Advertisement

Tag: ಸರಣಿ

ಬರವಣಿಗೆಯ ಶಿಸ್ತನ್ನು ಕಲಿಸಿದ ಸಿಸ್ಟರ್ ಲಾರೆನ್ಸಿಯಾ: ಸುಮಾವೀಣಾ ಸರಣಿ

ಸಿಸ್ಟರ್ ಲಾರೆನ್ಸಿಯ ಅವರಿಗೆ ಗಾರ್ಡೆನಿಂಗ್ ಅಂದರೂ ಇವರಿಗೆ ಬಹಳ ಇಷ್ಟವಿತ್ತು. ನಮ್ಮ ತರಗತಿಯ ಮುಂದೆ ಇದ್ದ ಹೂತೋಟದಲ್ಲಿ ಚಂದದ ಗಿಡಗಳನ್ನು ಬೆಳೆಸಿದ್ದರು. ಅದರಲ್ಲಿ ದಾಳಿಂಬೆ ಬಣ್ಣದ ಪಾಪಿ ಹೂಗಳು ಅರಳುತ್ತಿದ್ದುದನ್ನು ಅದರ ನಯವಾದ ಎಸಳುಗಳನ್ನು ಇವತ್ತಿಗೂ ಮರೆಯಲಾಗುತ್ತಿಲ್ಲ. ತಮ್ಮ ತಲೆಯ ವಸ್ತ್ರವನ್ನು ಸರಿ ಮಾಡಿಕೊಂಡು ಬಗ್ಗಿ ಕೆಲಸ ಮಾಡುತ್ತಿದ್ದರು. “ಮುಂದೆ ಮಿಡ್ಲ್ ಸ್ಕೂಲಿಗೆ ಹೋಗುತ್ತೀರ ಚಂದ ಕಲಿತು ಹೋಗಬೇಕು” ಎಂದು ಪದೇ ಪದೇ ಹೇಳುತ್ತಿದ್ದರು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ನಾಲ್ಕನೆಯ ಬರಹ

Read More

ಜಾರುವ ಜಡೆಯ ಹುಡುಗಿಯ ಪಾತ್ರ!: ಮಾರುತಿ ಗೋಪಿಕುಂಟೆ ಸರಣಿ

ಈ ಸಲ ತಲೆಗೆ ಜೋಡಿಸಿಕಟ್ಟಿದ್ದ ಜಡೆಕುಚ್ಚು ಬಿಚ್ಚಿಕೊಳ್ಳುವ ಸಂಭವವೆ ಜಾಸ್ತಿ ಇತ್ತು. ಹೇಗೊ ನೃತ್ಯವಂತೂ ಮುಗಿದಿತ್ತು. ಆದರೆ ನಂತರದ್ದು ಇನ್ನೊಂದು ಸಂಕಟ ದೃಶ್ಯ ಮುಂದುವರಿದಿತ್ತು. ಜಡೆ ಬೀಳಬಾರದು ಬಿದ್ದರೆ ಅಸಹ್ಯವಾಗಿ ಕಾಣುತ್ತದೆ ಎಂಬ ಭಯದಿಂದಲೆ ನಿಂತ ಸ್ಥಳದಲ್ಲಿಯೇ ನಿಂತು ಸಂಭಾಷಣೆ ಹೇಳುವುದಕ್ಕೆ ಪ್ರಾರಂಭಿಸಿದೆ. ನನ್ನ ಎದುರಿನ ಪಾತ್ರಧಾರಿ ಈ ಕಡೆಯಿಂದ ಆ ಕಡೆಯಿಂದ ಓಡಾಡುತ್ತ ಸಂಭಾಷಿಸುತ್ತಿದ್ದಾನೆ. ಆತ ನೀನು ಓಡಾಡುತ್ತ ಸಂಭಾಷಿಸು ಎಂಬ ಕಣ್ಸನ್ನೆ ನೀಡುತ್ತಿದ್ದಾನೆ. ಆದರೆ ನನ್ನ ಕಷ್ಟ ಅವನಿಗೆ ಅರ್ಥವಾಗುತ್ತಿಲ್ಲ.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಒಂಭತ್ತನೆಯ ಕಂತು ನಿಮ್ಮ ಓದಿಗೆ

Read More

“ಆ ಸಾವು ಮತ್ತು ಹಸಿವು”: ಮಾರುತಿ ಗೋಪಿಕುಂಟೆ ಸರಣಿ

ಅಂದು ಮಧ್ಯಾಹ್ನದ ಉಪ್ಪಿಟ್ಟು ತರುವವನು ಮಧ್ಯಾಹ್ನ ಒಂದುಗಂಟೆಯಾದರೂ ಬಂದಿರಲಿಲ್ಲ. ಈಗಿನಂತೆ ಅವಾಗ ಯಾವ ಫೋನು ಸಹ ಇರಲಿಲ್ಲ. ಹಾಗಾಗಿ ಅವನು ಯಾಕೆ ಬರಲಿಲ್ಲ ಎಂದು ತಿಳಿದುಕೊಳ್ಳುವುದು ಹೇಗೆ ಎಂದು, ಹಿರಿಯ ವಿದ್ಯಾರ್ಥಿಯೊಬ್ಬನನ್ನು ಸೈಕಲ್ಲಿನಲ್ಲಿ ಆತ ಬರುವ ಹಾದಿಗೆ ಹೋಗಿ ನೋಡಿಕೊಂಡು ಬರುವಂತೆ ಕಳುಹಿಸಲಾಯ್ತು. ಆದರೆ ರಸ್ತೆಯಲ್ಲಿ ಆತನ ಸುಳಿವಿರಲಿಲ್ಲ. ಆದರಲ್ಲಿ ಮಕ್ಕಳು ಮಧ್ಯಾಹ್ನದ ಫಲಹಾರಕ್ಕಾಗಿ ಕಾದಿದ್ದರು. ಕೆಲವರ ಮುಖಗಳು ಬಾಡಿಹೋಗಿದ್ದವು. ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಎಂಟನೆಯ ಕಂತು ನಿಮ್ಮ ಓದಿಗೆ

Read More

ಕತ್ತಲಲಿ ಕಂಡ ಮಿನುಗುವ ಕಣ್ಣುಗಳು….

ಆ ಹಾಳು ಗುಡಿಯ ಮುಂದೆ ಹೋದೆವು. ಒಬ್ಬರೂ ಕಾಣಲಿಲ್ಲ. ಅಷ್ಟೊತ್ತಿಗೆ ಒಳಗಿನಿಂದ ಒಬ್ಬ ಯುವಕ ಬಂದ. ದೇವಾಲಯದೊಳಗೆ ಸಂಪೂರ್ಣ ಕತ್ತಲು ಕವಿದಿತ್ತು. ಇದೇನು ಹೀಗೆ ಎಂದಾಗ, ಆತ ‘ಇರುವುದೊಂದೇ ಮೋಂಬತ್ತಿ ನಿಮ್ಮ ಬರುವಿಗೆ ಕಾಯುತ್ತಿದ್ದೆವು’ ಎಂದ. ಒಳಗೆ ಕಾಲಿಟ್ಟಕೂಡಲೆ ಆತ ಮೋಂಬತ್ತಿ ಹಚ್ಚಿದ. ಅಲ್ಲಿ ಕುರ್ಚಿ ಟೇಬಲ್ ಏನೂ ಇರಲಿಲ್ಲ. ಆ ಮೋಂಬತ್ತಿಯ ಬೆಳಕಲ್ಲಿ ನೂರಾರು ಯುವಕರು ಕುಳಿತಿದ್ದು ಮಸುಕು ಮಸುಕಾಗಿ ಕಾಣುತ್ತಿತ್ತು. ಅವರ ಕಣ್ಣುಗಳು ಮಾತ್ರ ನಕ್ಷತ್ರಗಳ ಹಾಗೆ ಹೊಳೆಯುತ್ತಿದ್ದವು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 64ನೇ ಕಂತು ನಿಮ್ಮ ಓದಿಗೆ

Read More

ಬಾರ್ಡೋಲಿಯ ಸರ್ದಾರರ ಬ್ಯಾರಿಸ್ಟರ್ ದಿನಗಳು

ಹೈಸ್ಕೂಲಿನಲ್ಲಿ ಕೋಲಿನಿಂದ ಯಾವಾಗಲೂ ಮಕ್ಕಳನ್ನು ವಿಪರೀತ ಹೊಡೆಯುತ್ತಿದ್ದ, ವಿದ್ಯಾರ್ಥಿಗಳಿಗೆ ದೊಡ್ಡ ದಂಡ ವಿಧಿಸುತ್ತಿದ್ದ ಶಿಕ್ಷಕರೊಬ್ಬರ ವರ್ತನೆಯನ್ನು ಪ್ರತಿಭಟಿಸಿ ಗಲಾಟೆ ಮಾಡಿದ್ದರು. ಸಹವಿದ್ಯಾರ್ಥಿಗಳನ್ನು ಸಂಘಟಿಸಿ ತರಗತಿ ಬಹಿಷ್ಕರಿಸಿದ್ದರು. ಪಟೇಲರು ಸಂಘಟಿಸಿದ ಶಾಲಾದಿನಗಳ ಮೊದಲ ಮುಷ್ಕರ ಮೂರನೆಯ ದಿನಕ್ಕೆ ಕಾಲಿಟ್ಟಾಗ, ಹುಡುಗನ ನಾಯಕತ್ವ ಮತ್ತು ಸಂಘಟನೆಯನ್ನು ಗುರುತಿಸಿದ ಪ್ರಾಂಶುಪಾಲರು ಮಧ್ಯ ಪ್ರವೇಶಿಸಿ, ವಿದ್ಯಾರ್ಥಿಗಳನ್ನು ಮುಂದೆಂದೂ ಆ ಅಧ್ಯಾಪಕರು ಕಟುವಾಗಿ ಶಿಕ್ಷಿಸದಿರುವ ಆಶ್ವಾಸನೆ ನೀಡಿದರು.
ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಯೋಗೀಂದ್ರ ಮರವಂತೆ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ