Advertisement

Tag: ವ್ಯವಸಾಯ

ಮಲೆನಾಡಿನ ಗದ್ದೆಗಳಲ್ಲಿ ನೆಟ್ಟಿ ಸಂಭ್ರಮ: ಭವ್ಯ ಟಿ. ಎಸ್. ಸರಣಿ

ಹೂಟಿ ಮಾಡಿದ ನೆಲದ ಮಣ್ಣು ಉಬ್ಬು ತಗ್ಗುಗಳಿಂದ ಕೂಡಿದ್ದು ಅದನ್ನು ನೆಟ್ಟಿಗೆ ಸಹಾಯಕವಾಗುವಂತೆ ಸಮತಟ್ಟು ಮಾಡಲು ನಳ್ಳಿ ಬಳಸುತ್ತಾರೆ. ಹಿಂದೆ ಎತ್ತುಗಳನ್ನು ಬಳಸಿ ಹೂಟಿ ಮಾಡುತ್ತಿದ್ದರಿಂದ ಇದಕ್ಕಾಗಿ ಬಳಸುವ ನೊಗ ಮತ್ತು ನೇಗಿಲು ಪ್ರತಿ ಮನೆಗಳಲ್ಲಿ ಇರುತ್ತಿತ್ತು. ಕಾಲ ಬದಲಾದಂತೆ ಇವುಗಳ ಸ್ಥಾನವನ್ನು ಆಧುನಿಕ ಕೃಷಿ ಸಲಕರಣೆಗಳು ಆಕ್ರಮಿಸಿವೆ. ಈ ಎತ್ತುಗಳಿಗೆ ಆಹಾರವಾಗಿ ಕೊಡಲು ಹುರುಳಿಯನ್ನು ಬೇಯಿಸುತ್ತಿದ್ದರು. ಇದನ್ನು ಬೇಯಿಸಿದ ನೀರೇ ಹುರುಳಿಕಟ್ಟು. ಮಳೆಗಾಲದಲ್ಲಿ ಹುರುಳಿ ಕಟ್ಟಿನ ಘಮ ತೇಲಿ ಬಂದರೆ ಆಹಾ ಎಷ್ಟು ಸುಂದರ ಅನುಭೂತಿ.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ

Read More

“ಯಾಕ್‌ ಫೋನ್‌ ತಗೀಲಿಲ್ಲ..” ಅಂತ ಕೇಳೋದಿಲ್ಲ!: ಗುರುಪ್ರಸಾದ್‌ ಕುರ್ತಕೋಟಿ ಅಂಕಣ

ಈ ಬೋರಿನ ಗಾಡಿಯ ರಹಸ್ಯ ಇನ್ನೂ ಬಗೆಹರಿಯಲಿಲ್ಲ. ಪಕ್ಕದ ಹೊಲದ ಗೌಡರಿಗೆ ಫೋನ್ ಮಾಡಿದಾಗ ಅದೊಂದು ಗಾಡಿ ಬೇರೆ ಎಲ್ಲೋ ಬೋರ್ ಹೊಡೆಯಲು ಬಂದಿದ್ದು ಸ್ವಲ್ಪ ಹೊತ್ತು ನಮ್ಮ ಹೊಲದಲ್ಲಿ ನಿಂತಿತ್ತು ಅಂತ ಹೇಳಿದರು. ಇವರನ್ನೇ ಫೋನ್‌ ಮಾಡಿ ಕೇಳಿದ್ದರೆ ಈ ಗುಡ್ಡಪ್ಪನ ಮಾತು ಕೇಳಿ ಇಷ್ಟು ಅಡ್ಡಾಟ ಮಾಡೋದು ತಪ್ಪುತಿತ್ತು ಅಂತ ನನಗೆ ನಾನೇ ಹಳಿದುಕೊಂಡೆ. ಆದರೂ ಅವನ ದೆಸೆಯಿಂದ ನನ್ನ ಹೊಲಕ್ಕಾದರೂ ಹೊಕ್ಕು ಬಂದೆನಲ್ಲ ಎಂಬ ಸಮಾಧಾನವೂ ಆಯ್ತು!
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ ನಿಮ್ಮ ಓದಿಗೆ

Read More

ಟ್ರ್ಯಾಕ್ಟರ್‌ ನಾವs ಹೊಡಿಯೋದು!: ಗುರುಪ್ರಸಾದ ಕುರ್ತಕೋಟಿ ಅಂಕಣ

ಅಲ್ಲಿನ ಬಹುತೇಕರು ಫೋನ್ ಮಾಡಿದಾಗ ಕೇಳುವ ಮೊದಲ ಪ್ರಶ್ನೆ ಇದು! ನಾನು ಎಲ್ಲಿರುವೆ ಅಂತ ತಿಳಿದುಕೊಂಡು ಹೊಲದಲ್ಲಿ ಏನಾದರೂ ಮಾಡಲು ಹೊರಟಿರಬಹುದೆ? ಎಂಬಂತಹ ಸಂಶಯ ಸೃಷ್ಟಿ ಮಾಡುವನಂತಹ ಪ್ರಶ್ನೆ ಅದು. ಹೀಗಾಗಿ ನಿರಾತಂಕವಾಗಿ ಎಲ್ಲಿದ್ದೀನಿ ಎಂಬ ವಿಷಯ ಹೇಳಿದೆ. ಅದಕ್ಕೆ “ನಿಮ್ಮ ಹೊಲದಾಗ ಯಾರೋ ಬೋರ್ ಹೊಡಿಯಾಕ್ ಹತ್ಯಾರ ನೋಡ್ರಿ..” ಅಂದ. ನನ್ನ ಕೇಳದೆ ನನ್ನ ಹೊಲದಲ್ಲಿ ಬೋರು ಹೊಡೀತಾರೆಯೇ? ಹೊಡಿಲಿ ಬಿಡ್ರಿ ಅಂದೆನಾದರೂ, ಕೂಡಲೇ ಹೊಲದ ಕಡೆಗೆ ಲಗುಬಗೆಯಿಂದ ಹೊರಟೆ..
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ

Read More

ಕೈ ಕೆಸರಾಗಿ ಬಾಯಿ ಮೊಸರು: ಗುರುಪ್ರಸಾದ್‌ ಕುರ್ತಕೋಟಿ ಅಂಕಣ

ಕೃಷಿಯನ್ನು ಕಲಿಯುವುದರ ಜೊತೆ ಜೊತೆಗೆ, ಉತ್ಪನ್ನಗಳನ್ನು ಹೇಗೆ ಮಾರಬೇಕು ಎಂಬುದನ್ನು ಕೂಡ ರೈತನಾಗುವವನು ಕಲಿಯಬೇಕು. ಹಿಂದೊಮ್ಮೆ ಬೆಂಗಳೂರನ್ನು ಬಿಟ್ಟು ಹಳ್ಳಿಗೆ ಖಾಯಂ ಆಗಿ ಬಂದು ಬಿಡಲೇ ಎಂದು ಯೋಚನೆ ಮಾಡುತ್ತಿದ್ದ ಸಮಯದಲ್ಲಿ ಅಲ್ಲಿನ ಸ್ನೇಹಿತರೊಬ್ಬರಿಗೆ ಹಳ್ಳಿಯಲ್ಲಿ ನಾನು ಸಂಪಾದನೆ ಮಾಡಲು ಏನು ಮಾಡಬಹುದು ಅಂತ ಕೇಳಿದಾಗ, ಅವರು ಬಿಳೆ (ಭತ್ತದ) ಹುಲ್ಲಿನ business ಮಾಡಿ ಅಂತ ನಕ್ಕಿದ್ದರು. ಆದರೆ ಅವರು ಹೇಳಿದ್ದು ತುಂಬಾ ಸತ್ಯ ಅಂತ ಈಗ ಅರಿವಾಗಿತ್ತು. ಭತ್ತದ ಹುಲ್ಲಿಗೆ ತುಂಬಾ ಬೆಲೆ ಹಾಗೂ ಬೇಡಿಕೆ ಇದೆ.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ ನಿಮ್ಮ ಓದಿಗೆ

Read More

ನಿಮ್ಮ ಜಾತಿ ಯಾವುದು!

ಹೊಲದ ಹತ್ತಿರ ಅನ್ನುವ ಕಾರಣಕ್ಕೆ ನನಗೆ ಮನೆ ಇಷ್ಟವಾಯ್ತು. ಮನೆಯನ್ನು ಕೂಲಂಕುಷವಾಗಿ ನೋಡಿದ ಮೇಲೆ ಗೌಡರ ಜೊತೆಗೆ ಮಾತಾಡಲು ಅಲ್ಲೇ ಹತ್ತಿರವೇ ಇದ್ದ ಅವರ ಮನೆಗೆ ಹೋದೆ. ಹೆಸರು ಕೇಳಿದವರೆ ಯಾವ ಜಾತಿ ನಿಮ್ಮದು ಅಂದರು. ನನಗೆ ತುಂಬಾ ಇರುಸು ಮುರುಸು ಆಯ್ತು. ನಾನು ಯಾರಿಗೂ ಜಾತಿ ಕೇಳೋದಿಲ್ಲ, ನನಗೆ ಯಾರಾದರೂ ಕೇಳಿದರೂ ನನಗೆ ಆಗೋಲ್ಲ. ಆದರೆ ಹಳ್ಳಿಯಲ್ಲಿ ಜಾತಿ ವ್ಯವಸ್ಥೆ ಇನ್ನೂ ಗಟ್ಟಿಯಾಗಿಯೇ ಇದೆ. ನನ್ನ ಜಾತಿ ಯಾಕೆ ಬೇಕು ಅಂತ ಕೇಳಿದಾಗ “ಒಳ್ಳೆಯವರಿಗೆ ಕೊಡಬೇಕಲ್ರಿ ಮನಿ ಅದಕ್ಕ ಕೇಳತೀವಿ” ಅಂದರು.
ಗುರುಪ್ರಸಾದ್‌ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಮಾಯಣ ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ