Advertisement

Tag: ಸಣ್ಣ ಕತೆ

ಕೋಡಿಹಳ್ಳಿ ಮುರಳಿಮೋಹನ್ ಅನುವಾದಿಸಿದ ಎನುಗಂಟಿ ವೇಣುಗೋಪಾಲ್ ತೆಲುಗು ಕತೆ

“ಬಹಳ ದೂರ ಬಂದ ಮೇಲೆ ನೀವು ಎದುರಾದಿರಿ” ಎಂದು ಹೇಳುವುದು ಮುಗಿದ ಮೇಲೆ ಉಳಿದ ಅರ್ಧ ಗ್ಲಾಸ್ ಮದ್ಯವನ್ನು ಖಾಲಿ ಮಾಡಿದ ರಂಜಿತ್. “ಇಗೋ ಪುರಾವೆ… ನನ್ನ ಕೈ ಮೇಲಿನ ಗಾಯ” ಎನ್ನುತ್ತಾ ಬಲಗೈಯನ್ನು ಸ್ವಲ್ಪ ಮೇಲಕ್ಕೆ ಎತ್ತಿ ತೋರಿಸಿದ ರಂಜಿತ್. “ಹೌದು, ಆಗ ನೀವು ಬಲಗೈಯಿಂದ ಲಿಫ್ಟ್ ಕೇಳಿದಾಗ ಬೀದಿ ದೀಪದ ಬೆಳಕಿನಲ್ಲಿ ಗಮನಿಸಿದೆ. ಆ ಗಾಯ ನೋಡಿಯೇ ಲಿಫ್ಟ್ ಕೊಟ್ಟೆ” ಎಂದ ವಾಸುದೇವ ರಾವ್. ರಂಜಿತ್ ಒಮ್ಮೆಲೇ ದಂಗಾದನು. “ಆತಂಕ ಪಡಬೇಡಿ.
ಕೋಡಿಹಳ್ಳಿ ಮುರಳಿಮೋಹನ್ ಅನುವಾದಿಸಿದ ತೆಲುಗಿನ ಕತೆಗಾರ ಎನುಗಂಟಿ ವೇಣುಗೋಪಾಲ್ ಅವರ ಕತೆ “ಚೋರಿ”

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ವೈದೇಹಿ ಬರೆದ ಕತೆ

ಯಾಕೋ ನನಗೆ ಕೋರ್ಟುಮನೆ ಅಲೆದೇ ಸೋತು ಕುಸಿದುಹೋಗಿದ್ದ ಅಪ್ಪನ ಹೋರಾಟದ ಬಗ್ಗೆ ಹೇಳಲೇಬೇಕೆನಿಸಿತು. ಆಸ್ತಿಗಾಗಿ ಕುಟುಂಬದಲ್ಲೇ ಒಂದು ಆತ್ಮಹತ್ಯೆ ಆಯಿತು, ಒಂದು ಕೊಲೆ ಆಯಿತು, ಇದೆಲ್ಲ ನಮ್ಮ ಮಟ್ಟಿಗೆ ಎಂಥ ದೊಡ್ಡದು ಯೋಚಿಸಿ. ಅಪ್ಪ ಕಡೆಕಡೆಗೆ ತಮ್ಮದೇ ಕುಟುಂಬದೊಂದಿಗೆ ಕೋರ್ಟುಕಚೇರಿ ವ್ಯಾಜ್ಯ ಯಾಕಾದರೂ ಬೇಕಿತ್ತು ಅಂತ ಕೊರಗುತಿದ್ದರು ಅಷ್ಟಿಷ್ಟಲ್ಲ. ಹಾಗೆಂದು ‘ಜಗಳ ಬೇಡ, ಎಲ್ಲ ನಿಮಗೇ, ತಕೊಳ್ಳಿ’ ಅಂತ ಬಿಟ್ಟುಕೊಟ್ಟರೇನು? ಇಲ್ಲವಲ್ಲ. ಅದು ಸಾಧ್ಯವೂ ಇಲ್ಲ. ‘ಒಂದು ರೀತಿ ಮಹಾಭಾರತದಲ್ಲಿ ಬರುವ ಧರ್ಮವ್ಯಾಧನ ಕತೆಯಂತೆ ನಾವೆಲ್ಲ.
ನಾನು ಮೆಚ್ಚಿದ ನನ್ನ ಕಥಾ ಸರಣಿಯ ಕೊನೆಯ ಕಂತಿನಲ್ಲಿ ವೈದೇಹಿ ಬರೆದ ಕತೆ “ಅಮುದ ಹೇಳಿದ ಕತೆ”

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ರಮೇಶ್ ಆರ್ ಅಕ್ಕರಕಿ ಕತೆ

ಹಿಂದಿರುಗಿ ಬರುತ್ತಿದ್ದಾಗ ಮರದಿಂದ ಕೆಳಗೆ ದೂರದಲ್ಲಿ ನೆಲದ ಮೇಲೆ ಬಿದ್ದಿದ್ದ ಗೂಡಿನ ಸುತ್ತ ಕಾಗೆಯೊಂದು ಕಾ… ಕಾ… ಎನ್ನುತ್ತ ಸುತ್ತು ಹಾಕುತ್ತಿತ್ತು. ಹತ್ತಿರಕ್ಕೆ ಹೋಗಿ ನೋಡಿದರೆ ಗೂಡಿಂದ ಹೊರಗೆ ಬಿದ್ದು ಒಡೆದ ಮೊಟ್ಟೆಯಿಂದ ಮಾಂಸದ ಮುದ್ದೆಯಂತಿದ್ದ ಮರಿಯೊಂದು ಹೊರಬಿದ್ದಿತ್ತು.
ನಾನು ಮೆಚ್ಚಿದ ನನ್ನ ಕತೆಯ ಸರಣಿಯಲ್ಲಿ ರಮೇಶ್ ಆರ್ ಅಕ್ಕರಕಿ ಬರೆದ ಕತೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಪ್ರಜ್ಞಾ ಮಾರ್ಪಳ್ಳಿ ಕತೆ

ಸೂರ್ಯನಿಗೋ ಯಾರು ಹುಟ್ಟಿದರೆಷ್ಟು? ಯಾರು ಸತ್ತರೆಷ್ಟು? ಅವನ ಕೆಲಸ ಅವನದ್ದೇ. ಬೆಳಗಿನ ಮೋಟಾರು ಗಾಡಿ ಬಂದು ಹೋದ ಸದ್ದಾಯಿತು. ಬಸವಣ್ಣನ ಅಣ್ಣನ ಮಗ ಮಲ್ಲೇಶ ಬಾಗಿಲಲ್ಲಿ ಬಂದು ನಿಂತಿದ್ದ. ನಿಧಾನಕ್ಕೆ ಬಸವಣ್ಣನ ಬಳಿಗೆ ಬಂದ. ಬೆನ್ನು ಸವರಿದ. ಅವರಿಬ್ಬರೆ ತಾನೆ ಗೋಪುವನ್ನು ಕೊನೆಯ ಬಾರಿಗೆ ನೋಡಿದವರು. ಕಾಣುತ್ತಿದ್ದಂತೇ ಕೈಜಾರಿ ಬಿದ್ದ ಗೋಪು ಅಪ್ಪಾ ಅಪ್ಪಯ್ಯಾ ಎಂದು ಕೂಗಿದ್ದೊಂದೇ ಗೊತ್ತು.
‘ನಾನು ಮೆಚ್ಚಿದ ನನ್ನ ಕತೆʼಯ ಸರಣಿಯಲ್ಲಿ ಪ್ರಜ್ಞಾ ಮಾರ್ಪಳ್ಳಿ ಕತೆ “ಭೂಮಿಯೊಳಗಿದೆ ಬದುಕು” ನಿಮ್ಮ ಓದಿಗೆ

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ತಮ್ಮ ಮನಸ್ಸಿನಲ್ಲಿ ಇದ್ದುದನ್ನು ಮೊದಲು ಮುಕುಂದರಾವ್ ಹೆಂಡತಿ ಬಳಿ ಹೇಳಿದರು. ಆಗ ಶ್ರೀ ವೇದ “ಅಲ್ಲರೀ, ಆಟೋದವರಿಗೆ ಹೆಣ್ಣು ಕೊಡುವುದಂದರೆ ನೆಂಟರಿಷ್ಟರು ಆಡಿಕೊಳ್ಳುವುದಿಲ್ಲವೇ, ಸಾಮಾನ್ಯವಾಗಿ ಆಟೋ ಡ್ರೈವರ್‌ಗಳ ಬಗ್ಗೆ ಕೆಲವರಿಗೆ ಏನೋ ಒಂದು ರೀತಿಯ ತಾತ್ಸಾರ ಭಾವ ಇರುತ್ತಲ್ಲವೇ, ಅಲ್ಲದೆ ಶ್ರಾವಣಿಗೂ ತುಂಬಾ ವಯಸ್ಸು ಆಗಿ ಹೋಗಿಲ್ಲ, ಇನ್ನೂ ಸ್ವಲ್ಪ ಕಾಯೋಣ, ಬನಶಂಕರಿ ಹುಡುಗ ಇನ್ನೂ ಏನು ಫೈನಲ್ ಮಾಡಿಲ್ಲ ಅಲ್ಲವೇ? ಅದು ಆದರೂ ಆಗಬಹುದಲ್ಲವೇ” ಎಂದಳು.
ವಸಂತಕುಮಾರ್‌ ಕಲ್ಯಾಣಿ ಬರೆದ ಕತೆ “ಸಮನ್ವಿತ”

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ