Advertisement

Tag: ಸದಾಶಿವ ಸೊರಟೂರು

ಕಣ್ಣೊರಿಸಿಕೊಂಡ ಪುಟ್ಟ ದೇವರು…

ತರಗತಿಯಿಂದ ತರಗತಿಗೆ ಹಾರಿ ಅದೇ ಶಾಲೆಯಲ್ಲಿ ಕೂತವರಿಗೆ ಒಂದು ರೂಮಿನ ಬದಲಾವಣೆ ಅಷ್ಟೇ.. ತರಗತಿಯಿಂದ ಉಸಿರು ಬಿಗಿ ಹಿಡಿದು ಹಾರಿ ಜಿಗಿದು ಮತ್ತೆಲ್ಲೊ ಮತ್ಯಾವ ಶಾಲೆ, ಕಾಲೇಜಿನ ರೂಮಿನಲ್ಲೊ ಇಲ್ಲಿ ಕಿತ್ತುಕೊಂಡು ಬಂದ ಓದಿನ ಗಿಡವನ್ನು ಅಲ್ಲಿ ನೆಟ್ಟು ಪೋಷಿಸಬೇಕು. ಕಿತ್ತು ನಡೆಯುವ ಹೊತ್ತಲ್ಲಿ ಗಂಟಲಿಗೆ ಬಂದು ಆತು ಕೂತುಕೊಳ್ಳುತ್ತಲ್ಲಾ ಆ ದುಃಖ ಮತ್ತು ಅದನ್ನು ನುಂಗಿ ಸಾಯಿಸಿ ಸಾಯಿಸಿ ನಗಬೇಕಲ್ಲ ಆ ಸಂಕಟ, ಮತ್ತು ಪಿಳಿಪಿಳಿ ಕಣ್ಣುಗಳಿಂದ ಬಂದೇ ಬಿಡುತ್ತಲ್ಲ ಆ ಪವಿತ್ರ ಕಣ್ಣೀರು.. ಓ ಎಂತ ಪಾಪಿಷ್ಟ ಗಳಿಗೆ ಅದು.
ಸದಾಶಿವ ಸೊರಟೂರು ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಕಥಾ ಬೇಸಾಯವನ್ನು ಬದುವಿನಲ್ಲಿ ನಿಂತು ನೋಡಿ

ಉಳುಮೆ ಅನುಭವದ್ದು. ಒಂದು ಸಾಲಿನ ಉಳುಮೆ ಸಾಕೋ, ಎರಡುಸಾಲು ಹೊಡೆಯಬೇಕೋ, ಮೂರುಸಾಲು ಆಗಬೇಕೋ ಎಂಬುದು ಉಳುಮೆಗಾರನ ವಿವೇಚನೆಯದು. ಹಾಗೆಯೇ ಬಲಸುತ್ತು, ಎಡಸುತ್ತು ಉಳುಮೆಯ ವಿಚಾರವೂ ಸಹ. ಬದುವಿನ ಉಬ್ಬಂಚು ತಗ್ಗಬೇಕಾದರೆ ಎಡಸುತ್ತಿನ ಉಳುಮೆಗೆ ನೇಗಿಲು ಹಿಡಿಯಬೇಕು. ಎದೆಯ ಹೊಲದಲ್ಲಿ ಹುಟ್ಟುವ ಕಥೆ ಬೆಳೆದು ಬೆಳೆಯಾಗವುದು ಇಂತಹ ಹದಗಳಲ್ಲಿಯೇ. ಹೊಲದ ವಿಸ್ತಾರವಿದ್ದಂತೆ ಕಥೆಯ ವಿಸ್ತಾರವೂ ಇರುತ್ತದೆ. ವಿಸ್ತಾರ ದೊಡ್ಡದಿದ್ದರೂ ಉಳುಮೆಯಾದಷ್ಟು ನೆಲದಲ್ಲಷ್ಟೇ ಬೆಳೆ. ಸದಾಶಿವ ಸೊರಟೂರು ಕಥಾಸಂಕಲನ “ಅರ್ಧ ಬಿಸಿಲು ಅರ್ಧ ಮಳೆ”ಗೆ ಸ. ರಘುನಾಥ ಬರೆದ ಮುನ್ನುಡಿ

Read More

ಸದಾಶಿವ ಸೊರಟೂರು ಬರೆದ ಈ ಭಾನುವಾರದ ಕಥೆ

ಬೆಳಕಿರುವ ಜಗದಲ್ಲಿ ತನ್ನವರು ಎಲ್ಲೋ ಕಳೆದು ಹೋಗಿರುವಾಗ ಹುಡುಕಿ ಸೇರಿಕೊಳ್ಳಲು ಹಂಬಲಿಸಿ ಸೋತು ಹೋದಳು. ಸುಮ್ಮನೆ ಅಲೆಯಬೇಕು. ಒಂದೂರಲಿ ಒಂದೆರಡು ದಿನ. ಭಿಕ್ಷೆಯ ಕೂಳು ಹೊಟ್ಟೆಗಿತ್ತು. ಹರಿದ ಎರಡು ದುಪ್ಪಟಿಗಳು ರಾತ್ರಿ ಚಳಿಗಿದ್ದವು. ರಾತ್ರಿ ಮಾತ್ರ ಸ್ನಾನದ ಹಂಗಿನಲ್ಲಿ ಅವಳ ಬೆತ್ತಲೆ ದೇಹವನ್ನು ನೋಡಿತ್ತು. ಆಚೆ ನೆಲದಲ್ಲಿ ಕೂಡಿಸಿಟ್ಟ ಮೂರು ಕಲ್ಲುಗಳು ಅವಳ ಅಡುಗೆ ಮನೆ. ಇಂತಿಪ್ಪ ಆಕೆಯ ಬದುಕು ಬೆಳಕು, ಕತ್ತಲುಗಳ ಮಧ್ಯೆ ನುಗ್ಗುತ್ತಿತ್ತು.
ಸದಾಶಿವ ಸೊರಟೂರು ಬರೆದ ಕಥೆ “ಬಯಲು” ನಿಮ್ಮ ಈ ಭಾನುವಾರದ ಓದಿಗೆ

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ