Advertisement

Tag: ಶೇಣಿ ಮುರಳಿ

ಕೋಮಲ ಗಾಂಧಾರ ಮತ್ತು ಪರ್ದಾ

ಕರೀಂ ಖಾನ್ ಮತ್ತು ಮಕ್ಕಳು ಬಳಸುವ ಸಿತಾರ್‌ನಲ್ಲಿ ೧೯ ಪರ್ದಾಗಳೇ ಇವೆ. ಯಾಕೆ ಇವರು ಇನ್ನೂ ಆಧುನಿಕತೆಯನ್ನು ಒಪ್ಪಿಕೊಂಡಿಲ್ಲ ಎಂದು ಎಲ್ಲರೂ ಕೇಳತೊಡಗಿದ್ದರು. ಕರೀಂ ಖಾನರಿಗೆ ಈ ಪ್ರಶ್ನೆ ಇಷ್ಟವಾಗುತ್ತಿರಲಿಲ್ಲ. ಆದರೆ ರಫೀಕ್ ಮತ್ತು ಶಫೀಕ್ ಈ ಕುರಿತು ಬಹಳಷ್ಟು ಚರ್ಚೆ, ಅಧ್ಯಯನ, ಪ್ರಯೋಗಗಳನ್ನು ಮಾಡಿದರು. ಹೊಸವಿಧಾನವನ್ನು ಒಪ್ಪಿಕೊಳ್ಳುವುದು ಸರಳವಾದ ವಿಚಾರ ಆಗಿರಲಿಲ್ಲ.
ಶೇಣಿ ಮುರಳಿ ಬರೆದ ರಫೀಕ್ ಖಾನ್ ಜೀವನ ಚರಿತ್ರೆ ‘ಖಾನ್ ಕಾಂಪೌಂಡ್’ ಕೃತಿಯ ಒಂದು ಅಧ್ಯಾಯ

Read More

ಧಾರವಾಡದಲ್ಲಿ ಅನುರಣಿಸಿದ ‘ಮಂದ್ರ ಮಧ್ಯಮ’

ರಹಿಮತ್ ಖಾನರ ಗೆಳೆಯರ ಬಳಗ ದೊಡ್ಡದಿತ್ತು. ಸವಾಯಿ ಗಂಧರ್ವ ಮತ್ತು ಕಿರಾನಾ ಘರಾನಾ ಸ್ಥಾಪಕ ಅಬ್ದುಲ್ ಕರೀಂ ಖಾನ್ ಸಾಹಬ್ ಈ ಸಾಲಿನಲ್ಲಿ ಪ್ರಮುಖರು. ಈ ಮೂವರು ಸೇರಿದ ಜಾಗದಲ್ಲಿ ಸಂಗೀತದ ವಾತಾವರಣವೇ ಸೃಷ್ಟಿಯಾಗುತ್ತಿತ್ತು. ಸವಾಯಿ ಗಂಧರ್ವರ ಕುಂದಗೋಳದ ‘ವಾಡ’ದಲ್ಲಿ ಈ ತ್ರಿಮೂರ್ತಿಗಳು ಅಪರೂಪಕ್ಕೊಮ್ಮೆ ಸೇರುತ್ತಿದ್ದರು. ಮದ್ಯಪಾನವೂ ಜೋರಾಗಿಯೇ ಇತ್ತು. ಕುಂದಗೋಳದ ಪಾನಗೋಷ್ಠಿಯಲ್ಲಿ ನಡೆಯುತ್ತಿದ್ದ ವಿಚಿತ್ರ ಘಟನೆಗಳು ಆಗಿನ ಕಲಾವಿದರ ಪ್ರತಿಭೆಗೂ ಸಾಕ್ಷಿಯಾಗಿದ್ದವು.. ಶೇಣಿ ಮುರಳಿ ಬರೆದ ಉಸ್ತಾದ್ ರಫೀಕ್ ಖಾನ್ ಜೀವನಚರಿತ್ರೆ ‘ಖಾನ್ ಕಾಂಪೌಂಡ್’ನ ಅಧ್ಯಾಯ ಕೆಂಡಸಂಪಿಗೆ ಓದುಗರಿಗಾಗಿ.

Read More

ಖಾನ್ ಕಾಂಪೌಂಡ್: ಮೈಸೂರು ಮಹಾರಾಜರು ಮೆಚ್ಚಿದ ದರ್ಬಾರಿ ಕಾನಡ

‘”ರಹಿಮತ್ ಖಾನ್ ಅವರು ಸಿತಾರ್ ನ ತಂತಿವಿನ್ಯಾಸವನ್ನು ಬದಲಿಸಿದ ಖ್ಯಾತಿಗೆ ಪಾತ್ರರಾದವರು. ಸಿತಾರ್ ನಲ್ಲಿ ರುದ್ರವೀಣೆಯ ನಾದಸುಖವನ್ನು ಅರಸುತ್ತ, ಅವರು ಪ್ರಯೋಗಶೀಲತೆಯತ್ತ ಮುಖಮಾಡಿದರು. ಜನಪದ ಸಂಗೀತ ಉಪಕರಣ ಎನಿಸಿದ್ದ ಸಿತಾರ್ ಗೆ ಶಾಸ್ತ್ರೀಯತೆಯ ಮನ್ನಣೆ ದೊರೆಯಲು ರಹಿಮತ್ ಖಾನ್ ಅವರ ಈ ಆವಿಷ್ಕಾರವೂ ಕಾರಣ.”ಶೇಣಿ ಮುರಳಿ ಬರೆದ ಉಸ್ತಾದ್ ರಫೀಕ್ ಖಾನ್ ಜೀವನಚರಿತ್ರೆ ‘ಖಾನ್ ಕಾಂಪೌಂಡ್’ನ ಅಧ್ಯಾಯವೊಂದು, ಈ ಆವಿಷ್ಕಾರದ ವಿವರ ನೀಡುತ್ತದೆ

Read More

‘ಖಾನ್‌ ಕಾಂಪೌಂಡ್‌’ ಗೆ ರಫೀಕ್‌ ಖಾನ್‌ ಬರೆದ ಪ್ರಸ್ತಾವನೆ

ಧಾರವಾಡ ಘರಾನಾ ಶೈಲಿಯ ಸಂಗೀತ ಗಾರುಡಿಗ ಪ್ರಸಿದ್ಧ ಸಿತಾರ್ ವಾದಕ ಉಸ್ತಾದ್ ರಫೀಕ್ ಖಾನ್ ಅವರ ಕುಟುಂಬದಲ್ಲಿ ಸಿತಾರ್ ಸಾಧಕರ ದಿಗ್ಗಜರ ಗಡಣವೇ ಇದೆ. ಸಿತಾರ್ ಮತ್ತು ಸಂಗೀತವನ್ನು ನಂಬಿದ ಈ ಕುಟುಂಬ ಸಾಗಿದ ದಾರಿಯ ಕುರಿತು ರಫೀಖ್ ಖಾನ್ ತಮ್ಮ ವಿಚಾರಗಳನ್ನು ಅಭಿವ್ಯಕ್ತಗೊಳಿಸಿದ್ದಾರೆ. ಅವುಗಳನ್ನು ಅಕ್ಷರ ರೂಪಕ್ಕಿಳಿಸಿದವರು ಲೇಖಕ ಶೇಣಿ ಮುರಳಿ. “ಖಾನ್ ಕಾಂಪೌಂಡ್’’ ಎಂಬ ಶೀರ್ಷಿಕೆಯಡಿ ಪ್ರಕಟವಾದ ಈ ಪುಸ್ತಕದ ಕೆಲವು ಅಧ್ಯಾಯಗಳು ಓದುಗರಿಗೆ ಇಲ್ಲಿಲಭ್ಯವಾಗಲಿದೆ. “

Read More

ಜನಮತ

ಈ ಮಳೆಗಾಲದಲ್ಲಿ.....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ವಿನಿಮಯವೇ ನಿಸರ್ಗದ ನಿಯಮ: ನಾಗೇಶ ಹೆಗಡೆ ಮಾತುಗಳು

ಯಾವುದೋ ದೇಶದಿಂದ ಬರುವ ಪೆಟ್ರೋಲಿಯಂ ದ್ರವ್ಯವನ್ನೇ ಆಧರಿಸಿಯೇ ರೈತರು ಬದುಕು ನಡೆಸುತ್ತ, ಮಾರುಕಟ್ಟೆಗೆ ತಮ್ಮದೆಲ್ಲವನ್ನೂ ಮಾರಿಕೊಳ್ಳುವ ದುರ್ಭರ ಪರಿಸ್ಥಿತಿಯಿಂದ ಬಿಡುಗಡೆ ಪಡೆಯಬೇಕೆಂಬ ಸಣ್ಣ ಹಂಬಲವೊಂದು ಇಲ್ಲಿ ಮೊಳಕೆಯೊಡೆಯುತ್ತಿರುವುದು…

Read More

ಬರಹ ಭಂಡಾರ