Advertisement

Tag: ಶ್ರೀಧರ್‌ ಎಸ್.‌ ಸಿದ್ದಾಪುರ

ಬಲ ಉಳ್ಳವರ ಅಹೋಬಿಲಂ!: ಶ್ರೀಧರ್‌ ಎಸ್.‌ ಸಿದ್ದಾಪುರ ಪ್ರವಾಸ ಸರಣಿ

ಜೀವನೋಪಾಯಕ್ಕೆ ಇಲ್ಲಿ ಹಲವು ವೇಷ ತೊಟ್ಟವರು ಇಲ್ಲಿ ಕಾಣಸಿಗುತ್ತಾರೆ. ದಾರಿಗುಂಟ ಚಾಟಿಯನು ಮೈಗೆ ನಗುತ ಬಾರಿಸಿಕೊಂಡು ಜೀವನ ನಿರ್ವಹಿಸುವ ನಿರ್ಮೋಹಿ ಅಮಾಯಕರು. ಕಿಲೋಮೀಟರ್‌ ಆಚೆಗೂ ಕೇಳಿಸುವ ಚಾಟಿ ಶಬ್ದ. ಇವರ ಕುರಿತೊಂದು ಮಹಾ ಮರುಕ ಹುಟ್ಟುವಂತೆ ಮಾಡುತ್ತದೆ. ಬಿಸಿಲ ಜಗುಲಿಗೆ ಕೂತು ಬೇಡುವವರು. ಭಕ್ತಾದಿಗಳಿಗೆ ಉಣ್ಣಲು ಬನ್ನಿ ಎನ್ನುವವರು. ಒಂದೇ ಎರಡೇ. ಎಷ್ಟೇ ಇದ್ದರೂ ಮತ್ತಷ್ಟು ಬೇಕೆನ್ನುವ ನಮ್ಮನ್ನು ಕಂಡರೆ ಅವರಿಗೂ ಹಾಗೇ ಅನಿಸಬಹುದೇ ಗೊತ್ತಿಲ್ಲ. ಅಹೋಬಿಲಂ ಎಂಬ ಮಾಯಾಲೋಕದಲ್ಲಿ ಕಳೆಯುವ ಇನ್ನೆಷ್ಟು ಜನರಿದ್ದಾರೋ ಗೊತ್ತಿಲ್ಲ.
ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿಯಲ್ಲಿ ಆಂಧ್ರಪ್ರದೇಶದ ಅಹೋಬಲಂನ ಕುರಿತ ಬರಹ

Read More

ತುಂಬಾ ಕುಡಿದರೂ ತಲೆಗೇರದ `ತುಂಬಾ’: ಶ್ರೀಧರ್‌ ಎಸ್.‌ ಸಿದ್ದಾಪುರ ಪ್ರವಾಸ ಸರಣಿ

`ಮೇಘಾಲಯದ ವಾಕೆನ್ ಹಳ್ಳಿಯೊಂದರಲ್ಲಿ ನಡೆಯುವ ಬುಡಕಟ್ಟು ಉತ್ಸವದಲ್ಲಿ ಇದೇ ರೀತಿಯ ಪೇಯ ನೀಡುತ್ತಾರೆʼ ಎಂದು ಮೇಘಾಲಯದ ಗೆಳೆಯನೊಬ್ಬ ಅರುಹಿದ್ದ. ಇಲ್ಲಿನ ನಿರ್ಮಲ ಬುಡಕಟ್ಟು ಯಾವುದೇ ಪಂಗಡಕ್ಕೆ ಸೇರಿದವರಲ್ಲ. ದೇವರ ಹೆಸರು ಲಿಂಗ್‌ದಾ. ನೀವು ಕೇಳಿಲ್ಲ ಬಿಡಿ. ಭಕ್ತರು ತಮ್ಮ ಹೊಸ ಬೆಳೆಯನ್ನು ದೇವರಿಗೆ ಸಮರ್ಪಿಸುತ್ತಾರೆ. ಅಕ್ಕಿಯಿಂದ ತಯಾರಿಸಿದ ಬಿಯರೇ ಇಲ್ಲಿನ ದೇವರಿಗೆ ನೈವೇದ್ಯ. ಅದನ್ನೇ ಬಂದವರಿಗೆಲ್ಲಾ ತೀರ್ಥವಾಗಿ ಹಂಚುತ್ತಾರೆ! ಹಾಗಾಗಿ ಸರ್ವಾಂತರಯಾಮಿ ಈ ಪೇಯ! ಜಗದಗಲ ಹಬ್ಬಿದ ಈ ಸಂಪ್ರದಾಯಗಳ ತಾಯಿ ಬೇರೊಂದೆ ಅತಿಥಿ ಸತ್ಕಾರ ಮತ್ತು ಆರೋಗ್ಯ.
ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿ

Read More

ಈ ಜಗ ಸೋಜಿಗ….: ಶ್ರೀಧರ್‌ ಎಸ್.‌ ಸಿದ್ದಾಪುರ ಪ್ರವಾಸ ಸರಣಿ

ಊರ ಚಾವಡಿಯಲ್ಲೊಂದು ಕೊಳ. ಕೊಳದ ಸನಿಹ ಗಡಿ ಹಾಕಿದಂತೆ ಹರಿವ ಚಂದ್ರಾನದಿ ಮತ್ತು ಕೊಳಲ ರಾಗ ತೆಗೆಯುವ ಸೀಸು ಜಲಧಾರೆ. ಸದಾ ಪ್ರಶಾಂತ ಸನ್ನಿಧಿ. ಅದರ ಸೌಂದರ್ಯಕ್ಕೆ ಮರಳಾಗದೇ ಮರಳಿದವರಿಲ್ಲ. ಗಂಟೆಗೆ ಸಾವಿರ ಸಾವಿರ ಕ್ಯೂಸೆಕ್ಸ್‌ ನೀರನ್ನ ಧರೆಗಿಳಿಸುವ ಭಗೀರಥ, ಸೀಸು ಜಲಧಾರೆ. ೨೪ ಗಂಟೆಯೂ ಬೇಸರಿಸದೆ ಬಸವಳಿಯದೇ ಸುರಿವ ಜಲಧಾರೆ ಎಂದು ಬತ್ತುವುದೆಂದು ಹೋಟೆಲ್‌ ಮಾಲಿಕನಲ್ಲಿ ಕೇಳಿದೆ. ಇಲ್ಲಿಯವರೆಗೆ ಬತ್ತಿದ್ದೇ ಇಲ್ಲವೆಂದ! ಹಿಮ ಟೋಪಿಗಳನ್ನು ಕರಗಿಸುತ್ತಲೇ ಇರುತ್ತದೆ. ಮತ್ತೆ ಮತ್ತೆ ನೀರುಣಿಸುವ ಚಂದ್ರಾ ನದಿಯ ಹಿಮಗಡ್ಡೆಗಳು!
ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿ

Read More

ಸೋಲೆಂಬ ಅಲ್ಪ ವಿರಾಮದ ನಡುವೆ: ಶ್ರೀಧರ್‌ ಎಸ್.‌ ಸಿದ್ದಾಪುರ ಪ್ರವಾಸ ಸರಣಿ

ಈ ಜನ್ಮದಲ್ಲಂತು ಇಂತಹ ಭೀಕರ ಮಳೆ ಕಂಡಿದ್ದಿಲ್ಲಾ!! ಕೆಳಗಿಳಿಯುತ್ತಾ ಜೀವಾದಿಗಳು ತಲ್ಲಣಿಸುತ್ತಿದ್ದವು. ತರಗಲೆಗಳ ತೂರಾಟ, ಹನಿಗಳ ಆರ್ಭಟ. ಕೆಳಗಿಳುತ್ತಲೇ ಮಳೆ ಕಡಿಮೆ ಆಗುವುದನ್ನೇ ತಲೆಗೊಂದು ಸೂರು ಹುಡುಕಿ ಹೊರಟೆವು. ಅಷ್ಟು ಮಳೆಯಲ್ಲೂ ಒಂದೆರಡು ಚಿತ್ರ ತೆಗೆದುದರಿಂದ ಎಲ್ಲರಿಗಿಂತ ಹಿಂದುಳಿದಿದ್ದ ನಾನು ಸ್ನೇಹಿತರಿಗಾಗಿ ಹುಡುಕಿದೆ. ಯಾರೂ ಕಾಣಲಿಲ್ಲ. ಭಟ್ಟರ ಹಿಂದೇ ಹೋದರೋ ಹೇಗೆ? ಭೈರವನಿಗೆ ಪೂಜೆ ಮುಗಿಸಿ ಭಟ್ಟರು ಆಗಲೇ ಹೋಗಿಯಾಗಿತ್ತು. ಭೈರವನ ಗುಡಿಯಲ್ಲಿ ಅಡಗುವ ಆಸೆ ಬಿಟ್ಟೆವು. ಸನಿಹದಲ್ಲೇ ಚಿಕ್ಕ ಗುಡಿಸಿಲಿನಂತಹ ಮಾಡಿತ್ತು. ಕಳ್ಳನಂತೆ ಅಲ್ಲಿ ಅಡಗಿಕೊಳ್ಳಲು ಹೊರಟೆ.
ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿ

Read More

ನಾಲಗೆ ಹೊರಳದ ನಾಡಿನಲ್ಲಿ ಮೂರು ದಿನ…: ಶ್ರೀಧರ್‌ ಎಸ್.‌ ಸಿದ್ದಾಪುರ ಪ್ರವಾಸ ಸರಣಿ

ಸುಣ್ಣದ ಕಲ್ಲಿನ ವಿಚಿತ್ರ ವಿನ್ಯಾಸ. ಜೇನು ತಟ್ಟಿಯಂತಹ ವಿಭಿನ್ನ ಸಂಯೋಜನೆ. ಬೆಳಕಿಗೆ ಹೊಳೆವ ಕಲ್ಲಿನ ಚೂರುಗಳು. ದನದ ಕೆಚ್ಚಲಿನಾಕೃತಿಯ ವಿನ್ಯಾಸವೂ ಉಂಟು. ಹಲಸಿನ ಕಾಯಿಯಂತಹ ನೇತಾಡುವ ಮಣ್ಣ ಹೆಂಟೆಗಳು. ವಿಭಿನ್ನ ವಿನ್ಯಾಸ, ಆಕಾರ. ಹಾವು, ಶಂಕ, ಗದೆ, ರಾಕ್ಷಸ ಆಲದ ಬಿಳಲುಗಳಂತಹ ರಚನೆ. ಹತ್ತು ಹೆಡೆ ಸರ್ಪ, ಮುದುಕ, ಗಂಟಲಿನ ರಚನೆ, ಹೊಸ ಹೊಸ ವಿನ್ಯಾಸದ ಬಲ್ಬುಗಳಂತಹ ರಚನೆಗಳು, ಒಂದೇ ಎರಡೇ.
ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿಯಲ್ಲಿ ಹೊಸ ಊರಿನ ಪರಿಚಯ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ