Advertisement

Tag: ಸರಣಿ

ಬರವಣಿಗೆಯ ಹುಚ್ಚು ಹತ್ತಿದ್ದ ದಿನಗಳು…: ಎಚ್. ಗೋಪಾಲಕೃಷ್ಣ ಸರಣಿ

ಪತ್ರಿಕೆಗಳಿಗೆ ಬರಹ ರವಾನೆ ಆದಾಗ ಅಸ್ವೀಕೃತ ಆದರೆ ವಾಪಸ್ ಕಳಿಸಲು ಅಂಚೆ ಚೀಟಿ ಹಚ್ಚಿದ ಕವರ ಸಂಗಡ ಹೋಗುತ್ತಿತ್ತು. ಆಗ ಅರವತ್ತು ಎಪ್ಪತ್ತರ ದಶಕದಲ್ಲಿ “ಅಸ್ವೀಕೃತ ಲೇಖನಗಳನ್ನು ವಾಪಸ್ ಪಡೆಯಲು ಅಂಚೆ ಚೀಟಿ ಹಚ್ಚಿದ ಸ್ವ ವಿಳಾಸದ ಕವರ್ ಸಂಗಡ ಇರಲಿ” ಎಂದು ಎಲ್ಲಾ ಪತ್ರಿಕೆಗಳೂ ಬರಹಗಾರ ಪ್ರಭುಗಳಿಗೆ ವಿನಂತಿ ಮಾಡುತ್ತಿದ್ದರು. ಅದರಂತೆ ನಾವು ಬರಹಗಾರ ಪ್ರಭುಗಳು ಅವರ ವಿನಂತಿಯನ್ನು ಶಿರಸಾ ವಹಿಸಿ ಪಾಲಿಸುತ್ತಿದ್ದೆವು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೨ನೇ ಬರಹ ನಿಮ್ಮ ಓದಿಗೆ

Read More

ಸುಂದರ, ಸಮೃದ್ಧ ಕಾಡಿನ ರೋಚಕ ಕಥೆಗಳು: ರೂಪಾ ರವೀಂದ್ರ ಜೋಶಿ ಸರಣಿ

ತುಂಬ ದಟ್ಟವಾದ ಎತ್ತರವಾದ ಮರಗಳಿಂದ ಕಂಗೊಳಿಸುವ ಕಾಡಿನಿಂದ ಆವೃತವಾದ ಆ ಗುಡ್ಡ ನೋಡುವುದೆಂದರೆ ಎಲ್ಲಿಲ್ಲದ ಖುಶಿ ನನಗೆ. ಅದರಲ್ಲಿ ಒಂದು ವಿಚಿತ್ರ ಆಕರ್ಷಣೆ ಇತ್ತು. ಹಗಲು ಅಷ್ಟು ಪ್ರೀತಿಯಿಂದ ನೋಡುವ ಗುಡ್ಡ, ರಾತ್ರಿ ಮಾತ್ರ ಭಯ ಹುಟ್ಟಿಸುತ್ತಿತ್ತು. ರಾತ್ರಿ ಊಟ ಮಾಡಿ ಕೈತೊಳೆಯಲು, ‘ವಂದ’ ಮಾಡಲು ಹೊರಗೆ ಬಂದಾಗಲೆಲ್ಲ ನಾವು ಅತ್ತ ದೃಷ್ಟಿ ಹರಿಸುವ ಸಾಹಸವನ್ನೇ ಮಾಡುತ್ತಿರಲಿಲ್ಲ. ಆಕಸ್ಮಿಕವಾಗಿ ಕಣ್ಣು ಅತ್ತ ಹೋದರೆ ಸಾಕು, ಕಾರ್ಗತ್ತಲೆಯಲ್ಲಿ ಮಸಿ ಬಳಿದಷ್ಟು ಕರ್ರಗೆ ಬೃಹದಾಕಾರವಾಗಿ ಕುಳಿತ ಅದು, ಭಯಂಕರವಾದ ಕಲ್ಪನೆ ಮೂಡಿಸಿ, ಎದೆಯ ನಗಾರಿ ಬಡಿತ ಏರುತ್ತಿತ್ತು.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿ

Read More

ಹುಳಿ ಹಿಂಡುವವರ ಮಧ್ಯೆ ನಾವು ಹೇಗಿರಬೇಕು??: ಬಸವನಗೌಡ ಹೆಬ್ಬಳಗೆರೆ ಸರಣಿ

ನ್ಯಾಯಾಧೀಶರು ತಮ್ಮ ಮಾತನ್ನು ಮುಂದುವರೆಸಿ “ನೀನು ಹೇಗೆ ಕಿತ್ತ ಚೂರುಗಳನ್ನು ವಾಪಸ್ ತರಲು ಸಾಧ್ಯವಿಲ್ಲವೋ ಅದೇ ರೀತಿ ನೀನು ಮತ್ತೊಬ್ಬನ ಬಗ್ಗೆ ಹರಡಿದ ಸುಳ್ಳು ಸುದ್ದಿಯು ಹಲವರ ಕಿವಿ ತಲುಪಿ ಅವರು ಅದನ್ನೇ ಸತ್ಯವೆಂದು ನಂಬಿದ್ದಾರೆ. ಈ ರೀತಿ ನಂಬಿದವರೆಲ್ಲರಿಗೂ ಇದು ಸುಳ್ಳು ಎಂದು ಹೇಳಲು ಸಾಧ್ಯವಿಲ್ಲ ತಾನೇ?!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ನಲವತ್ತೆಂಟನೆಯ ಕಂತು ನಿಮ್ಮ ಓದಿಗೆ

Read More

ಅರ್ಧ ಕತೆಯೇ ಪ್ರಕಟಗೊಂಡಿತ್ತು: ಎಚ್. ಗೋಪಾಲಕೃಷ್ಣ ಸರಣಿ

ಆ ಗುಂಪಿನ ತಮಿಳರನ್ನು ನೋಡಿ ಕೆಲವು ಸಲ ಹೊಟ್ಟೆ ಉರಿಯೋದು. ಆ ಭಾಷೆಯಲ್ಲಿ ಬರುವ ಎಲ್ಲಾ ಪತ್ರಿಕೆಗಳನ್ನು ತರಿಸೋರು ಮತ್ತು ಹತ್ತು ಹದಿನೈದು ಜನ ಗ್ರೂಪ್ ಮಾಡಿಕೊಂಡು ಅದರ ಖರ್ಚು ಶೇರ್ ಮಾಡುತ್ತಿದ್ದರು. ಇನ್ನೂ ವಿಶೇಷ ಅಂದರೆ ಡಿ ಎಂ ಕೆ ಅವರು ತರಿಸುತ್ತಿದ್ದ ಪತ್ರಿಕೆ ಡಿ ಎಂ ಕೆ ವಿರೋಧಿಗಳು ತರಿಸುತ್ತಾ ಇರಲಿಲ್ಲ. ಅವರು ಇವರು ಪರಸ್ಪರ ಮಾತು ಕತೆ ಸಹ ಇಲ್ಲ! ಕೆಲವು ಸಲ ಇದೇ ವಿಷಯವಾಗಿ ತಮಿಳಿನಲ್ಲಿ ಜೋರು ಜೋರು ಮಾತುಕತೆ ಜಗಳ ಆಗುತ್ತಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೧ನೇ ಬರಹ ನಿಮ್ಮ ಓದಿಗೆ

Read More

ಗೋಮಾತೆಯ ಸಾಂಗತ್ಯದಲ್ಲಿ ಕಣ್ತೆರೆಯುವ ಬೆಳಗು: ಭವ್ಯ ಟಿ.ಎಸ್. ಸರಣಿ

ಕೊಟ್ಟಿಗೆಯಲ್ಲಿ ಯಾವುದಾದರೂ ಹಸು ಕರು ಹಾಕಿದರೆ ಮನೆಯಲ್ಲಿ ಬಾಣಂತಿ ಇದ್ದಷ್ಟೇ ಮುತುವರ್ಜಿ ವಹಿಸಬೇಕು. ಹಸುವಿಗೆ ಖಾರ ಮಾಡಿ ತಿನ್ನಿಸುವುದು, ಪುಟ್ಟ ಕರು ಗಟ್ಟಿಯಾಗುವವರೆಗೂ ಮನೆಯೊಳಗೆ ಸ್ವಲ್ಪ ಬೆಚ್ಚಗಿನ ಸ್ಥಳದಲ್ಲಿ ಇರಿಸಿ ಹಾಲುಣಿಸಲಷ್ಟೇ ತಾಯಿಯ ಬಳಿ ಕರೆದೊಯ್ಯವುದು ಮಾಡುತ್ತಾರೆ. ಕರುವಿಗೆ ಜೀರ್ಣಿಸಿಕೊಳ್ಳಲು ಸಾಧ್ಯವಾಗುವಷ್ಟೇ ಹಾಲು ಕುಡಿಸಬೇಕು. ಅಜೀರ್ಣವಾದರೆ ಅಪಾಯವೆಂದು ಎಚ್ಚರಿಕೆ ವಹಿಸುತ್ತಾರೆ. ಹಸು ಕರುಗಳಿಗೆ ಮೈ ತೊಳೆಸಿ ಸ್ವಚ್ಛ ಜಾಗದಲ್ಲಿ ಮಲಗಲು ಬಿಡುತ್ತಾರೆ.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ ನಿಮ್ಮ ಓದಿಗೆ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ