Advertisement

Tag: ಸಣ್ಣಕತೆ

ಚಂದ್ರಮತಿ ಸೋಂದಾ ಬರೆದ ಈ ಭಾನುವಾರದ ಕತೆ “ಸಾಂಗತ್ಯ”

ಯಶೋದಳಿಗೆ ಮುಂದೆ ಮಾತನಾಡಲು ಆಗಲಿಲ್ಲ. ಅವಳು ಬಿಕ್ಕಿದಳು. ಅವಳ ಕಣ್ಣಿನಿಂದ ಒಂದೇಸಮನೆ ನೀರು ಇಳಿಯುತ್ತಿತ್ತು. ಅಷ್ಟರಲ್ಲಿ ಮಗುವನ್ನು ಕರೆದುಕೊಂಡು ಮಾದೇವಿ ಬಂದಳು. ಮಗುವನ್ನು ಎತ್ತಿಕೊಂಡ ಯಶೋದ ಮಗುವನ್ನು ಹೆಗಲಿಗೆ ಹಾಕಿಕೊಂಡು ಎದ್ದು ನಿಂತಳು. ಅವಳನ್ನು ಒಳಗೆ ಕರೆದುಕೊಂಡು ಹೋಗುವಂತೆ ಪ್ರಕಾಶ ಮಾದೇವಿಗೆ ಸೂಚಿಸಿದ. ಕೀಕೊಟ್ಟ ಬೊಂಬೆಯಂತೆ ಯಶೋದ ಮಾದೇವಿಯನ್ನು ಅನುಸರಿಸಿದಳು. ಅವಳಿಗೆ ಯಾವುದೋ ಆಘಾತವಾಗಿರಬೇಕು ಎಂದು ಪ್ರಕಾಶ ತರ್ಕಿಸಿದ. ನಿಧಾನವಾಗಿ ಅದನ್ನು ಹೊರತೆಗೆಯಬೇಕು. ಒಂದೆರಡು ದಿನದವರೆಗ ಕಾಯಬೇಕು.
ಚಂದ್ರಮತಿ ಸೋಂದಾ ಬರೆದ ಕತೆ “ಸಾಂಗತ್ಯ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಉಮಾ ರಾವ್‌ ಬರೆದ ಕತೆ

ಎಂಟುಗಂಟೆಗೆ ಕೆಲಸದವಳು ಬಂದಾಗಲೂ ಬಾಗಿಲು ತೆರೆದ ಕೂಡಲೇ ಅದೇ ದೃಶ್ಯ. ಜೊತೆಗೆ ಅವನ ಮನೆ ಬಾಗಿಲು ತೆಗೆದಾಗ ಹಾಲಿನಲ್ಲಿ ಕಣ್ಣಿಗೆ ಬೀಳುತ್ತಿದ್ದ ನೀರಿನ ಹೂಜಿ, ಹಾಸಿದ ಚಾಪೆ, ಮುಂದೆ ದೇವರಪಟ ಎಲ್ಲಾ ನಾಪತ್ತೆ. ಕೆಲಸದವಳನ್ನು ಮುಂದೆ ಮಾಡಿಕೊಂಡು ಒಂದೆರಡು ಹೆಜ್ಜೆ ಒಳಗೆ ಹೋದಾಗ ಮನೆ ಖಾಲಿಯಾಗಿರುವುದು ಅರಿವಾಯಿತು. ತಕ್ಷಣ ಇವರು ಇಂಟರ್‌ಕಾಮ್‌ನಲ್ಲಿ ಸೆಕ್ಯೂರಿಟಿಯವನಿಗೂ, ರಾಧಾಕೃಷ್ಣನ್‌ಗೂ ಹೇಳಿದರು. ಎಲ್ಲಾ ತಕ್ಷಣ ಓಡಿ ಬಂದರು.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಉಮಾ ರಾವ್‌ ಬರೆದ ಕತೆ “ಹಾವಾಡಿಗ”

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ಹಾಗೇ ಒಂದು ಜೊಂಪು ಹತ್ತಿತ್ತು. ಕನಸಿನಲ್ಲಿ ತನ್ನಲ್ಲಿ ಉಳಿದಿದ್ದ ಟಿಕೆಟ್ ಒಂದಕ್ಕೆ ಲಕ್ಷ ರೂಪಾಯಿಯ ಬಂಪರ್ ಬಂದ ಹಾಗೆ, ಅದರಿಂದ ಬಂದ ಹಣದಲ್ಲಿ ತಂಗಿಯ ಮದುವೆ, ತನಗೊಂದು ಮೂರು ಚಕ್ರದ ಸ್ಕೂಟರ್, ಸಣ್ಣದೊಂದು ಲಾಟರಿ ಟಿಕೆಟ್ ಮಾರುವ, ಸ್ಟೇಷನರಿ ಅಂಗಡಿ. ಅದರಿಂದ ಬರುವ ಆದಾಯ. ಅಲ್ಲಿ ಹುಡುಗನೊಬ್ಬನನ್ನು ಕೆಲಸಕ್ಕೆ ಇರಿಸಿ ತಾನು ಬಿ.ಕಾಂ. ಮುಂದುವರಿಸಿದ ಹಾಗೆ……
ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ “ಬಂಪರ್‌ ಬಹುಮಾನ” ನಿಮ್ಮ ಓದಿಗೆ

Read More

ಸುಬ್ರಹ್ಮಣ್ಯ ಹೆಗಡೆ ಬರೆದ ಈ ಭಾನುವಾರದ ಕತೆ

ಅಪರಾಧವು ಸಾಮೂಹಿಕವಾದಾಗ ಅದು ಸಾಮಾಜಿಕ ಸ್ವರೂಪವನ್ನು ಪಡೆದುಕೊಳ್ಳುತ್ತದೆ. ತನ್ಮೂಲಕ ನಮ್ಮ ಊರಿನ ಗಂಡಸರೆಲ್ಲ ತಿಂಗಳಿಗೆ ಒಂದೆರಡು ಬಾರಿ ಟೆಂಟಿನಲ್ಲಿ ಬಿಸಿಯಾಗತೊಡಗಿದರು. ಆಸೆಗಳಿಗೆ ಬೇಧಭಾವವಿಲ್ಲ. ಎಲ್ಲರಿಗು ಆಸೆಗಳಿದ್ದರಿಂದ ಯಾರೂ ಆ ಬಗ್ಗೆ ತಲೆ ಕೆಡಿಸಿಕೊಳ್ಳಲಿಲ್ಲ. ಕೆಲವು ವರ್ಷಗಳ ನಂತರ ತಾಲೂಕು ಸೆಂಟರಿನಲ್ಲಿ ಮಿನಿ ಥೇಟರು, ವಿಡಿಯೋ ಪಾರ್ಲರುಗಳು ಶುರುವಾದ ಕಾರಣ ಜನರಿಗೆ ಒಳ್ಳೆಯ ಕ್ಲಾರಿಟಿಯ ಅನುಭವ ಸಿಕ್ಕು, ಟೆಂಟು ಸತ್ತು ಹೋಯಿತು.
ಸುಬ್ರಹ್ಮಣ್ಯ ಹೆಗಡೆ ಬರೆದ ಕತೆ “ಪರಾಜಿತ ವಿಠ್ಠಲ ವಿಜಯ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಮಯೂರ ಬಿ ಮಸೂತಿ ಬರೆದ ಈ ಭಾನುವಾರದ ಕತೆ

ತಲೆಗೆ ಮಂಕು ಬಡಿದಂತಾಯಿತು, ಆದರೂ ಚೇತರಿಸಿಕೊಂಡು ಮನೆ ತಲುಪಿದೆ. ಶಶಿ, ಮಕ್ಳು ಕಾಯ್ತಾ ಇದಾರೆ, ಆಗ್ಲೇ ತುಂಬಾ ಹೊತ್ತಾಯ್ತು, ಟೈಮ್ ನೋಡಿ ೧೦:೩೦, ನಂಗು ಜೋರಾಗಿ ನಿದ್ದೆ ಬರ್ತಾ ಇದೆ. ಬೇಗ ಬನ್ನಿ ಊಟ ಮಾಡೋಣವೆಂದಳು ನಿಶಾ. ನಾನು ಏನು ಮಾತಾಡದೆ ಕೈಯಲ್ಲಿದ್ದ ಪೇಪರ್ ಬ್ಯಾಗ್ ಅನ್ನು ಅವಳ ಕೈಗೆ ನೀಡಿದೆ. ಬಿರಿಯಾನಿ ತಿನ್ನಲು ಶುರು ಮಾಡಿದೆವು. ಯಾಕೆ ಶಶಿ ಏನು ಮಾತಾಡುತ್ತಿಲ್ಲ?
ಮಯೂರ ಬಿ ಮಸೂತಿ ಬರೆದ ಈ ಭಾನುವಾರದ ಕತೆ “ಕಬಾಬ್ ಮೆ ಹಡ್ಡಿ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ