Advertisement

Tag: ವಿನಾಯಕ ಅರಳಸುರಳಿ

ಎಂಜಿ ರೋಡಿನಲ್ಲೊಂದು ಸುತ್ತು: ವಿನಾಯಕ ಅರಳಸುರಳಿ ಅಂಕಣ

ಅದೇನೂ ಭಾರೀ ದೊಡ್ಡ ಪಬ್ಬಲ್ಲದಿದ್ದರೂ ಅಲ್ಲಿ ವೈಭವಗಳಿಗೇನೂ ಕಮ್ಮಿಯಿರಲಿಲ್ಲ. ಮುಂದೆ ಕೆಲವೇ ದಿನಗಳಲ್ಲಿ ಆ ಪಬ್ಬು ಮುಚ್ಚಲ್ಪಟ್ಟು, ಮುಂದೊಮ್ಮೆ ಆ ರಸ್ತೆಯಲ್ಲಿ ಹೋಗುವಾಗ ಮತ್ಯಾವುದೋ ಹೆಸರಿನ ಕಂಪನಿಯೊಂದು ಬೋರ್ಡು ತೊಟ್ಟುಕೊಂಡು ನಿಂತಿರುವುದು ಕಣ್ಣಿಗೆ ಬಿದ್ದಿತ್ತು. ಈ ಮಹಾನಗರಿಯ ಚಂಚಲತೆಯೇ ಅಂಥದ್ದು‌. ನೆನ್ನೆ ಹಳಕಲು-ಪೊದೆಗಳಿದ್ದ ಜಾಗದಲ್ಲಿ ಬೆಳಗಾಗುವಷ್ಟರಲ್ಲಿ ರಂಗ್ ಬಿರಂಗೀ ಕಟ್ಟವೊಂದು ತಲೆಯೆತ್ತಿಬಿಡುತ್ತದೆ. ಮನೆಯಂತೆ ಕಾಣುವ ಬಿಲ್ಡಿಂಗ್ ನೊಳಗೆ ನೂರಿನ್ನೂರು ಉದ್ಯೋಗಿಗಳಿರುವ ಕಂಪನಿಯೇ ಅಡಗಿಕೊಂಡಿರುತ್ತದೆ. ನೆನ್ನೆಯಷ್ಟೇ ಪ್ರಾರ್ಥನಾ ಮಂದಿರವಾಗಿದ್ದು, ಹತ್ತಾರು ಜನರ ಓಂಕಾರದಿಂದ ತುಂಬಿಹೋಗಿದ್ದ ಸಮುಚ್ಚಯವೊಂದು ನಾಳೆಯಾಗುವಷ್ಟರಲ್ಲಿ ಹತ್ತಾರು ಬಾಡಿಬಿಲ್ಡರ್‌ಗಳ ಕಸರತ್ತು ಶಾಲೆಯಾಗಿ ಬದಲಾಗಿಬಿಡುತ್ತದೆ!
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”

Read More

ಅಲ್ಲಿದೆ ನಮ್ಮನೆ, ಇಲ್ಲಿ ಬಂದೆ ಸುಮ್ಮನೆ..: ವಿನಾಯಕ ಅರಳಸುರಳಿ ಅಂಕಣ

ಕೆಲವೊಮ್ಮೆ ಅಚಾನಕ್ಕಾಗಿ ಬೆಂಗಳೂರಿನ ಮೇಲೆ ಪ್ರೀತಿಯುಕ್ಕುತ್ತದೆ. ಈ ಶಹರ ನಮಗೆ ಬದಕು ಕೊಟ್ಟಿದೆ, ಇದಿನ್ನು ನಮ್ಮ ಊರು, ನಾನಿನ್ನು ಇಲ್ಲಿಯವನು ಎಂದು ನಂಬಲು ಪ್ರಯತ್ನಿಸುತ್ತೇವೆ.‌ ಆಗಲೇ ನಾವು ಪ್ರತಿದಿನ ವ್ಯವಹರಿಸುವ ಅಂಗಡಿಯವನು ಇದ್ದಕ್ಕಿದ್ದಂತೆ ಹತ್ತು ರೂಪಾಯಿಗಾಗಿ ಬಿರುಮಾತಾಡುತ್ತಾನೆ. ವರ್ಷದಿಂದ ಪಕ್ಕದ ಮನೆಯಲ್ಲೇ ವಾಸವಿರುವ ಹೆಂಗಸು ಯಕಶ್ಚಿತ್ ನ್ಯಾಲೆಯ ಮೇಲಿನ ಬಟ್ಟೆ ತೆಗೆದಿಲ್ಲವೆಂಬ ಕಾರಣಕ್ಕೆ ಜಗಳಕ್ಕೆ ನಿಲ್ಲುತ್ತಾಳೆ. ಹೆಗಲ ಮೇಲೆ ಕೈ ಹಾಕಿಕೊಂಡು ಜೊತೆಗೇ ಕೆಲಸ ಮಾಡುತ್ತಿದ್ದ ಸಹೋದ್ಯೋಗಿ ಮಿತ್ರ ಆಫೀಸು ಬದಲಿಸಿದ ಮರುಕ್ಷಣ ಕರೆ ಸ್ವೀಕರಿಸದೇ, ಮೆಸೇಜೂ ಮಾಡದೇ ಮಾಯವಾಗಿಬಿಡುತ್ತಾನೆ.
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”

Read More

ಕುದಿಯದ ಕಡಲು: ವಿನಾಯಕ ಅರಳಸುರಳಿ ಅಂಕಣ

ಇಂದಿಗೂ ನನ್ನನ್ನು ಇದೊಂದು ಪ್ರಶ್ನೆ ಕಾಡುತ್ತಲೇ ಇದೆ: ನಾವು ಓದಿಕೊಳ್ಳುವ ಸಾಹಿತ್ಯ, ಕೇಳಿಸಿಕೊಳ್ಳುವ ಕಿವಿ ಮಾತು, ಪ್ರತಿ ದಿನ ನೋಡುವ ಯಾರದ್ದೋ ಬದುಕಿನ ನಿದರ್ಶನಗಳು, ತತ್ವ, ಸಿದ್ಧಾಂತ, ಆದರ್ಶ, ಭಾಷಣಗಳು… ವೈಯಕ್ತಿಕ ಬದುಕಿನ ತಿರುವುಗಳಿಗೆ ಇವು ಹೇಗೆ ಅನ್ವಯವಾಗುತ್ತವೆ? ಯಾರದೋ ವಿಷಯದಲ್ಲಿ ಎಷ್ಟೆಲ್ಲ ಪ್ರಬುದ್ಧವಾಗಿ ದಾರಿ ಹೇಳುವ ನಾವು ನಮ್ಮ ಪ್ರಯಾಣದಲ್ಲಿ ಮಾತ್ರ ಏಕೆ ಓಲಾಡುತ್ತ ನಡೆಯುತ್ತೇವೆ?
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”ಯ ಬರಹ ನಿಮ್ಮ ಓದಿಗೆ

Read More

ಅದೇ ದಾರಿ… ಅದೇ ತಿರುವು…:  ವಿನಾಯಕ ಅರಳಸುರಳಿ ಅಂಕಣ

ರಾತ್ರಿಯಾದರೆ ಸಾಕು, ಒಂದೊಂದು ಮನೆಯೂ ಒಂದೊಂದು ಬೆಳಕಿನ ಡಬ್ಬಿ. ಒಂದೊಂದು ಕಿಟಕಿಯಲ್ಲಿ ಕತ್ತಲು, ಇನ್ನೊಂದರಲ್ಲಿ ಬೆಳಕು. ಆ ಬೆಳಕಿನ ಪರದೆಯ ಹಿಂದೆಯೇ ಕಪ್ಪು ನೆರಳಾಗಿ ಕದಲುವ ಮನುಷ್ಯರು. ವಾಹನಗಳ ಭರಾಟೆ ತಗ್ಗಿರುವ ರಾತ್ರಿ ಹತ್ತರ ನೀರವದಲ್ಲಿ ಸಮೀಪದಲ್ಲೇ ಕೇಳಿಸುವ ರೈಲಿನ ಕೇಕೆ. ಅರೆರೇ, ರೈಲಿನ ಹಳಿ ಇಷ್ಟು ಹತ್ತಿರದಲ್ಲೇ ಇದೆಯೇ? ಈ ಕ್ಷಣಕ್ಕೆ ಕೇಳಿಸಿದ ಕೇಕೆಯಲ್ಲೇ ಅದು ಹಾದು ಹೋಗಲಿರುವ ನದಿ-ಬೆಟ್ಟ-ಸುರಂಗ-ಕಾಡುಗಳ ಸುಂದರ ಪ್ರಯಾಣದ ಕಲ್ಪನೆಯಾಗಿ ಮನಸ್ಸಿನಲ್ಲೇನೋ ಖುಷಿಯ ಭಾವ.
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”

Read More

ಹಿನ್ನೀರಿನಲ್ಲೊಂದು ಮುಂಜಾನೆ: ವಿನಾಯಕ ಅರಳಸುರಳಿ ಅಂಕಣ

ಇದೇ ಅಲೆಯ ಬುಡದಲ್ಲಿ ಒಂದು ಕಾಲದಲ್ಲಿ ಹಳ್ಳಿಯಿತ್ತು. ಗದ್ದೆಯಿತ್ತು. ಮನೆಯಿತ್ತು. ದನಕರುಗಳು ಓಡಾಡುತ್ತಿದ್ದವು. ಮನುಷ್ಯ ವಾಸವಾಗಿದ್ದ. ಅಲ್ಲೆಲ್ಲೋ ದೂರದಲ್ಲಿ ನದಿಯೊಂದರ ದಾರಿಯ ತಡೆದ ಕಾರಣಕ್ಕೆ ಇಲ್ಲಿ ಇವೆಲ್ಲವೂ ಮುಳುಗಿದವು. ಈ ನೀರಡಿಗೀಗ ಏನೇನಿರಬಹುದು? ಮುಳುಗಡೆಯಾಗುವ ಹೊತ್ತಿಗೆ ಎದ್ದು ಹೋದ ಮಗುವೊಂದು ಅರ್ಧಕ್ಕೇ ಆಡಿ ಬಿಟ್ಟ ಆಟಿಕೆಯಿರಬಹುದೇ? ರೈತನೊಬ್ಬ ನೂರಾರು ಕಟ್ಟು ಹುಲ್ಲು ಕೊಯ್ದಿರುವ ಕತ್ತಿಯಿರಬಹುದೇ? ಅಮ್ಮ ಒಬ್ಬಳು ನೂರಾರು ಬಾರಿ ಗಂಜಿ ಕಾಯಿಸಿರುವ ಪಾತ್ರೆಯಿರಬಹುದೇ? ಹಲವು ದೇವಸ್ಥಾನಗಳೂ ಇಲ್ಲಿ ಮುಳುಗಿ ಹೋಗಿವೆಯಂತೆ… ಇನ್ನಾದರೂ ಅಲ್ಲಿ ದೇವರಿರಬಹುದೇ?
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”ಯ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ