಯಶ್ರೀ ಹಾಲಾಡಿ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಪ್ರಾಣಿ ಪ್ರಪಂಚದ ತರ್ಕ ಮೀರಿದ ಕತೆಗಳು

ನಮ್ಮ ಕೆಂಚಬೆಕ್ಕಿನೊಂದಿಗೆ ನಿಮ್ಮನ್ನು ಎದುರುಗೊಳ್ಳುತ್ತೇನೆ. ಇವನ ಪರಿಚಯವಾದ ನಂತರ ಕೆಂಚು-ಬಿಳಿ ಮಿಶ್ರಿತ ಎಲ್ಲಾ ಬೆಕ್ಕುಗಳೂ ನನ್ನ ಕಣ್ಣಿಗೆ ಅಪ್ಯಾಯಮಾನವಾಗಿ ಕಾಣುವಂತಾಗಿದ್ದು ಇವನ ವಿಶಿಷ್ಟ ಗುಣದಿಂದ. ಚುರುಕಿನ, ಇಲಿ ಹಿಡಿಯುವ, ಠಣ್ಣನೆ ನೆಗೆದು ಮಡಿಲಲ್ಲಿ ಕೂರುವ ಬೆಕ್ಕೊಂದು ಈಗ ನಿಮ್ಮ ಕಣ್ಮುಂದೆ ಬಂದು ನಿಂತಿರಬೇಕಲ್ಲವೇ? ಆದರೆ ಕೆಂಚ ಹಾಗಲ್ಲವೇ ಅಲ್ಲ. ಇವನು ಬಹಳ ಸೋಮಾರಿ. ಸೋಮಾರಿ ಎನ್ನುವುದಕ್ಕಿಂತ ‘ಹೆದ್‌ರ್‌ಪುಕ್ಲ’. ಬೇಟೆಗೂ ಇವನಿಗೂ ದೊಡ್ಡ ವೈರ. ಇಲಿ, ಹೆಗ್ಗಣ, ಗುಡ್ಡೆಹೆಗ್ಗಣ, ಅಳಿಲು, ಕೋಳಿ ಎಲ್ಲ ಬಿಡಿ ಒಂದು ಜಿರಳೆಯನ್ನೂ ಹಿಡಿಯಲಾರ! ಪ್ರಾಣಿಪ್ರಪಂಚದ ಲವಲವಿಕೆಯ ಕತೆಗಳನ್ನು ಬರೆದಿದ್ದಾರೆ ವಿಜಯಶ್ರೀ ಹಾಲಾಡಿ. 

Read More

ಗುಮ್ಮನ ಧ್ವನಿ ಕೇಳುವ ಆಸೆಯಿಂದ…

ನಮ್ಮ ಮನೆ ಹತ್ತಿರದ ಕಾಡುಗಳಲ್ಲಿ ಅನೇಕ ಗುಮ್ಮಗಳಿದ್ದವು. ರಾತ್ರಿಯಾದೊಡನೆ ಮೈನವಿರೇಳಿಸುವ ಅವುಗಳ ಕೂಗು ಆರಂಭವಾಗುತ್ತಿತ್ತು. ಒಂದು ಗುಮ್ಮ ‘ಊಂಹೂಂ’ ಎಂದರೆ ಇನ್ನೊಂದು ಗುಮ್ಮ ‘ಊಂಹೂಂಹೂಂ’ ಎಂದು ಉತ್ತರಿಸುತ್ತಿತ್ತು. ಈಗ ಎಣಿಸಿಕೊಂಡರೆ ಅದು ಪ್ರೇಮಸಲ್ಲಾಪ ಇರಬಹುದೆನಿಸುತ್ತದೆ! ಅದೇನು ಭಾಷೆಯೋ, ಯಾರಿಗೆ ಗೊತ್ತು! ಆ ದಿನಗಳಲ್ಲಂತೂ ಹೆದರಿಕೆಯಿಂದ ತಲೆ ಹೊರಹಾಕಲೂ ಭಯ. ಹಾಗಾಗಿ ನಾನು ಹಾಲು ಕುಡಿಯಲು ಹೋಗುವುದಿಲ್ಲವೆಂದು ಹಟ ಮಾಡುತ್ತಿದ್ದೆ. ಅಜ್ಜಿ ಕೊಂಗಾಟ ಮಾಡಿ “ನಿಧಾನ ಹರೆದುಕೊಂಡು ಹೋಗು ಮಗಾ, ಗುಮ್ಮನಿಗೆ ಕಾಣುವುದಿಲ್ಲ” ಎನ್ನುತ್ತಿದ್ದರು! ಐದಾರು ವರ್ಷಗಳ ನನಗೆ ಮುದ್ದು ಮಗುವಿನಂತೆ ಹರೆದು ಹೋಗುವುದು ಆ ಕ್ಷಣಕ್ಕೆ ಇಷ್ಟವೂ ಆಗಿಬಿಡುತ್ತಿತ್ತು.
ಗೂಬೆಯ ಬಗೆಗಿನ ರೋಚಕ ಅನುಭವಗಳನ್ನು ಬರೆದಿದ್ದಾರೆ ವಿಜಯಶ್ರೀ ಹಾಲಾಡಿ

Read More

ಕಣ್ಣ ಕಾಡಿನ ಹಾಡು

ಮೇ ತಿಂಗಳ ಕೊನೆ ಅಂದರೆ ಬ್ಯಾಸಿ ತಿಂಗಳಲ್ಲಿ ಶುರುವಾಗುವ ಚಟ್ ಚಟಾರ್ ಸಿಡಿಲು ಗುಡುಗು ಸಹಿತ ಜಡಿಮಳೆ ಆರಂಭ ಮಾತ್ರ. ಮುಂದೆ ‘ತಕ್ಕೋ ಬಿಡ್ಬೇಡ’ ಎನ್ನುವಂತೆ ಕಾರ್ ತಿಂಗಳಲ್ಲಿ ಕಿವಿ ಸೋಲುವಂಥಾ ಮಳೆ. ಬೆಳಗಿನ ಜಾವದಿಂದ ರಾತ್ರಿಯವರೆಗೆ ಮತ್ತೆ ಇರುಳುಕಪ್ಪಿನಿಂದ ಮರು ಬೆಳಗಿನವರೆಗೆ ಹನಿ ಕಡಿಯದೆ ಜೈಲುಗುಟ್ಟಿ ಸುರಿವ ಮಳೆ. ಮದೂರಿ ಎಂಬ ಊರಿನ ಕಷ್ಟಸುಖವನ್ನು ಹೇಳಿಕೊಂಡಿದ್ದಾರೆ ವಿಜಯಶ್ರೀ ಹಾಲಾಡಿ.

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ