Advertisement

Tag: ವೈದೇಹಿ

“ಹಳೆಯ ಪುಟಗಳಿಂದ…” ಸರಣಿಯಲ್ಲಿ ವೈದೇಹಿ ಬರಹ

ಏನು ಕಾರಣವೋ, ಮದುವೆಯಾಗಿಯೂ ಒಬ್ಬಂಟಿಯಿದ್ದರು. ಬರೆಯುತ್ತಿದ್ದಂತೆ, ಉಸಿರನ್ನು ನಡುನಡುವೆ ಸಶಬ್ದ ಒಳಗೆಳೆದುಕೊಂಡು ಸೇಂಕಿ ಮಾತಾಡುವ ಅವರ ಪರಿ ಅಚ್ಚ ನೆನಪಿನಿಂದ ಹೇಗೆ ಎದ್ದು ಬರುತ್ತಿದೆ! ಹೋಗಲಿ, ಹೊಲಿಗೆ ದುಡ್ಡು ಇಷ್ಟಾಯಿತು ಅಂತ ಹೇಳುವುದರಲ್ಲಾದರೂ ಸಂಕೋಚ ಬಿಡುವರೆ? ಇಲ್ಲ. ಹೇಳಿದ ಮೇಲೆ ಈಗ ಇಟ್ಟುಬಿಡಿ ಅಂತ ಅಂದವರೂ ಅಲ್ಲ. ಸ್ವಲ್ಪ ಕೊಟ್ಟು ಉಳಿದದ್ದು ಎರಡುದಿನ ಬಿಟ್ಟು ಕಳಿಸಿಕೊಡುತ್ತೇನೆ ಎಂದರೆ ‘ಆಯಿತಪ್ಪ, ಅಡ್ಡಿಲ್ಲ ಅಡ್ಡಿಲ್ಲ’. ಕೊಟ್ಟ ದುಡ್ಡನ್ನು ಎದುರೇ ಎಣಿಸಿದವರೂ ಅಲ್ಲ. ನನಗೆ ತಿಳಿದಂತೆ ದುಡ್ಡಿನ ಮಟ್ಟಿಗೆ ಅವರಿಗೆ ಮೋಸಮಾಡಿದ ಮನೆಗಳೂ ಇಲ್ಲ. ಬಿಡಿ.
“ಹಳೆಯ ಪುಟಗಳಿಂದ…” ಸರಣಿಯಲ್ಲಿ ಕನ್ನಡದ ಅನುಪಮ ಲೇಖಕಿ ವೈದೇಹಿ ಬರಹ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ವೈದೇಹಿ ಬರೆದ ಕತೆ

ಯಾಕೋ ನನಗೆ ಕೋರ್ಟುಮನೆ ಅಲೆದೇ ಸೋತು ಕುಸಿದುಹೋಗಿದ್ದ ಅಪ್ಪನ ಹೋರಾಟದ ಬಗ್ಗೆ ಹೇಳಲೇಬೇಕೆನಿಸಿತು. ಆಸ್ತಿಗಾಗಿ ಕುಟುಂಬದಲ್ಲೇ ಒಂದು ಆತ್ಮಹತ್ಯೆ ಆಯಿತು, ಒಂದು ಕೊಲೆ ಆಯಿತು, ಇದೆಲ್ಲ ನಮ್ಮ ಮಟ್ಟಿಗೆ ಎಂಥ ದೊಡ್ಡದು ಯೋಚಿಸಿ. ಅಪ್ಪ ಕಡೆಕಡೆಗೆ ತಮ್ಮದೇ ಕುಟುಂಬದೊಂದಿಗೆ ಕೋರ್ಟುಕಚೇರಿ ವ್ಯಾಜ್ಯ ಯಾಕಾದರೂ ಬೇಕಿತ್ತು ಅಂತ ಕೊರಗುತಿದ್ದರು ಅಷ್ಟಿಷ್ಟಲ್ಲ. ಹಾಗೆಂದು ‘ಜಗಳ ಬೇಡ, ಎಲ್ಲ ನಿಮಗೇ, ತಕೊಳ್ಳಿ’ ಅಂತ ಬಿಟ್ಟುಕೊಟ್ಟರೇನು? ಇಲ್ಲವಲ್ಲ. ಅದು ಸಾಧ್ಯವೂ ಇಲ್ಲ. ‘ಒಂದು ರೀತಿ ಮಹಾಭಾರತದಲ್ಲಿ ಬರುವ ಧರ್ಮವ್ಯಾಧನ ಕತೆಯಂತೆ ನಾವೆಲ್ಲ.
ನಾನು ಮೆಚ್ಚಿದ ನನ್ನ ಕಥಾ ಸರಣಿಯ ಕೊನೆಯ ಕಂತಿನಲ್ಲಿ ವೈದೇಹಿ ಬರೆದ ಕತೆ “ಅಮುದ ಹೇಳಿದ ಕತೆ”

Read More

ಎಪ್ಪತೈದರ ಹೊಸ್ತಿಲಲಿ ನಿಂತು: ಆಶಾ ಜಗದೀಶ್ ಅಂಕಣ

“ಕಣ್ಣಿಗೆ ಕಾಣುವ ಪ್ರಪಂಚದ ವಿಸ್ತಾರದೊಂದಿಗೆ ಗುರುತಿಸಿಕೊಳ್ಳುತ್ತಾ ನನ್ನ ಪ್ರಪಂಚವೇ ದೊಡ್ಡದೆಂದುಕೊಳ್ಳುವ ಭ್ರಾಮಕ ಸಮೂಹದ ಮುಂದೆ ಮನೆ ಕುಟುಂಬ ಎನ್ನುವ ಪುಟ್ಟ ಜಗತ್ತಿನ ಅಗಾಧ ಆಳ ವಿಸ್ತಾರದೊಂದಿಗೆ ಮುಖಾಮುಖಿಯಾಗುತ್ತಾ ಅದನ್ನು ತಮ್ಮ ಬರಹದಲ್ಲಿ ತಂದವರು ವೈದೇಹಿಯವರು. ಅವರಿಗೆ ತಾವು ಎಂಥದ್ದೋ ಸಾಧನೆ ಮಾಡಿರುವೆ ಎನ್ನುವ ಭ್ರಮೆಯಿಲ್ಲ. ತನಗೆ ತಿಳಿಯದ್ದೂ ಇಲ್ಲಿದೆ…”

Read More

ವೈದೇಹಿಯವರ ಕಾಲುದಾರಿಯ ಕಥನಗಳು ಮತ್ತು ಕಾಡುವ ಕಥಾಪಾತ್ರಗಳು

ಹದಿಹರೆಯದ ದಿನಗಳಲ್ಲಿ ಓದಿನ ಕಿಚ್ಚುಹಚ್ಚಿದವರು ವೈದೇಹಿ.ಹಾಗೆ ಅವರು ಒಂದಷ್ಟು ಪಾತ್ರಗಳನ್ನು ಎದೆಯಲ್ಲಿ ಊರಿಬಿಟ್ಟರು. ಅವುಗಳ ಒಡಲ ಉರಿ ಒಳಗೊಳಗೇ ಸದಾ ಉರಿಯುತ್ತ ಪ್ರಖರ ಸಂವೇದನೆಯೊಂದನ್ನು ರೂಪಿಸಿದ್ದು ಸುಳ್ಳಲ್ಲ ಆ ಪಾತ್ರಗಳಾದರೂ ಎಂಥವು? ಅಕ್ಕು, ಅಮ್ಮಚ್ಚಿ, ಸಿರಿ, ಸೌಗಂಧಿ, ಕಮಲಾವತಿ, ಸುಬ್ಬಕ್ಕ ಇಂಥವೇ.”

Read More

ವೈದೇಹಿಯವರ ಬರಹಗಳ ಕುರಿತು ಯು ಆರ್ ಅನಂತಮೂರ್ತಿ ಮತ್ತು ವೈದೇಹಿಯವರ ನಡುವೆ ಸಂಭಾಷಣೆ.

ವೈದೇಹಿಯವರ ಬರಹಗಳ ಕುರಿತ ಸಂಭಾಷಣೆ: ಯು ಆರ್ ಅನಂತಮೂರ್ತಿ ಮತ್ತು ವೈದೇಹಿ. ವಿಡಿಯೋ ಕೃಪೆ: ಮಣಿಪಾಲ ವಿಶ್ವವಿದ್ಯಾಲಯ

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ