Advertisement

Tag: ಸಿನಿಮಾ

ಮಧ್ಯಮ ವರ್ಗ ಮತ್ತು ಬೆಲೆಬಾಳುವ ಕಾಗದದ ಚೂರುಗಳು: ರಾಮ್ ಪ್ರಕಾಶ್ ರೈ ಕೆ. ಸರಣಿ

‘ಪ್ರತಿಯೊಬ್ಬ ಮನುಷ್ಯನಲ್ಲಿಯೂ ಒಬ್ಬ ಕಳ್ಳನಿದ್ದಾನೆ’ ಎಂಬ ವಾಕ್ಯ, ‘ಪ್ರತಿಯೊಬ್ಬ ಮನುಷ್ಯನಲ್ಲಿಯೂ ಒಂದು ಮಗುವಿದೆ’ ಎಂದು ಕೋಟಿಯ ಕೈಗಳಲ್ಲಿ ಬದಲಾಗುವುದೇ ಆತನ ವ್ಯಕ್ತಿತ್ವದ ಹೆಚ್ಚುಗಾರಿಕೆಯ ಸಂಕೇತ. ಚಿತ್ರದ ತುಂಬೆಲ್ಲಾ ರೂಪಕಗಳ ಬಳಕೆ ಹೇರಳವಾಗಿದೆ. ಕೋಟಿಯೆಂಬ ಹೆಸರು ಅದರಲ್ಲೊಂದು. ಇಲ್ಲಿ ಎಲ್ಲರೂ ಸಾಗುತ್ತಲೇ ಇರುತ್ತಾರೆ. ಥೇಟು ಪಟ್ಟಣದ ಯಾಂತ್ರಿಕ ಬದುಕಿನಂತೆ. ಆದರೆ ಆ ಪಯಣಕ್ಕೊಂದು ವೇಗ ನಿಯಂತ್ರಕ ಎದುರಾದಾಗ, ಹೇಗೆ ಉತ್ತರಿಸುತ್ತೇವೆ ಎನ್ನುವುದರ ಮೇಲೆ ಬದುಕು ನಿರ್ಧರಿತವಾಗುತ್ತದೆ ಎಂಬುದನ್ನು ನಿರೂಪಿಸಲಾಗಿದೆ.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿ

Read More

ನೀ ದೇಹದೊಳಗೋ, ದೇಹ ನಿನ್ನೊಳಗೋ: ರಾಮ್ ಪ್ರಕಾಶ್ ರೈ ಕೆ ಸರಣಿ

ಇನ್ನೇನು ಶ್ರದ್ಧಾಂಜಲಿಗೆ ಒಳಗಾದ ಎಂದು ಭಾವಿಸುವಾಗಲೇ, ವೈದ್ಯಕೀಯ ವಿಜ್ಞಾನದ ಎಲ್ಲಾ ಊಹೆಗಳ ಪೊರೆಯ ಸರಿಸಿ ಮತ್ತೆ ಎದ್ದು ಬರುತ್ತಾನೆ. ಆದರೆ ಆತ ತನ್ನ ಪೂರ್ವ ನೆನಪುಗಳೆಲ್ಲವನ್ನೂ ಕಳೆದುಕೊಂಡಿರುತ್ತಾನೆ. ತನ್ನ ಮಾತಾ ಪಿತರ ಸಹಿತವಾಗಿ. ವೈದ್ಯಕೀಯ ವಿಜ್ಞಾನವೇ ನಂಬಲಾರದಂತೆ ಆತ ಬದಲಾಗಿರುತ್ತಾನೆ.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿ

Read More

ಬೆಂಕಿಯ ನಾಲಗೆಯೊಳಗೆ ಬೆಂದ ಸತ್ಯಗಳು: ರಾಮ್ ಪ್ರಕಾಶ್ ರೈ ಕೆ ಸರಣಿ

ಈ ಕಥಾನಕದಲ್ಲಿ ಸರಣಿ ಅವಘಡಗಳು ನಡೆದರೂ ಕೊನೆವರೆಗೂ ಅದರ ಹಿಂದಿನ ಮರ್ಮವ ತಿಳಿಸದೆ ಮಳೆಗೆ ಕಾಯುವ ರೈತನಂತೆ ನೋಡುಗನ ಬಂಧಿಸಿಡುತ್ತದೆ. ತನ್ನ ತಪ್ಪಿಲ್ಲದೇ ತನ್ನ ಒಲವನ್ನು ಕಳೆದುಕೊಳ್ಳುವ ವಿಜಯ್, ಬದುಕನ್ನು ಪ್ರೀತಿಸುವುದೊಂದನ್ನು ಬಿಟ್ಟು ಇನ್ನೇನು ತಿಳಿಯದ ಭಟ್ಟರ ಜೀವನ ಒಲೆಯಲ್ಲಿ ನರ್ತಿಸುವ ಬೆಂಕಿಯ ಶಾಖಕ್ಕೆ ಸಿಲುಕಿ ನಲುಗುವುದು ಇವೆಲ್ಲವೂ ಭಾವ ಪ್ರಚೋದಕ.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿ

Read More

ನೀನೆ ಕೊನೆ-ಮೊದಲೆಂಬ ಕಾಲಾತೀತ ಪ್ರೇಮಗಾಥೆ: ರಾಮ್ ಪ್ರಕಾಶ್ ರೈ ಕೆ ಸರಣಿ

ಅವಳ ಹಾಡು, ಭೇಟಿಗೆ ಸಾಕ್ಷಿಯಾಗುತ್ತಿದ್ದ ಸೇತುವೆ ಎಲ್ಲವೂ ಪ್ರತ್ಯಕ್ಷವಾಗಿ ಮಾಯವಾಗುತ್ತದೆ. ಸಂವಾದ ಸಾಗುತ್ತಿರಬೇಕಾದರೆ ವಿದ್ಯುತ್ ರೆಪ್ಪೆಯ ಮುಚ್ಚುತ್ತದೆ. ದೀಪ ತರಲೆಂದು ರಾಮ್ ಹೋದಾಗ, ಜಾನು ಹಾಡನೊಂದು ಹಾಡುತ್ತಾಳೆ. ಬೇರೆ ಯಾವ ಹಾಡೂ ಅಲ್ಲ. ಪ್ರತಿ ಬಾರಿ ಅವಳು ವೇದಿಕೆಯೇರಿದಾಗ, ಅವನು ಕೋರಿಕೆಯಿಡುತ್ತಿದ್ದದ್ದೇ ಆ ಹಾಡಿಗಾಗಿ.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿ

Read More

ಬದುಕೆಂಬ ಚಹಾಗೊಂದಿಷ್ಟು ಒಲವಿನ ಸಕ್ಕರೆ: ರಾಮ್ ಪ್ರಕಾಶ್ ರೈ ಕೆ. ಸರಣಿ

ಜನಾರ್ಧನನ ಸಹೋದ್ಯೋಗಿ, ಆಪ್ತ ಮಿತ್ರ ಅಸಿಸ್ಟೆಂಟ್ ಶ್ರೀನಿವಾಸ ಅಸಂಖ್ಯ ಬಾರಿ ಅವನ ಪತ್ನಿಯ ಜೊತೆ ಮಾತನಾಡುತ್ತಲೇ ಇರುತ್ತಿದ್ದ. ಜೊತೆಯಾಗಿ ದಿನಗಳು ರಾಶಿಗಟ್ಟಲೆ ಕಳೆದರೂ, ಆಷಾಢದ ಮಳೆಯಂತೆ ಇವರ ಸಂವಾದ ಮುಗಿಯುವುದಿಲ್ಲ, ಈ ಪ್ರೀತಿಯ ಬಣ್ಣಿಸುವ ಪರಿಯೆಂತು ಎಂದು ಜನಾರ್ಧನ ಅಂದುಕೊಳ್ಳುತ್ತಿದ್ದ. ಒಂದು ಬಾರಿ ಶ್ರೀನಿವಾಸನ ಮನೆಗೆ ಹೋಗುವ ಜನಾರ್ಧನನಿಗೆ ಅವನ ಪತ್ನಿಗೆ ಮಾತು ಬರುವುದಿಲ್ಲ ಎಂದು ತಿಳಿಯುತ್ತದೆ.
ರಾಮ್ ಪ್ರಕಾಶ್ ರೈ ಕೆ. ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ