Advertisement

Tag: ಶುಭಶ್ರೀ ಭಟ್ಟ

ಊರು ಕೇರಿ ಬಿಟ್ಟು ಬಂದು…: ಶುಭಶ್ರೀ ಭಟ್ಟ ಬರಹ

ತುಸುವೂ ಪರಿಚಯವೇ ಇಲ್ಲದ ಹೊಸ ಬೀದಿಯ ಅಪರಿಚಿತ ಸದ್ದಿಗೆ, ಆ ರಾತ್ರಿಯ ನೀರವತೆಗೆ, ಪರಿಮಳವಿಲ್ಲದ ಹಗಲಿಗೆ, ನಮ್ಮವರೇ ಕಾಣಿಸದ ಆಗಂತುಕ ರಸ್ತೆಯ ಚಲನೆಗೆ ವಿನಾಕಾರಣ ನಿಟ್ಟುಸಿರು ಉಮ್ಮಳಿಸಿ ಬರುತ್ತಿತ್ತು. ಅಡುಗೆ ಮನೆಯ ಬಿಡುವಿಲ್ಲದ ಕೆಲಸ, ಮಾಡಲೇ ಬೇಕಾದ ಕೆಲವು ಮನೆ ಕೆಲಸ, ಆಫೀಸಿನ ಹೊಸ ಪ್ರಾಜೆಕ್ಟಿನ ಶೆಡ್ಯೂಲ್, ಮಗನನ್ನು ಹೊಸ ಶಾಲೆಗೆ ರೂಢಿ ಮಾಡಿಸಬೇಕಾದ ಅಗತ್ಯ, ಬಿಡಲಾರದ ಬರವಣಿಗೆ-ಓದು ಹೀಗೆ ದಿನದ ಅರೆ ಕ್ಷಣವನ್ನೂ ವ್ಯಯಿಸದೆ ಎಲ್ಲವನ್ನೂ ನಿಭಾಯಿಸುತ್ತಾ ದಿನ ಕಳೆಯುತ್ತಿತ್ತು. ಆದರೂ ಕೆಲವೊಮ್ಮೆ ಸಂಜೆಯಾಗುವಷ್ಟರಲ್ಲಿ ಖಾಲಿತನ ಆವರಿಸಿಕೊಳ್ಳುತ್ತಿತ್ತು.
ಮಹಾನಗರದ ಭಾಗವಾಗಿ ವಾಸಿಸುವ ಅನುಭವದ ಕುರಿತು ಶುಭಶ್ರೀ ಭಟ್ಟ ಬರಹ ನಿಮ್ಮ ಓದಿಗೆ

Read More

ದುಃಖಾಂತ ಪಾತ್ರಗಳ ಬಿಕ್ಕುಗಳ ಸಂಕಲನ: ಶುಭಶ್ರೀ ಕಥಾಸಂಕಲನಕ್ಕೆ ವಿಕಾಸ ನೇಗಿಲೋಣಿ ಮುನ್ನುಡಿ

ಶುಭಶ್ರೀ ಬಳಸುವ ಭಾಷೆ ಬಹುತೇಕ ಉತ್ತರ ಕನ್ನಡದ ಕೆಳ ಸಮುದಾಯದ್ದು. ಜೊತೆಗೆ ಮಕ್ಕಳಾಗದವರ ಬಿಕ್ಕು, ಗಂಡನ ದೌರ್ಬಲ್ಯದ ನೆರಳಲ್ಲಿ ನರಳುವ ಹೆಣ್ಮಕ್ಕಳ ಬಿಕ್ಕು, ಮನೆ ತೊರೆದು ಹೋದವರ ನರಳುಗಳನ್ನೆಲ್ಲಾ ಗದ್ಗದಿತ ಕೊರಳಿನಿಂದ ಹೇಳುತ್ತಾ ಹೋಗುತ್ತಾರೆ. ಸಂಕಲನದ ಅತ್ಯಂತ ಗಾಢ ಕತೆಯೆಂದರೆ ‘ಹಗಲು ವೇಷ’. ಮನೆ ತೊರೆದು, ಅನ್ಯ ಕೋಮಿನ ಹುಡುಗನನ್ನು ಮದುವೆಯಾಗಿ, ನರಳುವ ಹೆಣ್ಮಗಳೊಬ್ಬಳ ಚಿತ್ರಣ ಇರುವ ಆ ಕತೆಯಲ್ಲಿ ಧರ್ಮ ಅಥವಾ ದ್ವೇಷದ ಸೋಂಕು ಇಲ್ಲದೇ, ಜಡ್ಜ್ ಮೆಂಟಲ್ ಕೂಡ ಆಗದಂತೆ ಹೆಣ್ಣೊಬ್ಬಳ ಅಂತಃಕರಣದಿಂದ ಆಯೇಷಾ ಅನ್ನುವ ಪಾತ್ರವನ್ನು ಕತೆಗಾರ್ತಿ ನಿರ್ವಹಿಸಿದ ಮೆಚ್ಚುವಂತಿದೆ.
ಶುಭಶ್ರೀ ಭಟ್ಟ ಹೊಸ ಕಥಾಸಂಕಲನ “ಬಿದಿಗೆ ಚಂದ್ರಮನ ಬಿಕ್ಕು” ಕೃತಿಗೆ ವಿಕಾಸ್‌ ನೇಗಿಲೋಣಿ ಬರೆದ ಮುನ್ನುಡಿ

Read More

ನೆರಿಗೆಬಿದ್ದ ನವಿಲುಗರಿ

ಮಲೆನಾಡಿಗೆ ಬಂದು ಬದುಕ ಕಟ್ಟಿಕೊಂಡ ಗಟ್ಟಿಗಿತ್ತಿ. ಇದೇ ಕಾರಣಕ್ಕೋ ಏನೋ ಕೆಲವೊಂದು ಭಾವ ಹೇಳದೆಯೂ ಅರ್ಥ ಮಾಡಿಕೊಂಡು ನಾನಿದ್ದೇನೆ ಎಂಬ ಗಟ್ಟಿ ಭಾವವನ್ನು ಬಿಗಿಯುತ್ತಿದ್ದಳು. ವಯಸ್ಸಿದ್ದಾಗ ಮನೆಗೆ ಬಂದವರನ್ನೆಲ್ಲಾ ಕೈಲಾದಷ್ಟು ಸತ್ಕರಿಸಿ, ಕೈಲಾಗದ ಇಳಿ ಮುಪ್ಪಲ್ಲಿಯೂ ಕಂಡವರನ್ನೆಲ್ಲ ಕರೆದು ಮಾತನಾಡಿಸಿ ಊರವರಿಗೆಲ್ಲರಿಗೂ ಹತ್ತಿರವಾಗಿದ್ದಳು. ಅಜ್ಜಿಯ ಈ ಅಂತಃಕರಣದ ಅಂತಃಶಕ್ತಿ ಅರಿವಾದದ್ದೇ ಅವಳು ಹೋದಾಗ.
ಹಿರಿಯರೊಟ್ಟಿಗಿನ ಮಾತುಗಳಲ್ಲಿ ಸಿಕ್ಕುವ ಜೀವನ ದರ್ಶನದ ಕುರಿತು ಬರೆದಿದ್ದಾರೆ ಶುಭಶ್ರೀ ಭಟ್ಟ

Read More

ಕ್ಯಾತನಮಕ್ಕಿಯ ಕಾಲಮೇಲೆ ಕೂತು ಗಾಳಿಗುಡ್ಡವ ನೆನೆದು

ಕಿಲೋಮೀಟರ್ ದೂರದಲ್ಲಿ ಬೈಕು ನಿಲ್ಲಿಸಿ ನಮ್ಮ ಟ್ರೆಕಿಂಗ್ ಆರಂಭಿಸಿದಾಗ ಇದ್ದ ಉತ್ಸಾಹ, ಕ್ಯಾತನಮಕ್ಕಿಯನ್ನು ಅರ್ಧ ಹತ್ತಿದಾಗಲೇ ಬತ್ತುವುದರಲ್ಲಿತ್ತು. ಒಂಚೂರು ಕುಳಿತು ನೀರು ಕುಡಿದು ಕಚ್ಚಾ ರಸ್ತೆಯಲ್ಲಿ ಬೆವರಿಳಿಸಿ, ತುದಿ ತಲುಪುವಾಗ ಜೀಪಿನಲ್ಲಿ ಬಂದವರ ದರ್ಬಾರಿಗೆ ಮನವೊಮ್ಮೆ ಪಿಚ್ಚೆಂದಿತ್ತು. ಆದರೂ ನಡೆದು ಗಮ್ಯ ತಲುಪುವ ಸಾರ್ಥಕ ಭಾವ ಆರಾಮಾಗಿ ತೇಲಿ ಬಂದವರಿಗೆಲ್ಲಿ ಬರಬೇಕು ಎಂದು ನಮಗೆ ನಾವೇ ಬೆನ್ತಟ್ಟಿಕೊಂಡು ಮುನ್ನಡೆದೆವು.
ಚಿಕ್ಕಮಗಳೂರಿನ ‘ಕ್ಯಾತನಮಕ್ಕಿʼ ಪ್ರವಾಸಿ ತಾಣಕ್ಕೆ ಭೇಟಿ ನೀಡಿದ ಅನುಭವಗಳನ್ನು ಇಲ್ಲಿ ಹಂಚಿಕೊಂಡಿದ್ದಾರೆ ಶುಭಶ್ರೀ ಭಟ್ಟ

Read More

ತುಂಟ ಪೊಕ್ಕಣ್ಣ & ಕಡುಮಡಿಯ ಅಜ್ಜಿ

ಈ ಪೊಕ್ಕಣ್ಣ ಶತ ತುಂಟ, ಕಣ್ಣಲ್ಲೇ ಅವನ ತುಂಟತನ ಇಣಕುತ್ತಿತ್ತು. ಒಂದು ಕಿವಿ ನೆಟ್ಟಗೆ ಮಾಡಿ, ಮತ್ತೊಂದನ್ನು ಮಡಿಸಿದ ಅಂದರೆ ಅವನೇನೋ ತರಲೆ ಮಾಡುತ್ತಾನೆಂದು ನಮಗೆ ಖಾತ್ರಿಯಾಗಿತ್ತು. ಮಟ ಮಟ ಮಧ್ಯಾಹ್ನ ಎಣ್ಣೆ ಪಳಚಿಕೊಂಡು ಹಂಡೆತುಂಬಾ ಬೀಸಿನೀರನ್ನು ಸ್ನಾನ ಮಾಡಿ, ಒದ್ದೆ ಸೀರೆಯನ್ನುಟ್ಟು ಬರುವ ಅಜ್ಜಿಗೆ ಅಡ್ಡಲಾಗಿಯೇ ಮಲಗುತ್ತಿದ್ದ ಪೊಕ್ಕಣ್ಣ. ಅವನು ಮಲಗಬಾರದೆಂದು ಕೊಡಪಾನಗಟ್ಟಲೆ ನೀರು ಹೊಯ್ದಿಟ್ಟು ಸ್ನಾನಕ್ಕೆ ಹೋಗುತ್ತಿದ್ದರು. ಆದರೂ ಕಾಲು ಒರೆಸುವ ಗೋಣಿಚೀಲವನ್ನೆಳೆದುಕೊಂಡು ಬೇಕಂತಲೇ ಬಚ್ಚಲಮನೆ ಬುಡದಿ ಮಲಗಿ ಸತಾಯಿಸುತ್ತಿದ್ದ ಅಂವ.
ಶುಭಶ್ರೀ ಭಟ್ಟ ಲಲಿತ ಪ್ರಬಂಧಗಳ ಸಂಕಲನ “ಹಿಂದಿನ ನಿಲ್ದಾಣ” ದಿಂದ ಒಂದು ಪ್ರಬಂಧ ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ