Advertisement

Tag: ಸಾಹಿತ್ಯ

ರೂಪಾಂತರದ ಆಯಾಮಗಳು

ಮಾನವರು ಯಕ್ಷರಾಗುವ ಪ್ರಕ್ರಿಯೆ ನಮ್ಮೊಳಗೆ ಅಡಕವಾಗುತ್ತ ನಡೆದಾಗಲೂ ಕೆಲವೊಮ್ಮೆ ಭ್ರಮೆ ಮತ್ತು ವಾಸ್ತವಗಳು ಮನಸ್ಸಿನಲ್ಲಿ ತಾಡಿಸುತ್ತಲೇ ಇರುತ್ತಿದ್ದವು. ದುಃಶ್ಶಾಸನನ ವೇಷ ತೊಟ್ಟ ಅಪ್ಪ, ಭೀಮನಿಂದ ಪೆಟ್ಟುತಿಂದು ಯುದ್ಧರಂಗದಲ್ಲಿ ಓಡುತ್ತಿರುವಾಗ ಅವನೆಲ್ಲಾದರೂ ಅಪ್ಪನನ್ನು ಗದೆಯಿಂದ ಹೊಡೆದು ಕೊಂದಾನೆಂಬ ಭ್ರಮೆಯಲ್ಲಿ ‘ಬೇಡಾ’ ಎಂದು ಕಿರುಚಿದ್ದೂ ಇತ್ತು. ಕೌರವನನ್ನು ಬೆನ್ನಟ್ಟುವ ರೌದ್ರ ಭೀಮನ ಕಣ್ಣಿನ ಕೆಂಪಿಗೆ ಹೆದರಿ, ಅವನೆಲ್ಲಿಯಾದರೂ ಕೌರವನ ವೇಷಧಾರಿಯಾದ ನನ್ನಪ್ಪನ ತೊಡೆಯನ್ನೇ ಮುರಿದಾನೆಂದು ಚಡಪಡಿಸುತ್ತಿದ್ದುದು ಅತ್ತೆಗೆ ಇರಿಸುಮುರಿಸು ಮಾಡುತ್ತಿತ್ತು.
ಮನುಷ್ಯ ಹೊಂದಬಹುದಾದ ರೂಪಾಂತರಗಳ ಕುರಿತು ಸುಧಾ ಆಡುಕಳ ಬರಹ ನಿಮ್ಮ ಓದಿಗೆ

Read More

ಕಣ್ಣೊರಿಸಿಕೊಂಡ ಪುಟ್ಟ ದೇವರು…

ತರಗತಿಯಿಂದ ತರಗತಿಗೆ ಹಾರಿ ಅದೇ ಶಾಲೆಯಲ್ಲಿ ಕೂತವರಿಗೆ ಒಂದು ರೂಮಿನ ಬದಲಾವಣೆ ಅಷ್ಟೇ.. ತರಗತಿಯಿಂದ ಉಸಿರು ಬಿಗಿ ಹಿಡಿದು ಹಾರಿ ಜಿಗಿದು ಮತ್ತೆಲ್ಲೊ ಮತ್ಯಾವ ಶಾಲೆ, ಕಾಲೇಜಿನ ರೂಮಿನಲ್ಲೊ ಇಲ್ಲಿ ಕಿತ್ತುಕೊಂಡು ಬಂದ ಓದಿನ ಗಿಡವನ್ನು ಅಲ್ಲಿ ನೆಟ್ಟು ಪೋಷಿಸಬೇಕು. ಕಿತ್ತು ನಡೆಯುವ ಹೊತ್ತಲ್ಲಿ ಗಂಟಲಿಗೆ ಬಂದು ಆತು ಕೂತುಕೊಳ್ಳುತ್ತಲ್ಲಾ ಆ ದುಃಖ ಮತ್ತು ಅದನ್ನು ನುಂಗಿ ಸಾಯಿಸಿ ಸಾಯಿಸಿ ನಗಬೇಕಲ್ಲ ಆ ಸಂಕಟ, ಮತ್ತು ಪಿಳಿಪಿಳಿ ಕಣ್ಣುಗಳಿಂದ ಬಂದೇ ಬಿಡುತ್ತಲ್ಲ ಆ ಪವಿತ್ರ ಕಣ್ಣೀರು.. ಓ ಎಂತ ಪಾಪಿಷ್ಟ ಗಳಿಗೆ ಅದು.
ಸದಾಶಿವ ಸೊರಟೂರು ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಲೇಖಕರ ಮತ್ತು ಓದುಗರ ನಡುವಿನ ಕೊಂಡಿ ಹೊಸೆಯುತ್ತಾ…

ಪ್ರಕಾಶಕರು, ಲೇಖಕರ ಮತ್ತು ಓದುಗರ ನಡುವಿನ ಬಹುಮುಖ್ಯ ಕೊಂಡಿ. ಅವರ ಸಹಾಯವಿಲ್ಲದೇ ಯಾವುದೇ ಲೇಖಕರ ಕೃತಿಯು ಓದುಗರನ್ನು ತಲುಪಲು ಸಾಧ್ಯವಿಲ್ಲ. ನಮ್ಮ ಭಾಷೆಯಲ್ಲಿ ಯಾವೆಲ್ಲ ತರಹದ ಸಾಹಿತ್ಯ ಕೃಷಿ ನಡೆಯುತ್ತಿದೆ ಅನ್ನುವುದನ್ನು ಓದಿ, ಓದುಗರ ಮುಂದಿಟ್ಟಾಗಲೇ ಒಬ್ಬ ಓದುಗನಿಂದ ಮತ್ತೊಂದು ಓದುಗ ಹುಟ್ಟಿಕೊಳ್ಳುವುದು. ಅದರ ಜೊತೆಗೇ ಎಂಥ ಪ್ರಕಾರದ ಪುಸ್ತಕವನ್ನು ಓದುಗರ ಕೈಗಿಡಬೇಕು, ಮತ್ತೆ ಓದುಗನಿಗೆ ಪುಸ್ತಕ ತಲುಪಿಸುವ ಮಾರ್ಗಗಳೇನು ಎಂಬುದೂ ಈ ಹೊತ್ತಿನಲ್ಲಿ ಚರ್ಚಿಸಬೇಕಾದ ವಿಷಯ. ರೂಪಶ್ರೀ ಕಲ್ಲಿಗನೂರ್‌ ಬರಹ ಇಲ್ಲಿದೆ

Read More

ಆವರ್ತನ…

ಏನೇನೋ ಅನ್ನುವಂಥದ್ದು ನಾನು ಮಾಡಲಿಲ್ಲ. ನಾನೂ ಕೂಡ ಏನೇನೋ ಆಗಲಿಲ್ಲ. ಕಡಿಮೆ ಭ್ರಷ್ಟ ಅನಿಸಿಕೊಳ್ಳಲಿಕ್ಕೆ ಮೇಷ್ಟ್ರಾದೆ. ಮಕ್ಕಳಿಗೆ ಕವಿತೆ ಹೇಳಿಕೊಟ್ಟೆ. ಆದರೆ ಯಾಕೋ ನನ್ನ ಕೈಯಲ್ಲಿ ಬರೆಯಲಾಗಲೇ ಇಲ್ಲ. ನಿತ್ಯದ ಯಾಂತ್ರಿಕತೆ ನುಂಗಿಕೊಂಡುಬಿಟ್ಟಿತು. ನನಗೆ ಗೊತ್ತು. ಈ ಸುದೀರ್ಘ ಸ್ವಗತಗಳನ್ನು ಬರೆಯುವುದರ ಭಯವೆಂದರೆ ಓದುಗ ಒಂದು ಹಂತದ ನಂತರ ಕತೆಗಾರನ ಪ್ರಾಮಾಣಿಕತೆಯನ್ನು ಅನುಮಾನಿಸತೊಡಗುತ್ತಾನೆ. ನಿಜ. ಪ್ರಾಮಾಣಿಕತೆಯನ್ನು ಒಪ್ಪಿಸಲು ನಮ್ಮ ಬಳಿಯಿರುವ ಪರಿಮಾಣಗಳಾದರೂ ಏನು? ಆಣೆ ಹಾಕಬಹುದು. ನಂಬಿ ಎಂದು ಕೈ ಜೋಡಿಸಬಹುದು.
ದಾದಾಪೀರ್‌ ಜೈಮನ್‌ ಬರೆಯುವ ಜಂಕ್ಷನ್‌ ಪಾಯಿಂಟ್‌ ಅಂಕಣ

Read More

ಕಪ್ಪುಬಿಳುಪಿನ ಉತ್ತರ ಕೊಡಲಾಗದ ಪ್ರಶ್ನೆಗಳು

ಬಸ್ಸಿನ ಕಿಟಕಿ ಸರಿಸಿದೆ. ಮಳೆಯ ಬಿಡಿಬಿಡಿ ಹನಿ ಈ ಬಾರಿ ಅಷ್ಟು ಕಿರಿಕಿರಿಗೊಳಿಸಲಿಲ್ಲ. ಆದರೂ ಗಂಡನ ಗೆಳೆಯ ಮತ್ತು ಆ ಮಂಗಳಮುಖಿಯ ಬಗ್ಗೆ ಯಾವುದೋ ಅವ್ಯಕ್ತ ಭಯ ಆಳದಲ್ಲಿತ್ತು. ಗಂಡ ನೂತನನಿಗೆ ಬೇರೆ ಯಾವ ಆಯ್ಕೆಗಳೂ ಇರಲಿಲ್ಲವಾ? ನೂತನ್ ನನ್ನನ್ನು ನಿಜಕ್ಕೂ ಇಷ್ಟ ಪಡುತ್ತಿದ್ದಾನಾ? ಅಥವಾ ಕೇವಲ ತನ್ನ ಕರ್ತವ್ಯವನ್ನಷ್ಟೇ ನಿಭಾಯಿಸುತ್ತಿದ್ದಾನಾ? ಎಲ್ಲವೂ ಗೋಜಲು ಗೋಜಲಿಗೆ ಇಟ್ಟುಕೊಂಡಿತು. ನನ್ನ ಗಂಡ ಬೈಸೆಕ್ಷುಯಲ್ ಅನ್ನುವುದನ್ನು ಒಪ್ಪಿಕೊಳ್ಳುವುದಕ್ಕೆ ಯಾಕಿಷ್ಟು ಭಯಪಟ್ಟುಕೊಳ್ಳುತ್ತಿದ್ದೇನೆ? ಯಾವುದೇ ಭಿಡೆಯಿಲ್ಲದೆ ಮುಕ್ತವಾಗಿ ಪ್ರಶ್ನೆಗಳಿಗೆ ಉತ್ತರಿಸುವ ನಾನು ಇರುವುದನ್ನು ಇರುವ ಹಾಗೆ ಒಪ್ಪಿಕೊಳ್ಳಲು ಯಾಕಿಷ್ಟು ಭಯ ಪಟ್ಟುಕೊಳ್ಳುತ್ತಿದ್ದೇನೆ?
ದಾದಾಪೀರ್‌ ಜೈಮನ್‌ ಬರೆಯುವ “ಜಂಕ್ಷನ್‌ ಪಾಯಿಂಟ್” ಅಂಕಣದಲ್ಲಿ ಹೊಸ ಬರಹ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

`ಚಿಲಿಪಿಲಿ ಕನ್ನಡ ಕಲಿ’: ಮಂಡಲಗಿರಿ ಪ್ರಸನ್ನ ಬರಹ

ಹೊರನಾಡಿನಲ್ಲಿ ನೆಲೆಸಿರುವ ಕನ್ನಡ ಕಂದಮ್ಮಗಳ ಬೆಳವಣಿಗೆಯ ಪರಿಸರ ತೀರ ವಿಭಿನ್ನವಾದದ್ದು. ಅಂತಹ ಮಕ್ಕಳ ಕನ್ನಡ ಕಲಿಕೆಗೆ ಬೇಕಾದ ವಾತಾವರಣ ಸೀಮಿತವಾದದ್ದು. ಇಂತಹ ಮಕ್ಕಳಿಗೆ ಭಾಷೆ ಕಲಿಸಲು ಪದ್ಯಗಳು…

Read More

ಬರಹ ಭಂಡಾರ