Advertisement

Tag: ಸಾಹಿತ್ಯ

ಮಾನವೀಯತೆಗಾಗಿಯೇ ಜೀವ ತೇದವರ ನೆನೆಯುತ್ತಾ…

‘ವರ್ಣ’ ಅಪ್ಪಟ ದಲಿತ ಜಗತ್ತಿನ ಪ್ರಾತಿನಿಧಿಕ ಕವಿತೆ. ಕವಿ ಸುಮ್ಮನೆ ಎಲೆಮರೆಯ ಕಾಯಿಯಂತಿದ್ದರೂ ಬಿಡದೆ ಪ್ರಚೋದಿಸಿ ಅಖಾಡಕ್ಕೆ ಕರೆದು ಕೊನೆಗೆ ಮಣ್ಣುಮುಕ್ಕುವ ಉಢಾಳರಿಗೆ ಎಚ್ಚರಿಕೆಯಂತಿದೆ ಈ ಕವಿತೆ. “ಹಸಿರು, ಕೆಂಪು, ಕಪ್ಪು, ಬಣ್ಣಗಳೊಳಗೆ ಕರಗಿಹೋದ ದಲಿತರ ನೆತ್ತರು ಮತ್ತು ಬೆವರು ಉಳ್ಳವರನ್ನು ಉಸಿರುಗಟ್ಟಿ ಸಾಯಿಸಿದರೆ ಆಶ್ಚರ್ಯಪಡಬೇಕಿಲ್ಲ”. ‘ಹಸಿವು’ ಕವಿತೆ ಅವ್ವನ ಉದಾರತನವನ್ನೂ ಆಕೆಯ ಸಂಸ್ಕಾರವನ್ನೂ ದರ್ಶಿಸಿ ದಂಗುಬಡಿಸುತ್ತದೆ. ಹಸಿವು ಎಂದು ಬಂದವರಿಗೆ ತನ್ನ ಪಾಲಿನ ತಟ್ಟೆಯಲ್ಲಿದ್ದ ಹಿಟ್ಟನ್ನು ಕೊಟ್ಟುಬಿಡುತ್ತಾಳೆ. ಅಭಿಷೇಕ್‌ ವೈ.ಎಸ್. ಬರೆಯುವ “ಕಾವ್ಯದ ಹೊಸ ಕಾಲ” ಅಂಕಣ

Read More

ವೀರಭುಜಬಲದ ದುಂಡಿಯೋ… ಸುಕೋಮಲ ಸುಂದರಿಯೋ…

ಎರಡೂ ಕೈಗಳಿಗೂ ಅಮ್ರದ ದುಂಡಿಯನ್ನು ಪಟ್ಟಗಣಿಯಿಂದ ಸುತ್ತಿ ಬಿಗಿಯಾಗಿ ಹಿಡಿದುಕೊಂಡು ಮೊಣಕಾಲಿನವರೆಗೂ ತಿರಿವಿಕೊಂಡ. ಮೊಣಕಾಲಿನ ಮೇಲೆ ಜಪ್ಪಯ್ಯ ಎಂದರೂ ದುಂಡಿ ಒಂದಿಂಚೂ ಮೇಲೇಳಲಿಲ್ಲ. ಸ್ವಲ್ಪ ಸಾವರಿಸಿಕೊಂಡು ನರನಾಡಿಗಳಲ್ಲಿನ ಸಮಸ್ತ ಶಕ್ತಿಯನ್ನು ಒಟ್ಟು ಮಾಡಿ ಉಡ ಕೂಡಾ ನಾಚುವಂತೆ ಬಿಗಿಯಿಡಿದು ಬಿಲ್ಲಿನಂತೆ ಹಿಂದಕ್ಕೆ ಬಾಗಿ ದುಂಡಿಯನ್ನು ಮೇಲೆಳೆದುಕೊಂಡ.
ಮಂಜಯ್ಯ ದೇವರಮನಿ, ಸಂಗಾಪುರ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ರೂಪಾಂತರದ ಆಯಾಮಗಳು

ಮಾನವರು ಯಕ್ಷರಾಗುವ ಪ್ರಕ್ರಿಯೆ ನಮ್ಮೊಳಗೆ ಅಡಕವಾಗುತ್ತ ನಡೆದಾಗಲೂ ಕೆಲವೊಮ್ಮೆ ಭ್ರಮೆ ಮತ್ತು ವಾಸ್ತವಗಳು ಮನಸ್ಸಿನಲ್ಲಿ ತಾಡಿಸುತ್ತಲೇ ಇರುತ್ತಿದ್ದವು. ದುಃಶ್ಶಾಸನನ ವೇಷ ತೊಟ್ಟ ಅಪ್ಪ, ಭೀಮನಿಂದ ಪೆಟ್ಟುತಿಂದು ಯುದ್ಧರಂಗದಲ್ಲಿ ಓಡುತ್ತಿರುವಾಗ ಅವನೆಲ್ಲಾದರೂ ಅಪ್ಪನನ್ನು ಗದೆಯಿಂದ ಹೊಡೆದು ಕೊಂದಾನೆಂಬ ಭ್ರಮೆಯಲ್ಲಿ ‘ಬೇಡಾ’ ಎಂದು ಕಿರುಚಿದ್ದೂ ಇತ್ತು. ಕೌರವನನ್ನು ಬೆನ್ನಟ್ಟುವ ರೌದ್ರ ಭೀಮನ ಕಣ್ಣಿನ ಕೆಂಪಿಗೆ ಹೆದರಿ, ಅವನೆಲ್ಲಿಯಾದರೂ ಕೌರವನ ವೇಷಧಾರಿಯಾದ ನನ್ನಪ್ಪನ ತೊಡೆಯನ್ನೇ ಮುರಿದಾನೆಂದು ಚಡಪಡಿಸುತ್ತಿದ್ದುದು ಅತ್ತೆಗೆ ಇರಿಸುಮುರಿಸು ಮಾಡುತ್ತಿತ್ತು.
ಮನುಷ್ಯ ಹೊಂದಬಹುದಾದ ರೂಪಾಂತರಗಳ ಕುರಿತು ಸುಧಾ ಆಡುಕಳ ಬರಹ ನಿಮ್ಮ ಓದಿಗೆ

Read More

ಕಣ್ಣೊರಿಸಿಕೊಂಡ ಪುಟ್ಟ ದೇವರು…

ತರಗತಿಯಿಂದ ತರಗತಿಗೆ ಹಾರಿ ಅದೇ ಶಾಲೆಯಲ್ಲಿ ಕೂತವರಿಗೆ ಒಂದು ರೂಮಿನ ಬದಲಾವಣೆ ಅಷ್ಟೇ.. ತರಗತಿಯಿಂದ ಉಸಿರು ಬಿಗಿ ಹಿಡಿದು ಹಾರಿ ಜಿಗಿದು ಮತ್ತೆಲ್ಲೊ ಮತ್ಯಾವ ಶಾಲೆ, ಕಾಲೇಜಿನ ರೂಮಿನಲ್ಲೊ ಇಲ್ಲಿ ಕಿತ್ತುಕೊಂಡು ಬಂದ ಓದಿನ ಗಿಡವನ್ನು ಅಲ್ಲಿ ನೆಟ್ಟು ಪೋಷಿಸಬೇಕು. ಕಿತ್ತು ನಡೆಯುವ ಹೊತ್ತಲ್ಲಿ ಗಂಟಲಿಗೆ ಬಂದು ಆತು ಕೂತುಕೊಳ್ಳುತ್ತಲ್ಲಾ ಆ ದುಃಖ ಮತ್ತು ಅದನ್ನು ನುಂಗಿ ಸಾಯಿಸಿ ಸಾಯಿಸಿ ನಗಬೇಕಲ್ಲ ಆ ಸಂಕಟ, ಮತ್ತು ಪಿಳಿಪಿಳಿ ಕಣ್ಣುಗಳಿಂದ ಬಂದೇ ಬಿಡುತ್ತಲ್ಲ ಆ ಪವಿತ್ರ ಕಣ್ಣೀರು.. ಓ ಎಂತ ಪಾಪಿಷ್ಟ ಗಳಿಗೆ ಅದು.
ಸದಾಶಿವ ಸೊರಟೂರು ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಲೇಖಕರ ಮತ್ತು ಓದುಗರ ನಡುವಿನ ಕೊಂಡಿ ಹೊಸೆಯುತ್ತಾ…

ಪ್ರಕಾಶಕರು, ಲೇಖಕರ ಮತ್ತು ಓದುಗರ ನಡುವಿನ ಬಹುಮುಖ್ಯ ಕೊಂಡಿ. ಅವರ ಸಹಾಯವಿಲ್ಲದೇ ಯಾವುದೇ ಲೇಖಕರ ಕೃತಿಯು ಓದುಗರನ್ನು ತಲುಪಲು ಸಾಧ್ಯವಿಲ್ಲ. ನಮ್ಮ ಭಾಷೆಯಲ್ಲಿ ಯಾವೆಲ್ಲ ತರಹದ ಸಾಹಿತ್ಯ ಕೃಷಿ ನಡೆಯುತ್ತಿದೆ ಅನ್ನುವುದನ್ನು ಓದಿ, ಓದುಗರ ಮುಂದಿಟ್ಟಾಗಲೇ ಒಬ್ಬ ಓದುಗನಿಂದ ಮತ್ತೊಂದು ಓದುಗ ಹುಟ್ಟಿಕೊಳ್ಳುವುದು. ಅದರ ಜೊತೆಗೇ ಎಂಥ ಪ್ರಕಾರದ ಪುಸ್ತಕವನ್ನು ಓದುಗರ ಕೈಗಿಡಬೇಕು, ಮತ್ತೆ ಓದುಗನಿಗೆ ಪುಸ್ತಕ ತಲುಪಿಸುವ ಮಾರ್ಗಗಳೇನು ಎಂಬುದೂ ಈ ಹೊತ್ತಿನಲ್ಲಿ ಚರ್ಚಿಸಬೇಕಾದ ವಿಷಯ. ರೂಪಶ್ರೀ ಕಲ್ಲಿಗನೂರ್‌ ಬರಹ ಇಲ್ಲಿದೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ