Advertisement

Tag: ವಿಜ್ಞಾನ

ಪ್ರಸಿದ್ಧ ಫೋಟೋದ ಹಿಂದಿನ ರಹಸ್ಯ: ಶೇಷಾದ್ರಿ ಗಂಜೂರು ಸರಣಿ

ಆ ಫೋಟೊ ನೋಡಿದ ತಕ್ಷಣವೇ ಅವಳಿಗೆ ಅದು ಕಂಡಿತು. ಆ ಫೋಟೋದಲ್ಲಿನ ಸ್ಪಷ್ಟತೆ, ಅದರಲ್ಲೂ ಫ್ರಾಂಕ್ಲಿನ್‌ಳಂತಹ ಅನುಭವ-ಪಾಂಡಿತ್ಯ ಎರಡೂ ಇದ್ದ ಮೇಧಾವಿಗೆ, ಒಂದರೆ ಕ್ಷಣ ಅವಳ ಉಸಿರುಗಟ್ಟಿಸಿರಬಹುದು. ಆ ಫೋಟೋ ಮುಖಾಂತರ, ಡಿಎನ್‌ಎ ಗಟ್ಟಿದನಿಯಲ್ಲಿ, ಖಡಾಖಂಡಿತವಾಗಿ ಸಾರುತ್ತಿತ್ತು: “ನಾನೊಂದು ಸುರುಳಿ!”. ಪೈಥಾಗೊರಾಸನಿಂದ ಹಿಡಿದು, ಕೊನೆಗೂ ಡಾರ್ವಿನ್ನನವರೆಗೆ ಸಾವಿರಾರು ವರ್ಷಗಳ ಸಿದ್ಧಾಂತಗಳ, ಮೆಂಡೆಲ್-ಮಾರ್ಗನ್ ಅಂತಹವರ ಪ್ರಯೋಗಗಳ ಗುರಿಯ ಸ್ವರೂಪದ ದರ್ಶನವಾಗಿತ್ತು.
ಶೇಷಾದ್ರಿ ಗಂಜೂರು ಬರೆಯುವ ವಿಜ್ಞಾನ ಸರಣಿ “ವಿಜ್ಞಾನದ ಕಥಾ ಪ್ರಸಂಗಗಳು”ಯಲ್ಲಿ ಹೊಸ ಬರಹ

Read More

ಜಗತ್ತಿನ ಅತ್ಯಂತ ಸುಂದರ ಫೋಟೋ(2):ಶೇಷಾದ್ರಿ ಗಂಜೂರು ಸರಣಿ

ಈ ಆಲೋಚನೆ ಹೊಳೆದ ರಾತ್ರಿ ಅವನಿಗೆ ನಿದ್ದೆಯೇ ಬರಲಿಲ್ಲ. ಕಾಲೇಜಿನ ಇನ್ನೊಬ್ಬ ಪ್ರೊಫೆಸರ್ ಕೊಟ್ಟಿದ್ದ ಹೋಂ ವರ್ಕ್ ಮಾಡಲೂ ಸಹ ಮನಸು ಬರಲಿಲ್ಲ. ಬದಲಿಗೆ, ಹಾಸಿಗೆಯಿಂದೆದ್ದು, ಇಲ್ಲಿಯವರೆಗೆ ಕಲೆ ಹಾಕಿದ್ದ ಅಂಕಿ-ಸಂಖ್ಯೆಗಳು-ಮಾಹಿತಿಗಳನ್ನೆಲ್ಲಾ ಮತ್ತೆ-ಮತ್ತೆ ನೋಡಿ, ಸಣ್ಣ ಕಾಗದದ ಮೇಲೊಂದು ದಾರದಂತೆ ಗೆರೆಯೊಂದನ್ನು ಎಳೆದು ಅದರ ಮೇಲೆ, ತನ್ನ ಲೆಕ್ಕಾಚಾರ ಬಳಸಿ ಬಿಳಿಗಣ್ಣು, ಹಳದಿ ಬಣ್ಣ, ಕಿರು ರೆಕ್ಕೆ, ಹಾರೆಗಣ್ಣು ಇತ್ಯಾದಿ ಜೀನುಗಳನ್ನು ಮಾರ್ಕ್ ಮಾಡಿದ. ವಂಶವಾಹಿ ಗುಣಗಳು ಒಂದು ಪೀಳಿಗೆಯಿಂದ ಇನ್ನೊಂದಕ್ಕೆ ಹೇಗೆ ಸಂವಹಿಸುತ್ತದೆ ಎಂದು ತೋರುವ “ಜೀನ್ ಮ್ಯಾಪ್” ಒಂದು ಹೀಗೆ ಮಾನವ ಇತಿಹಾಸದಲ್ಲೇ ಮೊದಲ ಬಾರಿಗೆ ಸಿದ್ಧವಾಯಿತು.
ಶೇಷಾದ್ರಿ ಗಂಜೂರು ಬರೆಯುವ ವಿಜ್ಞಾನ ಸರಣಿ “ವಿಜ್ಞಾನದ ಕಥಾ ಪ್ರಸಂಗಗಳು”

Read More

ಶೇಷಾದ್ರಿ ಗಂಜೂರು ಬರೆಯುವ ನೂತನ ವಿಜ್ಞಾನ ಸರಣಿ “ವಿಜ್ಞಾನದ ಕಥಾ ಪ್ರಸಂಗಗಳು” ಇಂದಿನಿಂದ

ಮನುಷ್ಯನಿಗೆ ಮನುಷ್ಯನೇ ಹುಟ್ಟುವ ತದ್ರೂಪಿತನ ಪುರಾತನ ಕಾಲದಿಂದಲೂ ಕುತೂಹಲ ಮೂಡಿಸಿದೆ. ಎರಡೂವರೆ ಸಾವಿರ ವರ್ಷಗಳ ಹಿಂದೆಯೇ ಗ್ರೀಕ್ ಗಣಿತಜ್ಞ-ತತ್ವಶಾಸ್ತ್ರಿ ಪೈಥಾಗೊರಸ್ ಅನುವಂಶೀಯತೆಯ ಸೂತ್ರ ವೀರ್ಯದಲ್ಲಿದೆ ಎನ್ನುತ್ತಾನೆ. ಅವನ ಪ್ರಕಾರ, ವೀರ್ಯ ಪುರುಷನಿಂದ ಹೊರಬರುವ ಮುನ್ನ ದೇಹದ ಎಲ್ಲಾ ಭಾಗಗಳಲ್ಲಿ ಹರಿದು ಆ ಭಾಗಗಳೆಲ್ಲದುರ ಮಾಹಿತಿಯನ್ನೂ ಕಲೆಹಾಕಿ ತದ್ರೂಪಿ ಇರುವ ಬೀಜವಾಗುತ್ತದೆ. ಈ ಬೀಜ ಗರ್ಭವನ್ನು ಸೇರಿದಾಗ, ಆ ತದ್ರೂಪಿಗೆ ಬೇಕಿರುವ ಪೋಷಕಾಂಶ ನೀಡಿ ಅದನ್ನು ದೊಡ್ಡದು ಮಾಡುವುದಷ್ಟೇ ಹೆಣ್ಣಿನ ಕೆಲಸ.
ಶೇಷಾದ್ರಿ ಗಂಜೂರು ಬರೆಯುವ ನೂತನ ವಿಜ್ಞಾನ ಸರಣಿ “ವಿಜ್ಞಾನದ ಕಥಾ ಪ್ರಸಂಗಗಳು”

Read More

ಕನ್ನಡದ ಡಿಜಿಟಲ್ ನವೋದಯ ಮತ್ತು ವಿಜ್ಞಾನ ಬರವಣಿಗೆ: ಎಲ್.ಜಿ.ಮೀರಾ ಅಂಕಣ

ಹಲವಾರು ಲೇಖಕ-ಲೇಖಕಿಯರು ತಮ್ಮ ಕೊಡುಗೆಗಳನ್ನು ಕೊಟ್ಟಿದ್ದಾರೆ, ಕೊಡುತ್ತಿದ್ದಾರೆ. ಆದರೂ ಕರ್ನಾಟಕದ ಜನಮಾನಸದಲ್ಲಿ ಮತ್ತು ಉನ್ನತ ಶಿಕ್ಷಣ ಕ್ಷೇತ್ರದ ವಿಜ್ಞಾನದ ಅಧ್ಯಾಪಕರಲ್ಲಿ ಮತ್ತು ಸಂಶೋಧಕರಲ್ಲಿ `ವಿಜ್ಞಾನವೆಂದರೆ ಇಂಗ್ಲಿಷಿನಲ್ಲಿ ಇರುವಂಥದ್ದು, ಇರಬೇಕಾದದ್ದುʼ ಎಂಬ ಗಾಢ ಭಾವನೆ ಬೇರೂರಿದೆ. ಈ ಭಾವನೆ-ಚಿಂತನೆಯ ತಿರುಳು ಎಂದರೆ “ತೀರಾ ಗಂಭೀರ ವಿಜ್ಞಾನ ವಿಚಾರಗಳನ್ನು ಮತ್ತು ಅಂತಾರಾಷ್ಟ್ರೀಯ ಮಟ್ಟದ ವಿಜ್ಞಾನ ಲೇಖನಗಳನ್ನು ಕನ್ನಡದಲ್ಲಿ ಬರೆಯಲಾಗದು, ಹಾಗೆ ಬರೆಯಲು ಸೂಕ್ತ ಪದಗಳೇ ಸಿಗುವುದಿಲ್ಲ” ಎಂಬ ಅನಿಸಿಕೆ ಅಥವಾ ಪೂರ್ವಗ್ರಹ. ಇದು ವಿಜ್ಞಾನಕ್ಷೇತ್ರದ ಹಲವು ಅಧ್ಯಾಪಕರು ಮತ್ತು ವಿಜ್ಞಾನಿಗಳಲ್ಲಿದೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಇಪ್ಪತ್ತೊಂಭತ್ತನೆಯ ಬರಹ

Read More

ಒಂದು ಆಕಾಶ, ಹಲವು ಏಣಿಗಳು: ಯೋಗೀಂದ್ರ ಮರವಂತೆ ಬರಹ

ವಿಮಾನಗಳ ಚರಿತ್ರೆಯನ್ನು ಬರೆದವರು ಬೇರೆಬೇರೆ ಕಾಲಘಟ್ಟದಿಂದ ಸ್ಥಳದಿಂದ ಘಟನೆಗಳಿಂದ ತಮ್ಮ ಅಧ್ಯಯನ, ಪುರಾವೆ ಹಾಗು ಅಂದಾಜುಗಳನ್ನು ವಿಶದೀಕರಿಸುವುದಿದೆ. ಆಕಾಶಕ್ಕೆ ನೆಗೆಯಬೇಕು ಎನ್ನುವ ಉತ್ಕಟ ಆಸೆ ಮನುಷ್ಯರಿಗೆ ಎಂದು ಬಂತೋ ಕರಾರುವಕ್ಕಾಗಿ ಹೇಳಿದವರಿಲ್ಲವಾದರೂ ಬಾನಿನಲ್ಲಿ ಸ್ವಚ್ಛಂದವಾಗಿ ಹಾರಿ ಇಳಿಯುವ ಹಕ್ಕಿಗಳನ್ನು ನೋಡಿ ನಮಗೂ ಹಾರುವ ಕನಸು ಹುಟ್ಟಿತು. ಮತ್ತೆ ಆ ನಿಟ್ಟಿನಲ್ಲಿ ಪ್ರಯತ್ನಗಳು ನಿರಂತರವಾಗಿ ಸಾಗಿದವು ಎನ್ನುವ ಉಲ್ಲೇಖಗಳು ಓದಿನಲ್ಲಿ ಸಿಗುತ್ತವೆ.
ಯೋಗೀಂದ್ರ ಮರವಂತೆ ಬರೆದ ವಿಮಾನ ಲೋಕದ ಅಚ್ಚರಿ, ಅನುಭವಗಳ ಕುರಿತ ಹೊಸ ಕೃತಿ “ಏರೋ ಪುರಾಣ”ದ ಒಂದು ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ