Advertisement

Tag: ಶ್ರೀಧರ್‌ ಎಸ್.‌ ಸಿದ್ದಾಪುರ

ಬೃಹದೀಶ್ವರ ದೇವಾಲಯದ ಬಗೆಹರಿಯದ ನಿಗೂಢಗಳು: ಶ್ರೀಧರ್‌ ಎಸ್.‌ ಸಿದ್ದಾಪುರ ಪ್ರವಾಸ ಸರಣಿ

ಈ ಎರಡೂ ಮುಖಗಳು ಈ ದೇವಾಲಯಕ್ಕೊಂದು ವಿಕ್ಷಿಪ್ತ ನೋಟ ಒದಗಿಸುತ್ತದೆ. ಹಲವರ ಪ್ರಕಾರ ಇದು ಯುರೋಪಿನ ಮಾರ್ಕೊ ಪೋಲೋ ಮತ್ತು ಆತನ ಮಡದಿಯ ಚಿತ್ರ ಎನ್ನಲಾಗಿದೆ. 1600 ರ ಸುಮಾರಿಗೆ ಇದನ್ನು ಸೇರಿಸಲಾಗಿದೆ ಎನ್ನುತ್ತಾರೆ. ಮಾರ್ಕೊ ಪೋಲೋ ಇಟಲಿಯ ಪ್ರವಾಸಿಗ. ಎಲ್ಲಿಯ ಇಟಲಿ ಎಲ್ಲಿಯ ಭಾರತ. ಆತನ ಚಿತ್ರ ಸೇರಿಸುವ ಉದ್ದೇಶವಾದರೂ ಏನು? ಅದೂ ಒಬ್ಬ ವಿದೇಶಿ ಪ್ರವಾಸಿಗನನ್ನು ದೇವಾಲಯದ ಹೊರ ಭಿತ್ತಿಯಲ್ಲಿ ಬಿತ್ತರಿಸುವ ಉದ್ದೇಶವಾದರೂ ಏನು? ಎಲ್ಲವೂ ನಿಗೂಢ.
ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿಯಲ್ಲಿ ಬೃಹದೀಶ್ವರ ದೇವಾಲಯದ ಕುರಿತ ಬರಹ ಇಲ್ಲಿದೆ

Read More

ಬೆಣ್ಣೆಯೊಂದಿಗೆ ಬೆರೆತ ಮಜ್ಜಿಗೆ ಮಂಜುಗುಣಿ: ಶ್ರೀಧರ್‌ ಎಸ್.‌ ಸಿದ್ದಾಪುರ ಪ್ರವಾಸ ಸರಣಿ

ಜಲಪಾತದ ಎಡಮಗ್ಗಲಿನ ತಗ್ಗಿನಲಿ ನಿಂತು ನೋಡಿದರೆ ನೀರಿನ ನಡುವೆ ಅಲ್ಲಲ್ಲಿ ಗುಲಾಲಿ ಬಣ್ಣದ ರೇಖೆಗಳು ಕಾಣಿಸಿ ನಿಮ್ಮನ್ನು ತಬ್ಬಿಬ್ಬು ಗೊಳಿಸುತ್ತದೆ. ಯಾವುದು ದಿಟ ಯಾವುದು ಮಿಥ್ಯ ಎಂದರಿಯುವ ಹೊತ್ತಿಗೆ ಜಲಪಾತ ನಿಮ್ಮ ಮನಸ್ಸನ್ನು ಮತ್ತು ಒಡಲನ್ನು ಒದ್ದೆ ಮಾಡಿಸಿರುತ್ತದೆ. ಮೌನದಲ್ಲೇ ನೀವು ಮೇಲೆ ಬಂದು ಜಲಪಾತದ ಎಡ ಭುಜಕ್ಕಾನಿಸಿ ಕುಳಿತು ಧ್ಯಾನಸ್ಥರಾಗುವಿರಿ.
ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿಯಲ್ಲಿ ಹೊಸ ಬರಹ

Read More

ಅಲೆಮಾರಿಯ ಆಗುಂಬೆ ಹಾಗೂ ಟ್ರೋಜನ್‌: ಶ್ರೀಧರ್‌ ಎಸ್.‌ ಸಿದ್ದಾಪುರ ಪ್ರವಾಸ ಸರಣಿ

ಕುಮಾರ ವ್ಯಾಸನ ರೂಪಕ ಅಲಂಕಾರದಂತೆ ಆಗುಂಬೆ ಸುಂದರ, ಮನೋಹರ. ಅಂತಹ ಒಂದು ಅನನ್ಯ ಅನುಭವ ಪಡೆದುದು ನಾವು ಅಲ್ಲಿನ ಜಲಪಾತಗಳ ದರ್ಶನ ಪಡೆಯಲು ಹೊರಟಾಗ. ಹೆಬ್ರಿಯಿಂದ ಕೆಲವೇ ಕಿಲೋ ಮೀಟರ್ ದೂರವಿದೆ. ಇಲ್ಲಿನ ಜಲಪಾತಗಳನ್ನು ವೀಕ್ಷಿಸಲು ಪೋಲಿಸ್ ಠಾಣೆಯ ಅನುಮತಿ ಪಡೆಯುವುದು ಕಡ್ಡಾಯ! ಇವೆಲ್ಲವೂ ಕಾಡಿನೊಳಗಿನವು. ಕೆಲವು ರಕ್ಷಿತಾರಣ್ಯದಲ್ಲಿವೆ. ಚುಮು ಚುಮು ಮುಂಜಾವಲಿ ಇಲ್ಲಿಗೆ ಬಂದಿಳಿದೆ.
ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿಯಲ್ಲಿ ಆಗುಂಬೆಯ ಕುರಿತ ಬರಹ

Read More

ಕೋಟೆ ಕೊತ್ತಲಗಳ ನಡುವೆ…: ಶ್ರೀಧರ್‌ ಎಸ್.‌ ಸಿದ್ದಾಪುರ ಪ್ರವಾಸ ಸರಣಿ

ಎಂದೂ ನಿದ್ರಿಸದ ಕೋಟೆ ಏಳು ಮಹಾದ್ವಾರಗಳಿಂದ ಇಂದಿಗೂ ಅಬೇಧ್ಯವಾಗಿದೆ. ತನ್ನ ತಲೆ ಬಿದ್ದಲ್ಲಿ ದೇವಾಲಯವನ್ನು ನಿರ್ಮಿಸಿ ಹಾಗೂ ದೇಹವಿದ್ದಲ್ಲಿ ಕೋಟೆ ಗೋಡೆಯ ನಿರ್ಮಿಸಿ ಎಂದು ತನ್ನನ್ನೆ ತಾ ಬಲಿಕೊಟ್ಟ! ತನ್ನ ತಲೆ ಕತ್ತರಿಸಿದ ಮೇಲೂ ಆತ ನಿಧಾನಕ್ಕೆ ಕೋಟೆಯ ಗೋಡೆ ಎಡೆಗೆ ನಡೆದು ಧರೆಗುರುಳಿದ. ಅಲ್ಲೇ ಕೋಟೆಯನ್ನು ನಿರ್ಮಿಸಲಾಯಿತು. ಎಷ್ಟೇ ಬಾರಿ ನಿರ್ಮಿಸಿದರೂ ನಿಲ್ಲದ ಕೋಟೆ ಬೀಳದೆ ನೇರ ನಿಂತಿತು. ಅಂತೂ ರಾಣಾಕುಂಭನ ಆಸೆ ನೆರವೇರಿತು. ಕಿಲಿವಾಡದಲ್ಲಿ ಬೃಹತ್ ಕೋಟೆಯೊಂದು ಎದ್ದು ನಿಂತಿತು!
ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿಯಲ್ಲಿ ರಾಜಸ್ಥಾನದಲ್ಲಿ ಓಡಾಡಿದ ಅನುಭವಗಳ ಕುರಿತ ಬರಹ

Read More

ಹಂಪಿಯ ಹೊಳೆ ದಂಡೆ: ಶ್ರೀಧರ್‌ ಎಸ್.‌ ಸಿದ್ದಾಪುರ ಪ್ರವಾಸ ಸರಣಿ

ಹೀಗೆ ಬಂಡೆಗಳ ತಡವಿ ಮೇಲೇರಿ ಅಲ್ಲೆಲ್ಲಾ ನುಸುಳು ಕೋರರಾಗಿ ಅಸಾಧ್ಯ ಬಂಡೆಗಳನ್ನು ಅಪ್ಪಿ ಇಳಿ ಸಂಜೆಯ ಕೊನೆಯ ಕಂತಿಗೆ ಮದನಕೊತ್ತಲ ಮಂಟಪದಲ್ಲಿದ್ದೆವು. ಒಮ್ಮೆಯಂತೂ ಅಸಾಧ್ಯವೆಂಬ ಬಂಡೆ ಏರಿ ಬಂದೆ! ಚಾಕಲೇಟ್‌ ಕೊಡುವೆ ಮೇಲೆ ಬಾ ಎನ್ನಲು ಗೆಳೆಯ ನಾಗರಾಜ್‌ ಮತ್ತು ಈರಣ್ಣ. ಓಬವ್ವ ಮತ್ತು ಹೈದರಾಲಿಯ ಸೈನಿಕರು ನೆನಪಾದರು. ಎರಡು ಬೃಹತ್‌ ಬಂಡೆಯ ನಡುವೆ ಇರುವ ಇಕ್ಕಟ್ಟು ದಾರಿ ಹಾಯಬೇಕು. ದಿನವೂ ನೀರು ಮತ್ತು ಬುತ್ತಿಗಂಟು ಹಿಡಿದು ಈ ಮಂಟಪದ ನೆತ್ತಿಗೆ ಹತ್ತುವ ಅಂದಿನ ಯುವಕರ ಸಾಹಸ ಪ್ರವೃತ್ತಿಗೆ ಮನಸೋತೆ.
ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿಯಲ್ಲಿ ಹಂಪಿಯಲ್ಲಿ ಓಡಾಡಿದ ಕುರಿತ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ